Homeಮುಖಪುಟಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

- Advertisement -
- Advertisement -

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಿದ್ದಾರೆ.

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅರ್ಹ ಮತದಾರರ ಸಾಮೂಹಿಕ ಮತದಾನದ ಹಕ್ಕು ನಿರಾಕರಣೆಯ ತಕ್ಷಣದ ಮತ್ತು ಬದಲಾಯಿಸಲಾಗದ ಬೆದರಿಕೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಕಳೆದ ವರ್ಷ ಸಿದ್ಧಪಡಿಸಲಾದ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯ ಆಧಾರದ ಮೇಲೆ ಚುನಾವಣೆಗಳನ್ನು ನಡೆಸುವಂತೆ ನಿರ್ದೇಶನವನ್ನು ಕೋರಿದ್ದಾರೆ.

‘ತಾರ್ಕಿಕ ವ್ಯತ್ಯಾಸ’ ವಿಭಾಗದಲ್ಲಿ ಹೆಸರು ಹೊಂದಾಣಿಕೆಯಾಗದಿರುವುದು ಅಥವಾ ಕಾಗುಣಿತ ವ್ಯತ್ಯಾಸಗಳನ್ನು ಒಳಗೊಂಡಿರುವ ಪ್ರಕರಣಗಳನ್ನು ಪ್ರಸ್ತುತ ಎಸ್‌ಐಆರ್ ಪ್ರಕ್ರಿಯೆಯ ಸಮಯದಲ್ಲಿ ವಿಚಾರಣೆಗೆ ಕರೆಯದಂತೆ ಚುನಾವಣಾ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಮಮತಾ ಬ್ಯಾನರ್ಜಿ ಮನವಿ ಮಾಡಿದ್ದಾರೆ.

ಲಭ್ಯವಿರುವ ದಾಖಲೆಗಳ ಆಧಾರದ ಮೇಲೆ ಅಂತಹ ಎಲ್ಲಾ ಹೆಸರು ತಿದ್ದುಪಡಿಗಳನ್ನು ಸ್ವಯಂಪ್ರೇರಿತವಾಗಿ ಕೈಗೊಳ್ಳಬೇಕು. ಗುರುತಿನ ಪುರಾವೆಯಾಗಿ ಸಮರ್ಥ ಅಧಿಕಾರಿಗಳು ನೀಡುವ ಎಲ್ಲಾ ದಾಖಲೆಗಳನ್ನು ಸ್ವೀಕರಿಸಬೇಕೆಂದು ಕೋರಿಕೊಂಡಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭೆಯ ಅವಧಿಯು 2026ರ ಮೇ 7ರ ಸುಮಾರಿಗೆ ಮುಕ್ತಾಯಗೊಳ್ಳಲಿದ್ದು, ಅದರ ಬೆನ್ನಲ್ಲೇ ಚುನಾವಣಾ ದಿನಾಂಕಗಳು ಘೋಷಣೆಯಾಗಲಿವೆ ಎಂದು ಮಮತಾ ಬ್ಯಾನರ್ಜಿ ಆತಂಕ ವ್ಯಕ್ತಪಡಿಸಿದ್ದಾರೆ. ಚುನಾವಣಾ ಆಯೋಗದ (ಇಸಿಐ) ಪಾರದರ್ಶಕವಲ್ಲದ, ಅವಸರದ ಮತ್ತು ಅಸಂವಿಧಾನಿಕ ಕ್ರಮಗಳಿಂದಾಗಿ ಮತದಾರರ ಪಟ್ಟಿಯಲ್ಲಿ ಅಸಂಖ್ಯಾತ ತಪ್ಪುಗಳು ಮತ್ತು ಲೋಪದೋಷಗಳು ಉಂಟಾಗಿವೆ ಎಂದು ಅವರು ಆರೋಪಿಸಿದ್ದಾರೆ. ಒಂದು ವೇಳೆ ತಕ್ಷಣವೇ ಚುನಾವಣೆ ಘೋಷಣೆಯಾದರೆ, ಈ ದೋಷಗಳನ್ನು ಸರಿಪಡಿಸಲು ಅಥವಾ ಮತದಾರರ ಕುಂದುಕೊರತೆಗಳನ್ನು ನೀಗಿಸಲು ಸಮಯವೇ ಇರುವುದಿಲ್ಲ. ಇದು ದೊಡ್ಡ ಮಟ್ಟದಲ್ಲಿ ಮತದಾರರನ್ನು ಹಕ್ಕಿನಿಂದ ವಂಚಿತಗೊಳಿಸುವ ಹಾಗೂ ಮತದಾರರ ಪಟ್ಟಿಯನ್ನು ದೋಷಪೂರಿತವಾಗಿಯೇ ಉಳಿಸುವ ‘ಅಂತಿಮ ಅನ್ಯಾಯ’ ಎಂದು ಅರ್ಜಿಯಲ್ಲಿ ಹೇಳಿದ್ದಾರೆ.

