Homeಮುಖಪುಟಕಾಂಗ್ರೆಸ್ ಹೊರಗಿಟ್ಟು ವಿರೋಧಿ ಬಣ ಕಟ್ಟಲು ಮುಂದಾದ ಟಿಎಂಸಿ, ಎಸ್‌ಪಿ

ಕಾಂಗ್ರೆಸ್ ಹೊರಗಿಟ್ಟು ವಿರೋಧಿ ಬಣ ಕಟ್ಟಲು ಮುಂದಾದ ಟಿಎಂಸಿ, ಎಸ್‌ಪಿ

- Advertisement -
- Advertisement -

ಕಾಂಗ್ರೆಸ್ ಮತ್ತು ಬಿಜೆಪಿ ಎರಡನ್ನೂ ಒಂದು ಒಂದೇ ಅಂತರದಲ್ಲಿ ಇರಿಸಲು ಮೂರು ಪ್ರಮುಖ ವಿರೋಧ ಪಕ್ಷಗಳು ಒಪ್ಪಿಕೊಂಡಿವೆ. ಕಾಂಗ್ರೆಸ್‌, ಬಿಜೆಪಿಯನ್ನು ಸಮಾನವಾಗಿ ಪರಿಗಣಿಸಲು ಮುಂದಾಗಿವೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಇಂದು ಕೋಲ್ಕತ್ತಾದಲ್ಲಿ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಬಿಜು ಜನತಾ ದಳದ ಮುಖ್ಯಸ್ಥರಾದ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮುಂದಿನ ವಾರ ಭೇಟಿಯಾಗಲಿದ್ದಾರೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷಗಳ ಗುಂಪಿನ ಪ್ರಮುಖ ನಾಯಕ ಎಂದು ಬಿಂಬಿಸುವ ಬಿಜೆಪಿಯ ಪ್ರಯತ್ನವನ್ನು ಎದುರಿಸುವ ಗುರಿಯನ್ನು ಈ ತಂತ್ರ ಹೊಂದಿದೆ ಎಂದು ಹೇಳಲಾಗುತ್ತಿದೆ.

ಭಾರತದ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರ ಮೈಕ್‌ಗಳನ್ನು ಮ್ಯೂಟ್ ಮಾಡಲಾಗಿದೆ ಎಂದು ಲಂಡನ್‌ನಲ್ಲಿ ರಾಹುಲ್‌ ಗಾಂಧಿಯವರು ಹೇಳಿಕೆ ನೀಡಿರುವುದನ್ನು ಖಂಡಿಸಿರುವ ಬಿಜೆಪಿ, ಕಾಂಗ್ರೆಸ್ ಕ್ಷಮೆಯಾಚಿಸಬೇಕೆಂದು ಒತ್ತಾಯಿಸುತ್ತಿದೆ. ಈ ವಿರೋಧ ಪಕ್ಷಗಳು ಬೇರೆಯದೇ ರೀತಿಯಲ್ಲಿ ಈ ವಿದ್ಯಮಾನವನ್ನು ಪರಿಭಾವಿಸಿವೆ. “ಈಗ ಬಿಜೆಪಿಯು ರಾಹುಲ್ ಅವರನ್ನು ಬಳಸಿಕೊಂಡು ನಮ್ಮನ್ನು ಗುರಿಯಾಗಿಸಿಕೊಂಡಿದೆ” ಈ  ಶಂಕಿಸುತ್ತಿವೆ.

“ರಾಹುಲ್ ಗಾಂಧಿಯವರು ವಿದೇಶದಲ್ಲಿ ಭಾಷಣ ಮಾಡಿದ್ದಾರೆ, ಅವರು ಕ್ಷಮೆಯಾಚಿಸುವವರೆಗೂ ಬಿಜೆಪಿ ಸಂಸತ್ತಿನ ಕಲಾಪಗಳಿಗೆ ಅವಕಾಶ ನೀಡುವುದಿಲ್ಲ. ಇದರರ್ಥ ಅವರು ಕಾಂಗ್ರೆಸ್ ಅನ್ನು ಬಳಸಿಕೊಂಡು ಕಲಾಪಗಳು ನಡೆಯದಂತೆ ನೋಡಿಕೊಂಡಿದೆ. ರಾಹುಲ್ ಗಾಂಧಿಯವರು ವಿರೋಧಿ ಬಣದ ಮುಖವಾಗಿರಬೇಕೆಂದು ಬಿಜೆಪಿ ಬಯಸುತ್ತದೆ. ಇದರಿಂದ ಬಿಜೆಪಿಗೆ ಅನುಕೂಲವಾಗುತ್ತದೆ. (2024ರ ಚುನಾವಣೆಗೆ) ಪ್ರಧಾನ ಮಂತ್ರಿಯ ಮುಖವನ್ನು ನಿರ್ಧರಿಸುವ ಅಗತ್ಯವಿಲ್ಲ” ಎಂದು ತೃಣಮೂಲ ಕಾಂಗ್ರೆಸ್ ಸಂಸದ ಸುದೀಪ್ ಬಂಡೋಪಾಧ್ಯಾಯ ತಿಳಿಸಿರುವುದಾಗಿ ‘ಎನ್‌ಡಿಟಿವಿ’ ವರದಿ ಮಾಡಿದೆ.

