Homeಮುಖಪುಟಟಿಎಂಸಿ ಪ್ರತಿಭಟನಾ ವೇದಿಕೆ ತೆರವುಗೊಳಿಸಿದ ಸೇನೆ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ

ಟಿಎಂಸಿ ಪ್ರತಿಭಟನಾ ವೇದಿಕೆ ತೆರವುಗೊಳಿಸಿದ ಸೇನೆ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ

- Advertisement -
- Advertisement -

ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರ ಮೇಲಿನ ದೌರ್ಜನ್ಯವನ್ನು ಖಂಡಿಸಿ ಪ್ರತಿಭಟಿಸಲು ಕೋಲ್ಕತ್ತಾದ ಮೈದಾನ್ ಪ್ರದೇಶದ ಗಾಂಧಿ ಪ್ರತಿಮೆಯ ಬಳಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಿರ್ಮಿಸಿದ್ದ ವೇದಿಕೆಯನ್ನು  ಸೇನಾ ಸಿಬ್ಬಂದಿ ಸೋಮವಾರ (ಸೆ.1) ತೆರವುಗೊಳಿಸಿದ್ದಾರೆ.

ಸುಪ್ರೀಂ ಕೋರ್ಟ್ ನಿರ್ದೇಶನದಂತೆ, ಸಾಮಾನ್ಯವಾಗಿ ಮೈದಾನ್ ಪ್ರದೇಶದಲ್ಲಿ ಎರಡು ದಿನಗಳ ಅವಧಿಗೆ ಕಾರ್ಯಕ್ರಮಗಳನ್ನು ನಡೆಸಲು ಸೇನೆ (ಸ್ಥಳೀಯ ಮಿಲಿಟರಿ ಪ್ರಾಧಿಕಾರ, ಕೋಲ್ಕತ್ತಾ) ಅನುಮತಿ ನೀಡುತ್ತದೆ.  ಮೂರು ದಿನಗಳಿಗಾದರೆ ರಕ್ಷಣಾ ಸಚಿವಾಲಯದ ಅನುಮತಿ ಪಡೆಯಬೇಕು ಎಂದು ರಕ್ಷಣಾ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

“ಎರಡು ದಿನಗಳ ಕಾಲ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಲಾಗಿತ್ತು. ವೇದಿಕೆ ಸುಮಾರು ಒಂದು ತಿಂಗಳಿನಿಂದ ಇದೆ. ತಾತ್ಕಾಲಿಕ ವೇದಿಕೆಯನ್ನು ತೆರವುಗೊಳಿಸುವಂತೆ ಸಂಘಟಕರಿಗೆ ಹಲವಾರು ಬಾರಿ ಹೇಳಲಾಗಿದೆ. ಆದಾಗ್ಯೂ, ಅದನ್ನು ತೆರವುಗೊಳಿಸಿರಲಿಲ್ಲ” ಎಂದು ರಕ್ಷಣಾ ಅಧಿಕಾರಿ ಹೇಳಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನಗರ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದಾರೆ ಎಂದು ವೇದಿಕೆ ತೆರವುಗೊಳಿಸುವ ವೇಳೆ ರಕ್ಷಣಾ ಅಧಿಕಾರಿ ತಿಳಿಸಿದ್ದಾರೆ.

ಟಿಎಂಸಿ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಜೆಪಿ ಸೇನೆಯನ್ನು ತಮ್ಮ ಆಟಿಕೆಯಾಗಿ ಬಳಸುತ್ತಿದೆ ಎಂದು ಆರೋಪಿಸಿದ್ದಾರೆ. ಕೇಸರಿ ಪಕ್ಷದ ಕೈಯಲ್ಲಿ ಆಡಬೇಡಿ ಎಂದು ಸೇನೆಗೆ ಮನವಿ ಮಾಡಿದ್ದಾರೆ.

“ನಾನು ಸೇನೆಯನ್ನು ದೂಷಿಸುವುದಿಲ್ಲ, ಆದರೆ ಬಿಜೆಪಿಯ ಸೇಡಿನ ರಾಜಕೀಯ ಇದರ ಹಿಂದೆ ಇದೆ. ಹಾಗಾಗಿ, ಬಿಜೆಪಿಯ ಡಬಲ್ ಎಂಜಿನ್ ಸರ್ಕಾರವನ್ನು ದೂಷಿಸುತ್ತೇವೆ” ಎಂದಿದ್ದಾರೆ.

“ಅವರು (ಬಿಜೆಪಿ) ಸೈನ್ಯವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಇದು ಅನೈತಿಕ, ಪ್ರಜಾಪ್ರಭುತ್ವ ವಿರೋಧಿ” ಎಂದು ವೇದಿಕೆ ತೆರವುಗೊಳಿಸುವ ವೇಳೆ ಸ್ಥಳಕ್ಕೆ ಧಾವಿಸಿದ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

