Homeಮುಖಪುಟಕಾಂಗ್ರೆಸ್ ಹೊರಗಿಟ್ಟು ವಿರೋಧಿ ಬಣ ಕಟ್ಟಲು ಮುಂದಾದ ಟಿಎಂಸಿ, ಎಸ್‌ಪಿ

ಕಾಂಗ್ರೆಸ್ ಹೊರಗಿಟ್ಟು ವಿರೋಧಿ ಬಣ ಕಟ್ಟಲು ಮುಂದಾದ ಟಿಎಂಸಿ, ಎಸ್‌ಪಿ

- Advertisement -
- Advertisement -

ಕಾಂಗ್ರೆಸ್ ಮತ್ತು ಬಿಜೆಪಿ ಎರಡನ್ನೂ ಒಂದು ಒಂದೇ ಅಂತರದಲ್ಲಿ ಇರಿಸಲು ಮೂರು ಪ್ರಮುಖ ವಿರೋಧ ಪಕ್ಷಗಳು ಒಪ್ಪಿಕೊಂಡಿವೆ. ಕಾಂಗ್ರೆಸ್‌, ಬಿಜೆಪಿಯನ್ನು ಸಮಾನವಾಗಿ ಪರಿಗಣಿಸಲು ಮುಂದಾಗಿವೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಇಂದು ಕೋಲ್ಕತ್ತಾದಲ್ಲಿ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಬಿಜು ಜನತಾ ದಳದ ಮುಖ್ಯಸ್ಥರಾದ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮುಂದಿನ ವಾರ ಭೇಟಿಯಾಗಲಿದ್ದಾರೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷಗಳ ಗುಂಪಿನ ಪ್ರಮುಖ ನಾಯಕ ಎಂದು ಬಿಂಬಿಸುವ ಬಿಜೆಪಿಯ ಪ್ರಯತ್ನವನ್ನು ಎದುರಿಸುವ ಗುರಿಯನ್ನು ಈ ತಂತ್ರ ಹೊಂದಿದೆ ಎಂದು ಹೇಳಲಾಗುತ್ತಿದೆ.

ಭಾರತದ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರ ಮೈಕ್‌ಗಳನ್ನು ಮ್ಯೂಟ್ ಮಾಡಲಾಗಿದೆ ಎಂದು ಲಂಡನ್‌ನಲ್ಲಿ ರಾಹುಲ್‌ ಗಾಂಧಿಯವರು ಹೇಳಿಕೆ ನೀಡಿರುವುದನ್ನು ಖಂಡಿಸಿರುವ ಬಿಜೆಪಿ, ಕಾಂಗ್ರೆಸ್ ಕ್ಷಮೆಯಾಚಿಸಬೇಕೆಂದು ಒತ್ತಾಯಿಸುತ್ತಿದೆ. ಈ ವಿರೋಧ ಪಕ್ಷಗಳು ಬೇರೆಯದೇ ರೀತಿಯಲ್ಲಿ ಈ ವಿದ್ಯಮಾನವನ್ನು ಪರಿಭಾವಿಸಿವೆ. “ಈಗ ಬಿಜೆಪಿಯು ರಾಹುಲ್ ಅವರನ್ನು ಬಳಸಿಕೊಂಡು ನಮ್ಮನ್ನು ಗುರಿಯಾಗಿಸಿಕೊಂಡಿದೆ” ಈ  ಶಂಕಿಸುತ್ತಿವೆ.

“ರಾಹುಲ್ ಗಾಂಧಿಯವರು ವಿದೇಶದಲ್ಲಿ ಭಾಷಣ ಮಾಡಿದ್ದಾರೆ, ಅವರು ಕ್ಷಮೆಯಾಚಿಸುವವರೆಗೂ ಬಿಜೆಪಿ ಸಂಸತ್ತಿನ ಕಲಾಪಗಳಿಗೆ ಅವಕಾಶ ನೀಡುವುದಿಲ್ಲ. ಇದರರ್ಥ ಅವರು ಕಾಂಗ್ರೆಸ್ ಅನ್ನು ಬಳಸಿಕೊಂಡು ಕಲಾಪಗಳು ನಡೆಯದಂತೆ ನೋಡಿಕೊಂಡಿದೆ. ರಾಹುಲ್ ಗಾಂಧಿಯವರು ವಿರೋಧಿ ಬಣದ ಮುಖವಾಗಿರಬೇಕೆಂದು ಬಿಜೆಪಿ ಬಯಸುತ್ತದೆ. ಇದರಿಂದ ಬಿಜೆಪಿಗೆ ಅನುಕೂಲವಾಗುತ್ತದೆ. (2024ರ ಚುನಾವಣೆಗೆ) ಪ್ರಧಾನ ಮಂತ್ರಿಯ ಮುಖವನ್ನು ನಿರ್ಧರಿಸುವ ಅಗತ್ಯವಿಲ್ಲ” ಎಂದು ತೃಣಮೂಲ ಕಾಂಗ್ರೆಸ್ ಸಂಸದ ಸುದೀಪ್ ಬಂಡೋಪಾಧ್ಯಾಯ ತಿಳಿಸಿರುವುದಾಗಿ ‘ಎನ್‌ಡಿಟಿವಿ’ ವರದಿ ಮಾಡಿದೆ.

