Homeಮುಖಪುಟಎಸ್‌ಐಆರ್‌ ದೊಡ್ಡ ಹಗರಣ : ನೈಜ ಮತದಾರರನ್ನು ಕೈಬಿಟ್ಟರೆ ಚು.ಆಯೋಗದ ಕಚೇರಿಗೆ ಘೇರಾವ್ : ಮಮತಾ...

ಎಸ್‌ಐಆರ್‌ ದೊಡ್ಡ ಹಗರಣ : ನೈಜ ಮತದಾರರನ್ನು ಕೈಬಿಟ್ಟರೆ ಚು.ಆಯೋಗದ ಕಚೇರಿಗೆ ಘೇರಾವ್ : ಮಮತಾ ಬ್ಯಾನರ್ಜಿ ಎಚ್ಚರಿಕೆ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡ ನಂತರ ಅಂತಿಮ ಮತದಾರರ ಪಟ್ಟಿಯಿಂದ ಒಬ್ಬನೇ ಒಬ್ಬ ಕಾನೂನುಬದ್ಧ ಮತದಾರರ ಹೆಸರನ್ನು ಅಳಿಸಿದರೆ, ದೆಹಲಿಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ಘೇರಾವ್ ಹಾಕುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಡಿ.30) ಎಚ್ಚರಿಕೆ ನೀಡಿದ್ದಾರೆ.

ಬಂಕುರಾ ಜಿಲ್ಲೆಯಲ್ಲಿ ನಡೆದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ದ ವಾಗ್ದಾಳಿ ನಡೆಸಿದ್ದು, ಎಸ್‌ಐಆರ್ ಕೃತಕ ಬುದ್ಧಿಮತ್ತೆ (ಎಐ) ಸಹಾಯದಿಂದ ನಡೆಸಲಾಗುತ್ತಿರುವ ದೊಡ್ಡ ‘ಹಗರಣ’ ಎಂದಿದ್ದಾರೆ.

“ಎಐ ಬಳಸಿ ಎಸ್‌ಐಆರ್‌ ನಡೆಸಲಾಗುತ್ತಿದೆ, ಇದು ಒಂದು ದೊಡ್ಡ ಹಗರಣ. ನೀವು (ಅಮಿತ್ ಶಾ) ಮತ್ತು ನಿಮ್ಮ ಮಗ ಮಾತ್ರ ಬದುಕುಳಿಯುತ್ತೀರಿ. ಪಶ್ಚಿಮ ಬಂಗಾಳದ ಬಡ ಜನರನ್ನು ಎಸ್‌ಐಆರ್ ಹೆಸರಿನಲ್ಲಿ ಹಿಂಸಿಸಲಾಗುತ್ತಿದೆ. ಎಸ್‌ಐಆರ್‌ನಿಂದಾಗಿ ಸುಮಾರು 60 ಜನರು ಸಾವನ್ನಪ್ಪಿದ್ದಾರೆ. ದಾಖಲೆ ಪರಿಶೀಲನೆ ವಿಚಾರಣೆಗೆ ವೃದ್ಧರನ್ನು ಕರೆಯಲಾಗುತ್ತಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

“ಒಬ್ಬನೇ ಒಬ್ಬ ಕಾನೂನುಬದ್ಧ ಮತದಾರರ ಹೆಸರನ್ನು ಅಳಿಸಿದರೂ, ಟಿಎಂಸಿ ದೆಹಲಿಯ ಚುನಾವಣಾ ಆಯೋಗದ ಕಚೇರಿಗೆ ಮುತ್ತಿಗೆ ಹಾಕುತ್ತದೆ” ಎಂದು ಎಚ್ಚರಿಕ ನೀಡಿದ್ದಾರೆ.

