Homeಮುಖಪುಟಟಿಎಂಸಿ ಪ್ರತಿಭಟನಾ ವೇದಿಕೆ ತೆರವುಗೊಳಿಸಿದ ಸೇನೆ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ

ಟಿಎಂಸಿ ಪ್ರತಿಭಟನಾ ವೇದಿಕೆ ತೆರವುಗೊಳಿಸಿದ ಸೇನೆ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ

- Advertisement -
- Advertisement -

ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರ ಮೇಲಿನ ದೌರ್ಜನ್ಯವನ್ನು ಖಂಡಿಸಿ ಪ್ರತಿಭಟಿಸಲು ಕೋಲ್ಕತ್ತಾದ ಮೈದಾನ್ ಪ್ರದೇಶದ ಗಾಂಧಿ ಪ್ರತಿಮೆಯ ಬಳಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಿರ್ಮಿಸಿದ್ದ ವೇದಿಕೆಯನ್ನು  ಸೇನಾ ಸಿಬ್ಬಂದಿ ಸೋಮವಾರ (ಸೆ.1) ತೆರವುಗೊಳಿಸಿದ್ದಾರೆ.

ಸುಪ್ರೀಂ ಕೋರ್ಟ್ ನಿರ್ದೇಶನದಂತೆ, ಸಾಮಾನ್ಯವಾಗಿ ಮೈದಾನ್ ಪ್ರದೇಶದಲ್ಲಿ ಎರಡು ದಿನಗಳ ಅವಧಿಗೆ ಕಾರ್ಯಕ್ರಮಗಳನ್ನು ನಡೆಸಲು ಸೇನೆ (ಸ್ಥಳೀಯ ಮಿಲಿಟರಿ ಪ್ರಾಧಿಕಾರ, ಕೋಲ್ಕತ್ತಾ) ಅನುಮತಿ ನೀಡುತ್ತದೆ.  ಮೂರು ದಿನಗಳಿಗಾದರೆ ರಕ್ಷಣಾ ಸಚಿವಾಲಯದ ಅನುಮತಿ ಪಡೆಯಬೇಕು ಎಂದು ರಕ್ಷಣಾ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

“ಎರಡು ದಿನಗಳ ಕಾಲ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಲಾಗಿತ್ತು. ವೇದಿಕೆ ಸುಮಾರು ಒಂದು ತಿಂಗಳಿನಿಂದ ಇದೆ. ತಾತ್ಕಾಲಿಕ ವೇದಿಕೆಯನ್ನು ತೆರವುಗೊಳಿಸುವಂತೆ ಸಂಘಟಕರಿಗೆ ಹಲವಾರು ಬಾರಿ ಹೇಳಲಾಗಿದೆ. ಆದಾಗ್ಯೂ, ಅದನ್ನು ತೆರವುಗೊಳಿಸಿರಲಿಲ್ಲ” ಎಂದು ರಕ್ಷಣಾ ಅಧಿಕಾರಿ ಹೇಳಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನಗರ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದಾರೆ ಎಂದು ವೇದಿಕೆ ತೆರವುಗೊಳಿಸುವ ವೇಳೆ ರಕ್ಷಣಾ ಅಧಿಕಾರಿ ತಿಳಿಸಿದ್ದಾರೆ.

ಟಿಎಂಸಿ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಜೆಪಿ ಸೇನೆಯನ್ನು ತಮ್ಮ ಆಟಿಕೆಯಾಗಿ ಬಳಸುತ್ತಿದೆ ಎಂದು ಆರೋಪಿಸಿದ್ದಾರೆ. ಕೇಸರಿ ಪಕ್ಷದ ಕೈಯಲ್ಲಿ ಆಡಬೇಡಿ ಎಂದು ಸೇನೆಗೆ ಮನವಿ ಮಾಡಿದ್ದಾರೆ.

“ನಾನು ಸೇನೆಯನ್ನು ದೂಷಿಸುವುದಿಲ್ಲ, ಆದರೆ ಬಿಜೆಪಿಯ ಸೇಡಿನ ರಾಜಕೀಯ ಇದರ ಹಿಂದೆ ಇದೆ. ಹಾಗಾಗಿ, ಬಿಜೆಪಿಯ ಡಬಲ್ ಎಂಜಿನ್ ಸರ್ಕಾರವನ್ನು ದೂಷಿಸುತ್ತೇವೆ” ಎಂದಿದ್ದಾರೆ.

“ಅವರು (ಬಿಜೆಪಿ) ಸೈನ್ಯವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಇದು ಅನೈತಿಕ, ಪ್ರಜಾಪ್ರಭುತ್ವ ವಿರೋಧಿ” ಎಂದು ವೇದಿಕೆ ತೆರವುಗೊಳಿಸುವ ವೇಳೆ ಸ್ಥಳಕ್ಕೆ ಧಾವಿಸಿದ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

