Homeಮುಖಪುಟಆಕ್ಸಿಜನ್ ಟ್ಯಾಂಕ್, ಕೋವಿಡ್ ಔಷಧಿಗಳಿಗೆ ತೆರಿಗೆ ವಿನಾಯಿತಿ ನೀಡಿ: ಪ್ರಧಾನಿಗೆ ಮಮತಾ ಬ್ಯಾನರ್ಜಿ ಆಗ್ರಹ

ಆಕ್ಸಿಜನ್ ಟ್ಯಾಂಕ್, ಕೋವಿಡ್ ಔಷಧಿಗಳಿಗೆ ತೆರಿಗೆ ವಿನಾಯಿತಿ ನೀಡಿ: ಪ್ರಧಾನಿಗೆ ಮಮತಾ ಬ್ಯಾನರ್ಜಿ ಆಗ್ರಹ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಆಮ್ಲಜನಕ ಪೂರೈಕೆ ಸಂಭಾವ್ಯ ಬಿಕ್ಕಟ್ಟನ್ನು ಕಾಣುತ್ತಿರುವ ಸಂದರ್ಭದಲ್ಲಿ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿರುವ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಆಮ್ಲಜನಕ ಪೂರೈಕೆ ಮತ್ತು ಕೋವಿಡ್ ಚಿಕಿತ್ಸೆಯಲ್ಲಿ ಬಳಕೆಯಾಗುವ ಔಷಧಿಗಳಿಗೆ ತೆರಿಗೆ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಕೋವಿಡ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಬೇಕಾದ ಔಷಧಿ ಮತ್ತು ಸಲಕರಣೆಗಳ ಆಮದಿನ ಮೇಲೆ ತೆರಿಗೆ ವಿನಾಯಿತಿ ನೀಡುವಂತೆ ಕೋರಿ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಭಾನುವಾರ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಆರೋಗ್ಯ ಮೂಲಸೌಕರ್ಯಗಳನ್ನು ಬಲಪಡಿಸಲು, ಬಂಗಾಳ ಮತ್ತು ಭಾರತದಾದ್ಯಂತ ಕೊರೊನಾ ವೈರಸ್-ಪಾಸಿಟಿವ್ ರೋಗಿಗಳ ಚಿಕಿತ್ಸೆಗಾಗಿ ಔಷಧಿಗಳು ಮತ್ತು ಆಮ್ಲಜನಕದ ಪೂರೈಕೆಯನ್ನು ಹೆಚ್ಚಿಸಲು ಅವರು ಪ್ರಧಾನಿಯನ್ನು ಒತ್ತಾಯಿಸಿದ್ದಾರೆ ಎಂದು ಎನ್‌ಡಿಟಿವಿ ಮತ್ತು ಇತರ ಪ್ರಮುಖ ಮಾಧ್ಯಮಗಳು ವರದಿ ಮಾಡಿವೆ.

ಆಮ್ಲಜನಕ ಸಾಂದ್ರಕಗಳು ಮತ್ತು ಸಿಲಿಂಡರ್‌ಗಳಿಂದ ಕ್ರಯೋಜೆನಿಕ್ ಶೇಖರಣಾ ಟ್ಯಾಂಕ್‌ಗಳು ಮತ್ತು ಕೋವಿಡ್ ಔಷಧಿಗಳವರೆಗೆ, ಸಂಸ್ಥೆಗಳು, ವ್ಯಕ್ತಿಗಳು ಮತ್ತು ಪರೋಪಕಾರಿ ಏಜೆನ್ಸಿಗಳು ನೆರವು ನೀಡಿವೆ ಮತ್ತು ಈಗಲೂ ನೀಡಲು ಮುಂದೆ ಬರುತ್ತಿವೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. “ಖಾಸಗಿ ನೆರವು ಪ್ರೋತ್ಸಾಹಿಸಲು” ಅಂತಹ ವಸ್ತುಗಳನ್ನು ಜಿಎಸ್‌ಟಿ ಮತ್ತು ಕಸ್ಟಮ್ಸ್ ಸುಂಕದಿಂದ ವಿನಾಯಿತಿ ನೀಡುವಂತೆ ಅವರು ಕೇಂದ್ರವನ್ನು ಒತ್ತಾಯಿಸಿದ್ದಾರೆ.

“ಈ ವಸ್ತುಗಳಿಗೆ ಡ್ಯೂಟಿ ಟ್ಯಾಕ್ಸ್/ ಎಸ್‌ಜಿಎಸ್‌ಟಿ / ಸಿಜಿಎಸ್‌ಟಿ / ಐಜಿಎಸ್‌ಟಿಯಿಂದ ವಿನಾಯಿತಿ ನೀಡಬೇಕು ಎಂದು ಅನೇಕ ದಾನಿಗಳು ಮತ್ತು ಏಜೆನ್ಸಿಗಳು ರಾಜ್ಯ ಸರ್ಕಾರವನ್ನು ಸಂಪರ್ಕಿಸಿವೆ. ಈ ವಸ್ತುಗಳು ಕೇಂದ್ರದ ವ್ಯಾಪ್ತಿಗೆ ಬರುತ್ತವಾದ್ದರಿಂದ ತೆರಿಗೆ, ಸುಂಕ ರದ್ದು ಮಾಡಲು ನಾನು ವಿನಂತಿಸುತ್ತೇನೆ ಎಂದು ಮಮತಾ ಹೇಳಿದ್ದಾರೆ.

