Homeಮುಖಪುಟಪಶ್ಚಿಮ ಬಂಗಾಳ: 'ಸರ್ವಧರ್ಮ ಸೌಹಾರ್ದ ರ‍್ಯಾಲಿ' ಆರಂಭಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ: ‘ಸರ್ವಧರ್ಮ ಸೌಹಾರ್ದ ರ‍್ಯಾಲಿ’ ಆರಂಭಿಸಿದ ಮಮತಾ ಬ್ಯಾನರ್ಜಿ

- Advertisement -
- Advertisement -

ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ಸಮಾರಂಭ ನಡೆಯುತ್ತಿರುವಾಗಲೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದು ಮಧ್ಯಾಹ್ನ ಕಲ್ಕತ್ತಾದಲ್ಲಿ ‘ಸರ್ವಧರ್ಮ ಸಮನ್ವಯ ರ‍್ಯಾಲಿ’ಯನ್ನು ಪ್ರಾರಂಭಿಸಿದರು.

ವಿವಿಧ ಧರ್ಮಗಳ ಧಾರ್ಮಿಕ ಮುಖಂಡರು ಮತ್ತು ಪಕ್ಷದ ಮುಖಂಡರೊಂದಿಗೆ, ಕಲ್ಕತ್ತಾದ ಹಜ್ರಾ ಮೋರ್ನಿಂದ ‘ಸಂಗತಿ ಮಾರ್ಚ್’ ಅನ್ನು ಪ್ರಾರಂಭಿಸಿದರು.

ತಮ್ಮ ಎಂದಿನ ಶೈಲಿಯ ಬಿಳಿ ಮತ್ತು ನೀಲಿ ಬಾರ್ಡರ್ ಇರುವ ಕಾಟನ್ ಸೀರೆಯನ್ನು ತನ್ನ ಕುತ್ತಿಗೆಗೆ ಸುತ್ತಿಕೊಂಡು, ಮಮತಾ ಬ್ಯಾನರ್ಜಿ ರಸ್ತೆಯ ಎರಡೂ ಬದಿಗಳಲ್ಲಿ ಸೇರಿದ್ದ ಜನರತ್ತ ಕೈ ಬೀಸುತ್ತಾ ನಡೆದರು.
ನಗರದ ಪ್ರಸಿದ್ಧ ಕಾಳಿಘಾಟ್ ದೇವಸ್ಥಾನದಲ್ಲಿ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಿದ ನಂತರ ಅವರು ರ‍್ಯಾಲಿಯನ್ನು ಪ್ರಾರಂಭಿಸಿದರು. ಬೃಹತ್ ಸಮಾವೇಶದೊಂದಿಗೆ ಪಾರ್ಕ್ ಸರ್ಕಸ್ ಮೈದಾನದಲ್ಲಿ ಪಾದಯಾತ್ರೆ ಸಮಾರೋಪಗೊಳ್ಳಲಿದೆ.

ಹಜ್ರಾ ಮೋರ್‌ನಿಂದ ರ‍್ಯಾಲಿಯನ್ನು ಮುನ್ನಡೆಸುತ್ತಿದ್ದಾರೆ, ಈ ಸಂದರ್ಭದಲ್ಲಿ ಅವರು ಮಸೀದಿಗಳು ಸೇರಿದಂತೆ ವಿವಿಧ ಧರ್ಮಗಳನ್ನು ಪ್ರತಿನಿಧಿಸುವ ವಿವಿಧ ಪೂಜಾ ಸ್ಥಳಗಳಿಗೆ, ಚರ್ಚುಗಳು ಮತ್ತು ಗುರುದ್ವಾರಗಳಿಗೆ ಭೇಟಿ ನೀಡಲಿದ್ದಾರೆ.

ಈ ಹಿಂದೆ ರಾಮ ಮಂದಿರದ ಘಟನೆಯ ಬಗ್ಗೆ ಬಿಜೆಪಿಯನ್ನು ಟೀಕಿಸಿದ್ದ ಮಮತಾ ಬ್ಯಾನರ್ಜಿ, “ಲೋಕಸಭಾ ಚುನಾವಣೆಯ ಹಿಂದಿರುವ ಗಿಮಿಕ್ ಶೋ” ಎಂದು ಟೀಕಿಸಿದ್ದರು. ‘ಲೋಕಸಭೆ ಚುನಾವಣೆಗೆ ಮುನ್ನ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡುವ ಮೂಲಕ ಬಿಜೆಪಿ ಗಿಮಿಕ್ ಶೋನಲ್ಲಿ ತೊಡಗಿದೆ. ಇತರ ಸಮುದಾಯಗಳನ್ನು ಹೊರಗಿಡುವ ಹಬ್ಬಗಳನ್ನು ನಾನು ಬೆಂಬಲಿಸುವುದಿಲ್ಲ’ ಎಂದು ಅವರು ಪ್ರತಿಪಾದಿಸಿದ್ದರು.

‘ಎಲ್ಲ ಸಮುದಾಯದ ಜನರನ್ನು ಕರೆದುಕೊಂಡು ಹೋಗುವ ಮತ್ತು ಒಗ್ಗಟ್ಟಿನ ಬಗ್ಗೆ ಮಾತನಾಡುವ ಹಬ್ಬಗಳನ್ನು ನಾನು ನಂಬುತ್ತೇನೆ. ಬಿಜೆಪಿ ಇದನ್ನು (ರಾಮಮಂದಿರ ಉದ್ಘಾಟನೆ) ನ್ಯಾಯಾಲಯದ ಸೂಚನೆಯ ಮೇರೆಗೆ ಮಾಡುತ್ತಿದೆ. ಆದರೆ ಅದನ್ನು ಗಿಮಿಕ್ ಪ್ರದರ್ಶನವಾಗಿ ಲೋಕಸಭೆ ಚುನಾವಣೆಗೆ ಮುನ್ನ ಮಾಡುತ್ತಿದೆ’ ಎಂದು ಅವರು ಟೀಕಿಸಿದ್ದರು.

ಬಿಜೆಪಿ ವಿರುದ್ಧ ಅಭಿಷೇಕ್ ಬ್ಯಾನರ್ಜಿ ವಾಗ್ದಾಳಿ:

ದ್ವೇಷ ಮತ್ತು ಹಿಂಸಾಚಾರದ ಮೇಲೆ ನಿರ್ಮಿಸಲಾದ ಆರಾಧನಾ ಸ್ಥಳವನ್ನು ಒಪ್ಪಿಕೊಳ್ಳಲು ನನ್ನ ಧರ್ಮ ನನಗೆ ಕಲಿಸಿಲ್ಲ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ದ್ವೇಷ, ಹಿಂಸಾಚಾರ ಮತ್ತು ಅಮಾಯಕರ ಶವಗಳ ಮೇಲೆ ನಿರ್ಮಿಸಲಾದ ಮಂದಿರ, ಮಸೀದಿ, ಚರ್ಚ್ ಅಥವಾ ಗುರುದ್ವಾರವೇ ಆಗಿರಲಿ, ಅತಂಹ ಆರಾಧನಾ ಸ್ಥಳವನ್ನು ಒಪ್ಪಿಕೊಳ್ಳಲು ನನ್ನ ಧರ್ಮ ನನಗೆ ಕಲಿಸಿಲ್ಲ’ ಎಂದು ಅಭಿಷೇಕ್ ಬ್ಯಾನರ್ಜಿ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ; ದ್ವೇಷ, ಹಿಂಸೆಯ ಮೇಲೆ ನಿರ್ಮಾಣವಾದ ಆರಾಧನಾ ಸ್ಥಳವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...