Homeಮುಖಪುಟಎಸ್‌ಐಆರ್‌ಗೆ ತೀವ್ರ ವಿರೋಧ : ಕೋಲ್ಕತ್ತಾದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದ ಮಮತಾ ಬ್ಯಾನರ್ಜಿ

ಎಸ್‌ಐಆರ್‌ಗೆ ತೀವ್ರ ವಿರೋಧ : ಕೋಲ್ಕತ್ತಾದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದ ಮಮತಾ ಬ್ಯಾನರ್ಜಿ

- Advertisement -
- Advertisement -

ಭಾರತೀಯ ಚುನಾವಣಾ ಆಯೋಗ ಕೈಗೊಂಡಿರುವ ಎರಡನೇ ಹಂತದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವಿರುದ್ದದ ಪ್ರತಿಭಟನೆಗಳು ಸದ್ದಿಲ್ಲದೆ ಕಾವು ಪಡೆದುಕೊಳ್ಳುತ್ತಿವೆ.

ಇತ್ತ ತಮಿಳುನಾಡಿನ ಆಡಳಿತರೂಢ ಡಿಎಂಕೆ ಪಕ್ಷ ಎಸ್‌ಐಆರ್‌ ವಿರುದ್ದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರೆ, ಅತ್ತ ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬೀದಿಗಿಳಿದು ಹೋರಾಟ ಆರಂಭಿಸಿದ್ದಾರೆ.

ಇಂದು (ನ.4) ತಮ್ಮ ಸೋದರಳಿಯ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರೊಂದಿಗೆ ಕೋಲ್ಕತ್ತಾದ ರೆಡ್ ರೋಡ್‌ನಲ್ಲಿರುವ ಬಿ.ಆರ್. ಅಂಬೇಡ್ಕರ್ ಪ್ರತಿಮೆಯಿಂದ ರವೀಂದ್ರನಾಥ ಟ್ಯಾಗೋರ್ ಅವರ ಪೂರ್ವಜರ ಮನೆಯಾದ ಜೋರಾಸಂಕೊ ಠಾಕೂರ್ ಬಾರಿವರೆಗೆ 3.8 ಕಿಮೀ ರ‍್ಯಾಲಿಯನ್ನು ಮಮತಾ ಬ್ಯಾನರ್ಜಿ ನಡೆಸಿದ್ದಾರೆ.

ಈ ಪ್ರತಿಭಟನಾ ರ‍್ಯಾಲಿಯಲ್ಲಿ ಟಿಎಂಸಿ ಪಕ್ಷದ ಹಲವು ನಾಯಕರು ಮತ್ತು ಭಾರೀ ಸಂಖ್ಯೆಯಲ್ಲಿ ಬೆಂಬಲಿಗರು ಪಾಲ್ಗೊಂಡಿದ್ದರು.

ರ‍್ಯಾಲಿ ಬಳಿಕ ಮಾತನಾಡಿದ ಮಮತಾ ಬ್ಯಾನರ್ಜಿ, “ಎಸ್ಐಆರ್ ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಜೊತೆಗೂಡಿ ‘ಸದ್ದಿಲ್ಲದೆ, ಅದೃಶ್ಯವಾಗಿ ನಡೆಸುತ್ತಿರುವ ಮತಗಳ್ಳತನ’ ಎಂದು ಆರೋಪಿಸಿದ್ದಾರೆ.

ಅನೇಕ ಅಸಂಘಟಿತ ವಲಯದ ಕಾರ್ಮಿಕರು ಮತದಾರರ ಪಟ್ಟಿಯಿಂದ ತಮ್ಮ ಹೆಸರು ತೆಗೆದು ಹಾಕುವ ಆತಂಕದಲ್ಲಿದ್ದಾರೆ. ಬಂಗಾಳಿ ಭಾಷೆ ಮಾತನಾಡಿದ ತಕ್ಷಣ ಯಾರೂ ಬಾಂಗ್ಲಾದೇಶಿ ಆಗುವುದಿಲ್ಲ. ಹಿಂದಿ ಅಥವಾ ಪಂಜಾಬಿಯಲ್ಲಿ ಮಾತನಾಡುವವರು ಪಾಕಿಸ್ತಾನಿ ಆಗುವುದಿಲ್ಲ. ಬಂಗಾಳಿ ಭಾಷೆಯಲ್ಲಿ ಮಾತನಾಡುವವರನ್ನು ಬಾಂಗ್ಲಾದೇಶಿ ಎಂದು ಬ್ರಾಂಡ್ ಮಾಡಲಾಗುತ್ತಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳದ ಮೂರ್ಖರು ಆ ರೀತಿ ಆರೋಪ ಮಾಡುತ್ತಿದ್ದಾರೆ. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬಿಜೆಪಿ ಎಲ್ಲಿತ್ತು? ಅದಕ್ಕಾಗಿಯೇ ಅವರಿಗೆ ಸ್ವಾತಂತ್ರ್ಯ ಪೂರ್ವದಲ್ಲಿ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಒಂದೇ ಆಗಿತ್ತು ಎಂಬುವುದು ಗೊತ್ತಿಲ್ಲ” ಎಂದಿದ್ದಾರೆ.

