Homeಮುಖಪುಟಮಮತಾ ಬ್ಯಾನರ್ಜಿ ಬಿಜೆಪಿಗೆ ಹೆದರುತ್ತಿದ್ದಾರೆ: ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ

ಮಮತಾ ಬ್ಯಾನರ್ಜಿ ಬಿಜೆಪಿಗೆ ಹೆದರುತ್ತಿದ್ದಾರೆ: ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ

- Advertisement -
- Advertisement -

ಲೋಕಸಭೆ ಚುನಾವಣೆಯಲ್ಲಿ ಅತ್ಯಂತ ಹಳೆಯ ಪಕ್ಷವು 40 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹೇಳಿಕೆಗೆ ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಶನಿವಾರ ವಾಗ್ದಾಳಿ ನಡೆಸಿದ್ದಾರೆ.

‘ಕಾಂಗ್ರೆಸ್‌ಗೆ ಉತ್ತಮ ಫಲಿತಾಂಶ ಬರುವುದನ್ನು ಬಿಜೆಪಿ ಅಥವಾ ಮಮತಾ ಬ್ಯಾನರ್ಜಿ ಬಯಸುವುದಿಲ್ಲ. ಇಂಡಿಯಾ ಬ್ಲಾಕ್‌ನ ನಾಯಕರೊಬ್ಬರು ಈ ರೀತಿ ಹೇಳಿದರೆ ಅದು ದುರಾದೃಷ್ಟಕರ. ಮಮತಾ ಬ್ಯಾನರ್ಜಿ ಅವರು ಇಂಡಿಯಾ ಮೈತ್ರಿಕೂಟಕ್ಕೆ ಸೇರಿದ್ದಾರೆ. ಆದರೆ, ಅವರು ಬಿಜೆಪಿಗೆ ಹೆದರುತ್ತಾರೆ; ಆದ್ದರಿಂದ ಅವರು ತಮ್ಮ ನಿಲುವನ್ನು ಬದಲಾಯಿಸುತ್ತಿದ್ದಾರೆ’ ಎಂದು ಬಂಗಾಳ ಕಾಂಗ್ರೆಸ್ ಮುಖ್ಯಸ್ಥರೂ ಆಗಿರುವ ಚೌಧರಿ ಅವರು ಮುರ್ಷಿದಾಬಾದ್‌ನಲ್ಲಿ ಹೇಳಿದರು.

‘ಕಾಂಗ್ರೆಸ್ ಮುಗಿಯಿತು, ಕಾಂಗ್ರೆಸ್ ಏನೂ ಇಲ್ಲ ಎಂದು ಬಿಜೆಪಿ ಹೇಳುತ್ತಿದೆ. ಬಿಜೆಪಿಗೆ ಪ್ರತಿಧ್ವನಿಸಿದ ಮಮತಾ ಬ್ಯಾನರ್ಜಿ, ಕಾಂಗ್ರೆಸ್ 40 ಸ್ಥಾನ ಪಡೆದರೂ ಸಾಕು ಎಂದು ಹೇಳಿದ್ದಾರೆ. ಬಿಜೆಪಿ ಮತ್ತು ಪ್ರಧಾನಿ ಮೋದಿಯವರು ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಾರೆ ಎಂದು ಹೇಳಿದರೆ, ಮಮತಾ ಬ್ಯಾನರ್ಜಿ ಕೂಡ ಅದನ್ನೇ ಹೇಳುತ್ತಾರೆ’ ಎಂದು ಅವರು ಬಿಜೆಪಿ-ಟಿಎಂಸಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

‘ಬಿಜೆಪಿ ಮತ್ತು ದೀದಿ ಏಕೆ ಒಂದೇ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ?… ನಿಮಗೆ (ಮಮತಾ ಬ್ಯಾನರ್ಜಿ) ರಾಜ್ಯ ನಂತರ. ಆದರೆ, ರಾಹುಲ್ ಗಾಂಧಿ ಅವರಿಗೆ ದೇಶ ಮೊದಲು, ಉಳಿದೆಲ್ಲವೂ ನಂತರ…” ಎಂದು ಹೇಳಿದರು.

‘ನಿಮಗೆ ಧೈರ್ಯವಿದ್ದರೆ, ಯುಪಿ, ಬನಾರಸ್, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿಯನ್ನು ಸೋಲಿಸಿ’ ಎಂದು ಟಿಎಂಸಿ ರಾಜ್ಯದ ಎಲ್ಲಾ 42 ಸ್ಥಾನಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರ ಘೋಷಿಸಿದ ನಂತರ ಸವಾಲು ಹಾಕಿದ್ದಾರೆ.

ಸಿಪಿಎಂ ಪಕ್ಷವನ್ನು ಎಂದಿಗೂ ಕ್ಷಮಿಸುವುದಿಲ್ಲ

ಮುಂಬರುವ ಸಾರ್ವತ್ರಿಕ ಚುನಾವಣೆಗೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಇಂಡಿಯಾ ಮಿತ್ರಪಕ್ಷಗಳಾದ ಟಿಎಂಸಿ ಮತ್ತು ಕಾಂಗ್ರೆಸ್ ನಡುವಿನ ಭಿನ್ನಾಭಿಪ್ರಾಯಗಳು ಮುನ್ನೆಲೆಗೆ ಬಂದಿವೆ. ಮಮತಾ ಬ್ಯಾನರ್ಜಿ ಅವರು 2011 ರಲ್ಲಿ ತಮ್ಮ ಪಕ್ಷದಿಂದ ಸೋಲಿಸುವ ಮೊದಲು 34 ವರ್ಷಗಳ ಕಾಲ ಬಂಗಾಳವನ್ನು ಆಳಿದ ಸಿಪಿಎಂ ನೇತೃತ್ವದ ಎಡಪಕ್ಷಗಳೊಂದಿಗಿನ ಸಂಬಂಧವನ್ನು ಕಡಿದುಕೊಳ್ಳುವವರೆಗೆ ಕಾಂಗ್ರೆಸ್‌ನೊಂದಿಗೆ ಒಂದೇ ಒಂದು ಸ್ಥಾನವನ್ನು ಹಂಚಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

‘ನಾನು ಅವರಿಗೆ (ಕಾಂಗ್ರೆಸ್) ಒಂದು ಸ್ಥಾನವನ್ನೂ ಬಿಡುವುದಿಲ್ಲ ಎಂದು ಹೇಳಿದ್ದೆ. ಮೊದಲು ಸಿಪಿಐ(ಎಂ) ಜೊತೆಗಿನ ಸಂಬಂಧವನ್ನು ಕಡಿದುಕೊಳ್ಳುವಂತೆ ನಾನು ಅವರನ್ನು ಕೇಳಿದೆ. ಸಿಪಿಐ(ಎಂ) ನಮ್ಮ ಕಾರ್ಯಕರ್ತರನ್ನು ಹೇಗೆ ಹಿಂಸಿಸಿತ್ತು ಎಂಬುದನ್ನು ನಾನು ಮರೆತಿಲ್ಲ’ ಎಂದು ಮಮತಾ ಹೇಳಿದ್ದರು.

ಇದನ್ನೂ ಓದಿ; ಬಿಜೆಪಿ ಪರ ಪ್ರಚಾರಕ್ಕೆ ತೆರಳಲು ಸಾರ್ವಜನಿಕ ಬೊಕ್ಕಸದ ಕೋಟ್ಯಾಂತರ ರೂ. ಹಣ ಬಳಸಿದ ಅಸ್ಸಾಂ ಸಿಎಂ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...