Homeಮುಖಪುಟಮಮತಾ ಬ್ಯಾನರ್ಜಿ ಮೇಲೆ ಹಲ್ಲೆ: ಚುನಾವಣಾ ಆಯೋಗಕ್ಕೆ ದೂರು ನೀಡಲು ಮುಂದಾದ ಬಿಜೆಪಿ

ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ: ಚುನಾವಣಾ ಆಯೋಗಕ್ಕೆ ದೂರು ನೀಡಲು ಮುಂದಾದ ಬಿಜೆಪಿ

- Advertisement -
- Advertisement -

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತನ್ನ ಮೇಲೆ ದಾಳಿ ನಡೆದಿದೆ ಎಂದು ಆರೋಪಿಸಿದ್ದಾರೆ. ಸರ್ಕಾರಿ ವೈದ್ಯರು ಅವರ ಕಾಲು ಮತ್ತು ಕುತ್ತಿಗೆಗೆ ತೀವ್ರತರವಾದ ಗಾಯಗಳಾಗಿವೆ ಎಂದಿದ್ದಾರೆ. ಮಮತಾ ಬ್ಯಾನರ್ಜಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ “ರಾಜಕೀಯಕ್ಕಾಗಿ ದಾಳಿಯ ಬಗ್ಗೆ ಸುಳ್ಳು ಹರಡುತ್ತಿದ್ದಾರೆ” ಹಾಗಾಗಿ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಹೇಳಿದೆ.

ಬಂಗಾಳ ವಿಧಾನಸಭಾ ಚುನಾವಣಾ ಕಣ ದಿನ ದಿನಕ್ಕೂ ರಂಗೇರುತ್ತಿದೆ. ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ನಿನ್ನೆ ಮಮತಾ ಬ್ಯಾನರ್ಜಿ ಮೇಲೆ ದಾಳಿಯಾಗಿದ್ದರೆ, ಇಂದು ಬಿಜೆಪಿ ನಾಯಕರ ನಿಯೋಗ ಕೋಲ್ಕತ್ತಾದ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಿ ಮುಖ್ಯಮಂತ್ರಿಯವರ ಆರೋಪದ ವಿರುದ್ಧ ದೂರು ನೀಡಲು ಮತ್ತು ಪ್ರಕರಣದ ತನಿಖೆ ನಡೆಸಲು ಕೋರುತ್ತೇವೆ ಎಂದಿದ್ದಾರೆ.

“ದಾಳಿಯ ಬಗ್ಗೆ ನಾವು ಉನ್ನತ ಮಟ್ಟದ ತನಿಖೆ ಬಯಸುತ್ತೇವೆ, ದಾಳಿ ಹೇಗೆ ಸಂಭವಿಸಿತು, ಯಾರು ಹೊಣೆಗಾರರು..? ಘಟನೆ ನಡೆದಾಗ ರಕ್ಷಣೆ ನೀಡಬೇಕಿದ್ದ ಸ್ಥಳೀಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ” ಎಂದು ಬಂಗಾಳ ಬಿಜೆಪಿ ಉಪಾಧ್ಯಕ್ಷ ಪ್ರತಾಪ್ ಬ್ಯಾನರ್ಜಿ ಹೇಳಿದ್ದಾರೆ ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ.

ಇದನ್ನೂ ಓದಿ: ‘ಯಾವ ದಾಳಿಯು ದೃಢತೆಯನ್ನು ಮುರಿಯದು’ – ಮಮತಾ ಮೇಲಿನ ದಾಳಿಗೆ ಟಿಎಂಸಿ ಪ್ರತಿಕ್ರಿಯೆ

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ನ ನಿಯೋಗವೊಂದು ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿಯಾಗಿ ದಾಳಿಯ ಬಗ್ಗೆ ತಮ್ಮದೇ ಆದ ದೂರು ದಾಖಲಿಸಿದೆ.

