Homeಮುಖಪುಟಸುಭಾಷ್ ಚಂದ್ರ ಬೋಸ್ ಸಾವಿಗೆ ಸಂಬಂಧಿಸಿದ ಕಡತಗಳನ್ನು ಬಹಿರಂಗಪಡಿಸಲು ಮಮತಾ ಬ್ಯಾನರ್ಜಿ ಆಗ್ರಹ

ಸುಭಾಷ್ ಚಂದ್ರ ಬೋಸ್ ಸಾವಿಗೆ ಸಂಬಂಧಿಸಿದ ಕಡತಗಳನ್ನು ಬಹಿರಂಗಪಡಿಸಲು ಮಮತಾ ಬ್ಯಾನರ್ಜಿ ಆಗ್ರಹ

- Advertisement -
- Advertisement -

ಒಕ್ಕೂಟ ಸರ್ಕಾರ ಏಕೆ ನೇತಾಜಿ ಸುಭಾಷ್ ಚಂದ್ರ ಬೋಸ್‌ ಅವರ ಸಾವಿಗೆ ಸಂಬಂಧಿಸಿದ ಕಡತಗಳನ್ನು ಬಹಿರಂಗಪಡಿಸಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ (ಜ.23) ಪ್ರಶ್ನಿಸಿದ್ದಾರೆ.

ಜಪಾನ್‌ನ ರೆಂಕೋಜಿ ದೇವಸ್ಥಾನದಲ್ಲಿ ಸಂರಕ್ಷಿಸಲ್ಪಟ್ಟಿರುವ ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಚಿತಾಭಸ್ಮವನ್ನು ಡಿಎನ್‌ಎ ಪರೀಕ್ಷೆಗೆ ಕಳುಹಿಸಬೇಕೆಂದು ತೃಣಮೂಲ ಕಾಂಗ್ರೆಸ್ ಪಕ್ಷವು ಒತ್ತಾಯಿಸಿದೆ.

ನೇತಾಜಿ ಅವರ 125 ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ನಡೆದ ಸಮಾರಂಭದಲ್ಲಿ ಮಾತನಾಡಿರುವ ಅವರು, ಒಕ್ಕೂಟ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಸರ್ಕಾರ ನೇತಾಜಿ ಕಣ್ಮರೆಯ ಹಿಂದಿನ ರಹಸ್ಯವನ್ನು ಬಹಿರಂಗಪಡಿಸುವ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನೇತಾಜಿ ಜನ್ಮದಿನ: ಹೀಗಿದ್ದರು ಸ್ವಾತಂತ್ರ್ಯ ಸೇನಾನಿ ಸುಭಾಷ್ ಚಂದ್ರ ಬೋಸ್

“ಪ್ರತಿಮೆ ಸ್ಥಾಪಿಸುವ ಮೂಲಕ ನೇತಾಜಿ ಅವರ ಮೇಲಿನ ಪ್ರೀತಿಯನ್ನು ನೀವು ಘೋಷಿಸಲು ಸಾಧ್ಯವಿಲ್ಲ, ಅವರ ಕಣ್ಮರೆ ಹಿಂದಿನ ರಹಸ್ಯವನ್ನು ಅನಾವರಣಗೊಳಿಸಲು ನೀವು ಏನು ಮಾಡಿದ್ದೀರಿ..? ಕೇಂದ್ರದಲ್ಲಿರುವ ಈ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಲ್ಲಾ ರಹಸ್ಯಗಳನ್ನು ಬಯಲಿಗೆಳೆಯುವುದಾಗಿ ಭರವಸೆ ನೀಡಿತ್ತು, ಆದರೆ ಅದು ವಿಫಲವಾಗಿದೆ” ಎಂದು ಸಿಎಂ ಮಮತಾ ಬ್ಯಾನರ್ಜಿ ಕಿಡಿ ಕಾರಿದ್ದಾರೆ.

ನೇತಾಜಿ ಸುಭಾಷ್ ಚಂದ್ರ ಬೋಸ್ ಸಾವಿನ ವಿವಾದವು ಬಂಗಾಳದಲ್ಲಿ ಭಾರೀ ಭಾವನಾತ್ಮಕ ವಿಷಯವಾಗಿದೆ. ಅವರು 1945 ರಲ್ಲಿ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿಲ್ಲ ಎಂದು ಹಲವರು ನಂಬುತ್ತಾರೆ.

