Homeಮುಖಪುಟಬಂಗಾಳವನ್ನು’ಗಲಭೆ ಪೀಡಿತ ಗುಜರಾತ್’ ಮಾಡಲು ಎಂದಿಗೂ ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

ಬಂಗಾಳವನ್ನು’ಗಲಭೆ ಪೀಡಿತ ಗುಜರಾತ್’ ಮಾಡಲು ಎಂದಿಗೂ ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

’ಪಶ್ಚಿಮ ಬಂಗಾಳದಲ್ಲಿ ಹೊರಗಿನವರಿಗೆ ಸ್ಥಾನವಿಲ್ಲ. ಚುನಾವಣೆಯ ಸಮಯದಲ್ಲಿ ಮಾತ್ರ ರಾಜ್ಯಕ್ಕೆ ಬಂದು ಶಾಂತಿಯನ್ನು ಭಂಗಗೊಳಿಸಲು ಪ್ರಯತ್ನಿಸುವವರಿಗೆ ಸ್ವಾಗತವಿಲ್ಲ’

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಪ್ರಚಾರ ಬಿರುಸಿನಿಂದ ಸಾಗಿದ್ದು, ಬಿಜೆಪಿ-ತೃಣಮೂಲ ಕಾಂಗ್ರೆಸ್ ಆರೋಪ -ಪ್ರತ್ಯಾರೋಪಗಳಲ್ಲಿ ಮುಳುಗಿವೆ. ಇಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಂಗಾಳವನ್ನು “ಗಲಭೆ ಪೀಡಿತ ಗುಜರಾತ್” ಆಗಿ ಪರಿವರ್ತಿಸಲು ಎಂದಿಗೂ ಅನುಮತಿಸುವುದಿಲ್ಲ’ ಎಂದಿದ್ದಾರೆ.

ಬಿಜೆಪಿ ಹೊರಗಿನವರ ಪಕ್ಷವಾಗಿದ್ದು, ಅದಕ್ಕೆ ರಾಜ್ಯದಲ್ಲಿ ಸ್ಥಾನವಿಲ್ಲ ಎಂದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಂಗಾಳವನ್ನು “ಗಲಭೆ ಪೀಡಿತ ಗುಜರಾತ್” ಆಗಿ ಪರಿವರ್ತಿಸಲು ಎಂದಿಗೂ ಅನುಮತಿ ನೀಡುವುದಿಲ್ಲ ಎಂದು ಹೇಳಿದ್ದಾರೆ.

ದೇಶದ ಗಡಿಯಲ್ಲಿ ಪರಿಸ್ಥಿತಿ ಉತ್ತಮವಾಗಿಲ್ಲ. ಆದರೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚುನಾವಣೆಯಲ್ಲಿ ಏಕೆ ನಿರತರಾಗಿದ್ದಾರೆ ಎಂದು ಆಶ್ಚರ್ಯ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ತಮ್ಮ ವೃತ್ತಿಜೀವನದಲ್ಲಿ ಇಂತಹ “ಗೃಹ ಸಚಿವರನ್ನು” ನೋಡಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಬಿಜೆಪಿ ನನ್ನ ಜೈಲಿಗೆ ಹಾಕಿದರೂ, ಅಲ್ಲಿಂದಲೇ ಪಕ್ಷವನ್ನು ಗೆಲ್ಲಿಸುವೆ-ಮಮತಾ ಬ್ಯಾನರ್ಜಿ

“ಪಶ್ಚಿಮ ಬಂಗಾಳದಲ್ಲಿ ಹೊರಗಿನವರಿಗೆ ಸ್ಥಾನವಿಲ್ಲ. ಚುನಾವಣೆಯ ಸಮಯದಲ್ಲಿ ಮಾತ್ರ ರಾಜ್ಯಕ್ಕೆ ಬಂದು ರಾಜ್ಯದ ಶಾಂತಿಯನ್ನು ಭಂಗಗೊಳಿಸಲು ಪ್ರಯತ್ನಿಸುವವರಿಗೆ ರಾಜ್ಯದಲ್ಲಿ ಸ್ವಾಗತವಿಲ್ಲ” ಎಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಹೇಳಿದರು.

