Homeಮುಖಪುಟಎಸ್‌ಐಆರ್‌ ದೊಡ್ಡ ಹಗರಣ : ನೈಜ ಮತದಾರರನ್ನು ಕೈಬಿಟ್ಟರೆ ಚು.ಆಯೋಗದ ಕಚೇರಿಗೆ ಘೇರಾವ್ : ಮಮತಾ...

ಎಸ್‌ಐಆರ್‌ ದೊಡ್ಡ ಹಗರಣ : ನೈಜ ಮತದಾರರನ್ನು ಕೈಬಿಟ್ಟರೆ ಚು.ಆಯೋಗದ ಕಚೇರಿಗೆ ಘೇರಾವ್ : ಮಮತಾ ಬ್ಯಾನರ್ಜಿ ಎಚ್ಚರಿಕೆ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡ ನಂತರ ಅಂತಿಮ ಮತದಾರರ ಪಟ್ಟಿಯಿಂದ ಒಬ್ಬನೇ ಒಬ್ಬ ಕಾನೂನುಬದ್ಧ ಮತದಾರರ ಹೆಸರನ್ನು ಅಳಿಸಿದರೆ, ದೆಹಲಿಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ಘೇರಾವ್ ಹಾಕುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಡಿ.30) ಎಚ್ಚರಿಕೆ ನೀಡಿದ್ದಾರೆ.

ಬಂಕುರಾ ಜಿಲ್ಲೆಯಲ್ಲಿ ನಡೆದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ದ ವಾಗ್ದಾಳಿ ನಡೆಸಿದ್ದು, ಎಸ್‌ಐಆರ್ ಕೃತಕ ಬುದ್ಧಿಮತ್ತೆ (ಎಐ) ಸಹಾಯದಿಂದ ನಡೆಸಲಾಗುತ್ತಿರುವ ದೊಡ್ಡ ‘ಹಗರಣ’ ಎಂದಿದ್ದಾರೆ.

“ಎಐ ಬಳಸಿ ಎಸ್‌ಐಆರ್‌ ನಡೆಸಲಾಗುತ್ತಿದೆ, ಇದು ಒಂದು ದೊಡ್ಡ ಹಗರಣ. ನೀವು (ಅಮಿತ್ ಶಾ) ಮತ್ತು ನಿಮ್ಮ ಮಗ ಮಾತ್ರ ಬದುಕುಳಿಯುತ್ತೀರಿ. ಪಶ್ಚಿಮ ಬಂಗಾಳದ ಬಡ ಜನರನ್ನು ಎಸ್‌ಐಆರ್ ಹೆಸರಿನಲ್ಲಿ ಹಿಂಸಿಸಲಾಗುತ್ತಿದೆ. ಎಸ್‌ಐಆರ್‌ನಿಂದಾಗಿ ಸುಮಾರು 60 ಜನರು ಸಾವನ್ನಪ್ಪಿದ್ದಾರೆ. ದಾಖಲೆ ಪರಿಶೀಲನೆ ವಿಚಾರಣೆಗೆ ವೃದ್ಧರನ್ನು ಕರೆಯಲಾಗುತ್ತಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

“ಒಬ್ಬನೇ ಒಬ್ಬ ಕಾನೂನುಬದ್ಧ ಮತದಾರರ ಹೆಸರನ್ನು ಅಳಿಸಿದರೂ, ಟಿಎಂಸಿ ದೆಹಲಿಯ ಚುನಾವಣಾ ಆಯೋಗದ ಕಚೇರಿಗೆ ಮುತ್ತಿಗೆ ಹಾಕುತ್ತದೆ” ಎಂದು ಎಚ್ಚರಿಕ ನೀಡಿದ್ದಾರೆ.