ವಿರೋಧ ಪಕ್ಷದ ‘ಬಿಗ್ ಬಾಸ್ ಕಾಂಗ್ರೆಸ್’ ಎಂದು ಭಾವಿಸುವುದು ತಪ್ಪು ಎಂದು ಬಂಡೋಪಾಧ್ಯಾಯ ಹೇಳಿದ್ದಾರೆ.

“ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಾರ್ಚ್ 23 ರಂದು ನವೀನ್ ಪಟ್ನಾಯಕ್ ಅವರನ್ನು ಭೇಟಿಯಾಗಲಿದ್ದಾರೆ. ನಾವು ಇದನ್ನು (ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ಸಮಾನ ಅಂತರವನ್ನು ಕಾಯ್ದುಕೊಳ್ಳುವ ಯೋಜನೆ) ಇತರ ವಿರೋಧ ಪಕ್ಷಗಳೊಂದಿಗೆ ಚರ್ಚಿಸುತ್ತೇವೆ. ಇದು ತೃತೀಯ ರಂಗ ಎಂದು ನಾವು ಹೇಳುತ್ತಿಲ್ಲ, ಆದರೆ ಪ್ರಾದೇಶಿಕ ಪಕ್ಷಗಳಿಗೆ ಈ ನಿರ್ಧಾರ ತೆಗೆದುಕೊಳ್ಳುವ ಶಕ್ತಿ ಇದೆ” ಎಂದು ತಿಳಿಸಿದ್ದಾರೆ.

“ಕಾಂಗ್ರೆಸ್ ಮತ್ತು ಬಿಜೆಪಿ ಎರಡರಿಂದಲೂ ಸಮಾನ ಅಂತರವನ್ನು ಕಾಯ್ದುಕೊಳ್ಳಲು ಬಯಸಿದ್ದೇನೆ” ಎಂದು ಅಖಿಲೇಶ್ ಯಾದವ್ ಖಚಿತಪಡಿಸಿದ್ದಾರೆ.

ಇದನ್ನೂ ಓದಿರಿ: ‘ವಿದೇಶದಲ್ಲಿ ನಿಂತು ಭಾರತವನ್ನು ಮೋದಿ ಅವಮಾನಿಸಿದ್ದು’: ಹಳೆಯ ವಿಡಿಯೊಗಳ ಮೂಲಕ ಕಾಂಗ್ರೆಸ್ ತಿರುಗೇಟು

“ಬಂಗಾಳದಲ್ಲಿ, ನಾವು ಮಮತಾ ದೀದಿಯವರೊಂದಿಗೆ ಇದ್ದೇವೆ. ಇದೀಗ, ನಮ್ಮ ನಿಲುವು ಬಿಜೆಪಿ ಮತ್ತು ಕಾಂಗ್ರೆಸ್ ಎರಡರಿಂದಲೂ ಸಮಾನ ಅಂತರವನ್ನು ಕಾಯ್ದುಕೊಳ್ಳುವುದಾಗಿದೆ” ಎಂದು ಅಖಿಲೇಶ್‌ ಕೋಲ್ಕತ್ತಾದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬಿಜೆಪಿಗೆ ಸೇರಿದ ನಂತರ ಕೇಂದ್ರ ತನಿಖಾ ಸಂಸ್ಥೆಗಳ ಪ್ರಕರಣಗಳಿಂದ ಬಚಾವಾದ ವಿರೋಧ ಪಕ್ಷದ ಮಾಜಿ ನಾಯಕರನ್ನು ಉಲ್ಲೇಖಿಸಿ ಮಾತನಾಡಿರುವ ಅವರು, “ಬಿಜೆಪಿ ಲಸಿಕೆ ಪಡೆಯುವವರಿಗೆ ಸಿಬಿಐ, ಇಡಿ ಅಥವಾ ಐಟಿಯಿಂದ ತೊಂದರೆಯಾಗುವುದಿಲ್ಲ” ಎಂದು ಟೀಕಿಸಿದ್ದಾರೆ.

ಇತ್ತೀಚೆಗೆ ಆಮ್ ಆದ್ಮಿ ಪಕ್ಷದ ಮನೀಶ್ ಸಿಸೋಡಿಯಾ, ರಾಷ್ಟ್ರೀಯ ಜನತಾ ದಳದ ಲಾಲು ಯಾದವ್ ಮತ್ತು ಅವರ ಕುಟುಂಬದ ಹಲವಾರು ವಿರೋಧ ಪಕ್ಷದ ನಾಯಕರನ್ನು ಕೇಂದ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯದಿಂದ ಬೇಟೆಯಾಡಲಾಗಿದೆ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...