ಸಾಕಷ್ಟು ನೆರವಿನ ಸಂಸ್ಥೆಗಳು, ಜನಪರ ಸಂಘಟನೆಗಳು, ಎನ್‌ಜಿಒಗಳು ಸರಬರಾಜು ನಿರ್ಬಂಧಗಳನ್ನು ತೆಗೆದುಹಾಕಲು ಸಹಾಯ ಮಾಡುವಂತೆ, ಜಿಎಸ್‌ಟಿ/ ಕಸ್ಟಮ್ಸ್ ಸುಂಕ ಮತ್ತು ಇತರ ತೆರಿಗೆಗಳಿಂದ ವಿನಾಯಿತಿ ನೀಡುವಂತೆ ಕೇಳಿವೆ. ಕೇಂದ್ರ ಸರ್ಕಾರ ಈ ಬಿಕ್ಕಟ್ಟಿನ ಸಮಯದಲ್ಲಿ ಅದನ್ನು ಮಾಡಿದರೆ ಎಲ್ಲ ರಾಜ್ಯಗಳಿಗೂ ಅನುಕೂಲ ಆಗಲಿದೆ’ ಎಂದು ಮಮತಾ ಪತ್ರದಲ್ಲಿ ವಿವರಿಸಿದ್ದಾರೆ.

‘ಈ ರೀತಿಯ ದೇಣಿಗೆಗಳು ವೈದ್ಯಕೀಯ ಸಂಪನ್ಮೂಲಗಳ ಬೇಡಿಕೆ ಮತ್ತು ಪೂರೈಕೆಯಲ್ಲಿನ ದೊಡ್ಡ ಅಂತರವನ್ನು ಪೂರೈಸುವಲ್ಲಿ ರಾಜ್ಯ ಸರ್ಕಾರಗಳ ಪ್ರಯತ್ನಗಳಿಗೆ ಹೆಚ್ಚು ಪೂರಕವಾಗುತ್ತವೆ” ಎಂದು ಬ್ಯಾನರ್ಜಿ ಒತ್ತಿ ಹೇಳಿದ್ದಾರೆ.

ಇದು ಪಶ್ಚಿಮ ಬಂಗಾಳದ ಕೋವಿಡ್ ಬಿಕ್ಕಟ್ಟಿನ ಕುರಿತು ಮಮತಾ ಬ್ಯಾನರ್ಜಿ ಪಿಎಂ ಮೋದಿಗೆ ಬರೆದ ಮೂರನೇ ಪತ್ರವಾಗಿದೆ. ಬುಧವಾರ ಮೂರನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದ ನಂತರ ಅವರು ಆಮ್ಲಜನಕ ಪೂರೈಕೆ ಬಿಕ್ಕಟ್ಟನ್ನು ಎತ್ತಿ ಶುಕ್ರವಾರ ಪತ್ರ ಬರೆದಿದ್ದರು.
ಆಮ್ಲಜನಕ ಬೇಡಿಕೆ ಈಗಾಗಲೇ ದಿನಕ್ಕೆ 470 ಮೆಟ್ರಿಕ್ ಟನ್‌ಗಳಿಗೆ ಏರಿದೆ ಮತ್ತು ಏಳರಿಂದ ಎಂಟು ದಿನಗಳಲ್ಲಿ ಇದು 550 ಮೆ.ಟನ್.ಗೆ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಮುಖ್ಯಮಂತ್ರಿ ಹೇಳಿದ್ದರು.

ವಿದೇಶದಿಂದ ಬರುವ ಕೋವಿಡ್ ಸಂಬಂಧಿತ ಪರಿಹಾರ ಸಾಮಗ್ರಿಗಳ ಮೇಲಿನ ಐಜಿಎಸ್ಟಿ ಮನ್ನಾ ಮಾಡಲಾಗುವುದು ಎಂದು ಸೋಮವಾರ ಕೇಂದ್ರ ತಿಳಿಸಿದೆ.

ಮಮತಾ ಬ್ಯಾನರ್ಜಿ ರಾಜ್ಯವನ್ನು ಭಾಗಶಃ ಲಾಕ್ ಡೌನ್ ಮಾಡಲು ಆದೇಶಿಸಿದ್ದಾರೆ. ಇದರಲ್ಲಿ ಚಳುವಳಿ, ಹೋರಾಟ , ಪ್ರತಿಭಟನೆಗಳ ಮೇಲೆ ವ್ಯಾಪಕವಾದ ನಿರ್ಬಂಧಗಳಿವೆ ಮತ್ತು ರಾಜ್ಯಕ್ಕೆ ಭೇಟಿ ನೀಡುವ ಹೊರಗಿನವರು 72 ಗಂಟೆಗಳಿಗಿಂತ ಹಳೆಯದಾದ ಕೋವಿಡ್- ಋಣಾತ್ಮಕ ವರದಿಯನ್ನು ತೋರಿಸಬೇಕು ಎಂಬ ಆದೇಶ ಹೊರಡಿಸಲಾಗಿದೆ.


ಇದನ್ನೂ ಓದಿ: 10 ಲಕ್ಷ ಭಾರತೀಯರು ಈಗಾಗಲೇ ಕೋವಿಡ್‌ಗೆ ಬಲಿಯಾಗಿದ್ದಾರೆ, ಶೇ. 80ರಷ್ಟು ಸಾವು ದಾಖಲಾಗುತ್ತಿಲ್ಲ: ಗಣಿತ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...