ಟಿಎಂಸಿ ಸರ್ಕಾರದ ಅಡಿಯಲ್ಲಿ ಬಂಗಾಳ ಭಯೋತ್ಪಾದಕರ ಕೇಂದ್ರವಾಗಿದೆ ಎಂಬ ಅಮಿತ್ ಶಾ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಮಮತಾ ಬ್ಯಾನರ್ಜಿ, “ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರೇ ಇಲ್ಲದಿದ್ದರೆ, ಪಹಲ್ಗಾಮ್ ದಾಳಿ ಹೇಗೆ ಸಂಭವಿಸಿತು? ಪಹಲ್ಗಾಮ್‌ನಲ್ಲಿ ನೀವು ದಾಳಿ ನಡೆಸಿದ್ದಾ? ದೆಹಲಿಯಲ್ಲಿ ನಡೆದ ಘಟನೆಯ ಹಿಂದೆ ಯಾರಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಂಗಾಳಿ ವಲಸೆ ಕಾರ್ಮಿಕರ ಮೇಲೆ ನಡೆಯುತ್ತಿರುವ ದಾಳಿಗಳಿಗೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಚುನಾವಣೆ ಬಂದಾಗಲೆಲ್ಲಾ ‘ಸೋನಾರ್ ಬಾಂಗ್ಲಾ’ ನಿರ್ಮಿಸುವುದಾಗಿ ಬಿಜೆಪಿ ಭರವಸೆ ನೀಡುತ್ತದೆ. ವಾಸ್ತವದಲ್ಲಿ ಅದು ಆಳುವ ರಾಜ್ಯಗಳಲ್ಲಿ ಬಂಗಾಳಿ ಮಾತನಾಡುವ ಜನರನ್ನು ಥಳಿಸಲಾಗುತ್ತಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಎಸ್‌ಐಆರ್‌ ಬಳಿಕ ಡಿಸೆಂಬರ್ 16ರಂದು ಪಶ್ಚಿಮ ಬಂಗಾಳದಲ್ಲಿ ಕರಡು ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸಿದ್ದು, 58 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿದೆ. ಒಟ್ಟು 7.6 ಕೋಟಿ ಮತದಾರರ ಪೈಕಿ ಸುಮಾರು 1.66 ಕೋಟಿ ಮತದಾರರ ‘ಪ್ರಾಮಾಣಿಕತೆ’ಯ ಬಗ್ಗೆ ಚುನಾವಣಾ ಆಯೋಗವು ಊಹಾಪೋಹಗಳನ್ನು ಎತ್ತಿದ್ದು, ಅವರ ದಾಖಲೆಗಳನ್ನು ಮತ್ತೊಮ್ಮೆ ಪರಿಶೀಲಿಸಲು ವಿಚಾರಣೆಗೆ ಕರೆಯಲಾಗಿದೆ.

ಪಶ್ಚಿಮ ಬಂಗಾಳದ ಸಿಇಒಗೆ ಬರೆದ ಪತ್ರದಲ್ಲಿ, ಡಬ್ಲ್ಯುಬಿಸಿಎಸ್ (ಕಾರ್ಯನಿರ್ವಾಹಕ) ಅಧಿಕಾರಿಗಳ ಸಂಘವು, ಚುನಾವಣಾ ನೋಂದಣಿ ಅಧಿಕಾರಿಗಳ (ಇಆರ್‌ಒ) ಶಾಸನಬದ್ಧ ಪಾತ್ರವನ್ನು ನಿರ್ಲಕ್ಷಿಸಿ ಕರಡು ಮತದಾರರ ಪಟ್ಟಿಯಲ್ಲಿರುವ ಮತದಾರರನ್ನು ಸ್ವಯಂ ಪ್ರೇರಿತವಾಗಿ ಅಳಿಸಲಾಗಿದೆ ಎಂದು ಆಕ್ಷೇಪಣೆ ಎತ್ತಿದೆ.

ದೊಡ್ಡ ಮಟ್ಟದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಒಂದೇ ಸಮನೆ ತೆಗದು ಹಾಕಲಾಗಿದೆ. ಈ ಮತದಾರರು ಕಾನೂನಿನ ಪ್ರಕಾರ ಮತ ಚಲಾಯಿಸಲು ಅರ್ಹರಾಗಿರಬಹುದು. ಆದರೆ, ಮತದಾರರ ಪಟ್ಟಿ ತಯಾರಿಸುವ ಅಥವಾ ಪರಿಶೀಲಿಸುವ ಸಮಯದಲ್ಲಿ (ಗಣತಿ ಪ್ರಕ್ರಿಯೆ) ಯಾವುದೋ ಕಾರಣಕ್ಕೆ ಹಾಜರಿರಲಿಕ್ಕಿಲ್ಲ ಅಥವಾ ಭಾಗವಹಿಸಿರಲಿಕ್ಕಿಲ್ಲ. ಇಂತಹ ವ್ಯಕ್ತಿಗಳ ಹಕ್ಕುಗಳನ್ನು ಒಂದೇ ಸಮಯದಲ್ಲಿ ಅಳಿಸಿ ಹಾಕುವುದು ಅನ್ಯಾಯವೆಂದು ಪತ್ರದಲ್ಲಿ ಆಕ್ಷೇಪ ವ್ಯಕ್ತಪಡಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...