Homeಮುಖಪುಟಬಂಗಾಳ ಚುನಾವಣಾ ಪ್ರಚಾರದಲ್ಲಿ ಮಮತಾ ಬ್ಯಾನರ್ಜಿ ಭಾಗವಹಿಸುವುದಿಲ್ಲ: ಡೆರೆಕ್ ಒ'ಬ್ರಿಯೆನ್

ಬಂಗಾಳ ಚುನಾವಣಾ ಪ್ರಚಾರದಲ್ಲಿ ಮಮತಾ ಬ್ಯಾನರ್ಜಿ ಭಾಗವಹಿಸುವುದಿಲ್ಲ: ಡೆರೆಕ್ ಒ’ಬ್ರಿಯೆನ್

ಆದರೆ ಬಿಜೆಪಿ ಪಕ್ಷ ಮಾತ್ರ ಹೆಚ್ಚುತ್ತಿರುವ ಕೊರೊನಾ ನಡುವೆಯೂ ಬಂಗಾಳದಲ್ಲಿ ಬೃಹತ್ ರ್ಯಾಲಿಗಳನ್ನು ಆಯೋಜಿಸುವತ್ತ ಗಮನ ಹರಿಸಿದ್ದು ತೀವ್ರ ಟೀಕೆಗೆ ಗುರಿಯಾಗಿದೆ.

- Advertisement -
- Advertisement -

ದೇಶಾದ್ಯಂತ ಕೋವಿಡ್ ಎರಡನೇ ಅಲೆ ಭುಗಿಲೆದ್ದಿದೆ. ಪಶ್ಚಿಮ ಬಂಗಾಳದಲ್ಲಿಯೂ ಪ್ರಕರಣಗಳಲ್ಲಿ ದಿಢೀರ್ ಏರಿಕೆಯಾದ ಹಿನ್ನೆಲೆಯಲ್ಲಿ ಇನ್ನು ಮುಂದೆ ಕೋಲ್ಕತ್ತಾದಲ್ಲಿ ನಡೆಯುವ ಯಾವುದೇ ಚುನಾವಣಾ ಪ್ರಚಾರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಭಾಗವಹಿಸುವುದಿಲ್ಲ ಎಂದು ಟಿಎಂಸಿ ಸಂಸದ ಡೆರೆಕ್ ಒ’ಬ್ರಿಯೆನ್ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಮಮತಾ ಬ್ಯಾನರ್ಜಿ ಇನ್ನು ಮುಂದೆ ಕೋಲ್ಕತ್ತಾದಲ್ಲಿ ಪ್ರಚಾರ ಮಾಡುವುದಿಲ್ಲ. ನಗರದಲ್ಲಿ ಏಪ್ರಿಲ್ 26 ರಂದು ಪ್ರಚಾರದ ಕೊನೆಯ ದಿನದಂದು ಕೇವಲ ಒಂದು ‘ಸಾಂಕೇತಿಕ’ ಸಭೆ ನಡೆಸಲಿದ್ದಾರೆ. ಟಿಎಂಸಿಯು ಎಲ್ಲಾ ಜಿಲ್ಲೆಗಳಲ್ಲಿ ತನ್ನ ಎಲ್ಲಾ ಚುನಾವಣಾ ರ್ಯಾಲಿಗಳಿಗೆ ಸಮಯವನ್ನು ಕಡಿತಗೊಳಿಸಿ, ಕೇವಲ 30 ನಿಮಿಷಗಳಿಗೆ ನಿರ್ಬಂಧಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ COVID-19 ಪ್ರಕರಣಗಳಲ್ಲಿ ಹಠಾತ್ ಏರಿಕೆ ಕಂಡುಬಂದಿದೆ. ಭಾನುವಾರ ರಾಜ್ಯದಲ್ಲಿ ಅತಿ ಹೆಚ್ಚು 8,419 ಹೊಸ ಸೋಂಕುಗಳು ದಾಖಲಾಗಿದ್ದರಿಂದ ಒಟ್ಟು ಪ್ರಕರಣಗಳ ಸಂಖ್ಯೆ 6,59,927 ಕ್ಕೆ ಏರಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.

