Homeಮುಖಪುಟಮಮತಾ ಬ್ಯಾನರ್ಜಿ ಮೇಲೆ ಹಲ್ಲೆ: ಚುನಾವಣಾ ಆಯೋಗಕ್ಕೆ ದೂರು ನೀಡಲು ಮುಂದಾದ ಬಿಜೆಪಿ

ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ: ಚುನಾವಣಾ ಆಯೋಗಕ್ಕೆ ದೂರು ನೀಡಲು ಮುಂದಾದ ಬಿಜೆಪಿ

- Advertisement -
- Advertisement -

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತನ್ನ ಮೇಲೆ ದಾಳಿ ನಡೆದಿದೆ ಎಂದು ಆರೋಪಿಸಿದ್ದಾರೆ. ಸರ್ಕಾರಿ ವೈದ್ಯರು ಅವರ ಕಾಲು ಮತ್ತು ಕುತ್ತಿಗೆಗೆ ತೀವ್ರತರವಾದ ಗಾಯಗಳಾಗಿವೆ ಎಂದಿದ್ದಾರೆ. ಮಮತಾ ಬ್ಯಾನರ್ಜಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ “ರಾಜಕೀಯಕ್ಕಾಗಿ ದಾಳಿಯ ಬಗ್ಗೆ ಸುಳ್ಳು ಹರಡುತ್ತಿದ್ದಾರೆ” ಹಾಗಾಗಿ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಹೇಳಿದೆ.

ಬಂಗಾಳ ವಿಧಾನಸಭಾ ಚುನಾವಣಾ ಕಣ ದಿನ ದಿನಕ್ಕೂ ರಂಗೇರುತ್ತಿದೆ. ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ನಿನ್ನೆ ಮಮತಾ ಬ್ಯಾನರ್ಜಿ ಮೇಲೆ ದಾಳಿಯಾಗಿದ್ದರೆ, ಇಂದು ಬಿಜೆಪಿ ನಾಯಕರ ನಿಯೋಗ ಕೋಲ್ಕತ್ತಾದ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಿ ಮುಖ್ಯಮಂತ್ರಿಯವರ ಆರೋಪದ ವಿರುದ್ಧ ದೂರು ನೀಡಲು ಮತ್ತು ಪ್ರಕರಣದ ತನಿಖೆ ನಡೆಸಲು ಕೋರುತ್ತೇವೆ ಎಂದಿದ್ದಾರೆ.

“ದಾಳಿಯ ಬಗ್ಗೆ ನಾವು ಉನ್ನತ ಮಟ್ಟದ ತನಿಖೆ ಬಯಸುತ್ತೇವೆ, ದಾಳಿ ಹೇಗೆ ಸಂಭವಿಸಿತು, ಯಾರು ಹೊಣೆಗಾರರು..? ಘಟನೆ ನಡೆದಾಗ ರಕ್ಷಣೆ ನೀಡಬೇಕಿದ್ದ ಸ್ಥಳೀಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ” ಎಂದು ಬಂಗಾಳ ಬಿಜೆಪಿ ಉಪಾಧ್ಯಕ್ಷ ಪ್ರತಾಪ್ ಬ್ಯಾನರ್ಜಿ ಹೇಳಿದ್ದಾರೆ ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ.

ಇದನ್ನೂ ಓದಿ: ‘ಯಾವ ದಾಳಿಯು ದೃಢತೆಯನ್ನು ಮುರಿಯದು’ – ಮಮತಾ ಮೇಲಿನ ದಾಳಿಗೆ ಟಿಎಂಸಿ ಪ್ರತಿಕ್ರಿಯೆ

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ನ ನಿಯೋಗವೊಂದು ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿಯಾಗಿ ದಾಳಿಯ ಬಗ್ಗೆ ತಮ್ಮದೇ ಆದ ದೂರು ದಾಖಲಿಸಿದೆ.

