Homeಮುಖಪುಟಆಕ್ಸಿಜನ್ ಟ್ಯಾಂಕ್, ಕೋವಿಡ್ ಔಷಧಿಗಳಿಗೆ ತೆರಿಗೆ ವಿನಾಯಿತಿ ನೀಡಿ: ಪ್ರಧಾನಿಗೆ ಮಮತಾ ಬ್ಯಾನರ್ಜಿ ಆಗ್ರಹ

ಆಕ್ಸಿಜನ್ ಟ್ಯಾಂಕ್, ಕೋವಿಡ್ ಔಷಧಿಗಳಿಗೆ ತೆರಿಗೆ ವಿನಾಯಿತಿ ನೀಡಿ: ಪ್ರಧಾನಿಗೆ ಮಮತಾ ಬ್ಯಾನರ್ಜಿ ಆಗ್ರಹ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಆಮ್ಲಜನಕ ಪೂರೈಕೆ ಸಂಭಾವ್ಯ ಬಿಕ್ಕಟ್ಟನ್ನು ಕಾಣುತ್ತಿರುವ ಸಂದರ್ಭದಲ್ಲಿ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿರುವ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಆಮ್ಲಜನಕ ಪೂರೈಕೆ ಮತ್ತು ಕೋವಿಡ್ ಚಿಕಿತ್ಸೆಯಲ್ಲಿ ಬಳಕೆಯಾಗುವ ಔಷಧಿಗಳಿಗೆ ತೆರಿಗೆ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಕೋವಿಡ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಬೇಕಾದ ಔಷಧಿ ಮತ್ತು ಸಲಕರಣೆಗಳ ಆಮದಿನ ಮೇಲೆ ತೆರಿಗೆ ವಿನಾಯಿತಿ ನೀಡುವಂತೆ ಕೋರಿ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಭಾನುವಾರ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಆರೋಗ್ಯ ಮೂಲಸೌಕರ್ಯಗಳನ್ನು ಬಲಪಡಿಸಲು, ಬಂಗಾಳ ಮತ್ತು ಭಾರತದಾದ್ಯಂತ ಕೊರೊನಾ ವೈರಸ್-ಪಾಸಿಟಿವ್ ರೋಗಿಗಳ ಚಿಕಿತ್ಸೆಗಾಗಿ ಔಷಧಿಗಳು ಮತ್ತು ಆಮ್ಲಜನಕದ ಪೂರೈಕೆಯನ್ನು ಹೆಚ್ಚಿಸಲು ಅವರು ಪ್ರಧಾನಿಯನ್ನು ಒತ್ತಾಯಿಸಿದ್ದಾರೆ ಎಂದು ಎನ್‌ಡಿಟಿವಿ ಮತ್ತು ಇತರ ಪ್ರಮುಖ ಮಾಧ್ಯಮಗಳು ವರದಿ ಮಾಡಿವೆ.

ಆಮ್ಲಜನಕ ಸಾಂದ್ರಕಗಳು ಮತ್ತು ಸಿಲಿಂಡರ್‌ಗಳಿಂದ ಕ್ರಯೋಜೆನಿಕ್ ಶೇಖರಣಾ ಟ್ಯಾಂಕ್‌ಗಳು ಮತ್ತು ಕೋವಿಡ್ ಔಷಧಿಗಳವರೆಗೆ, ಸಂಸ್ಥೆಗಳು, ವ್ಯಕ್ತಿಗಳು ಮತ್ತು ಪರೋಪಕಾರಿ ಏಜೆನ್ಸಿಗಳು ನೆರವು ನೀಡಿವೆ ಮತ್ತು ಈಗಲೂ ನೀಡಲು ಮುಂದೆ ಬರುತ್ತಿವೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. “ಖಾಸಗಿ ನೆರವು ಪ್ರೋತ್ಸಾಹಿಸಲು” ಅಂತಹ ವಸ್ತುಗಳನ್ನು ಜಿಎಸ್‌ಟಿ ಮತ್ತು ಕಸ್ಟಮ್ಸ್ ಸುಂಕದಿಂದ ವಿನಾಯಿತಿ ನೀಡುವಂತೆ ಅವರು ಕೇಂದ್ರವನ್ನು ಒತ್ತಾಯಿಸಿದ್ದಾರೆ.

“ಈ ವಸ್ತುಗಳಿಗೆ ಡ್ಯೂಟಿ ಟ್ಯಾಕ್ಸ್/ ಎಸ್‌ಜಿಎಸ್‌ಟಿ / ಸಿಜಿಎಸ್‌ಟಿ / ಐಜಿಎಸ್‌ಟಿಯಿಂದ ವಿನಾಯಿತಿ ನೀಡಬೇಕು ಎಂದು ಅನೇಕ ದಾನಿಗಳು ಮತ್ತು ಏಜೆನ್ಸಿಗಳು ರಾಜ್ಯ ಸರ್ಕಾರವನ್ನು ಸಂಪರ್ಕಿಸಿವೆ. ಈ ವಸ್ತುಗಳು ಕೇಂದ್ರದ ವ್ಯಾಪ್ತಿಗೆ ಬರುತ್ತವಾದ್ದರಿಂದ ತೆರಿಗೆ, ಸುಂಕ ರದ್ದು ಮಾಡಲು ನಾನು ವಿನಂತಿಸುತ್ತೇನೆ ಎಂದು ಮಮತಾ ಹೇಳಿದ್ದಾರೆ.

