Homeಮುಖಪುಟಎಸ್‌ಐಆರ್‌ ದೊಡ್ಡ ಹಗರಣ : ನೈಜ ಮತದಾರರನ್ನು ಕೈಬಿಟ್ಟರೆ ಚು.ಆಯೋಗದ ಕಚೇರಿಗೆ ಘೇರಾವ್ : ಮಮತಾ...

ಎಸ್‌ಐಆರ್‌ ದೊಡ್ಡ ಹಗರಣ : ನೈಜ ಮತದಾರರನ್ನು ಕೈಬಿಟ್ಟರೆ ಚು.ಆಯೋಗದ ಕಚೇರಿಗೆ ಘೇರಾವ್ : ಮಮತಾ ಬ್ಯಾನರ್ಜಿ ಎಚ್ಚರಿಕೆ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡ ನಂತರ ಅಂತಿಮ ಮತದಾರರ ಪಟ್ಟಿಯಿಂದ ಒಬ್ಬನೇ ಒಬ್ಬ ಕಾನೂನುಬದ್ಧ ಮತದಾರರ ಹೆಸರನ್ನು ಅಳಿಸಿದರೆ, ದೆಹಲಿಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ಘೇರಾವ್ ಹಾಕುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಡಿ.30) ಎಚ್ಚರಿಕೆ ನೀಡಿದ್ದಾರೆ.

ಬಂಕುರಾ ಜಿಲ್ಲೆಯಲ್ಲಿ ನಡೆದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ದ ವಾಗ್ದಾಳಿ ನಡೆಸಿದ್ದು, ಎಸ್‌ಐಆರ್ ಕೃತಕ ಬುದ್ಧಿಮತ್ತೆ (ಎಐ) ಸಹಾಯದಿಂದ ನಡೆಸಲಾಗುತ್ತಿರುವ ದೊಡ್ಡ ‘ಹಗರಣ’ ಎಂದಿದ್ದಾರೆ.

“ಎಐ ಬಳಸಿ ಎಸ್‌ಐಆರ್‌ ನಡೆಸಲಾಗುತ್ತಿದೆ, ಇದು ಒಂದು ದೊಡ್ಡ ಹಗರಣ. ನೀವು (ಅಮಿತ್ ಶಾ) ಮತ್ತು ನಿಮ್ಮ ಮಗ ಮಾತ್ರ ಬದುಕುಳಿಯುತ್ತೀರಿ. ಪಶ್ಚಿಮ ಬಂಗಾಳದ ಬಡ ಜನರನ್ನು ಎಸ್‌ಐಆರ್ ಹೆಸರಿನಲ್ಲಿ ಹಿಂಸಿಸಲಾಗುತ್ತಿದೆ. ಎಸ್‌ಐಆರ್‌ನಿಂದಾಗಿ ಸುಮಾರು 60 ಜನರು ಸಾವನ್ನಪ್ಪಿದ್ದಾರೆ. ದಾಖಲೆ ಪರಿಶೀಲನೆ ವಿಚಾರಣೆಗೆ ವೃದ್ಧರನ್ನು ಕರೆಯಲಾಗುತ್ತಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

“ಒಬ್ಬನೇ ಒಬ್ಬ ಕಾನೂನುಬದ್ಧ ಮತದಾರರ ಹೆಸರನ್ನು ಅಳಿಸಿದರೂ, ಟಿಎಂಸಿ ದೆಹಲಿಯ ಚುನಾವಣಾ ಆಯೋಗದ ಕಚೇರಿಗೆ ಮುತ್ತಿಗೆ ಹಾಕುತ್ತದೆ” ಎಂದು ಎಚ್ಚರಿಕ ನೀಡಿದ್ದಾರೆ.