ವಕೀಲ ಕುನಾಲ್ ಮಿಮಾನಿ ಮೂಲಕ ಸಲ್ಲಿಸಲಾದ ಅರ್ಜಿಯಲ್ಲಿ, ಪ್ರಸ್ತುತ ನಡೆಯುತ್ತಿರುವ ಎಸ್‌ಐಆರ್ ಲಕ್ಷಾಂತರ ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಕಾರಣವಾಗುತ್ತದೆ. ಇದರಿಂದಾಗಿ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳಿಗೆ ಸಮಾನ ಅವಕಾಶ ಸಿಗುವುದಿಲ್ಲ ಎಂದು ಮಮತಾ ಬ್ಯಾನರ್ಜಿ ವಾದಿಸಿದ್ದಾರೆ.

ಇಡೀ ಎಸ್‌ಐಆರ್ ಪ್ರಕ್ರಿಯೆಯು ಅಸ್ತಿತ್ವದಲ್ಲಿರುವ ಮತದಾರರನ್ನು ಮತಪಟ್ಟಿಯಿಂದ ಹೊರಹಾಕುವ ಪ್ರಯತ್ನವಾಗಿದೆ. ಮತದಾರರು ತಮ್ಮ ಪೌರತ್ವವನ್ನು ಸಾಬೀತುಪಡಿಸಲು 2002ರ ವರ್ಷವನ್ನು ಒಂದು ಅನಿಯಂತ್ರಿತ ಗಡುವು ಎಂದು ಪರಿಗಣಿಸಿ, ಅದಕ್ಕೆ ಪೂರಕವಾಗಿ “ದಾಖಲೆಗಳನ್ನು” ಒದಗಿಸುವಂತೆ ಒತ್ತಾಯಿಸಲಾಗುತ್ತಿದೆ. ಈ ಕ್ರಮವು ಭಾರತೀಯ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಮಾತ್ರವಲ್ಲದೆ, 1950 ಮತ್ತು 1951ರ ಜನಪ್ರತಿನಿಧಿ ಕಾಯ್ದೆಗಳನ್ನೂ ಉಲ್ಲಂಘಿಸುತ್ತದೆ ಎಂದು ಅವರು ವಾದಿಸಿದ್ದಾರೆ. ಈ ಪ್ರಕ್ರಿಯೆ ಪರೋಕ್ಷವಾಗಿ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಮಾದರಿಯಲ್ಲಿದ್ದು, ಬಡವರು ಮತ್ತು ವಲಸೆ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಮತಪಟ್ಟಿಯಿಂದ ಹೊರಗಿಡುವ ಉದ್ದೇಶ ಹೊಂದಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಕೇವಲ 90 ದಿನಗಳಿಗಿಂತ ಕಡಿಮೆ ಅವಧಿಯಲ್ಲಿ ಇಡೀ ರಾಜ್ಯದ ಮತದಾರರ ಪಟ್ಟಿಯನ್ನು ಪರಿಷ್ಕರಿಸುತ್ತಿರುವುದು ಅತ್ಯಂತ ಅವಸರದ ಕ್ರಮವಾಗಿದೆ. 2026ರ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಇಷ್ಟು ದೊಡ್ಡ ಕಾರ್ಯವನ್ನು ಕೈಗೆತ್ತಿಕೊಂಡಿರುವುದು ಅನುಮಾನಾಸ್ಪದ ಎಂದು ಮಮತಾ ಬ್ಯಾನರ್ಜಿ ವಾದಿಸಿದ್ದಾರೆ.

