Homeಮುಖಪುಟಟಿಎಂಸಿ ಪ್ರತಿಭಟನಾ ವೇದಿಕೆ ತೆರವುಗೊಳಿಸಿದ ಸೇನೆ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ

ಟಿಎಂಸಿ ಪ್ರತಿಭಟನಾ ವೇದಿಕೆ ತೆರವುಗೊಳಿಸಿದ ಸೇನೆ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ

- Advertisement -
- Advertisement -

ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರ ಮೇಲಿನ ದೌರ್ಜನ್ಯವನ್ನು ಖಂಡಿಸಿ ಪ್ರತಿಭಟಿಸಲು ಕೋಲ್ಕತ್ತಾದ ಮೈದಾನ್ ಪ್ರದೇಶದ ಗಾಂಧಿ ಪ್ರತಿಮೆಯ ಬಳಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಿರ್ಮಿಸಿದ್ದ ವೇದಿಕೆಯನ್ನು  ಸೇನಾ ಸಿಬ್ಬಂದಿ ಸೋಮವಾರ (ಸೆ.1) ತೆರವುಗೊಳಿಸಿದ್ದಾರೆ.

ಸುಪ್ರೀಂ ಕೋರ್ಟ್ ನಿರ್ದೇಶನದಂತೆ, ಸಾಮಾನ್ಯವಾಗಿ ಮೈದಾನ್ ಪ್ರದೇಶದಲ್ಲಿ ಎರಡು ದಿನಗಳ ಅವಧಿಗೆ ಕಾರ್ಯಕ್ರಮಗಳನ್ನು ನಡೆಸಲು ಸೇನೆ (ಸ್ಥಳೀಯ ಮಿಲಿಟರಿ ಪ್ರಾಧಿಕಾರ, ಕೋಲ್ಕತ್ತಾ) ಅನುಮತಿ ನೀಡುತ್ತದೆ.  ಮೂರು ದಿನಗಳಿಗಾದರೆ ರಕ್ಷಣಾ ಸಚಿವಾಲಯದ ಅನುಮತಿ ಪಡೆಯಬೇಕು ಎಂದು ರಕ್ಷಣಾ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

“ಎರಡು ದಿನಗಳ ಕಾಲ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಲಾಗಿತ್ತು. ವೇದಿಕೆ ಸುಮಾರು ಒಂದು ತಿಂಗಳಿನಿಂದ ಇದೆ. ತಾತ್ಕಾಲಿಕ ವೇದಿಕೆಯನ್ನು ತೆರವುಗೊಳಿಸುವಂತೆ ಸಂಘಟಕರಿಗೆ ಹಲವಾರು ಬಾರಿ ಹೇಳಲಾಗಿದೆ. ಆದಾಗ್ಯೂ, ಅದನ್ನು ತೆರವುಗೊಳಿಸಿರಲಿಲ್ಲ” ಎಂದು ರಕ್ಷಣಾ ಅಧಿಕಾರಿ ಹೇಳಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನಗರ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದಾರೆ ಎಂದು ವೇದಿಕೆ ತೆರವುಗೊಳಿಸುವ ವೇಳೆ ರಕ್ಷಣಾ ಅಧಿಕಾರಿ ತಿಳಿಸಿದ್ದಾರೆ.

ಟಿಎಂಸಿ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಜೆಪಿ ಸೇನೆಯನ್ನು ತಮ್ಮ ಆಟಿಕೆಯಾಗಿ ಬಳಸುತ್ತಿದೆ ಎಂದು ಆರೋಪಿಸಿದ್ದಾರೆ. ಕೇಸರಿ ಪಕ್ಷದ ಕೈಯಲ್ಲಿ ಆಡಬೇಡಿ ಎಂದು ಸೇನೆಗೆ ಮನವಿ ಮಾಡಿದ್ದಾರೆ.

“ನಾನು ಸೇನೆಯನ್ನು ದೂಷಿಸುವುದಿಲ್ಲ, ಆದರೆ ಬಿಜೆಪಿಯ ಸೇಡಿನ ರಾಜಕೀಯ ಇದರ ಹಿಂದೆ ಇದೆ. ಹಾಗಾಗಿ, ಬಿಜೆಪಿಯ ಡಬಲ್ ಎಂಜಿನ್ ಸರ್ಕಾರವನ್ನು ದೂಷಿಸುತ್ತೇವೆ” ಎಂದಿದ್ದಾರೆ.

“ಅವರು (ಬಿಜೆಪಿ) ಸೈನ್ಯವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಇದು ಅನೈತಿಕ, ಪ್ರಜಾಪ್ರಭುತ್ವ ವಿರೋಧಿ” ಎಂದು ವೇದಿಕೆ ತೆರವುಗೊಳಿಸುವ ವೇಳೆ ಸ್ಥಳಕ್ಕೆ ಧಾವಿಸಿದ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

