Homeಮುಖಪುಟಎಸ್‌ಐಆರ್‌ಗೆ ತೀವ್ರ ವಿರೋಧ : ಕೋಲ್ಕತ್ತಾದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದ ಮಮತಾ ಬ್ಯಾನರ್ಜಿ

ಎಸ್‌ಐಆರ್‌ಗೆ ತೀವ್ರ ವಿರೋಧ : ಕೋಲ್ಕತ್ತಾದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದ ಮಮತಾ ಬ್ಯಾನರ್ಜಿ

- Advertisement -
- Advertisement -

ಭಾರತೀಯ ಚುನಾವಣಾ ಆಯೋಗ ಕೈಗೊಂಡಿರುವ ಎರಡನೇ ಹಂತದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವಿರುದ್ದದ ಪ್ರತಿಭಟನೆಗಳು ಸದ್ದಿಲ್ಲದೆ ಕಾವು ಪಡೆದುಕೊಳ್ಳುತ್ತಿವೆ.

ಇತ್ತ ತಮಿಳುನಾಡಿನ ಆಡಳಿತರೂಢ ಡಿಎಂಕೆ ಪಕ್ಷ ಎಸ್‌ಐಆರ್‌ ವಿರುದ್ದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರೆ, ಅತ್ತ ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬೀದಿಗಿಳಿದು ಹೋರಾಟ ಆರಂಭಿಸಿದ್ದಾರೆ.

ಇಂದು (ನ.4) ತಮ್ಮ ಸೋದರಳಿಯ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರೊಂದಿಗೆ ಕೋಲ್ಕತ್ತಾದ ರೆಡ್ ರೋಡ್‌ನಲ್ಲಿರುವ ಬಿ.ಆರ್. ಅಂಬೇಡ್ಕರ್ ಪ್ರತಿಮೆಯಿಂದ ರವೀಂದ್ರನಾಥ ಟ್ಯಾಗೋರ್ ಅವರ ಪೂರ್ವಜರ ಮನೆಯಾದ ಜೋರಾಸಂಕೊ ಠಾಕೂರ್ ಬಾರಿವರೆಗೆ 3.8 ಕಿಮೀ ರ‍್ಯಾಲಿಯನ್ನು ಮಮತಾ ಬ್ಯಾನರ್ಜಿ ನಡೆಸಿದ್ದಾರೆ.

ಈ ಪ್ರತಿಭಟನಾ ರ‍್ಯಾಲಿಯಲ್ಲಿ ಟಿಎಂಸಿ ಪಕ್ಷದ ಹಲವು ನಾಯಕರು ಮತ್ತು ಭಾರೀ ಸಂಖ್ಯೆಯಲ್ಲಿ ಬೆಂಬಲಿಗರು ಪಾಲ್ಗೊಂಡಿದ್ದರು.

ರ‍್ಯಾಲಿ ಬಳಿಕ ಮಾತನಾಡಿದ ಮಮತಾ ಬ್ಯಾನರ್ಜಿ, “ಎಸ್ಐಆರ್ ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಜೊತೆಗೂಡಿ ‘ಸದ್ದಿಲ್ಲದೆ, ಅದೃಶ್ಯವಾಗಿ ನಡೆಸುತ್ತಿರುವ ಮತಗಳ್ಳತನ’ ಎಂದು ಆರೋಪಿಸಿದ್ದಾರೆ.

ಅನೇಕ ಅಸಂಘಟಿತ ವಲಯದ ಕಾರ್ಮಿಕರು ಮತದಾರರ ಪಟ್ಟಿಯಿಂದ ತಮ್ಮ ಹೆಸರು ತೆಗೆದು ಹಾಕುವ ಆತಂಕದಲ್ಲಿದ್ದಾರೆ. ಬಂಗಾಳಿ ಭಾಷೆ ಮಾತನಾಡಿದ ತಕ್ಷಣ ಯಾರೂ ಬಾಂಗ್ಲಾದೇಶಿ ಆಗುವುದಿಲ್ಲ. ಹಿಂದಿ ಅಥವಾ ಪಂಜಾಬಿಯಲ್ಲಿ ಮಾತನಾಡುವವರು ಪಾಕಿಸ್ತಾನಿ ಆಗುವುದಿಲ್ಲ. ಬಂಗಾಳಿ ಭಾಷೆಯಲ್ಲಿ ಮಾತನಾಡುವವರನ್ನು ಬಾಂಗ್ಲಾದೇಶಿ ಎಂದು ಬ್ರಾಂಡ್ ಮಾಡಲಾಗುತ್ತಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳದ ಮೂರ್ಖರು ಆ ರೀತಿ ಆರೋಪ ಮಾಡುತ್ತಿದ್ದಾರೆ. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬಿಜೆಪಿ ಎಲ್ಲಿತ್ತು? ಅದಕ್ಕಾಗಿಯೇ ಅವರಿಗೆ ಸ್ವಾತಂತ್ರ್ಯ ಪೂರ್ವದಲ್ಲಿ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಒಂದೇ ಆಗಿತ್ತು ಎಂಬುವುದು ಗೊತ್ತಿಲ್ಲ” ಎಂದಿದ್ದಾರೆ.

