Homeಮುಖಪುಟಬಂಗಾಳವನ್ನು’ಗಲಭೆ ಪೀಡಿತ ಗುಜರಾತ್’ ಮಾಡಲು ಎಂದಿಗೂ ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

ಬಂಗಾಳವನ್ನು’ಗಲಭೆ ಪೀಡಿತ ಗುಜರಾತ್’ ಮಾಡಲು ಎಂದಿಗೂ ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

’ಪಶ್ಚಿಮ ಬಂಗಾಳದಲ್ಲಿ ಹೊರಗಿನವರಿಗೆ ಸ್ಥಾನವಿಲ್ಲ. ಚುನಾವಣೆಯ ಸಮಯದಲ್ಲಿ ಮಾತ್ರ ರಾಜ್ಯಕ್ಕೆ ಬಂದು ಶಾಂತಿಯನ್ನು ಭಂಗಗೊಳಿಸಲು ಪ್ರಯತ್ನಿಸುವವರಿಗೆ ಸ್ವಾಗತವಿಲ್ಲ’

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಪ್ರಚಾರ ಬಿರುಸಿನಿಂದ ಸಾಗಿದ್ದು, ಬಿಜೆಪಿ-ತೃಣಮೂಲ ಕಾಂಗ್ರೆಸ್ ಆರೋಪ -ಪ್ರತ್ಯಾರೋಪಗಳಲ್ಲಿ ಮುಳುಗಿವೆ. ಇಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಂಗಾಳವನ್ನು “ಗಲಭೆ ಪೀಡಿತ ಗುಜರಾತ್” ಆಗಿ ಪರಿವರ್ತಿಸಲು ಎಂದಿಗೂ ಅನುಮತಿಸುವುದಿಲ್ಲ’ ಎಂದಿದ್ದಾರೆ.

ಬಿಜೆಪಿ ಹೊರಗಿನವರ ಪಕ್ಷವಾಗಿದ್ದು, ಅದಕ್ಕೆ ರಾಜ್ಯದಲ್ಲಿ ಸ್ಥಾನವಿಲ್ಲ ಎಂದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಂಗಾಳವನ್ನು “ಗಲಭೆ ಪೀಡಿತ ಗುಜರಾತ್” ಆಗಿ ಪರಿವರ್ತಿಸಲು ಎಂದಿಗೂ ಅನುಮತಿ ನೀಡುವುದಿಲ್ಲ ಎಂದು ಹೇಳಿದ್ದಾರೆ.

ದೇಶದ ಗಡಿಯಲ್ಲಿ ಪರಿಸ್ಥಿತಿ ಉತ್ತಮವಾಗಿಲ್ಲ. ಆದರೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚುನಾವಣೆಯಲ್ಲಿ ಏಕೆ ನಿರತರಾಗಿದ್ದಾರೆ ಎಂದು ಆಶ್ಚರ್ಯ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ತಮ್ಮ ವೃತ್ತಿಜೀವನದಲ್ಲಿ ಇಂತಹ “ಗೃಹ ಸಚಿವರನ್ನು” ನೋಡಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಬಿಜೆಪಿ ನನ್ನ ಜೈಲಿಗೆ ಹಾಕಿದರೂ, ಅಲ್ಲಿಂದಲೇ ಪಕ್ಷವನ್ನು ಗೆಲ್ಲಿಸುವೆ-ಮಮತಾ ಬ್ಯಾನರ್ಜಿ

“ಪಶ್ಚಿಮ ಬಂಗಾಳದಲ್ಲಿ ಹೊರಗಿನವರಿಗೆ ಸ್ಥಾನವಿಲ್ಲ. ಚುನಾವಣೆಯ ಸಮಯದಲ್ಲಿ ಮಾತ್ರ ರಾಜ್ಯಕ್ಕೆ ಬಂದು ರಾಜ್ಯದ ಶಾಂತಿಯನ್ನು ಭಂಗಗೊಳಿಸಲು ಪ್ರಯತ್ನಿಸುವವರಿಗೆ ರಾಜ್ಯದಲ್ಲಿ ಸ್ವಾಗತವಿಲ್ಲ” ಎಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಹೇಳಿದರು.