ಬಿಜೆಪಿ ಇತ್ತೀಚೆಗೆ ಪಶ್ಚಿಮ ಬಂಗಾಳ ಚುನಾವಣೆ ಹಿನ್ನೆಲೆ, ರಾಜ್ಯವನ್ನು ಐದು ಸಾಂಸ್ಥಿಕ ವಲಯಗಳಾಗಿ ವಿಂಗಡಿಸಿ ಕೇಂದ್ರ ನಾಯಕರಿಗೆ ವಲಯಗಳ ಉಸ್ತುವಾರಿ ವಹಿಸಿದೆ. “ಬಿಜೆಪಿ ಅವರು ಪಶ್ಚಿಮ ಬಂಗಾಳವನ್ನು ಗುಜರಾತ್ ಆಗಿ ಪರಿವರ್ತಿಸುವುದಾಗಿ ಹೇಳುತ್ತಿದ್ದಾರೆ. ನಮ್ಮ ಬಂಗಾಳವನ್ನು ಗುಜರಾತ್ ನಂತಹ ಗಲಭೆ ಪೀಡಿತ ಸ್ಥಳವನ್ನಾಗಿ ಮಾಡಲು ಅವರು ಏಕೆ ಬಯಸುತ್ತಾರೆ..? ನಮಗೆ ಗಲಭೆಗಳು ಬೇಡ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ನಿನ್ನೆ ಕೂಡ ಬಿಜೆಪಿ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದ್ದ ಮಮತಾ ಬ್ಯಾನರ್ಜಿ, ಬಿಜೆಪಿ “ಸುಳ್ಳಿನ ಕಸ” ಮತ್ತು “ರಾಷ್ಟ್ರದ ಅತಿದೊಡ್ಡ ಶಾಪ” ಎಂದು ವಾಗ್ದಾಳಿ ನಡೆಸಿದ್ದರು. ಬಿಜೆಪಿ ನನ್ನನ್ನು ಬಂಧಿಸಲು ಧೈರ್ಯಮಾಡಿದರು ಕೂಡ, ಜೈಲಿನಿಂದಲೇ ಮುಂದಿನ ಚುನಾವಣೆಯನ್ನು ಎದುರಿಸಿ, ಟಿಎಂಸಿ ಪಕ್ಷವನ್ನು ಗೆಲ್ಲಿಸುತ್ತೇನೆ‘ ಎಂದು ಸವಾಲು ಹಾಕಿದ್ದರು.

ಪಶ್ಚಿಮ ಬಂಗಾಳ ಚುನಾವಣೆ ಮೇಲೆ ಕಣ್ಣೀಟ್ಟಿರುವ ಬಿಜೆಪಿ ಸರ್ಕಾರ ತೃಣಮೂಲ ಕಾಂಗ್ರೆಸ್ ಆಡಳಿತವನ್ನು ಗೂಂಡಾ ರಾಜ್‌ಗೆ ಹೋಲಿಸಿದೆ. ರಾಜ್ಯದಲ್ಲಿರುವ ಪೊಲೀಸ್ ಪಡೆ ಗೂಂಡಾ ರಾಜ್ ಸರ್ಕಾರದ ವಿರುದ್ದ ಏನೂ ಮಾಡುವುದಿಲ್ಲ ಎಂದಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಪ್ರತಿ ರ್‍ಯಾಲಿಯಲ್ಲೂ ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ.


ಇದನ್ನೂ ಓದಿ: ಪಶ್ಚಿಮ ಬಂಗಾಳ: ಪೊಲೀಸರಿಂದ ಬೂಟು ನೆಕ್ಕಿಸುತ್ತೇವೆ ಎಂದ ಬಿಜೆಪಿ ಮುಖಂಡ ರಾಜು ಬ್ಯಾನರ್ಜಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...