Homeಮುಖಪುಟ'ಪ್ರಧಾನಿ ಕಾರ್ಯಾಲಯಕ್ಕೆ ಮಮತಾ ಬ್ಯಾನರ್ಜಿ ಸಂದೇಶ ಕಳುಹಿಸಿದ್ದಾರೆ..'; ಟಿಎಂಸಿ ಪಟ್ಟಿ ಬಿಡುಗಡೆಗೆ ಅಧೀರ್ ಲೇವಡಿ

‘ಪ್ರಧಾನಿ ಕಾರ್ಯಾಲಯಕ್ಕೆ ಮಮತಾ ಬ್ಯಾನರ್ಜಿ ಸಂದೇಶ ಕಳುಹಿಸಿದ್ದಾರೆ..’; ಟಿಎಂಸಿ ಪಟ್ಟಿ ಬಿಡುಗಡೆಗೆ ಅಧೀರ್ ಲೇವಡಿ

- Advertisement -
- Advertisement -

2024ರ ಲೋಕಸಭೆ ಚುನಾವಣೆಗೆ ಪಶ್ಚಿಮ ಬಂಗಾಳದಿಂದ 42 ಅಭ್ಯರ್ಥಿಗಳನ್ನು ಘೋಷಿಸುವ ಮೂಲಕ ಮಮತಾ ಬ್ಯಾನರ್ಜಿ ಯಾವುದೇ ರಾಜಕೀಯ ನಾಯಕ ಅಥವಾ ಪಕ್ಷ ತನ್ನನ್ನು ನಂಬಬಾರದು ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.

ತಾನು ‘ಇಂಡಿಯಾ ಬ್ಲಾಕ್‌’ನೊಂದಿಗೆ ಇಲ್ಲ ಎಂಬ ಸಂದೇಶವನ್ನು ಈ ಪಟ್ಟಿಯು ಪ್ರಧಾನಿ ಕಾರ್ಯಾಲಯಕ್ಕೆ ಕಳುಹಿಸುತ್ತದೆ. ಪಶ್ಚಿಮ ಬಂಗಾಳದ ಎಲ್ಲ 42 ಸ್ಥಾನಗಳಿಗೆ ತೃಣಮೂಲ ಭಾನುವಾರ 42 ಹೆಸರುಗಳನ್ನು ಘೋಷಿಸಿದ ನಂತರ ಈ ಹೇಳಿಕೆ ಬಂದಿದೆ. ಅಧೀರ್ ಅವರು ಪ್ರತಿನಿಧಿಸುತ್ತಿರುವ ಬಹರಂಪುರ ಕ್ಷೇತ್ರದಕ್ಕೆ ಟಿಎಂಸಿಯು ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಹೆಸರನ್ನು ಘೋಷಿಸಿದೆ. “ಮಮತಾ ಬ್ಯಾನರ್ಜಿ ಅಥವಾ ತೃಣಮೂಲ ಯೂಸುಫ್ ಪಠಾಣ್ ಅವರನ್ನು ಗೌರವಿಸಲು ಬಯಸಿದರೆ, ಅವರನ್ನು ರಾಜ್ಯಸಭೆಗೆ ಕಳುಹಿಸಬಹುದಿತ್ತು ಅಥವಾ ಯೂಸುಫ್ ಪಠಾಣ್ ಅವರಿಗೆ ಗುಜರಾತ್‌ನಲ್ಲಿ ಸ್ಥಾನವನ್ನು ಕೇಳಬಹುದಿತ್ತು” ಎಂದು ಅಧೀರ್ ಹೇಳಿದರು.

“ಮಮತಾ ಬ್ಯಾನರ್ಜಿ ಅವರು ಇಂಡಿಯಾ ಬಣದೊಂದಿಗೆ ನಿಂತರೆ, ಪ್ರಧಾನಿ ಮೋದಿ ಅವರು ಇಡಿ ಮತ್ತು ಸಿಬಿಐ ಅನ್ನು ಮನೆ ಮನೆಗೆ ಕಳುಹಿಸುತ್ತಾರೆ ಎಂದು ಹೆದರುತ್ತಾರೆ. ಹಾಗಾಗಿ ಈಗ ಅವರು ಪಿಎಂಒಗೆ ‘ನನ್ನ ಬಗ್ಗೆ ಅಸಮಾಧಾನಗೊಳ್ಳಬೇಡಿ, ನಾನು ಬಿಜೆಪಿ ವಿರುದ್ಧ ಮೈತ್ರಿಯೊಂದಿಗೆ ನಿಲ್ಲುವುದಿಲ್ಲ’ ಎಂದು ಸಂದೇಶವನ್ನು ಕಳುಹಿಸಿದ್ದಾರೆ ಎಂದು ಅಧೀರ್ ರಂಜನ್ ಹೇಳಿದ್ದಾರೆ.

