Homeಮುಖಪುಟ'ಪ್ರಧಾನಿ ಕಾರ್ಯಾಲಯಕ್ಕೆ ಮಮತಾ ಬ್ಯಾನರ್ಜಿ ಸಂದೇಶ ಕಳುಹಿಸಿದ್ದಾರೆ..'; ಟಿಎಂಸಿ ಪಟ್ಟಿ ಬಿಡುಗಡೆಗೆ ಅಧೀರ್ ಲೇವಡಿ

‘ಪ್ರಧಾನಿ ಕಾರ್ಯಾಲಯಕ್ಕೆ ಮಮತಾ ಬ್ಯಾನರ್ಜಿ ಸಂದೇಶ ಕಳುಹಿಸಿದ್ದಾರೆ..’; ಟಿಎಂಸಿ ಪಟ್ಟಿ ಬಿಡುಗಡೆಗೆ ಅಧೀರ್ ಲೇವಡಿ

- Advertisement -
- Advertisement -

2024ರ ಲೋಕಸಭೆ ಚುನಾವಣೆಗೆ ಪಶ್ಚಿಮ ಬಂಗಾಳದಿಂದ 42 ಅಭ್ಯರ್ಥಿಗಳನ್ನು ಘೋಷಿಸುವ ಮೂಲಕ ಮಮತಾ ಬ್ಯಾನರ್ಜಿ ಯಾವುದೇ ರಾಜಕೀಯ ನಾಯಕ ಅಥವಾ ಪಕ್ಷ ತನ್ನನ್ನು ನಂಬಬಾರದು ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.

ತಾನು ‘ಇಂಡಿಯಾ ಬ್ಲಾಕ್‌’ನೊಂದಿಗೆ ಇಲ್ಲ ಎಂಬ ಸಂದೇಶವನ್ನು ಈ ಪಟ್ಟಿಯು ಪ್ರಧಾನಿ ಕಾರ್ಯಾಲಯಕ್ಕೆ ಕಳುಹಿಸುತ್ತದೆ. ಪಶ್ಚಿಮ ಬಂಗಾಳದ ಎಲ್ಲ 42 ಸ್ಥಾನಗಳಿಗೆ ತೃಣಮೂಲ ಭಾನುವಾರ 42 ಹೆಸರುಗಳನ್ನು ಘೋಷಿಸಿದ ನಂತರ ಈ ಹೇಳಿಕೆ ಬಂದಿದೆ. ಅಧೀರ್ ಅವರು ಪ್ರತಿನಿಧಿಸುತ್ತಿರುವ ಬಹರಂಪುರ ಕ್ಷೇತ್ರದಕ್ಕೆ ಟಿಎಂಸಿಯು ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಹೆಸರನ್ನು ಘೋಷಿಸಿದೆ. “ಮಮತಾ ಬ್ಯಾನರ್ಜಿ ಅಥವಾ ತೃಣಮೂಲ ಯೂಸುಫ್ ಪಠಾಣ್ ಅವರನ್ನು ಗೌರವಿಸಲು ಬಯಸಿದರೆ, ಅವರನ್ನು ರಾಜ್ಯಸಭೆಗೆ ಕಳುಹಿಸಬಹುದಿತ್ತು ಅಥವಾ ಯೂಸುಫ್ ಪಠಾಣ್ ಅವರಿಗೆ ಗುಜರಾತ್‌ನಲ್ಲಿ ಸ್ಥಾನವನ್ನು ಕೇಳಬಹುದಿತ್ತು” ಎಂದು ಅಧೀರ್ ಹೇಳಿದರು.

“ಮಮತಾ ಬ್ಯಾನರ್ಜಿ ಅವರು ಇಂಡಿಯಾ ಬಣದೊಂದಿಗೆ ನಿಂತರೆ, ಪ್ರಧಾನಿ ಮೋದಿ ಅವರು ಇಡಿ ಮತ್ತು ಸಿಬಿಐ ಅನ್ನು ಮನೆ ಮನೆಗೆ ಕಳುಹಿಸುತ್ತಾರೆ ಎಂದು ಹೆದರುತ್ತಾರೆ. ಹಾಗಾಗಿ ಈಗ ಅವರು ಪಿಎಂಒಗೆ ‘ನನ್ನ ಬಗ್ಗೆ ಅಸಮಾಧಾನಗೊಳ್ಳಬೇಡಿ, ನಾನು ಬಿಜೆಪಿ ವಿರುದ್ಧ ಮೈತ್ರಿಯೊಂದಿಗೆ ನಿಲ್ಲುವುದಿಲ್ಲ’ ಎಂದು ಸಂದೇಶವನ್ನು ಕಳುಹಿಸಿದ್ದಾರೆ ಎಂದು ಅಧೀರ್ ರಂಜನ್ ಹೇಳಿದ್ದಾರೆ.

