Homeಮುಖಪುಟಆಕ್ಸಿಜನ್ ಟ್ಯಾಂಕ್, ಕೋವಿಡ್ ಔಷಧಿಗಳಿಗೆ ತೆರಿಗೆ ವಿನಾಯಿತಿ ನೀಡಿ: ಪ್ರಧಾನಿಗೆ ಮಮತಾ ಬ್ಯಾನರ್ಜಿ ಆಗ್ರಹ

ಆಕ್ಸಿಜನ್ ಟ್ಯಾಂಕ್, ಕೋವಿಡ್ ಔಷಧಿಗಳಿಗೆ ತೆರಿಗೆ ವಿನಾಯಿತಿ ನೀಡಿ: ಪ್ರಧಾನಿಗೆ ಮಮತಾ ಬ್ಯಾನರ್ಜಿ ಆಗ್ರಹ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಆಮ್ಲಜನಕ ಪೂರೈಕೆ ಸಂಭಾವ್ಯ ಬಿಕ್ಕಟ್ಟನ್ನು ಕಾಣುತ್ತಿರುವ ಸಂದರ್ಭದಲ್ಲಿ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿರುವ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಆಮ್ಲಜನಕ ಪೂರೈಕೆ ಮತ್ತು ಕೋವಿಡ್ ಚಿಕಿತ್ಸೆಯಲ್ಲಿ ಬಳಕೆಯಾಗುವ ಔಷಧಿಗಳಿಗೆ ತೆರಿಗೆ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಕೋವಿಡ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಬೇಕಾದ ಔಷಧಿ ಮತ್ತು ಸಲಕರಣೆಗಳ ಆಮದಿನ ಮೇಲೆ ತೆರಿಗೆ ವಿನಾಯಿತಿ ನೀಡುವಂತೆ ಕೋರಿ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಭಾನುವಾರ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಆರೋಗ್ಯ ಮೂಲಸೌಕರ್ಯಗಳನ್ನು ಬಲಪಡಿಸಲು, ಬಂಗಾಳ ಮತ್ತು ಭಾರತದಾದ್ಯಂತ ಕೊರೊನಾ ವೈರಸ್-ಪಾಸಿಟಿವ್ ರೋಗಿಗಳ ಚಿಕಿತ್ಸೆಗಾಗಿ ಔಷಧಿಗಳು ಮತ್ತು ಆಮ್ಲಜನಕದ ಪೂರೈಕೆಯನ್ನು ಹೆಚ್ಚಿಸಲು ಅವರು ಪ್ರಧಾನಿಯನ್ನು ಒತ್ತಾಯಿಸಿದ್ದಾರೆ ಎಂದು ಎನ್‌ಡಿಟಿವಿ ಮತ್ತು ಇತರ ಪ್ರಮುಖ ಮಾಧ್ಯಮಗಳು ವರದಿ ಮಾಡಿವೆ.

ಆಮ್ಲಜನಕ ಸಾಂದ್ರಕಗಳು ಮತ್ತು ಸಿಲಿಂಡರ್‌ಗಳಿಂದ ಕ್ರಯೋಜೆನಿಕ್ ಶೇಖರಣಾ ಟ್ಯಾಂಕ್‌ಗಳು ಮತ್ತು ಕೋವಿಡ್ ಔಷಧಿಗಳವರೆಗೆ, ಸಂಸ್ಥೆಗಳು, ವ್ಯಕ್ತಿಗಳು ಮತ್ತು ಪರೋಪಕಾರಿ ಏಜೆನ್ಸಿಗಳು ನೆರವು ನೀಡಿವೆ ಮತ್ತು ಈಗಲೂ ನೀಡಲು ಮುಂದೆ ಬರುತ್ತಿವೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. “ಖಾಸಗಿ ನೆರವು ಪ್ರೋತ್ಸಾಹಿಸಲು” ಅಂತಹ ವಸ್ತುಗಳನ್ನು ಜಿಎಸ್‌ಟಿ ಮತ್ತು ಕಸ್ಟಮ್ಸ್ ಸುಂಕದಿಂದ ವಿನಾಯಿತಿ ನೀಡುವಂತೆ ಅವರು ಕೇಂದ್ರವನ್ನು ಒತ್ತಾಯಿಸಿದ್ದಾರೆ.

“ಈ ವಸ್ತುಗಳಿಗೆ ಡ್ಯೂಟಿ ಟ್ಯಾಕ್ಸ್/ ಎಸ್‌ಜಿಎಸ್‌ಟಿ / ಸಿಜಿಎಸ್‌ಟಿ / ಐಜಿಎಸ್‌ಟಿಯಿಂದ ವಿನಾಯಿತಿ ನೀಡಬೇಕು ಎಂದು ಅನೇಕ ದಾನಿಗಳು ಮತ್ತು ಏಜೆನ್ಸಿಗಳು ರಾಜ್ಯ ಸರ್ಕಾರವನ್ನು ಸಂಪರ್ಕಿಸಿವೆ. ಈ ವಸ್ತುಗಳು ಕೇಂದ್ರದ ವ್ಯಾಪ್ತಿಗೆ ಬರುತ್ತವಾದ್ದರಿಂದ ತೆರಿಗೆ, ಸುಂಕ ರದ್ದು ಮಾಡಲು ನಾನು ವಿನಂತಿಸುತ್ತೇನೆ ಎಂದು ಮಮತಾ ಹೇಳಿದ್ದಾರೆ.

