Homeಮುಖಪುಟಹಣೆಗೆ ಗಂಭೀರ ಗಾಯ: ಚಿಕಿತ್ಸೆ ಬಳಿಕ ಮಮತಾ ಬ್ಯಾನರ್ಜಿ ಆಸ್ಪತ್ರೆಯಿಂದ ಬಿಡುಗಡೆ

ಹಣೆಗೆ ಗಂಭೀರ ಗಾಯ: ಚಿಕಿತ್ಸೆ ಬಳಿಕ ಮಮತಾ ಬ್ಯಾನರ್ಜಿ ಆಸ್ಪತ್ರೆಯಿಂದ ಬಿಡುಗಡೆ

- Advertisement -
- Advertisement -

ಮನೆಯಲ್ಲಿ ಬಿದ್ದು ಹಣೆಗೆ ಗಾಯ ಮಾಡಿಕೊಂಡಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ರಾತ್ರಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

“ಮನೆಯಲ್ಲಿ ಬಿದ್ದು ಗಾಯಗೊಂಡಿದ್ದ ಮಮತಾ ಬ್ಯಾನರ್ಜಿ ಅವರನ್ನು ಆಸ್ಪತ್ರೆಗೆ ಕರೆ ತರಲಾಗಿತ್ತು. ಹಣೆಗೆ ಹೊಲಿಗೆಗಳನ್ನು ಹಾಕಲಾಗಿದ್ದು, ವೈದ್ಯಕೀಯ ಪರೀಕ್ಷೆಯ ಬಳಿಕ ಅವರನ್ನು ಮನೆಗೆ ಕಳುಹಿಸಿಕೊಡಲಾಗಿದೆ” ಎಂದು ಕೊಲ್ಕತ್ತಾದ ಎಸ್‌ಎಸ್‌ಕೆಎಂ ಆಸ್ಪತ್ರೆಯ ನಿರ್ದೇಶಕ ಮಣಿಮೋಯ್ ಬಂಡೋಪಾಧ್ಯಾಯ ತಿಳಿಸಿದ್ದಾರೆ.

ಗುರುವಾರ ಸಂಜೆ ದಕ್ಷಿಣ ಕೊಲ್ಕಕತ್ತಾದ ಕಾಳಿಘಾಟ್‌ನ ಮನೆಯಲ್ಲಿದ್ದ ವೇಳೆ ಮಮತಾ ಬ್ಯಾನರ್ಜಿ ಅಚಾನಕ್ಕಾಗಿ ಬಿದ್ದಿದ್ದರು. ಇದರಿಂದ ಅವರ ಹಣೆಗೆ ಗಂಭೀರ ಗಾಯವಾಗಿತ್ತು. ತಕ್ಷಣ ಅವರನ್ನು ಮನೆಯಿಂದ ಸುಮಾರು 3 ಕಿ.ಮೀ ದೂರದ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಅವರ ಸಹೋದರ ಕಾರ್ತಿಕ್ ಬ್ಯಾನರ್ಜಿ ಮಾಹಿತಿ ನೀಡಿದ್ದಾರೆ.

ಎಸ್‌ಎಸ್‌ಕೆಎಂ ಆಸ್ಪತ್ರೆಯಲ್ಲಿ 8 ವೈದ್ಯರ ವಿಶೇಷ ತಂಡ ರಚಿಸಿ ಮಮತಾ ಬ್ಯಾನರ್ಜಿ ಅವರಿಗೆ ಚಿಕಿತ್ಸೆ ನೀಡಲಾಗಿದೆ. ವೈದ್ಯರು ಹಣೆಗೆ ಹೊಲಿಗೆ ಹಾಕಿದ್ದಾರೆ. ಚಿಕಿತ್ಸೆಯ ಬಳಿಕ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು ಆಸ್ಪತ್ರೆಯಿಂದ ಬಿಡುಗಡೆ ಮನೆಗೆ ತೆರಳಿದ್ದಾರೆ ಎಂದು ವರದಿಗಳು ಹೇಳಿವೆ.

ಮಮತಾ ಬ್ಯಾನರ್ಜಿ ಹಠಾತ್ ಆಗಿ ಯಾಕೆ ಕುಸಿದು ಬಿದ್ರು? ಅವರಿಗೆ ರಕ್ತದೊಡ್ಡದಂತಹ ಸಮಸ್ಯೆ ಏನಾದರು ಇದೆಯಾ? ಈ ಕುರಿತು ಹೆಚ್ಚಿನ ಪರಿಶೀಲನೆಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಹಿರಿಯ ಕಾಂಗ್ರೆಸ್ ಮತ್ತು ಟಿಎಂಸಿ ನಾಯಕ ಸುಬ್ರತಾ ಮುಖರ್ಜಿ ಅವರ ಸ್ಮರಣಾರ್ಥ ದಕ್ಷಿಣ ಕೋಲ್ಕತ್ತಾದ ಗರಿಯಾಹಟ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ಹಿಂದುರುಗಿದ ಸ್ವಲ್ಪ ಸಮಯದ ನಂತರ ಮಮತಾ ಬ್ಯಾನರ್ಜಿ ಕುಸಿದು ಬಿದ್ದಿದ್ದಾರೆ.

ಘಟನೆ ನಡೆದಾಗ ಮಮತಾ ಅವರ ಸೋದರಳಿಯ ಮತ್ತು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮನೆಯಲ್ಲಿದ್ದರು. ಅವರೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ಟಿಎಂಸಿ ನಾಯಕ ರಾಜೀಬ್ ಬ್ಯಾನರ್ಜಿ ಹೇಳಿದ್ದಾರೆ.

ಮಮತಾ ಅವರ ಹಣೆಗೆ ಗಂಭೀರ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಟಿಎಂಸಿ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ನಿನ್ನೆ ಸಂಜೆ ಫೋಟೋ ಹಂಚಿಕೊಂಡಿತ್ತು. ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಪಕ್ಷಗಳ ನಾಯಕರು ಮಮತಾ ಅವರು ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದರು.

ಇದನ್ನೂ ಓದಿ : ಚುನಾವಣಾ ಬಾಂಡ್‌: ಎಸ್‌ಬಿಐ ನೀಡಿದ ಮಾಹಿತಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ಚು. ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...