ವಿರೋಧ ಪಕ್ಷದ ‘ಬಿಗ್ ಬಾಸ್ ಕಾಂಗ್ರೆಸ್’ ಎಂದು ಭಾವಿಸುವುದು ತಪ್ಪು ಎಂದು ಬಂಡೋಪಾಧ್ಯಾಯ ಹೇಳಿದ್ದಾರೆ.

“ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಾರ್ಚ್ 23 ರಂದು ನವೀನ್ ಪಟ್ನಾಯಕ್ ಅವರನ್ನು ಭೇಟಿಯಾಗಲಿದ್ದಾರೆ. ನಾವು ಇದನ್ನು (ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ಸಮಾನ ಅಂತರವನ್ನು ಕಾಯ್ದುಕೊಳ್ಳುವ ಯೋಜನೆ) ಇತರ ವಿರೋಧ ಪಕ್ಷಗಳೊಂದಿಗೆ ಚರ್ಚಿಸುತ್ತೇವೆ. ಇದು ತೃತೀಯ ರಂಗ ಎಂದು ನಾವು ಹೇಳುತ್ತಿಲ್ಲ, ಆದರೆ ಪ್ರಾದೇಶಿಕ ಪಕ್ಷಗಳಿಗೆ ಈ ನಿರ್ಧಾರ ತೆಗೆದುಕೊಳ್ಳುವ ಶಕ್ತಿ ಇದೆ” ಎಂದು ತಿಳಿಸಿದ್ದಾರೆ.

“ಕಾಂಗ್ರೆಸ್ ಮತ್ತು ಬಿಜೆಪಿ ಎರಡರಿಂದಲೂ ಸಮಾನ ಅಂತರವನ್ನು ಕಾಯ್ದುಕೊಳ್ಳಲು ಬಯಸಿದ್ದೇನೆ” ಎಂದು ಅಖಿಲೇಶ್ ಯಾದವ್ ಖಚಿತಪಡಿಸಿದ್ದಾರೆ.

ಇದನ್ನೂ ಓದಿರಿ: ‘ವಿದೇಶದಲ್ಲಿ ನಿಂತು ಭಾರತವನ್ನು ಮೋದಿ ಅವಮಾನಿಸಿದ್ದು’: ಹಳೆಯ ವಿಡಿಯೊಗಳ ಮೂಲಕ ಕಾಂಗ್ರೆಸ್ ತಿರುಗೇಟು

“ಬಂಗಾಳದಲ್ಲಿ, ನಾವು ಮಮತಾ ದೀದಿಯವರೊಂದಿಗೆ ಇದ್ದೇವೆ. ಇದೀಗ, ನಮ್ಮ ನಿಲುವು ಬಿಜೆಪಿ ಮತ್ತು ಕಾಂಗ್ರೆಸ್ ಎರಡರಿಂದಲೂ ಸಮಾನ ಅಂತರವನ್ನು ಕಾಯ್ದುಕೊಳ್ಳುವುದಾಗಿದೆ” ಎಂದು ಅಖಿಲೇಶ್‌ ಕೋಲ್ಕತ್ತಾದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬಿಜೆಪಿಗೆ ಸೇರಿದ ನಂತರ ಕೇಂದ್ರ ತನಿಖಾ ಸಂಸ್ಥೆಗಳ ಪ್ರಕರಣಗಳಿಂದ ಬಚಾವಾದ ವಿರೋಧ ಪಕ್ಷದ ಮಾಜಿ ನಾಯಕರನ್ನು ಉಲ್ಲೇಖಿಸಿ ಮಾತನಾಡಿರುವ ಅವರು, “ಬಿಜೆಪಿ ಲಸಿಕೆ ಪಡೆಯುವವರಿಗೆ ಸಿಬಿಐ, ಇಡಿ ಅಥವಾ ಐಟಿಯಿಂದ ತೊಂದರೆಯಾಗುವುದಿಲ್ಲ” ಎಂದು ಟೀಕಿಸಿದ್ದಾರೆ.

ಇತ್ತೀಚೆಗೆ ಆಮ್ ಆದ್ಮಿ ಪಕ್ಷದ ಮನೀಶ್ ಸಿಸೋಡಿಯಾ, ರಾಷ್ಟ್ರೀಯ ಜನತಾ ದಳದ ಲಾಲು ಯಾದವ್ ಮತ್ತು ಅವರ ಕುಟುಂಬದ ಹಲವಾರು ವಿರೋಧ ಪಕ್ಷದ ನಾಯಕರನ್ನು ಕೇಂದ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯದಿಂದ ಬೇಟೆಯಾಡಲಾಗಿದೆ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...