ಬಿಜೆಪಿ ಒಂದು ಲೂಟಿಕೋರ ಪಕ್ಷ. ಅವರು ಹಲವಾರು ಸಂಸ್ಥೆಗಳನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡಿದ್ದಾರೆ, ನಕಲಿ ಸುದ್ದಿ ಮತ್ತು ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ. ಆದರೆ, ಭವಿಷ್ಯದಲ್ಲಿ ಅವರು ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಿದ್ದಾರೆ.

ಅಭಿಷೇಕ್ ಬ್ಯಾನರ್ಜಿ ಮಾತನಾಡಿ, ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಎರಡು ದಿನಗಳಲ್ಲಿ ಇಷ್ಟು ದೊಡ್ಡ ರ್ಯಾಲಿಯನ್ನು ಏರ್ಪಡಿಸಲು ಸಾಧ್ಯವಾದರೆ, ನಾವು ದೆಹಲಿಗೆ ಪ್ರತಿಭಟನೆಗೆ ಹೋದರೆ ನಮ್ಮ ಜನಸಂದಣಿ ಎಷ್ಟಿರುತ್ತದೆ ಎಂದು ಬಿಜೆಪಿ ಯೋಚಿಸಬೇಕು. ನಾವು ದೆಹಲಿಯ ಜಮೀನ್ದಾರರಿಗೆ ತಲೆಬಾಗುವುದಿಲ್ಲ ಎಂದಿದ್ದಾರೆ.

ಎಸ್‌ಐಆರ್ ಪ್ರಕ್ರಿಯೆಯ ಬಗೆಗಿನ ಭಯವು ಈಗಾಗಲೇ ಹಲವಾರು ಜೀವಗಳನ್ನು ಬಲಿ ಪಡೆದಿದೆ. ಕಳೆದ ಏಳು ದಿನಗಳಲ್ಲಿ, ಎಸ್‌ಐಆರ್ ಭಯದಿಂದ ಸಾವನ್ನಪ್ಪಿದವರ ಕುಟುಂಬ ಸದಸ್ಯರು ಇಂದಿನ ರ್ಯಾಲಿಯಲ್ಲಿ ನಮ್ಮೊಂದಿಗೆ ಇದ್ದಾರೆ. ಪ್ರಾಣ ಕಳೆದುಕೊಂಡ ಏಳು ಜನರೂ ತಮ್ಮ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಭಯದಲ್ಲಿದ್ದರು ಎಂದು ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ.

ಮತದಾರರ ಪಟ್ಟಿಯಿಂದ ಹೆಸರು ಅಳಿಸದಂತೆ ಬಿಜೆಪಿಗೆ ಎಚ್ಚರಿಕೆ ನೀಡಿದ ಅಭಿನಷೇಕ್ ಬ್ಯಾನರ್ಜಿ, ಒಬ್ಬನೇ ಒಬ್ಬ ಕಾನೂನುಬದ್ಧ ಮತದಾರ ತನ್ನ ಹೆಸರನ್ನು ಕಳೆದುಕೊಂಡರೆ, ಟಿಎಂಸಿ ದೆಹಲಿಯಲ್ಲಿ ಬಂಗಾಳದ ಜನರ ಶಕ್ತಿಯನ್ನು ತೋರಿಸುತ್ತದೆ ಎಂದಿದ್ದಾರೆ. ಕೇಂದ್ರವು ಸಿಎಎ ಶಿಬಿರಗಳನ್ನು ಸ್ಥಾಪಿಸುವ ಮೂಲಕ ನಾಟಕ ಮಾಡುತ್ತಿದೆ ಎಂದು ಆರೋಪಿಸಿದ ಅವರು, ನೀವು ಅವರ ಬಲೆಗೆ ಬಿದ್ದರೆ, ಎನ್‌ಆರ್‌ಸಿಯಿಂದಾಗಿ ಅಸ್ಸಾಂನಲ್ಲಿ 12 ಲಕ್ಷ ಹಿಂದೂ ಬಂಗಾಳಿಗಳು ತಮ್ಮ ಮತದಾನದ ಹಕ್ಕನ್ನು ಕಳೆದುಕೊಂಡಂತೆ ನೀವು ಎಲ್ಲವನ್ನೂ ಕಳೆದುಕೊಳ್ಳುತ್ತೀರಿ ಎಂದು ಜನರನ್ನು ಎಚ್ಚರಿಸಿದ್ದಾರೆ.

ದೆಹಲಿಯಲ್ಲಿ ಬೃಹತ್ ಪ್ರತಿಭಟನೆಗೆ ಸಿದ್ಧರಾಗಿರಿ ಎಂದು ಕರೆಕೊಟ್ಟ ಅವರು, ಪ್ರಧಾನಿ ಮೋದಿ ತಮ್ಮ ಇಚ್ಛೆಯಂತೆ ಸಾಮಾನ್ಯ ಜನರಿಗೆ ನಿಯಮಗಳನ್ನು ನಿರ್ದೇಶಿಸುತ್ತಿದ್ದಾರೆ, ಅದು ನೋಟು ರದ್ದತಿಯಾಗಿರಲಿ ಅಥವಾ ಪೌರತ್ವಕ್ಕಾಗಿ ದಾಖಲೆಗಳನ್ನು ಕೇಳುವುದಾಗಿರಲಿ ಎಂದು ಹೇಳಿದ್ದಾರೆ.

ತೀವ್ರ ವಿರೋಧದ ನಡುವೆಯೂ ಎರಡನೇ ಹಂತದ ಎಸ್‌ಐಆರ್‌ ಪ್ರಾರಂಭಿಸಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...