ಬಿಜೆಪಿ ಒಂದು ಲೂಟಿಕೋರ ಪಕ್ಷ. ಅವರು ಹಲವಾರು ಸಂಸ್ಥೆಗಳನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡಿದ್ದಾರೆ, ನಕಲಿ ಸುದ್ದಿ ಮತ್ತು ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ. ಆದರೆ, ಭವಿಷ್ಯದಲ್ಲಿ ಅವರು ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಿದ್ದಾರೆ.

ಅಭಿಷೇಕ್ ಬ್ಯಾನರ್ಜಿ ಮಾತನಾಡಿ, ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಎರಡು ದಿನಗಳಲ್ಲಿ ಇಷ್ಟು ದೊಡ್ಡ ರ್ಯಾಲಿಯನ್ನು ಏರ್ಪಡಿಸಲು ಸಾಧ್ಯವಾದರೆ, ನಾವು ದೆಹಲಿಗೆ ಪ್ರತಿಭಟನೆಗೆ ಹೋದರೆ ನಮ್ಮ ಜನಸಂದಣಿ ಎಷ್ಟಿರುತ್ತದೆ ಎಂದು ಬಿಜೆಪಿ ಯೋಚಿಸಬೇಕು. ನಾವು ದೆಹಲಿಯ ಜಮೀನ್ದಾರರಿಗೆ ತಲೆಬಾಗುವುದಿಲ್ಲ ಎಂದಿದ್ದಾರೆ.

ಎಸ್‌ಐಆರ್ ಪ್ರಕ್ರಿಯೆಯ ಬಗೆಗಿನ ಭಯವು ಈಗಾಗಲೇ ಹಲವಾರು ಜೀವಗಳನ್ನು ಬಲಿ ಪಡೆದಿದೆ. ಕಳೆದ ಏಳು ದಿನಗಳಲ್ಲಿ, ಎಸ್‌ಐಆರ್ ಭಯದಿಂದ ಸಾವನ್ನಪ್ಪಿದವರ ಕುಟುಂಬ ಸದಸ್ಯರು ಇಂದಿನ ರ್ಯಾಲಿಯಲ್ಲಿ ನಮ್ಮೊಂದಿಗೆ ಇದ್ದಾರೆ. ಪ್ರಾಣ ಕಳೆದುಕೊಂಡ ಏಳು ಜನರೂ ತಮ್ಮ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಭಯದಲ್ಲಿದ್ದರು ಎಂದು ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ.

ಮತದಾರರ ಪಟ್ಟಿಯಿಂದ ಹೆಸರು ಅಳಿಸದಂತೆ ಬಿಜೆಪಿಗೆ ಎಚ್ಚರಿಕೆ ನೀಡಿದ ಅಭಿನಷೇಕ್ ಬ್ಯಾನರ್ಜಿ, ಒಬ್ಬನೇ ಒಬ್ಬ ಕಾನೂನುಬದ್ಧ ಮತದಾರ ತನ್ನ ಹೆಸರನ್ನು ಕಳೆದುಕೊಂಡರೆ, ಟಿಎಂಸಿ ದೆಹಲಿಯಲ್ಲಿ ಬಂಗಾಳದ ಜನರ ಶಕ್ತಿಯನ್ನು ತೋರಿಸುತ್ತದೆ ಎಂದಿದ್ದಾರೆ. ಕೇಂದ್ರವು ಸಿಎಎ ಶಿಬಿರಗಳನ್ನು ಸ್ಥಾಪಿಸುವ ಮೂಲಕ ನಾಟಕ ಮಾಡುತ್ತಿದೆ ಎಂದು ಆರೋಪಿಸಿದ ಅವರು, ನೀವು ಅವರ ಬಲೆಗೆ ಬಿದ್ದರೆ, ಎನ್‌ಆರ್‌ಸಿಯಿಂದಾಗಿ ಅಸ್ಸಾಂನಲ್ಲಿ 12 ಲಕ್ಷ ಹಿಂದೂ ಬಂಗಾಳಿಗಳು ತಮ್ಮ ಮತದಾನದ ಹಕ್ಕನ್ನು ಕಳೆದುಕೊಂಡಂತೆ ನೀವು ಎಲ್ಲವನ್ನೂ ಕಳೆದುಕೊಳ್ಳುತ್ತೀರಿ ಎಂದು ಜನರನ್ನು ಎಚ್ಚರಿಸಿದ್ದಾರೆ.

ದೆಹಲಿಯಲ್ಲಿ ಬೃಹತ್ ಪ್ರತಿಭಟನೆಗೆ ಸಿದ್ಧರಾಗಿರಿ ಎಂದು ಕರೆಕೊಟ್ಟ ಅವರು, ಪ್ರಧಾನಿ ಮೋದಿ ತಮ್ಮ ಇಚ್ಛೆಯಂತೆ ಸಾಮಾನ್ಯ ಜನರಿಗೆ ನಿಯಮಗಳನ್ನು ನಿರ್ದೇಶಿಸುತ್ತಿದ್ದಾರೆ, ಅದು ನೋಟು ರದ್ದತಿಯಾಗಿರಲಿ ಅಥವಾ ಪೌರತ್ವಕ್ಕಾಗಿ ದಾಖಲೆಗಳನ್ನು ಕೇಳುವುದಾಗಿರಲಿ ಎಂದು ಹೇಳಿದ್ದಾರೆ.

ತೀವ್ರ ವಿರೋಧದ ನಡುವೆಯೂ ಎರಡನೇ ಹಂತದ ಎಸ್‌ಐಆರ್‌ ಪ್ರಾರಂಭಿಸಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...