” ಬಿಜೆಪಿಗರು ತಮ್ಮ ಸ್ವಾರ್ಥ ಸಾಧನಗೆ ಸೇನೆಯನ್ನು ದುರುಪಯೋಗಡಿಸಿಕೊಳ್ಳುತ್ತಿದ್ದಾರೆ. ಅವರಿಗೆ ಆಂತರಿಕ ಭದ್ರತೆ ಮತ್ತು ಗಡಿ ಭದ್ರತೆಯ ಬಗ್ಗೆ ಕಾಳಜಿ ಇಲ್ಲ. ನಮಗೆ ಕಾರ್ಯಕ್ರಮಕ್ಕೆ ಅನುಮತಿ ಇತ್ತು. ಅದಕ್ಕಾಗಿ, ನಾವು ಶುಲ್ಕವನ್ನೂ ಪಾವತಿಸಿದ್ದೇವೆ” ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ವೇದಿಕೆಯನ್ನು ಕೆಡವುವ ಮೊದಲು ಸೇನೆಯು ಕೋಲ್ಕತ್ತಾ ಪೊಲೀಸರೊಂದಿಗೆ ಸಮಾಲೋಚಿಸಬೇಕಿತ್ತು. ಅವರು ನನಗೆ ಕರೆ ಮಾಡಬಹುದಿತ್ತು. ಆದರೆ, ಅವರು ಕೆಲವೇ ನಿಮಿಷಗಳಲ್ಲಿ ವೇದಿಕೆಯನ್ನು ಕೆಡವಿದ್ದಾರೆ ಎಂದು ಹೇಳಿದ್ದಾರೆ.

“ನಾನು ಸೈನ್ಯವನ್ನು ದೂಷಿಸುವುದಿಲ್ಲ, ಅವರು ತಟಸ್ಥರಾಗಿರಲು ಮತ್ತು ಬಿಜೆಪಿಯ ಕೈಯಲ್ಲಿ ಆಟವಾಡದಂತೆ ಮನವಿ ಮಾಡುತ್ತೇನೆ” ಎಂದಿದ್ದಾರೆ.

ವೇದಿಕೆ ತೆರವುಗೊಳಿಸಿರುವುದರಲ್ಲಿ ರಾಜಕೀಯ ಉದ್ದೇಶ ಇದೆ. ಕೇಂದ್ರ ಸರ್ಕಾರ ಇಡಿ, ಸಿಬಿಐ ಬಳಿಕ ಸೇನೆಯನ್ನು ದುರುಪಯೋಗಪಡಿಸಿಕೊಳ್ಳುತ್ತುದೆ. ನಮ್ಮ ಪ್ರತಿಭಟನೆಯನ್ನು ರಾಣಿ ರಶ್ಮೋನಿ ರಸ್ತೆಗೆ ಸ್ಥಳಾಂತರಿಸಲಾಗುವುದು ಎಂದು ಟಿಎಂಸಿಯ ಕುನಾಲ್ ಘೋಷ್ ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ‘ಹತಾಶೆಯಿಂದ’ ಸೇನೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ವಿರುದ್ದ ಆರೋಪ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಸಮಿಕ್ ಭಟ್ಟಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

“ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ರಾತ್ರಿಯಿಡೀ ನಿದ್ದೆ ಇಲ್ಲದೆ ಇರುವಾಗ ಇಂತಹ ಘಟನೆಗಳು ಸಂಭವಿಸುತ್ತವೆ. ಅವರು ದೀರ್ಘಕಾಲದವರೆಗೆ ಅನಿಯಂತ್ರಿತ ಅಧಿಕಾರವನ್ನು ಅನುಭವಿಸಿದ್ದಾರೆ. ಪದಚ್ಯುತಿಯ ಬೆದರಿಕೆ ಸ್ಪಷ್ಟ ಮತ್ತು ಪ್ರಸ್ತುತವಾಗಿರುವಾಗ ಅವರು ಸೇನೆಯ ಮೇಲೆ ತಮ್ಮ ಹತಾಶೆಯನ್ನು ಹೊರಹಾಕುತ್ತಿದ್ದಾರೆ. ಬಿಜೆಪಿ ವಿರುದ್ಧ ಆರೋಪಗಳನ್ನು ಮಾಡುತಿದ್ದಾರೆ” ಎಂದು ಭಟ್ಟಾಚಾರ್ಯ ಹೇಳಿದ್ದಾರೆ.

ಟಿಎಂಸಿಯ ‘ಭಾಷಾ ಆಂದೋಲನ’ ಪ್ರತಿಭಟನೆಯು ಒಂದು ಸಾಮೂಹಿಕ ಒತ್ತಾಯವಾಗಿದೆ ಎಂದು ಸಿಪಿಐ(ಎಂ) ನಾಯಕಿ ಸುಜನ್ ಚಕ್ರವರ್ತಿ ಸಮರ್ಥಿಸಿಕೊಂಡಿದ್ದಾರೆ.

ಕೊಲ್ಕತ್ತಾದ ಮೈದಾನ್ ಪ್ರದೇಶವು ಭಾರತೀಯ ಸೇನೆಯ ನಿಯಂತ್ರಣದಲ್ಲಿದೆ. ಇದರ ಪೂರ್ವ ಕಮಾಂಡ್ ಪ್ರಧಾನ ಕಚೇರಿ ಫೋರ್ಟ್ ವಿಲಿಯಂನಲ್ಲಿ ಹತ್ತಿರದಲ್ಲಿದೆ.

ಬಿಹಾರ ಎಸ್‌ಐಆರ್ | ಕಾಂಗ್ರೆಸ್ 89 ಲಕ್ಷ ದೂರುಗಳನ್ನು ಚು. ಆಯೋಗಕ್ಕೆ ಸಲ್ಲಿಸಿದೆ, ಅವೆಲ್ಲವನ್ನೂ ತಿರಸ್ಕರಿಸಲಾಗಿದೆ: ಪವನ್ ಖೇರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....