Homeಮುಖಪುಟಎಸ್‌ಐಆರ್‌ ದೊಡ್ಡ ಹಗರಣ : ನೈಜ ಮತದಾರರನ್ನು ಕೈಬಿಟ್ಟರೆ ಚು.ಆಯೋಗದ ಕಚೇರಿಗೆ ಘೇರಾವ್ : ಮಮತಾ...

ಎಸ್‌ಐಆರ್‌ ದೊಡ್ಡ ಹಗರಣ : ನೈಜ ಮತದಾರರನ್ನು ಕೈಬಿಟ್ಟರೆ ಚು.ಆಯೋಗದ ಕಚೇರಿಗೆ ಘೇರಾವ್ : ಮಮತಾ ಬ್ಯಾನರ್ಜಿ ಎಚ್ಚರಿಕೆ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡ ನಂತರ ಅಂತಿಮ ಮತದಾರರ ಪಟ್ಟಿಯಿಂದ ಒಬ್ಬನೇ ಒಬ್ಬ ಕಾನೂನುಬದ್ಧ ಮತದಾರರ ಹೆಸರನ್ನು ಅಳಿಸಿದರೆ, ದೆಹಲಿಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ಘೇರಾವ್ ಹಾಕುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಡಿ.30) ಎಚ್ಚರಿಕೆ ನೀಡಿದ್ದಾರೆ.

ಬಂಕುರಾ ಜಿಲ್ಲೆಯಲ್ಲಿ ನಡೆದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ದ ವಾಗ್ದಾಳಿ ನಡೆಸಿದ್ದು, ಎಸ್‌ಐಆರ್ ಕೃತಕ ಬುದ್ಧಿಮತ್ತೆ (ಎಐ) ಸಹಾಯದಿಂದ ನಡೆಸಲಾಗುತ್ತಿರುವ ದೊಡ್ಡ ‘ಹಗರಣ’ ಎಂದಿದ್ದಾರೆ.

“ಎಐ ಬಳಸಿ ಎಸ್‌ಐಆರ್‌ ನಡೆಸಲಾಗುತ್ತಿದೆ, ಇದು ಒಂದು ದೊಡ್ಡ ಹಗರಣ. ನೀವು (ಅಮಿತ್ ಶಾ) ಮತ್ತು ನಿಮ್ಮ ಮಗ ಮಾತ್ರ ಬದುಕುಳಿಯುತ್ತೀರಿ. ಪಶ್ಚಿಮ ಬಂಗಾಳದ ಬಡ ಜನರನ್ನು ಎಸ್‌ಐಆರ್ ಹೆಸರಿನಲ್ಲಿ ಹಿಂಸಿಸಲಾಗುತ್ತಿದೆ. ಎಸ್‌ಐಆರ್‌ನಿಂದಾಗಿ ಸುಮಾರು 60 ಜನರು ಸಾವನ್ನಪ್ಪಿದ್ದಾರೆ. ದಾಖಲೆ ಪರಿಶೀಲನೆ ವಿಚಾರಣೆಗೆ ವೃದ್ಧರನ್ನು ಕರೆಯಲಾಗುತ್ತಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

“ಒಬ್ಬನೇ ಒಬ್ಬ ಕಾನೂನುಬದ್ಧ ಮತದಾರರ ಹೆಸರನ್ನು ಅಳಿಸಿದರೂ, ಟಿಎಂಸಿ ದೆಹಲಿಯ ಚುನಾವಣಾ ಆಯೋಗದ ಕಚೇರಿಗೆ ಮುತ್ತಿಗೆ ಹಾಕುತ್ತದೆ” ಎಂದು ಎಚ್ಚರಿಕ ನೀಡಿದ್ದಾರೆ.