ಸಾಕಷ್ಟು ನೆರವಿನ ಸಂಸ್ಥೆಗಳು, ಜನಪರ ಸಂಘಟನೆಗಳು, ಎನ್‌ಜಿಒಗಳು ಸರಬರಾಜು ನಿರ್ಬಂಧಗಳನ್ನು ತೆಗೆದುಹಾಕಲು ಸಹಾಯ ಮಾಡುವಂತೆ, ಜಿಎಸ್‌ಟಿ/ ಕಸ್ಟಮ್ಸ್ ಸುಂಕ ಮತ್ತು ಇತರ ತೆರಿಗೆಗಳಿಂದ ವಿನಾಯಿತಿ ನೀಡುವಂತೆ ಕೇಳಿವೆ. ಕೇಂದ್ರ ಸರ್ಕಾರ ಈ ಬಿಕ್ಕಟ್ಟಿನ ಸಮಯದಲ್ಲಿ ಅದನ್ನು ಮಾಡಿದರೆ ಎಲ್ಲ ರಾಜ್ಯಗಳಿಗೂ ಅನುಕೂಲ ಆಗಲಿದೆ’ ಎಂದು ಮಮತಾ ಪತ್ರದಲ್ಲಿ ವಿವರಿಸಿದ್ದಾರೆ.

‘ಈ ರೀತಿಯ ದೇಣಿಗೆಗಳು ವೈದ್ಯಕೀಯ ಸಂಪನ್ಮೂಲಗಳ ಬೇಡಿಕೆ ಮತ್ತು ಪೂರೈಕೆಯಲ್ಲಿನ ದೊಡ್ಡ ಅಂತರವನ್ನು ಪೂರೈಸುವಲ್ಲಿ ರಾಜ್ಯ ಸರ್ಕಾರಗಳ ಪ್ರಯತ್ನಗಳಿಗೆ ಹೆಚ್ಚು ಪೂರಕವಾಗುತ್ತವೆ” ಎಂದು ಬ್ಯಾನರ್ಜಿ ಒತ್ತಿ ಹೇಳಿದ್ದಾರೆ.

ಇದು ಪಶ್ಚಿಮ ಬಂಗಾಳದ ಕೋವಿಡ್ ಬಿಕ್ಕಟ್ಟಿನ ಕುರಿತು ಮಮತಾ ಬ್ಯಾನರ್ಜಿ ಪಿಎಂ ಮೋದಿಗೆ ಬರೆದ ಮೂರನೇ ಪತ್ರವಾಗಿದೆ. ಬುಧವಾರ ಮೂರನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದ ನಂತರ ಅವರು ಆಮ್ಲಜನಕ ಪೂರೈಕೆ ಬಿಕ್ಕಟ್ಟನ್ನು ಎತ್ತಿ ಶುಕ್ರವಾರ ಪತ್ರ ಬರೆದಿದ್ದರು.
ಆಮ್ಲಜನಕ ಬೇಡಿಕೆ ಈಗಾಗಲೇ ದಿನಕ್ಕೆ 470 ಮೆಟ್ರಿಕ್ ಟನ್‌ಗಳಿಗೆ ಏರಿದೆ ಮತ್ತು ಏಳರಿಂದ ಎಂಟು ದಿನಗಳಲ್ಲಿ ಇದು 550 ಮೆ.ಟನ್.ಗೆ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಮುಖ್ಯಮಂತ್ರಿ ಹೇಳಿದ್ದರು.

ವಿದೇಶದಿಂದ ಬರುವ ಕೋವಿಡ್ ಸಂಬಂಧಿತ ಪರಿಹಾರ ಸಾಮಗ್ರಿಗಳ ಮೇಲಿನ ಐಜಿಎಸ್ಟಿ ಮನ್ನಾ ಮಾಡಲಾಗುವುದು ಎಂದು ಸೋಮವಾರ ಕೇಂದ್ರ ತಿಳಿಸಿದೆ.

ಮಮತಾ ಬ್ಯಾನರ್ಜಿ ರಾಜ್ಯವನ್ನು ಭಾಗಶಃ ಲಾಕ್ ಡೌನ್ ಮಾಡಲು ಆದೇಶಿಸಿದ್ದಾರೆ. ಇದರಲ್ಲಿ ಚಳುವಳಿ, ಹೋರಾಟ , ಪ್ರತಿಭಟನೆಗಳ ಮೇಲೆ ವ್ಯಾಪಕವಾದ ನಿರ್ಬಂಧಗಳಿವೆ ಮತ್ತು ರಾಜ್ಯಕ್ಕೆ ಭೇಟಿ ನೀಡುವ ಹೊರಗಿನವರು 72 ಗಂಟೆಗಳಿಗಿಂತ ಹಳೆಯದಾದ ಕೋವಿಡ್- ಋಣಾತ್ಮಕ ವರದಿಯನ್ನು ತೋರಿಸಬೇಕು ಎಂಬ ಆದೇಶ ಹೊರಡಿಸಲಾಗಿದೆ.


ಇದನ್ನೂ ಓದಿ: 10 ಲಕ್ಷ ಭಾರತೀಯರು ಈಗಾಗಲೇ ಕೋವಿಡ್‌ಗೆ ಬಲಿಯಾಗಿದ್ದಾರೆ, ಶೇ. 80ರಷ್ಟು ಸಾವು ದಾಖಲಾಗುತ್ತಿಲ್ಲ: ಗಣಿತ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...