ಬಿಜೆಪಿ ಇತ್ತೀಚೆಗೆ ಪಶ್ಚಿಮ ಬಂಗಾಳ ಚುನಾವಣೆ ಹಿನ್ನೆಲೆ, ರಾಜ್ಯವನ್ನು ಐದು ಸಾಂಸ್ಥಿಕ ವಲಯಗಳಾಗಿ ವಿಂಗಡಿಸಿ ಕೇಂದ್ರ ನಾಯಕರಿಗೆ ವಲಯಗಳ ಉಸ್ತುವಾರಿ ವಹಿಸಿದೆ. “ಬಿಜೆಪಿ ಅವರು ಪಶ್ಚಿಮ ಬಂಗಾಳವನ್ನು ಗುಜರಾತ್ ಆಗಿ ಪರಿವರ್ತಿಸುವುದಾಗಿ ಹೇಳುತ್ತಿದ್ದಾರೆ. ನಮ್ಮ ಬಂಗಾಳವನ್ನು ಗುಜರಾತ್ ನಂತಹ ಗಲಭೆ ಪೀಡಿತ ಸ್ಥಳವನ್ನಾಗಿ ಮಾಡಲು ಅವರು ಏಕೆ ಬಯಸುತ್ತಾರೆ..? ನಮಗೆ ಗಲಭೆಗಳು ಬೇಡ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ನಿನ್ನೆ ಕೂಡ ಬಿಜೆಪಿ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದ್ದ ಮಮತಾ ಬ್ಯಾನರ್ಜಿ, ಬಿಜೆಪಿ “ಸುಳ್ಳಿನ ಕಸ” ಮತ್ತು “ರಾಷ್ಟ್ರದ ಅತಿದೊಡ್ಡ ಶಾಪ” ಎಂದು ವಾಗ್ದಾಳಿ ನಡೆಸಿದ್ದರು. ಬಿಜೆಪಿ ನನ್ನನ್ನು ಬಂಧಿಸಲು ಧೈರ್ಯಮಾಡಿದರು ಕೂಡ, ಜೈಲಿನಿಂದಲೇ ಮುಂದಿನ ಚುನಾವಣೆಯನ್ನು ಎದುರಿಸಿ, ಟಿಎಂಸಿ ಪಕ್ಷವನ್ನು ಗೆಲ್ಲಿಸುತ್ತೇನೆ‘ ಎಂದು ಸವಾಲು ಹಾಕಿದ್ದರು.

ಪಶ್ಚಿಮ ಬಂಗಾಳ ಚುನಾವಣೆ ಮೇಲೆ ಕಣ್ಣೀಟ್ಟಿರುವ ಬಿಜೆಪಿ ಸರ್ಕಾರ ತೃಣಮೂಲ ಕಾಂಗ್ರೆಸ್ ಆಡಳಿತವನ್ನು ಗೂಂಡಾ ರಾಜ್‌ಗೆ ಹೋಲಿಸಿದೆ. ರಾಜ್ಯದಲ್ಲಿರುವ ಪೊಲೀಸ್ ಪಡೆ ಗೂಂಡಾ ರಾಜ್ ಸರ್ಕಾರದ ವಿರುದ್ದ ಏನೂ ಮಾಡುವುದಿಲ್ಲ ಎಂದಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಪ್ರತಿ ರ್‍ಯಾಲಿಯಲ್ಲೂ ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ.


ಇದನ್ನೂ ಓದಿ: ಪಶ್ಚಿಮ ಬಂಗಾಳ: ಪೊಲೀಸರಿಂದ ಬೂಟು ನೆಕ್ಕಿಸುತ್ತೇವೆ ಎಂದ ಬಿಜೆಪಿ ಮುಖಂಡ ರಾಜು ಬ್ಯಾನರ್ಜಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...