” ಬಿಜೆಪಿಗರು ತಮ್ಮ ಸ್ವಾರ್ಥ ಸಾಧನಗೆ ಸೇನೆಯನ್ನು ದುರುಪಯೋಗಡಿಸಿಕೊಳ್ಳುತ್ತಿದ್ದಾರೆ. ಅವರಿಗೆ ಆಂತರಿಕ ಭದ್ರತೆ ಮತ್ತು ಗಡಿ ಭದ್ರತೆಯ ಬಗ್ಗೆ ಕಾಳಜಿ ಇಲ್ಲ. ನಮಗೆ ಕಾರ್ಯಕ್ರಮಕ್ಕೆ ಅನುಮತಿ ಇತ್ತು. ಅದಕ್ಕಾಗಿ, ನಾವು ಶುಲ್ಕವನ್ನೂ ಪಾವತಿಸಿದ್ದೇವೆ” ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ವೇದಿಕೆಯನ್ನು ಕೆಡವುವ ಮೊದಲು ಸೇನೆಯು ಕೋಲ್ಕತ್ತಾ ಪೊಲೀಸರೊಂದಿಗೆ ಸಮಾಲೋಚಿಸಬೇಕಿತ್ತು. ಅವರು ನನಗೆ ಕರೆ ಮಾಡಬಹುದಿತ್ತು. ಆದರೆ, ಅವರು ಕೆಲವೇ ನಿಮಿಷಗಳಲ್ಲಿ ವೇದಿಕೆಯನ್ನು ಕೆಡವಿದ್ದಾರೆ ಎಂದು ಹೇಳಿದ್ದಾರೆ.

“ನಾನು ಸೈನ್ಯವನ್ನು ದೂಷಿಸುವುದಿಲ್ಲ, ಅವರು ತಟಸ್ಥರಾಗಿರಲು ಮತ್ತು ಬಿಜೆಪಿಯ ಕೈಯಲ್ಲಿ ಆಟವಾಡದಂತೆ ಮನವಿ ಮಾಡುತ್ತೇನೆ” ಎಂದಿದ್ದಾರೆ.

ವೇದಿಕೆ ತೆರವುಗೊಳಿಸಿರುವುದರಲ್ಲಿ ರಾಜಕೀಯ ಉದ್ದೇಶ ಇದೆ. ಕೇಂದ್ರ ಸರ್ಕಾರ ಇಡಿ, ಸಿಬಿಐ ಬಳಿಕ ಸೇನೆಯನ್ನು ದುರುಪಯೋಗಪಡಿಸಿಕೊಳ್ಳುತ್ತುದೆ. ನಮ್ಮ ಪ್ರತಿಭಟನೆಯನ್ನು ರಾಣಿ ರಶ್ಮೋನಿ ರಸ್ತೆಗೆ ಸ್ಥಳಾಂತರಿಸಲಾಗುವುದು ಎಂದು ಟಿಎಂಸಿಯ ಕುನಾಲ್ ಘೋಷ್ ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ‘ಹತಾಶೆಯಿಂದ’ ಸೇನೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ವಿರುದ್ದ ಆರೋಪ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಸಮಿಕ್ ಭಟ್ಟಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

“ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ರಾತ್ರಿಯಿಡೀ ನಿದ್ದೆ ಇಲ್ಲದೆ ಇರುವಾಗ ಇಂತಹ ಘಟನೆಗಳು ಸಂಭವಿಸುತ್ತವೆ. ಅವರು ದೀರ್ಘಕಾಲದವರೆಗೆ ಅನಿಯಂತ್ರಿತ ಅಧಿಕಾರವನ್ನು ಅನುಭವಿಸಿದ್ದಾರೆ. ಪದಚ್ಯುತಿಯ ಬೆದರಿಕೆ ಸ್ಪಷ್ಟ ಮತ್ತು ಪ್ರಸ್ತುತವಾಗಿರುವಾಗ ಅವರು ಸೇನೆಯ ಮೇಲೆ ತಮ್ಮ ಹತಾಶೆಯನ್ನು ಹೊರಹಾಕುತ್ತಿದ್ದಾರೆ. ಬಿಜೆಪಿ ವಿರುದ್ಧ ಆರೋಪಗಳನ್ನು ಮಾಡುತಿದ್ದಾರೆ” ಎಂದು ಭಟ್ಟಾಚಾರ್ಯ ಹೇಳಿದ್ದಾರೆ.

ಟಿಎಂಸಿಯ ‘ಭಾಷಾ ಆಂದೋಲನ’ ಪ್ರತಿಭಟನೆಯು ಒಂದು ಸಾಮೂಹಿಕ ಒತ್ತಾಯವಾಗಿದೆ ಎಂದು ಸಿಪಿಐ(ಎಂ) ನಾಯಕಿ ಸುಜನ್ ಚಕ್ರವರ್ತಿ ಸಮರ್ಥಿಸಿಕೊಂಡಿದ್ದಾರೆ.

ಕೊಲ್ಕತ್ತಾದ ಮೈದಾನ್ ಪ್ರದೇಶವು ಭಾರತೀಯ ಸೇನೆಯ ನಿಯಂತ್ರಣದಲ್ಲಿದೆ. ಇದರ ಪೂರ್ವ ಕಮಾಂಡ್ ಪ್ರಧಾನ ಕಚೇರಿ ಫೋರ್ಟ್ ವಿಲಿಯಂನಲ್ಲಿ ಹತ್ತಿರದಲ್ಲಿದೆ.

ಬಿಹಾರ ಎಸ್‌ಐಆರ್ | ಕಾಂಗ್ರೆಸ್ 89 ಲಕ್ಷ ದೂರುಗಳನ್ನು ಚು. ಆಯೋಗಕ್ಕೆ ಸಲ್ಲಿಸಿದೆ, ಅವೆಲ್ಲವನ್ನೂ ತಿರಸ್ಕರಿಸಲಾಗಿದೆ: ಪವನ್ ಖೇರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...