ಈ ಅವಸರದ ಕ್ರಮದಿಂದಾಗಿ ಉದ್ಯೋಗಕ್ಕಾಗಿ ಬೇರೆ ರಾಜ್ಯಗಳಿಗೆ ತೆರಳುವ ಬಡ ವಲಸೆ ಕಾರ್ಮಿಕರು ಮತದಾನದ ಹಕ್ಕಿನಿಂದ ವಂಚಿತರಾಗುವ ಅಪಾಯವಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಮತದಾರರ ವಿವರಗಳನ್ನು ಡಿಜಿಟಲೀಕರಣಗೊಳಿಸಲು ಬಳಸುತ್ತಿರುವ ಪರೀಕ್ಷಿಸದ ಸಾಫ್ಟ್‌ವೇರ್ ಮತ್ತು ಅಲ್ಗಾರಿದಮ್‌ಗಳಿಂದಾಗಿ ಅಸಂಖ್ಯಾತ ತಪ್ಪುಗಳು ನುಸುಳಿವೆ. ಹೆಸರು, ವಯಸ್ಸು ಮತ್ತು ಸಂಬಂಧಗಳ ವಿವರಗಳಲ್ಲಿ ತಪ್ಪುಗಳಾಗಿದ್ದು, ಇದರಿಂದ ಮತದಾರರು ಅನಗತ್ಯವಾಗಿ ವಿಚಾರಣೆಗಳನ್ನು ಎದುರಿಸುವಂತಾಗಿದೆ ಎಂದಿದ್ದಾರೆ. ಚುನಾವಣಾ ಆಯೋಗವು ಅಧಿಕೃತ ಲಿಖಿತ ಮಾರ್ಗಸೂಚಿಗಳ ಬದಲಿಗೆ ‘ವಾಟ್ಸಾಪ್’ ಸಂದೇಶಗಳ ಮೂಲಕ ಅನೌಪಚಾರಿಕ ಸೂಚನೆಗಳನ್ನು ನೀಡುತ್ತಿರುವುದು ಪಾರದರ್ಶಕತೆಗೆ ಧಕ್ಕೆ ತರುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಸೀಸನಲ್ ಕಾರ್ಮಿಕರಾಗಿ ನಿಯಮಿತವಾಗಿ ರಾಜ್ಯದಿಂದ ಹೊರಗೆ ಪ್ರಯಾಣಿಸುವ ಬಡ ವಲಸೆಗಾರರನ್ನು ಈ ಪ್ರಕ್ರಿಯೆಯು ಗುರಿಯಾಗಿಸುತ್ತದೆ ಎಂದು ಮಮತಾ ಬ್ಯಾನರ್ಜಿ ಆತಂಕ ವ್ಯಕ್ತಪಡಿಸಿದ್ದಾರೆ. ಈ ಪರಿಷ್ಕರಣೆ ಪ್ರಕ್ರಿಯೆಯನ್ನು ಹೀಗೆಯೇ ಮುಂದುವರಿಸಲು ಬಿಟ್ಟರೆ, ಅನಿವಾರ್ಯವಾಗಿ ಲಕ್ಷಾಂತರ ಮತದಾರರು ಮತಪಟ್ಟಿಯಿಂದ ಹೊರಬೀಳುತ್ತಾರೆ ಎಂದು ಅವರು ವಾದಿಸಿದ್ದಾರೆ. ವಿಶೇಷವಾಗಿ ಜೀವನೋಪಾಯಕ್ಕಾಗಿ ಬೇರೆಡೆಗೆ ವಲಸೆ ಹೋಗುವ ಬಡವರು ಪೌರತ್ವ ಸಾಬೀತುಪಡಿಸಲು ದಾಖಲೆಗಳನ್ನು ಒದಗಿಸುವಲ್ಲಿ ವಿಫಲರಾಗಬಹುದು, ಇದು ಅವರ ಪ್ರಜಾಪ್ರಭುತ್ವದ ಹಕ್ಕನ್ನು ಕಸಿದುಕೊಂಡಂತೆ ಆಗುತ್ತದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಇಸಿಐ ಇಡೀ ಎಸ್‌ಐಆರ್ ಪ್ರಕ್ರಿಯೆಯನ್ನು ಮತದಾರರಿಗೆ ಯುದ್ಧಭೂಮಿಯನ್ನಾಗಿ ಪರಿವರ್ತಿಸಿದೆ. ದಾಖಲೆಗಳ ಅನಿಯಂತ್ರಿತ ನಿರಾಕರಣೆ, ತರ್ಕಬದ್ಧವಲ್ಲದ ವಿಚಾರಣೆಗಳು, ಅಸಮಂಜಸ ಸೂಚನೆಗಳು, ಅಪಾರದರ್ಶಕ ನಿಯಮಗಳು, ಸ್ಥಳಾಂತರದ ನಿಲುವುಗಳು ಮತ್ತು ಇಸಿಐ ನಿಯೋಜಿಸದ ಪರೀಕ್ಷಿಸದ ಅಲ್ಗಾರಿದಮ್ ಮತ್ತು ಸಾಫ್ಟ್‌ವೇರ್‌ನಿಂದ ಉಂಟಾದ ಸಂಪೂರ್ಣ ಅವ್ಯವಸ್ಥೆಯಿಂದಾಗಿ ಮತದಾರರು ಪರದಾಡುತ್ತಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಎಸ್‌ಐಆರ್ ಅನ್ನು ಪ್ರಶ್ನಿಸುವ ಅರ್ಜಿಗಳಲ್ಲಿ ಸುಪ್ರೀಂ ಕೋರ್ಟ್ ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದರೂ, ಚುನಾವಣಾ ಅಧಿಕಾರಿಗಳಿಗೆ ವಾಟ್ಸಾಪ್ ಸಂದೇಶಗಳ ಮೂಲಕ ಸೂಚನೆಗಳನ್ನು ನೀಡಲಾಗುತ್ತಿದೆ. ಇದಲ್ಲದೆ, ‘ತಾರ್ಕಿಕ ವ್ಯತ್ಯಾಸ’ ವರ್ಗದಲ್ಲಿ ಸೇರಿಸಲಾದ ಜನರ ಪಟ್ಟಿಯನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಲಾಗಿಲ್ಲ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