ತೃಣಮೂಲದ ಬ್ರಿಗೇಡ್ ರ್ಯಾಲಿಯಿಂದ ಮಾಡಿದ 42 ಹೆಸರುಗಳ ಘೋಷಣೆಯು ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆ ಎಂಬ ಊಹಾಪೋಹಗಳನ್ನು ಕೊನೆಗೊಳಿಸಿತು. ಇದು ಸೀಟು ಹಂಚಿಕೆಗೆ ಅಡ್ಡಿಯಾಯಿತು. ಬಂಗಾಳದಲ್ಲಿ ಕಾಂಗ್ರೆಸ್‌ಗೆ 3-4 ಕ್ಕಿಂತ ಹೆಚ್ಚು ಸ್ಥಾನಗಳನ್ನು ನೀಡಲು ತೃಣಮೂಲ ಒಪ್ಪಲಿಲ್ಲ. ಇಷ್ಟೆಲ್ಲಾ ಆದರೂ, ಟಿಎಂಸಿ ಮಾತ್ರ ಪಶ್ಚಿಮ ಬಂಗಾಳದಲ್ಲಿ ಮೈತ್ರಿ ಮುಗಿದಿದೆ ಎಂದು ಇನ್ನೂ ಅಧಿಕೃತ ಘೋಷಣೆ ಮಾಡಿಲ್ಲ.

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯೊಂದಿಗೆ ಬಿಜೆಪಿ ವಿರುದ್ಧ ಹೋರಾಡಲು ಪಕ್ಷವು ಬಯಸಿದೆ ಎಂದು ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಟಿಎಂಸಿ ನಡೆಯಿಂದ ಕಾಂಗ್ರೆಸ್‌ಗೆ ಆಶ್ಚರ್ಯವಾಗಿದೆ; ಈ ರೀತಿಯ ಏಕಪಕ್ಷೀಯ ಘೋಷಣೆಗಳನ್ನು ಮಾಡಲು ತೃಣಮೂಲದ ಮೇಲೆ ಯಾವ ಒತ್ತಡ ಇದ್ದಿರಬಹುದೆಂದು ತನಗೆ ತಿಳಿದಿಲ್ಲ ಎಂದು ಅವರು ಹೇಳಿದರು.

ಇಂಡಿಯಾ ಬ್ಲಾಕ್‌ನಿಂದ ನಿರ್ಗಮಿಸುವ ಬಗ್ಗೆ ಮಮತಾ ಸ್ಪಷ್ಟಪಡಿಸಲಿಲ್ಲ. ವಾಸ್ತವವಾಗಿ, ಟಿಎಂಸಿ ಇತರ ರಾಜ್ಯಗಳಲ್ಲಿ ಮೈತ್ರಿ ಹೊಂದಿದೆ. ‘ನಾವು ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಉತ್ತರ ಪ್ರದೇಶದಲ್ಲಿ ಒಂದು ಸ್ಥಾನಕ್ಕೆ ಸ್ಪರ್ಧಿಸುತ್ತೇವೆ. ನಾನು ಅಖಿಲೇಶ್ (ಯಾದವ್) ಜೊತೆ ಮಾತನಾಡಿದ್ದೆವು. ನಾವು ಮೇಘಾಲಯದಲ್ಲಿ ವಿರೋಧ ಪಕ್ಷವಾಗಿದ್ದೇವೆ; ನಾವು ಅಲ್ಲಿ ಮತ್ತು ಅಸ್ಸಾಂನಲ್ಲಿಯೂ ಸ್ಪರ್ಧಿಸುತ್ತೇವೆ’ ಎಂದು ಮಮತಾ ಹೇಳಿದರು.

ಇದನ್ನೂ ಓದಿ; ಜೈಲಿಗೆ ಹೋಗುತ್ತಿದ್ದ ಕಳ್ಳರು ಈಗ ಬಿಜೆಪಿ ಸೇರುತ್ತಿದ್ದಾರೆ, ಇದೆ ‘ಮೋದಿ ಗ್ಯಾರಂಟಿ’: ಅಭಿಷೇಕ್ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...