ಟಿಎಂಸಿ ಸರ್ಕಾರದ ಅಡಿಯಲ್ಲಿ ಬಂಗಾಳ ಭಯೋತ್ಪಾದಕರ ಕೇಂದ್ರವಾಗಿದೆ ಎಂಬ ಅಮಿತ್ ಶಾ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಮಮತಾ ಬ್ಯಾನರ್ಜಿ, “ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರೇ ಇಲ್ಲದಿದ್ದರೆ, ಪಹಲ್ಗಾಮ್ ದಾಳಿ ಹೇಗೆ ಸಂಭವಿಸಿತು? ಪಹಲ್ಗಾಮ್‌ನಲ್ಲಿ ನೀವು ದಾಳಿ ನಡೆಸಿದ್ದಾ? ದೆಹಲಿಯಲ್ಲಿ ನಡೆದ ಘಟನೆಯ ಹಿಂದೆ ಯಾರಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಂಗಾಳಿ ವಲಸೆ ಕಾರ್ಮಿಕರ ಮೇಲೆ ನಡೆಯುತ್ತಿರುವ ದಾಳಿಗಳಿಗೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಚುನಾವಣೆ ಬಂದಾಗಲೆಲ್ಲಾ ‘ಸೋನಾರ್ ಬಾಂಗ್ಲಾ’ ನಿರ್ಮಿಸುವುದಾಗಿ ಬಿಜೆಪಿ ಭರವಸೆ ನೀಡುತ್ತದೆ. ವಾಸ್ತವದಲ್ಲಿ ಅದು ಆಳುವ ರಾಜ್ಯಗಳಲ್ಲಿ ಬಂಗಾಳಿ ಮಾತನಾಡುವ ಜನರನ್ನು ಥಳಿಸಲಾಗುತ್ತಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಎಸ್‌ಐಆರ್‌ ಬಳಿಕ ಡಿಸೆಂಬರ್ 16ರಂದು ಪಶ್ಚಿಮ ಬಂಗಾಳದಲ್ಲಿ ಕರಡು ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸಿದ್ದು, 58 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿದೆ. ಒಟ್ಟು 7.6 ಕೋಟಿ ಮತದಾರರ ಪೈಕಿ ಸುಮಾರು 1.66 ಕೋಟಿ ಮತದಾರರ ‘ಪ್ರಾಮಾಣಿಕತೆ’ಯ ಬಗ್ಗೆ ಚುನಾವಣಾ ಆಯೋಗವು ಊಹಾಪೋಹಗಳನ್ನು ಎತ್ತಿದ್ದು, ಅವರ ದಾಖಲೆಗಳನ್ನು ಮತ್ತೊಮ್ಮೆ ಪರಿಶೀಲಿಸಲು ವಿಚಾರಣೆಗೆ ಕರೆಯಲಾಗಿದೆ.

ಪಶ್ಚಿಮ ಬಂಗಾಳದ ಸಿಇಒಗೆ ಬರೆದ ಪತ್ರದಲ್ಲಿ, ಡಬ್ಲ್ಯುಬಿಸಿಎಸ್ (ಕಾರ್ಯನಿರ್ವಾಹಕ) ಅಧಿಕಾರಿಗಳ ಸಂಘವು, ಚುನಾವಣಾ ನೋಂದಣಿ ಅಧಿಕಾರಿಗಳ (ಇಆರ್‌ಒ) ಶಾಸನಬದ್ಧ ಪಾತ್ರವನ್ನು ನಿರ್ಲಕ್ಷಿಸಿ ಕರಡು ಮತದಾರರ ಪಟ್ಟಿಯಲ್ಲಿರುವ ಮತದಾರರನ್ನು ಸ್ವಯಂ ಪ್ರೇರಿತವಾಗಿ ಅಳಿಸಲಾಗಿದೆ ಎಂದು ಆಕ್ಷೇಪಣೆ ಎತ್ತಿದೆ.

ದೊಡ್ಡ ಮಟ್ಟದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಒಂದೇ ಸಮನೆ ತೆಗದು ಹಾಕಲಾಗಿದೆ. ಈ ಮತದಾರರು ಕಾನೂನಿನ ಪ್ರಕಾರ ಮತ ಚಲಾಯಿಸಲು ಅರ್ಹರಾಗಿರಬಹುದು. ಆದರೆ, ಮತದಾರರ ಪಟ್ಟಿ ತಯಾರಿಸುವ ಅಥವಾ ಪರಿಶೀಲಿಸುವ ಸಮಯದಲ್ಲಿ (ಗಣತಿ ಪ್ರಕ್ರಿಯೆ) ಯಾವುದೋ ಕಾರಣಕ್ಕೆ ಹಾಜರಿರಲಿಕ್ಕಿಲ್ಲ ಅಥವಾ ಭಾಗವಹಿಸಿರಲಿಕ್ಕಿಲ್ಲ. ಇಂತಹ ವ್ಯಕ್ತಿಗಳ ಹಕ್ಕುಗಳನ್ನು ಒಂದೇ ಸಮಯದಲ್ಲಿ ಅಳಿಸಿ ಹಾಕುವುದು ಅನ್ಯಾಯವೆಂದು ಪತ್ರದಲ್ಲಿ ಆಕ್ಷೇಪ ವ್ಯಕ್ತಪಡಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ. ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್...

ಮುಸ್ಲಿಮರಿಗೆ ಗುಂಡಿಕ್ಕುವಂತೆ ವಿಡಿಯೋ ಹಂಚಿಕೆ: ಅಸ್ಸಾಂ ಸಿಎಂ ವಿರುದ್ಧ ಓವೈಸಿ ದೂರು: ದ್ವೇಷ ಭಾಷಣ ಆದೇಶ ಉಲ್ಲೇಖ 

ಅಸ್ಸಾಂ ಬಿಜೆಪಿ ಘಟಕದ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ಮತ್ತು ಈಗ ಅಳಿಸಲಾದ ವೀಡಿಯೊದಲ್ಲಿ, ಮುಸ್ಲಿಮರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಆರೋಪಿಸಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ...

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ...

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...