” ಬಿಜೆಪಿಗರು ತಮ್ಮ ಸ್ವಾರ್ಥ ಸಾಧನಗೆ ಸೇನೆಯನ್ನು ದುರುಪಯೋಗಡಿಸಿಕೊಳ್ಳುತ್ತಿದ್ದಾರೆ. ಅವರಿಗೆ ಆಂತರಿಕ ಭದ್ರತೆ ಮತ್ತು ಗಡಿ ಭದ್ರತೆಯ ಬಗ್ಗೆ ಕಾಳಜಿ ಇಲ್ಲ. ನಮಗೆ ಕಾರ್ಯಕ್ರಮಕ್ಕೆ ಅನುಮತಿ ಇತ್ತು. ಅದಕ್ಕಾಗಿ, ನಾವು ಶುಲ್ಕವನ್ನೂ ಪಾವತಿಸಿದ್ದೇವೆ” ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ವೇದಿಕೆಯನ್ನು ಕೆಡವುವ ಮೊದಲು ಸೇನೆಯು ಕೋಲ್ಕತ್ತಾ ಪೊಲೀಸರೊಂದಿಗೆ ಸಮಾಲೋಚಿಸಬೇಕಿತ್ತು. ಅವರು ನನಗೆ ಕರೆ ಮಾಡಬಹುದಿತ್ತು. ಆದರೆ, ಅವರು ಕೆಲವೇ ನಿಮಿಷಗಳಲ್ಲಿ ವೇದಿಕೆಯನ್ನು ಕೆಡವಿದ್ದಾರೆ ಎಂದು ಹೇಳಿದ್ದಾರೆ.

“ನಾನು ಸೈನ್ಯವನ್ನು ದೂಷಿಸುವುದಿಲ್ಲ, ಅವರು ತಟಸ್ಥರಾಗಿರಲು ಮತ್ತು ಬಿಜೆಪಿಯ ಕೈಯಲ್ಲಿ ಆಟವಾಡದಂತೆ ಮನವಿ ಮಾಡುತ್ತೇನೆ” ಎಂದಿದ್ದಾರೆ.

ವೇದಿಕೆ ತೆರವುಗೊಳಿಸಿರುವುದರಲ್ಲಿ ರಾಜಕೀಯ ಉದ್ದೇಶ ಇದೆ. ಕೇಂದ್ರ ಸರ್ಕಾರ ಇಡಿ, ಸಿಬಿಐ ಬಳಿಕ ಸೇನೆಯನ್ನು ದುರುಪಯೋಗಪಡಿಸಿಕೊಳ್ಳುತ್ತುದೆ. ನಮ್ಮ ಪ್ರತಿಭಟನೆಯನ್ನು ರಾಣಿ ರಶ್ಮೋನಿ ರಸ್ತೆಗೆ ಸ್ಥಳಾಂತರಿಸಲಾಗುವುದು ಎಂದು ಟಿಎಂಸಿಯ ಕುನಾಲ್ ಘೋಷ್ ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ‘ಹತಾಶೆಯಿಂದ’ ಸೇನೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ವಿರುದ್ದ ಆರೋಪ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಸಮಿಕ್ ಭಟ್ಟಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

“ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ರಾತ್ರಿಯಿಡೀ ನಿದ್ದೆ ಇಲ್ಲದೆ ಇರುವಾಗ ಇಂತಹ ಘಟನೆಗಳು ಸಂಭವಿಸುತ್ತವೆ. ಅವರು ದೀರ್ಘಕಾಲದವರೆಗೆ ಅನಿಯಂತ್ರಿತ ಅಧಿಕಾರವನ್ನು ಅನುಭವಿಸಿದ್ದಾರೆ. ಪದಚ್ಯುತಿಯ ಬೆದರಿಕೆ ಸ್ಪಷ್ಟ ಮತ್ತು ಪ್ರಸ್ತುತವಾಗಿರುವಾಗ ಅವರು ಸೇನೆಯ ಮೇಲೆ ತಮ್ಮ ಹತಾಶೆಯನ್ನು ಹೊರಹಾಕುತ್ತಿದ್ದಾರೆ. ಬಿಜೆಪಿ ವಿರುದ್ಧ ಆರೋಪಗಳನ್ನು ಮಾಡುತಿದ್ದಾರೆ” ಎಂದು ಭಟ್ಟಾಚಾರ್ಯ ಹೇಳಿದ್ದಾರೆ.

ಟಿಎಂಸಿಯ ‘ಭಾಷಾ ಆಂದೋಲನ’ ಪ್ರತಿಭಟನೆಯು ಒಂದು ಸಾಮೂಹಿಕ ಒತ್ತಾಯವಾಗಿದೆ ಎಂದು ಸಿಪಿಐ(ಎಂ) ನಾಯಕಿ ಸುಜನ್ ಚಕ್ರವರ್ತಿ ಸಮರ್ಥಿಸಿಕೊಂಡಿದ್ದಾರೆ.

ಕೊಲ್ಕತ್ತಾದ ಮೈದಾನ್ ಪ್ರದೇಶವು ಭಾರತೀಯ ಸೇನೆಯ ನಿಯಂತ್ರಣದಲ್ಲಿದೆ. ಇದರ ಪೂರ್ವ ಕಮಾಂಡ್ ಪ್ರಧಾನ ಕಚೇರಿ ಫೋರ್ಟ್ ವಿಲಿಯಂನಲ್ಲಿ ಹತ್ತಿರದಲ್ಲಿದೆ.

ಬಿಹಾರ ಎಸ್‌ಐಆರ್ | ಕಾಂಗ್ರೆಸ್ 89 ಲಕ್ಷ ದೂರುಗಳನ್ನು ಚು. ಆಯೋಗಕ್ಕೆ ಸಲ್ಲಿಸಿದೆ, ಅವೆಲ್ಲವನ್ನೂ ತಿರಸ್ಕರಿಸಲಾಗಿದೆ: ಪವನ್ ಖೇರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...