ಟಿಎಂಸಿ ಸರ್ಕಾರದ ಅಡಿಯಲ್ಲಿ ಬಂಗಾಳ ಭಯೋತ್ಪಾದಕರ ಕೇಂದ್ರವಾಗಿದೆ ಎಂಬ ಅಮಿತ್ ಶಾ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಮಮತಾ ಬ್ಯಾನರ್ಜಿ, “ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರೇ ಇಲ್ಲದಿದ್ದರೆ, ಪಹಲ್ಗಾಮ್ ದಾಳಿ ಹೇಗೆ ಸಂಭವಿಸಿತು? ಪಹಲ್ಗಾಮ್‌ನಲ್ಲಿ ನೀವು ದಾಳಿ ನಡೆಸಿದ್ದಾ? ದೆಹಲಿಯಲ್ಲಿ ನಡೆದ ಘಟನೆಯ ಹಿಂದೆ ಯಾರಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಂಗಾಳಿ ವಲಸೆ ಕಾರ್ಮಿಕರ ಮೇಲೆ ನಡೆಯುತ್ತಿರುವ ದಾಳಿಗಳಿಗೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಚುನಾವಣೆ ಬಂದಾಗಲೆಲ್ಲಾ ‘ಸೋನಾರ್ ಬಾಂಗ್ಲಾ’ ನಿರ್ಮಿಸುವುದಾಗಿ ಬಿಜೆಪಿ ಭರವಸೆ ನೀಡುತ್ತದೆ. ವಾಸ್ತವದಲ್ಲಿ ಅದು ಆಳುವ ರಾಜ್ಯಗಳಲ್ಲಿ ಬಂಗಾಳಿ ಮಾತನಾಡುವ ಜನರನ್ನು ಥಳಿಸಲಾಗುತ್ತಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಎಸ್‌ಐಆರ್‌ ಬಳಿಕ ಡಿಸೆಂಬರ್ 16ರಂದು ಪಶ್ಚಿಮ ಬಂಗಾಳದಲ್ಲಿ ಕರಡು ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸಿದ್ದು, 58 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿದೆ. ಒಟ್ಟು 7.6 ಕೋಟಿ ಮತದಾರರ ಪೈಕಿ ಸುಮಾರು 1.66 ಕೋಟಿ ಮತದಾರರ ‘ಪ್ರಾಮಾಣಿಕತೆ’ಯ ಬಗ್ಗೆ ಚುನಾವಣಾ ಆಯೋಗವು ಊಹಾಪೋಹಗಳನ್ನು ಎತ್ತಿದ್ದು, ಅವರ ದಾಖಲೆಗಳನ್ನು ಮತ್ತೊಮ್ಮೆ ಪರಿಶೀಲಿಸಲು ವಿಚಾರಣೆಗೆ ಕರೆಯಲಾಗಿದೆ.

ಪಶ್ಚಿಮ ಬಂಗಾಳದ ಸಿಇಒಗೆ ಬರೆದ ಪತ್ರದಲ್ಲಿ, ಡಬ್ಲ್ಯುಬಿಸಿಎಸ್ (ಕಾರ್ಯನಿರ್ವಾಹಕ) ಅಧಿಕಾರಿಗಳ ಸಂಘವು, ಚುನಾವಣಾ ನೋಂದಣಿ ಅಧಿಕಾರಿಗಳ (ಇಆರ್‌ಒ) ಶಾಸನಬದ್ಧ ಪಾತ್ರವನ್ನು ನಿರ್ಲಕ್ಷಿಸಿ ಕರಡು ಮತದಾರರ ಪಟ್ಟಿಯಲ್ಲಿರುವ ಮತದಾರರನ್ನು ಸ್ವಯಂ ಪ್ರೇರಿತವಾಗಿ ಅಳಿಸಲಾಗಿದೆ ಎಂದು ಆಕ್ಷೇಪಣೆ ಎತ್ತಿದೆ.

ದೊಡ್ಡ ಮಟ್ಟದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಒಂದೇ ಸಮನೆ ತೆಗದು ಹಾಕಲಾಗಿದೆ. ಈ ಮತದಾರರು ಕಾನೂನಿನ ಪ್ರಕಾರ ಮತ ಚಲಾಯಿಸಲು ಅರ್ಹರಾಗಿರಬಹುದು. ಆದರೆ, ಮತದಾರರ ಪಟ್ಟಿ ತಯಾರಿಸುವ ಅಥವಾ ಪರಿಶೀಲಿಸುವ ಸಮಯದಲ್ಲಿ (ಗಣತಿ ಪ್ರಕ್ರಿಯೆ) ಯಾವುದೋ ಕಾರಣಕ್ಕೆ ಹಾಜರಿರಲಿಕ್ಕಿಲ್ಲ ಅಥವಾ ಭಾಗವಹಿಸಿರಲಿಕ್ಕಿಲ್ಲ. ಇಂತಹ ವ್ಯಕ್ತಿಗಳ ಹಕ್ಕುಗಳನ್ನು ಒಂದೇ ಸಮಯದಲ್ಲಿ ಅಳಿಸಿ ಹಾಕುವುದು ಅನ್ಯಾಯವೆಂದು ಪತ್ರದಲ್ಲಿ ಆಕ್ಷೇಪ ವ್ಯಕ್ತಪಡಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...