66 ವರ್ಷದ ಮಮತಾ ಬ್ಯಾನರ್ಜಿ ಅವರು ನಿನ್ನೆ ಸಂಜೆ ಬಂಗಾಳ ಚುನಾವಣೆಗೆ ನಂದಿಗ್ರಾಮದಲ್ಲಿ ನಾಮಪತ್ರ ಸಲ್ಲಿಸಿದ ನಂತರ ಕೆಲವೇ ಗಂಟೆಗಳ ಅಂತರದಲ್ಲಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಿದರು. ’ದಾಳಿ ಷಡ್ಯಂತ್ರ  ಆಗಿದೆ. ಏಕೆಂದರೆ ದಾಳಿಯ ವೇಳೆ ನನ್ನ ಸುತ್ತ ಯಾವುದೇ ಪೊಲೀಸರು ಇರಲಿಲ್ಲ’ ಎಂದಿದ್ದರು. ನಂತರ ಅವರನ್ನು 130 ಕಿ.ಮೀ ದೂರದಲ್ಲಿರುವ ಕೋಲ್ಕತ್ತಾದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ಗುರುವಾರ ಬೆಳ್ಳಂಬೆಳಗೆ, ತೃಣಮೂಲ ಕಾಂಗ್ರೆಸ್ ಸಂಸದ ಮತ್ತು ಮಮತಾ ಬ್ಯಾನರ್ಜಿಯ ಸೋದರಳಿಯ ಅಭಿಷೇಕ್ ಬ್ಯಾನರ್ಜಿ, ಮಮತಾ ಆಸ್ಪತ್ರೆಯಲ್ಲಿರುವ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. ಜೊತೆಗೆ ಬಿಜೆಪಿಯನ್ನು ಗುರಿಯಾಗಿಸಿಕೊಂಡು “ಮೇ 2 ರ ಭಾನುವಾರದಂದು ಬಂಗಾಳದ ಜನರ ಶಕ್ತಿಯನ್ನು ನೋಡಲು ಬಿಜೆಪಿ ನಿಮ್ಮನ್ನು ನೀವು ಸಜ್ಜುಗೊಳಿಸಿಕೊಳ್ಳಿ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಪ.ಬಂಗಾಳ: ನಾಮಪತ್ರ ಸಲ್ಲಿಸಿ ಹಿಂದಿರುಗುತ್ತಿದ್ದ ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ!

ಇದಕ್ಕೆ ಪ್ರತಿಕ್ರಿಯಿಸಿರುವ ಬಂಗಾಳ ಬಿಜೆಪಿ, ’ಒಬ್ಬ ಪ್ರತ್ಯಕ್ಷದರ್ಶಿಯೂ ಮಮತಾ ಬ್ಯಾನರ್ಜಿಯ ‘ದಾಳಿ’ ಆರೋಪವನ್ನು ಧೃಡಿಕರಿಸಿದಂತೆ ಕಾಣುತ್ತಿಲ್ಲ. ನಂದಿಗ್ರಾಮದ ಜನರು, ಮಮತಾ ಬ್ಯಾನರ್ಜಿ ತಮ್ಮನ್ನು ದೂಷಿಸಿ ಅಪಖ್ಯಾತಿ ತಂದಿದ್ದಕ್ಕಾಗಿ ಅವರ ಮೇಲೆ ಅಸಮಾಧಾನ ಮತ್ತು ಕೋಪಗೊಂಡಿದ್ದಾರೆ” ಎಂದು ಬಂಗಾಳ ಬಿಜೆಪಿ ಟ್ವೀಟ್ ಮಾಡಿ, ಸ್ಥಳದಿಂದ ಸಾಕ್ಷಿಗಳೆಂದು ಕೆಲವರನ್ನು ಉಲ್ಲೇಖಿಸಿದೆ.

ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್, ’ಇದು ನಿಜವಾದ ಘಟನೆಯೋ ಅಥವಾ ಉತ್ತಮವಾಗಿ ಚಿತ್ರಕಥೆ ಮಾಡಿದ ನಾಟಕವೋ ಎಂದು ನೋಡಬೇಕಾಗಿದೆ. ರಾಜ್ಯದ ಜನರೂ ಇಂತಹ ನಾಟಕವನ್ನು ಮೊದಲೇ ನೋಡಿದ್ದಾರೆ’ ಎಂದು ವ್ಯಂಗ್ಯವಾಡಿದ್ದಾರೆ.

ಮಮತಾ ಬ್ಯಾನರ್ಜಿ ಮೇಲೆ ನಡೆದಿರುವ ದಾಳಿಯನ್ನು ದೆಹಲಿ ಸಿಎಂ ಅರವಿಂದ್ ಕೇಜ್ರೀವಾಲ್, ಡಿಎಂಕೆ ನಾಯಕ ಸ್ಟಾಲಿನ್, ಜೆಡಿಯು ಮುಖಂಡ ತೇಜಸ್ವಿ ಯಾದವ್, ಜೆಡಿಎಸ್‌ ಮುಖಂಡ ಎಚ್.ಡಿ ಕುಮಾರಸ್ವಾಮಿ ಸೇರಿದಂತೆ ಹಲವರು ಖಂಡಿಸಿದ್ದಾರೆ.


ಇದನ್ನೂ ಓದಿ: ಮಾ. 26ಕ್ಕೆ ಸಂಪೂರ್ಣ ಭಾರತ್ ಬಂದ್ – ಹೋರಾಟನಿರತ ರೈತರ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...