66 ವರ್ಷದ ಮಮತಾ ಬ್ಯಾನರ್ಜಿ ಅವರು ನಿನ್ನೆ ಸಂಜೆ ಬಂಗಾಳ ಚುನಾವಣೆಗೆ ನಂದಿಗ್ರಾಮದಲ್ಲಿ ನಾಮಪತ್ರ ಸಲ್ಲಿಸಿದ ನಂತರ ಕೆಲವೇ ಗಂಟೆಗಳ ಅಂತರದಲ್ಲಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಿದರು. ’ದಾಳಿ ಷಡ್ಯಂತ್ರ  ಆಗಿದೆ. ಏಕೆಂದರೆ ದಾಳಿಯ ವೇಳೆ ನನ್ನ ಸುತ್ತ ಯಾವುದೇ ಪೊಲೀಸರು ಇರಲಿಲ್ಲ’ ಎಂದಿದ್ದರು. ನಂತರ ಅವರನ್ನು 130 ಕಿ.ಮೀ ದೂರದಲ್ಲಿರುವ ಕೋಲ್ಕತ್ತಾದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ಗುರುವಾರ ಬೆಳ್ಳಂಬೆಳಗೆ, ತೃಣಮೂಲ ಕಾಂಗ್ರೆಸ್ ಸಂಸದ ಮತ್ತು ಮಮತಾ ಬ್ಯಾನರ್ಜಿಯ ಸೋದರಳಿಯ ಅಭಿಷೇಕ್ ಬ್ಯಾನರ್ಜಿ, ಮಮತಾ ಆಸ್ಪತ್ರೆಯಲ್ಲಿರುವ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. ಜೊತೆಗೆ ಬಿಜೆಪಿಯನ್ನು ಗುರಿಯಾಗಿಸಿಕೊಂಡು “ಮೇ 2 ರ ಭಾನುವಾರದಂದು ಬಂಗಾಳದ ಜನರ ಶಕ್ತಿಯನ್ನು ನೋಡಲು ಬಿಜೆಪಿ ನಿಮ್ಮನ್ನು ನೀವು ಸಜ್ಜುಗೊಳಿಸಿಕೊಳ್ಳಿ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಪ.ಬಂಗಾಳ: ನಾಮಪತ್ರ ಸಲ್ಲಿಸಿ ಹಿಂದಿರುಗುತ್ತಿದ್ದ ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ!

ಇದಕ್ಕೆ ಪ್ರತಿಕ್ರಿಯಿಸಿರುವ ಬಂಗಾಳ ಬಿಜೆಪಿ, ’ಒಬ್ಬ ಪ್ರತ್ಯಕ್ಷದರ್ಶಿಯೂ ಮಮತಾ ಬ್ಯಾನರ್ಜಿಯ ‘ದಾಳಿ’ ಆರೋಪವನ್ನು ಧೃಡಿಕರಿಸಿದಂತೆ ಕಾಣುತ್ತಿಲ್ಲ. ನಂದಿಗ್ರಾಮದ ಜನರು, ಮಮತಾ ಬ್ಯಾನರ್ಜಿ ತಮ್ಮನ್ನು ದೂಷಿಸಿ ಅಪಖ್ಯಾತಿ ತಂದಿದ್ದಕ್ಕಾಗಿ ಅವರ ಮೇಲೆ ಅಸಮಾಧಾನ ಮತ್ತು ಕೋಪಗೊಂಡಿದ್ದಾರೆ” ಎಂದು ಬಂಗಾಳ ಬಿಜೆಪಿ ಟ್ವೀಟ್ ಮಾಡಿ, ಸ್ಥಳದಿಂದ ಸಾಕ್ಷಿಗಳೆಂದು ಕೆಲವರನ್ನು ಉಲ್ಲೇಖಿಸಿದೆ.

ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್, ’ಇದು ನಿಜವಾದ ಘಟನೆಯೋ ಅಥವಾ ಉತ್ತಮವಾಗಿ ಚಿತ್ರಕಥೆ ಮಾಡಿದ ನಾಟಕವೋ ಎಂದು ನೋಡಬೇಕಾಗಿದೆ. ರಾಜ್ಯದ ಜನರೂ ಇಂತಹ ನಾಟಕವನ್ನು ಮೊದಲೇ ನೋಡಿದ್ದಾರೆ’ ಎಂದು ವ್ಯಂಗ್ಯವಾಡಿದ್ದಾರೆ.

ಮಮತಾ ಬ್ಯಾನರ್ಜಿ ಮೇಲೆ ನಡೆದಿರುವ ದಾಳಿಯನ್ನು ದೆಹಲಿ ಸಿಎಂ ಅರವಿಂದ್ ಕೇಜ್ರೀವಾಲ್, ಡಿಎಂಕೆ ನಾಯಕ ಸ್ಟಾಲಿನ್, ಜೆಡಿಯು ಮುಖಂಡ ತೇಜಸ್ವಿ ಯಾದವ್, ಜೆಡಿಎಸ್‌ ಮುಖಂಡ ಎಚ್.ಡಿ ಕುಮಾರಸ್ವಾಮಿ ಸೇರಿದಂತೆ ಹಲವರು ಖಂಡಿಸಿದ್ದಾರೆ.


ಇದನ್ನೂ ಓದಿ: ಮಾ. 26ಕ್ಕೆ ಸಂಪೂರ್ಣ ಭಾರತ್ ಬಂದ್ – ಹೋರಾಟನಿರತ ರೈತರ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...