2017 ರಲ್ಲಿ ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರವಾಗಿ, ಸುಭಾಸ್ ಚಂದ್ರ ಬೋಸ್ ಅವರು ಆಗಸ್ಟ್ 18, 1945 ರಂದು ತೈಪೆಯಲ್ಲಿ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಒಕ್ಕೂಟ ಸರ್ಕಾರ ದೃಢಪಡಿಸಿತು.

ನೇತಾಜಿಗೆ ಸಂಬಂಧಿಸಿದ ಎಲ್ಲ ಕಡತಗಳನ್ನು ಬಹಿರಂಗಪಡಿಸಿರುವುದಾಗಿ ಒಕ್ಕೂಟ ಸರ್ಕಾರ ಹೇಳಿಕೊಂಡಿದೆ. ಏಪ್ರಿಲ್ 2016 ರಲ್ಲಿ, ಕೇಂದ್ರವು 25 ಡಿಕ್ಲಾಸಿಫೈಡ್ ಫೈಲ್‌ಗಳ ಮೂರನೇ ಬ್ಯಾಚ್ ಅನ್ನು ಬಿಡುಗಡೆ ಮಾಡಿತು, ಇದರಲ್ಲಿ ಪ್ರಧಾನ ಮಂತ್ರಿ ಕಚೇರಿ ಮತ್ತು ಗೃಹ ಸಚಿವಾಲಯದಿಂದ ತಲಾ ಐದು ಫೈಲ್‌ಗಳು ಮತ್ತು ವಿದೇಶಾಂಗ ಸಚಿವಾಲಯದ 15 ಫೈಲ್‌ಗಳು ಸೇರಿವೆ. ಕಡತಗಳು 1956 ಮತ್ತು 2009 ರ ನಡುವಿನ ಅವಧಿಗೆ ಸಂಬಂಧಿಸಿವೆ. ಆದರೆ, ಈ ಕಡತಗಳು ಸಾರ್ವಜನಿಕರಿಗೆ ಲಭ್ಯವಿಲ್ಲ ಎಂದು ಸಂಶೋಧಕರ ತಂಡ ಆರೋಪಿಸಿದೆ. ಶನಿವಾರ(ಜ.22) ತೃಣಮೂಲ ಕಾಂಗ್ರೆಸ್ ಸಂಸದ ಸುಖೇಂದು ಶೇಖರ್ ರೇ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ನೇತಾಜಿ ಫೈಲ್‌ಗಳ ವರ್ಗೀಕರಣವನ್ನು ಕೋರಿದ್ದಾರೆ.

ಇಂಡಿಯಾ ಗೇಟ್‌ನಲ್ಲಿ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರ ಗ್ರಾನೈಟ್ ಪ್ರತಿಮೆಯನ್ನು ನಿರ್ಮಿಸುವುದಾಗಿ ಪ್ರಧಾನಿ ಭರವಸೆ ನೀಡಿದ್ದಾರೆ. ಪ್ರತಿಮೆ ಸಿದ್ಧವಾಗುವವರೆಗೆ ಸ್ಥಳದಲ್ಲಿ ನೇತಾಜಿಯ ಹೋಲೋಗ್ರಾಂ ಹಾಕಲಾಗುವುದು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿ, ಚಿತ್ರವನ್ನು ಹಂಚಿಕೊಂಡಿದ್ದರು.

“ನಾವು ನಿಮ್ಮ ಮೇಲೆ ಒತ್ತಡ ಹೇರಿದ್ದರಿಂದ ಪ್ರತಿಮೆಯನ್ನು ನಿರ್ಮಿಸಲಾಗುತ್ತಿದೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.


ಇದನ್ನೂ ಓದಿ: ಒಕ್ಕೂಟ ಸರ್ಕಾರ ತಿರಸ್ಕರಿಸಿದ ಸುಭಾಷ್ ಚಂದ್ರ ಬೋಸ್ ಸ್ತಬ್ಧಚಿತ್ರ ಕೊಲ್ಕತ್ತಾದಲ್ಲಿ ಪ್ರದರ್ಶನ: ಬಂಗಾಳ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...