Homeಮುಖಪುಟಚುನಾವಣಾ ಆಯೋಗದ ವಿರುದ್ಧ ಗಾಂಧಿ ಪ್ರತಿಮೆಯ ಬಳಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಧರಣಿ

ಚುನಾವಣಾ ಆಯೋಗದ ವಿರುದ್ಧ ಗಾಂಧಿ ಪ್ರತಿಮೆಯ ಬಳಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಧರಣಿ

- Advertisement -
- Advertisement -

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಕೋಲ್ಕತ್ತಾದ ಗಾಂಧಿ ಪ್ರತಿಮೆಯ ಬಳಿ ಧರಣಿ ಕುಳಿತಿದ್ದಾರೆ. ಚುನಾವಣಾ ಆಯೋಗ ಬ್ಯಾನರ್ಜಿಯವರಿಗೆ ಮಂಗಳವಾರ ರಾತ್ರಿ 8 ಗಂಟೆಯವರೆಗೆ 24 ಗಂಟೆಗಳ ಕಾಲ ಪ್ರಚಾರ ನಡೆಸದಂತೆ ನಿಷೇಧ ಹೇರಿದೆ. ಇದನ್ನು ವಿರೋಧಿಸಿ ಧರಣಿ ನಡೆಸುತ್ತಿದ್ದಾರೆ.

ಕೇಂದ್ರ ಪಡೆಗಳ ವಿರುದ್ಧ ಮಾಡಿದ ಆರೋಪ ಹಾಗೂ ಅಲ್ಪಸಂಖ್ಯಾತ ಮತದಾರರು ತಮ್ಮ ಮತಗಳನ್ನು ವಿಂಗಡಿಸಲು ಅವಕಾಶ ನೀಡದಂತೆ ಮಾಡಿದ್ದ ಮನವಿಯು ನೀತಿ ಸಂಹಿತೆಯ ಉಲ್ಲಂಘನೆ ಎಂದು ಚುನಾವಣಾ ಆಯೋಗವು ಹೇಳಿ, ಪ್ರಚಾರ ನಡೆಸದಂತೆ 24 ಗಂಟೆಗಳ ನಿಷೇಧ ಹೇರಿತ್ತು.

ಪ್ರಚಾರ ನಡೆಸದಂತೆ ನಿಷೇಧ ಹೇರಿರುವುದು “ಪ್ರಜಾಪ್ರಭುತ್ವ ವಿರೋಧಿ ಮತ್ತು ಅಸಂವಿಧಾನಿಕ ನಿರ್ಧಾರ” ಎಂದು ಮಮತಾ ಬ್ಯಾನರ್ಜಿ ಖಂಡಿಸಿದ್ದಾರೆ. ನೀತಿ ಸಂಹಿತೆಯನ್ನು ಉಲ್ಲಂಘಿಸಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ನೀಡಿದ್ದ ಹೇಳಿಕೆಯ ಬಗ್ಗೆ ಚುನಾವಣಾ ಆಯೋಗವು ಏಪ್ರಿಲ್ 7 ಮತ್ತು ಏಪ್ರಿಲ್ 8 ರಂದು ಮಮತಾ ಅವರಿಗೆ ನೋಟಿಸ್ ನೀಡಿತ್ತು.

ಇದನ್ನೂ ಓದಿ: ಬಂಗಾಳ: ಮಮತಾ ಬ್ಯಾನರ್ಜಿಗೆ 24 ಗಂಟೆಗಳ ನಿಷೇಧ ಹೇರಿದ ಚುನಾವಣಾ ಆಯೋಗ

ಎರಡು ನೋಟಿಸ್‌ಗಳಿಗೂ ಮಮತಾ ಬ್ಯಾನರ್ಜಿ ಅವರು ಉತ್ತರಿಸಿದ್ದರಾದರೂ, ಚುನಾವಣಾ ಆಯೋಗವು, ಮಮತಾ ಬ್ಯಾನರ್ಜಿ ನೀಡಿದ್ದ ಉತ್ತರದಲ್ಲಿ ತನ್ನ ಭಾಷಣದ ಪ್ರಮುಖ ಭಾಗಗಳನ್ನು ಬಿಟ್ಟುಬಿಟ್ಟಿದ್ದಾರೆ ಎಂದು ಹೇಳಿತ್ತು.

ಧರಣಿಯಲ್ಲಿರುವ ಮಮತಾ ಬ್ಯಾನರ್ಜಿ ಅವರು ವರ್ಣಚಿತ್ರಗಳನ್ನು ರಚಿಸಿ ಪ್ರದರ್ಶಿಸುತ್ತಿದ್ದಾರೆ. ಏಪ್ರಿಲ್ 12 ರ ರಾತ್ರಿ 8 ರಿಂದ ಏಪ್ರಿಲ್ 13 ರ ರಾತ್ರಿ 8 ರವರೆಗೆ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಲಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಎಂಟು ಹಂತದ ಚುನಾವಣೆ ನಡೆಯಲಿದ್ದು, ನಾಲ್ಕು ಹಂತಗಳು ಈಗಾಗಲೇ ಮುಗಿದಿದೆ. ಏಪ್ರಿಲ್ 17 ರಂದು ಐದನೇ ಹಂತದ ಚುನಾವಣೆ ನಡೆಯಲಿದೆ.


ಇದನ್ನೂ ಓದಿ: ಬಂಗಾಳ ಚುನಾವಣೆ: ಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...

ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ...

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...