ತೃಣಮೂಲದ ಬ್ರಿಗೇಡ್ ರ್ಯಾಲಿಯಿಂದ ಮಾಡಿದ 42 ಹೆಸರುಗಳ ಘೋಷಣೆಯು ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆ ಎಂಬ ಊಹಾಪೋಹಗಳನ್ನು ಕೊನೆಗೊಳಿಸಿತು. ಇದು ಸೀಟು ಹಂಚಿಕೆಗೆ ಅಡ್ಡಿಯಾಯಿತು. ಬಂಗಾಳದಲ್ಲಿ ಕಾಂಗ್ರೆಸ್‌ಗೆ 3-4 ಕ್ಕಿಂತ ಹೆಚ್ಚು ಸ್ಥಾನಗಳನ್ನು ನೀಡಲು ತೃಣಮೂಲ ಒಪ್ಪಲಿಲ್ಲ. ಇಷ್ಟೆಲ್ಲಾ ಆದರೂ, ಟಿಎಂಸಿ ಮಾತ್ರ ಪಶ್ಚಿಮ ಬಂಗಾಳದಲ್ಲಿ ಮೈತ್ರಿ ಮುಗಿದಿದೆ ಎಂದು ಇನ್ನೂ ಅಧಿಕೃತ ಘೋಷಣೆ ಮಾಡಿಲ್ಲ.

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯೊಂದಿಗೆ ಬಿಜೆಪಿ ವಿರುದ್ಧ ಹೋರಾಡಲು ಪಕ್ಷವು ಬಯಸಿದೆ ಎಂದು ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಟಿಎಂಸಿ ನಡೆಯಿಂದ ಕಾಂಗ್ರೆಸ್‌ಗೆ ಆಶ್ಚರ್ಯವಾಗಿದೆ; ಈ ರೀತಿಯ ಏಕಪಕ್ಷೀಯ ಘೋಷಣೆಗಳನ್ನು ಮಾಡಲು ತೃಣಮೂಲದ ಮೇಲೆ ಯಾವ ಒತ್ತಡ ಇದ್ದಿರಬಹುದೆಂದು ತನಗೆ ತಿಳಿದಿಲ್ಲ ಎಂದು ಅವರು ಹೇಳಿದರು.

ಇಂಡಿಯಾ ಬ್ಲಾಕ್‌ನಿಂದ ನಿರ್ಗಮಿಸುವ ಬಗ್ಗೆ ಮಮತಾ ಸ್ಪಷ್ಟಪಡಿಸಲಿಲ್ಲ. ವಾಸ್ತವವಾಗಿ, ಟಿಎಂಸಿ ಇತರ ರಾಜ್ಯಗಳಲ್ಲಿ ಮೈತ್ರಿ ಹೊಂದಿದೆ. ‘ನಾವು ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಉತ್ತರ ಪ್ರದೇಶದಲ್ಲಿ ಒಂದು ಸ್ಥಾನಕ್ಕೆ ಸ್ಪರ್ಧಿಸುತ್ತೇವೆ. ನಾನು ಅಖಿಲೇಶ್ (ಯಾದವ್) ಜೊತೆ ಮಾತನಾಡಿದ್ದೆವು. ನಾವು ಮೇಘಾಲಯದಲ್ಲಿ ವಿರೋಧ ಪಕ್ಷವಾಗಿದ್ದೇವೆ; ನಾವು ಅಲ್ಲಿ ಮತ್ತು ಅಸ್ಸಾಂನಲ್ಲಿಯೂ ಸ್ಪರ್ಧಿಸುತ್ತೇವೆ’ ಎಂದು ಮಮತಾ ಹೇಳಿದರು.

ಇದನ್ನೂ ಓದಿ; ಜೈಲಿಗೆ ಹೋಗುತ್ತಿದ್ದ ಕಳ್ಳರು ಈಗ ಬಿಜೆಪಿ ಸೇರುತ್ತಿದ್ದಾರೆ, ಇದೆ ‘ಮೋದಿ ಗ್ಯಾರಂಟಿ’: ಅಭಿಷೇಕ್ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...