ಬಂಗಾಳದ ಸಿಪಿಎಂ ಪಕ್ಷವು ಬೃಹತ್ ಚುನಾವಣಾ ರ್ಯಾಲಿಗಳನ್ನು ನಡೆಸುವುದಿಲ್ಲ ಎಂದು ತೀರ್ಮಾನಿಸಿದೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಹ ಬಂಗಾಳದ ತನ್ನ ಎಲ್ಲಾ ಚುನಾವಣಾ ರ್ಯಾಲಿಗಳನ್ನು ರದ್ದುಗೊಳಿಸಿದ್ದಾರೆ. ಆ ಪಟ್ಟಿಗೆ ಇಂದು ಮಮತಾ ಬ್ಯಾನರ್ಜಿ ಕೂಡ ಸೇರಿದ್ದಾರೆ.

ಆದರೆ ಬಿಜೆಪಿ ಪಕ್ಷ ಮಾತ್ರ ಹೆಚ್ಚುತ್ತಿರುವ ಕೊರೊನಾ ನಡುವೆಯೂ ಬಂಗಾಳದಲ್ಲಿ ಬೃಹತ್ ರ್ಯಾಲಿಗಳನ್ನು ಆಯೋಜಿಸುವತ್ತ ಗಮನ ಹರಿಸಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಬಂಗಾಳದಲ್ಲಿ ಪ್ರಚಾರ ಮಾಡಿದ್ದು, ಅಸನ್ಸೋಲ್‌ನಲ್ಲಿ ನಡೆದ ಬೃಹತ್ ರ‍್ಯಾಲಿಯಲ್ಲಿ ಹೆಚ್ಚಿನ ಜನಸಮೂಹವನ್ನು ನೋಡಿ, ನಾನು ಇಂತಹ ರ‍್ಯಾಲಿ ಎಂದೂ ನೋಡಿರಲಿಲ್ಲ ಎಂದು ಉದ್ಘರಿಸಿದ್ದಾರೆ. “ಲೋಕಸಭಾ ಚುನಾವಣೆಯ ಸಮಯದಲ್ಲಿ ನಾನು ಎರಡು ಬಾರಿ ಇಲ್ಲಿಗೆ ಬಂದಿದ್ದೇನೆ. ಕೊನೆಯ ಬಾರಿ ನಾನು ಬಾಬುಲ್ಜಿಗೆ ಮತ ಕೇಳಲು ಬಂದಿದ್ದೆ. ಆಗ ಜನಸಮೂಹವು ಇದರಲ್ಲಿ ಕಾಲು ಭಾಗ ಮಾತ್ರವಿತ್ತು” ಎಂದು ಅವರು ಹೇಳಿದ್ದಾರೆ.

ನರೇಂದ್ರ ಮೋದಿಯವರ ಈ ನಡೆಗೆ ಪ್ರತಿಪಕ್ಷಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿವೆ. ಕೊರೊನಾದಿಂದಾಗಿ ಜನ ಸಾಯುತ್ತಿದ್ದಾರೆ. ಆಮ್ಲಜನಕ, ರೆಮ್‌ಡಿಸಿವಿರ್, ಲಸಿಕೆ ಕೊರತೆಯಿಂದ ರಾಜ್ಯಗಳು ಕಂಗಾಲಾಗಿದ್ದರೆ ಮೋದಿ ಮಾತ್ರ ಚುನಾವಣಾ ರ್ಯಾಲಿಗಳಲ್ಲಿ ಸಮಯ ಕಳೆಯುತ್ತಿದ್ದಾರೆ ಎಂಬ ಟೀಕೆ ವ್ಯಕ್ತವಾಗಿದೆ.


ಇದನ್ನೂ ಓದಿ: ರ‍್ಯಾಲಿಯಲ್ಲಿ ಬೃಹತ್ ಜನಸ್ತೋಮ ಕಂಡು ಉಲ್ಲಸಿತರಾದ ಪ್ರಧಾನಿ: ಮೋದಿಯನ್ನು ರೋಮ್ ದೊರೆ ನೀರೊಗೆ ಹೋಲಿಸಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...