“ಇದರ ಜೊತೆಗೆ, ಮಾಲ್ಡಾ ಸೇರಿದಂತೆ ಕೆಲವು ಜಿಲ್ಲೆಗಳಿಂದ ಆತಂಕಕಾರಿ ಸುದ್ದಿ ಬಂದಿದ್ದು, 22.01.2026ರ ಬೆಳಿಗ್ಗೆ ‘ಇತರ’ (others) ವರ್ಗದಲ್ಲಿದ್ದ 20,000 ಹೊಸ ಪ್ರಕರಣಗಳನ್ನು ಏಕಾಏಕಿ ‘ತಾರ್ಕಿಕ ವ್ಯತ್ಯಾಸ’ (Logical Discrepancy – LD) ವರ್ಗಕ್ಕೆ ವರ್ಗಾಯಿಸಲಾಗಿದೆ. ನ್ಯಾಯಾಲಯ 19.01.2026 ರಂದು ಆದೇಶ ನೀಡಿದ ನಂತರವೂ, ಎಲ್‌ಡಿ ಪ್ರಕರಣಗಳ ಸಂಖ್ಯೆಯನ್ನು ಹೆಚ್ಚಿಸಿ ಮತದಾರರ ಪಟ್ಟಿಯಲ್ಲಿ ಗೊಂದಲ ಮೂಡಿಸುವ ದುರುದ್ದೇಶಪೂರಿತ ಯೋಜನೆಯನ್ನು ಚುನಾವಣಾ ಆಯೋಗ ಹೊಂದಿದೆ ಎಂಬುದನ್ನು ಇದು ತೋರಿಸುತ್ತದೆ. ಈ ಕ್ರಮವು ಅತ್ಯಂತ ಕಾನೂನುಬಾಹಿರವಾಗಿದ್ದು, ನ್ಯಾಯಾಲಯದ ಆದೇಶವನ್ನು ಸ್ಪಷ್ಟವಾಗಿ ಉಲ್ಲಂಘಿಸುವ ಮತ್ತು ಕಾನೂನಿಗೆ ಬೆಲೆ ನೀಡದ ವರ್ತನೆಯಾಗಿದೆ” ಎಂದು ಮಮತಾ ಬ್ಯಾನರ್ಜಿ ಅರ್ಜಿಯಲ್ಲಿ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....