ಸಾಕಷ್ಟು ನೆರವಿನ ಸಂಸ್ಥೆಗಳು, ಜನಪರ ಸಂಘಟನೆಗಳು, ಎನ್‌ಜಿಒಗಳು ಸರಬರಾಜು ನಿರ್ಬಂಧಗಳನ್ನು ತೆಗೆದುಹಾಕಲು ಸಹಾಯ ಮಾಡುವಂತೆ, ಜಿಎಸ್‌ಟಿ/ ಕಸ್ಟಮ್ಸ್ ಸುಂಕ ಮತ್ತು ಇತರ ತೆರಿಗೆಗಳಿಂದ ವಿನಾಯಿತಿ ನೀಡುವಂತೆ ಕೇಳಿವೆ. ಕೇಂದ್ರ ಸರ್ಕಾರ ಈ ಬಿಕ್ಕಟ್ಟಿನ ಸಮಯದಲ್ಲಿ ಅದನ್ನು ಮಾಡಿದರೆ ಎಲ್ಲ ರಾಜ್ಯಗಳಿಗೂ ಅನುಕೂಲ ಆಗಲಿದೆ’ ಎಂದು ಮಮತಾ ಪತ್ರದಲ್ಲಿ ವಿವರಿಸಿದ್ದಾರೆ.

‘ಈ ರೀತಿಯ ದೇಣಿಗೆಗಳು ವೈದ್ಯಕೀಯ ಸಂಪನ್ಮೂಲಗಳ ಬೇಡಿಕೆ ಮತ್ತು ಪೂರೈಕೆಯಲ್ಲಿನ ದೊಡ್ಡ ಅಂತರವನ್ನು ಪೂರೈಸುವಲ್ಲಿ ರಾಜ್ಯ ಸರ್ಕಾರಗಳ ಪ್ರಯತ್ನಗಳಿಗೆ ಹೆಚ್ಚು ಪೂರಕವಾಗುತ್ತವೆ” ಎಂದು ಬ್ಯಾನರ್ಜಿ ಒತ್ತಿ ಹೇಳಿದ್ದಾರೆ.

ಇದು ಪಶ್ಚಿಮ ಬಂಗಾಳದ ಕೋವಿಡ್ ಬಿಕ್ಕಟ್ಟಿನ ಕುರಿತು ಮಮತಾ ಬ್ಯಾನರ್ಜಿ ಪಿಎಂ ಮೋದಿಗೆ ಬರೆದ ಮೂರನೇ ಪತ್ರವಾಗಿದೆ. ಬುಧವಾರ ಮೂರನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದ ನಂತರ ಅವರು ಆಮ್ಲಜನಕ ಪೂರೈಕೆ ಬಿಕ್ಕಟ್ಟನ್ನು ಎತ್ತಿ ಶುಕ್ರವಾರ ಪತ್ರ ಬರೆದಿದ್ದರು.
ಆಮ್ಲಜನಕ ಬೇಡಿಕೆ ಈಗಾಗಲೇ ದಿನಕ್ಕೆ 470 ಮೆಟ್ರಿಕ್ ಟನ್‌ಗಳಿಗೆ ಏರಿದೆ ಮತ್ತು ಏಳರಿಂದ ಎಂಟು ದಿನಗಳಲ್ಲಿ ಇದು 550 ಮೆ.ಟನ್.ಗೆ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಮುಖ್ಯಮಂತ್ರಿ ಹೇಳಿದ್ದರು.

ವಿದೇಶದಿಂದ ಬರುವ ಕೋವಿಡ್ ಸಂಬಂಧಿತ ಪರಿಹಾರ ಸಾಮಗ್ರಿಗಳ ಮೇಲಿನ ಐಜಿಎಸ್ಟಿ ಮನ್ನಾ ಮಾಡಲಾಗುವುದು ಎಂದು ಸೋಮವಾರ ಕೇಂದ್ರ ತಿಳಿಸಿದೆ.

ಮಮತಾ ಬ್ಯಾನರ್ಜಿ ರಾಜ್ಯವನ್ನು ಭಾಗಶಃ ಲಾಕ್ ಡೌನ್ ಮಾಡಲು ಆದೇಶಿಸಿದ್ದಾರೆ. ಇದರಲ್ಲಿ ಚಳುವಳಿ, ಹೋರಾಟ , ಪ್ರತಿಭಟನೆಗಳ ಮೇಲೆ ವ್ಯಾಪಕವಾದ ನಿರ್ಬಂಧಗಳಿವೆ ಮತ್ತು ರಾಜ್ಯಕ್ಕೆ ಭೇಟಿ ನೀಡುವ ಹೊರಗಿನವರು 72 ಗಂಟೆಗಳಿಗಿಂತ ಹಳೆಯದಾದ ಕೋವಿಡ್- ಋಣಾತ್ಮಕ ವರದಿಯನ್ನು ತೋರಿಸಬೇಕು ಎಂಬ ಆದೇಶ ಹೊರಡಿಸಲಾಗಿದೆ.


ಇದನ್ನೂ ಓದಿ: 10 ಲಕ್ಷ ಭಾರತೀಯರು ಈಗಾಗಲೇ ಕೋವಿಡ್‌ಗೆ ಬಲಿಯಾಗಿದ್ದಾರೆ, ಶೇ. 80ರಷ್ಟು ಸಾವು ದಾಖಲಾಗುತ್ತಿಲ್ಲ: ಗಣಿತ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...