ಟಿಎಂಸಿ ಸರ್ಕಾರದ ಅಡಿಯಲ್ಲಿ ಬಂಗಾಳ ಭಯೋತ್ಪಾದಕರ ಕೇಂದ್ರವಾಗಿದೆ ಎಂಬ ಅಮಿತ್ ಶಾ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಮಮತಾ ಬ್ಯಾನರ್ಜಿ, “ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರೇ ಇಲ್ಲದಿದ್ದರೆ, ಪಹಲ್ಗಾಮ್ ದಾಳಿ ಹೇಗೆ ಸಂಭವಿಸಿತು? ಪಹಲ್ಗಾಮ್‌ನಲ್ಲಿ ನೀವು ದಾಳಿ ನಡೆಸಿದ್ದಾ? ದೆಹಲಿಯಲ್ಲಿ ನಡೆದ ಘಟನೆಯ ಹಿಂದೆ ಯಾರಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಂಗಾಳಿ ವಲಸೆ ಕಾರ್ಮಿಕರ ಮೇಲೆ ನಡೆಯುತ್ತಿರುವ ದಾಳಿಗಳಿಗೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಚುನಾವಣೆ ಬಂದಾಗಲೆಲ್ಲಾ ‘ಸೋನಾರ್ ಬಾಂಗ್ಲಾ’ ನಿರ್ಮಿಸುವುದಾಗಿ ಬಿಜೆಪಿ ಭರವಸೆ ನೀಡುತ್ತದೆ. ವಾಸ್ತವದಲ್ಲಿ ಅದು ಆಳುವ ರಾಜ್ಯಗಳಲ್ಲಿ ಬಂಗಾಳಿ ಮಾತನಾಡುವ ಜನರನ್ನು ಥಳಿಸಲಾಗುತ್ತಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಎಸ್‌ಐಆರ್‌ ಬಳಿಕ ಡಿಸೆಂಬರ್ 16ರಂದು ಪಶ್ಚಿಮ ಬಂಗಾಳದಲ್ಲಿ ಕರಡು ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸಿದ್ದು, 58 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿದೆ. ಒಟ್ಟು 7.6 ಕೋಟಿ ಮತದಾರರ ಪೈಕಿ ಸುಮಾರು 1.66 ಕೋಟಿ ಮತದಾರರ ‘ಪ್ರಾಮಾಣಿಕತೆ’ಯ ಬಗ್ಗೆ ಚುನಾವಣಾ ಆಯೋಗವು ಊಹಾಪೋಹಗಳನ್ನು ಎತ್ತಿದ್ದು, ಅವರ ದಾಖಲೆಗಳನ್ನು ಮತ್ತೊಮ್ಮೆ ಪರಿಶೀಲಿಸಲು ವಿಚಾರಣೆಗೆ ಕರೆಯಲಾಗಿದೆ.

ಪಶ್ಚಿಮ ಬಂಗಾಳದ ಸಿಇಒಗೆ ಬರೆದ ಪತ್ರದಲ್ಲಿ, ಡಬ್ಲ್ಯುಬಿಸಿಎಸ್ (ಕಾರ್ಯನಿರ್ವಾಹಕ) ಅಧಿಕಾರಿಗಳ ಸಂಘವು, ಚುನಾವಣಾ ನೋಂದಣಿ ಅಧಿಕಾರಿಗಳ (ಇಆರ್‌ಒ) ಶಾಸನಬದ್ಧ ಪಾತ್ರವನ್ನು ನಿರ್ಲಕ್ಷಿಸಿ ಕರಡು ಮತದಾರರ ಪಟ್ಟಿಯಲ್ಲಿರುವ ಮತದಾರರನ್ನು ಸ್ವಯಂ ಪ್ರೇರಿತವಾಗಿ ಅಳಿಸಲಾಗಿದೆ ಎಂದು ಆಕ್ಷೇಪಣೆ ಎತ್ತಿದೆ.

ದೊಡ್ಡ ಮಟ್ಟದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಒಂದೇ ಸಮನೆ ತೆಗದು ಹಾಕಲಾಗಿದೆ. ಈ ಮತದಾರರು ಕಾನೂನಿನ ಪ್ರಕಾರ ಮತ ಚಲಾಯಿಸಲು ಅರ್ಹರಾಗಿರಬಹುದು. ಆದರೆ, ಮತದಾರರ ಪಟ್ಟಿ ತಯಾರಿಸುವ ಅಥವಾ ಪರಿಶೀಲಿಸುವ ಸಮಯದಲ್ಲಿ (ಗಣತಿ ಪ್ರಕ್ರಿಯೆ) ಯಾವುದೋ ಕಾರಣಕ್ಕೆ ಹಾಜರಿರಲಿಕ್ಕಿಲ್ಲ ಅಥವಾ ಭಾಗವಹಿಸಿರಲಿಕ್ಕಿಲ್ಲ. ಇಂತಹ ವ್ಯಕ್ತಿಗಳ ಹಕ್ಕುಗಳನ್ನು ಒಂದೇ ಸಮಯದಲ್ಲಿ ಅಳಿಸಿ ಹಾಕುವುದು ಅನ್ಯಾಯವೆಂದು ಪತ್ರದಲ್ಲಿ ಆಕ್ಷೇಪ ವ್ಯಕ್ತಪಡಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....