Homeಮುಖಪುಟನಡ್ಡಾ ಕಾರಿಗೆ ಕಲ್ಲು ಪ್ರಕರಣ: 3 ಐಪಿಎಸ್ ಅಧಿಕಾರಿಗಳನ್ನು ಡೆಪ್ಯೂಟೇಷನ್ ಮಾಡಿದ ಕೇಂದ್ರ

ನಡ್ಡಾ ಕಾರಿಗೆ ಕಲ್ಲು ಪ್ರಕರಣ: 3 ಐಪಿಎಸ್ ಅಧಿಕಾರಿಗಳನ್ನು ಡೆಪ್ಯೂಟೇಷನ್ ಮಾಡಿದ ಕೇಂದ್ರ

ಪಶ್ಚಿಮ ಬಂಗಾಳವು ವಿಸ್ತರಣಾವಾದಿ ಮತ್ತು ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳ ಮುಂದೆ ಎಂದಿಗೂ ತಲೆ ಬಾಗುವುದಿಲ್ಲ ಎಂದು ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.

- Advertisement -
- Advertisement -

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಬೆಂಗಾವಲು ವಾಹನದ ಮೇಲೆ ನಡೆದ ದಾಳಿಯ ಹಿನ್ನಲೆಯಲ್ಲಿ, ಪಶ್ಚಿಮ ಬಂಗಾಳ ಮತ್ತು ಕೇಂದ್ರ ಸರ್ಕಾರದ ನಡುವಿನ ಮುಸುಕಿನ ಗುದ್ದಾಟ ಮತ್ತಷ್ಟು ತೀವ್ರವಾಗಿದೆ. ಪೊಲೀಸ್ ಮಹಾ ನಿರ್ದೇಶಕ ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವಾಲಯ ವಿಚಾರಣೆಗೆ ಹಾಜರಾಗಬೇಕು ಎಂದು 2 ಬಾರಿ ನೋಟಿಸ್ ನೀಡಿತ್ತು. ಈಗ ಮೂವರು ಐಪಿಎಸ್ ಅಧಿಕಾರಿಗಳಿಗೆ ವರ್ಗಾವಣೆ ಮಾಡಿ ಆದೇಶಿಸಿದೆ.

ಆದರೆ, ಪಶ್ಚಿಮ ಬಂಗಳ ಸರ್ಕಾರ ಯಾವುದೇ ಅಧಿಕಾರಿ ದೆಹಲಿಗೆ ತೆರಳಿ ಗೃಹ ಸಚಿವಾಲಯದ ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು. ಈಗ ಮತ್ತೆ ಗೃಹ ಸಚಿವಾಲಯ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಡಿಜಿಪಿಗೆ ಹೊಸ ಪತ್ರವನ್ನು ಕಳುಹಿಸಿದ್ದು,  ಅವರು ನಿಯಮಗಳನ್ನು ಪಾಲಿಸುವಲ್ಲಿ ವಿಫಲರಾಗಿದ್ದಾರೆ ಎಂದಿದೆ. ಜೊತೆಗೆ ಐಪಿಎಸ್ ಕೇಡರ್ ನಿಯಮಗಳ ಸೆಕ್ಷನ್ 6 (1) ಪ್ರಕಾರ – “ಯಾವುದೇ ಭಿನ್ನಾಭಿಪ್ರಾಯಗಳಿದ್ದಲ್ಲಿ , ಕೇಂದ್ರದ ನಿರ್ಧಾರವು ಮೇಲುಗೈ ಸಾಧಿಸುತ್ತದೆ” ಎಂಬ ಎಚ್ಚರಿಕೆ ನೀಡಿದೆ.

ಜೊತೆಗೆ ಐಪಿಎಸ್​ ಅಧಿಕಾರಿಗಳನ್ನ ಕೇಂದ್ರ ಸರ್ಕಾರ ದೆಹಲಿಗೆ ವರ್ಗಾವಣೆ ಮಾಡಿದೆ. ರಾಜೀವ್ ಮಿಶ್ರಾ ಮತ್ತು ಪ್ರವೀಣ್ ತ್ರಿಪಾಠಿ ಎಂಬುವರಿಗೆ 5 ವರ್ಷಗಳ ಕಾಲಾವಧಿಗೆ, ಭೋಲನಾಥ್ ಪಾಂಡೆಯವರಿಗೆ 4 ವರ್ಷಗಳ ಕಾಲಾವಧಿಗೆ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: ಜೆ.ಪಿ ನಡ್ಡಾ ಕಾರಿನ ಮೇಲೆ ದಾಳಿ: ವಿಚಾರಣೆಗೆ ಅಧಿಕಾರಿಗಳನ್ನು ದೆಹಲಿಗೆ ಕಳುಹಿಸುವುದಿಲ್ಲ ಎಂದ ಪಶ್ಚಿಮ ಬಂಗಾಳ

ಇದಕ್ಕೆ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಇದು ಐಪಿಎಸ್ ಕೇಡರ್ ರೂಲ್ 1954 ರ ತುರ್ತು ನಿಬಂಧನೆಯ ದುರ್ಬಳಕೆಯಾಗಿದೆ ಎಂದಿದ್ದಾರೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಮಮತಾ ಬ್ಯಾನರ್ಜಿ, “ರಾಜ್ಯದ ಆಕ್ಷೇಪಣೆಯ ಹೊರತಾಗಿಯೂ ಪಶ್ಚಿಮ ಬಂಗಾಳದಲ್ಲಿ 3 ಸೇವೆ ಸಲ್ಲಿಸುತ್ತಿರುವ ಐಪಿಎಸ್ ಅಧಿಕಾರಿಗಳಿಗೆ ಕೇಂದ್ರದ ಡೆಪ್ಯುಟೇಷನ್‌ನ ಆದೇಶವು ಅಧಿಕಾರ ಮತ್ತು ಐಪಿಎಸ್ ಕೇಡರ್ ರೂಲ್ 1954 ರ ತುರ್ತು ನಿಬಂಧನೆಯ ದುರುಪಯೋಗವಾಗಿದೆ.” ಎಂದು ಕಿಡಿಕಾರಿದ್ದಾರೆ.

’ಪ್ರಾಕ್ಸಿ ಮೂಲಕ ರಾಜ್ಯ ಆಡಳಿತಯಂತ್ರ ನಿಯಂತ್ರಿಸಲು ಕೇಂದ್ರದ ಈ ಲಜ್ಜೆಗೆಟ್ಟ ಪ್ರಯತ್ನವನ್ನು ನಾವು ಅನುಮತಿಸುವುದಿಲ್ಲ ಎಂದಿದ್ದಾರೆ. ಪಶ್ಚಿಮ ಬಂಗಾಳವು ವಿಸ್ತರಣಾವಾದಿ ಮತ್ತು ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳ ಮುಂದೆ ಎಂದಿಗೂ ತಲೆ ಬಾಗುವುದಿಲ್ಲ’ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ…

 

ಈಗಾಗಲೇ 3 ಐಪಿಎಸ್ ಅಧಿಕಾರಿಗಳಿಗೆ, ಬಿಪಿಆರ್‌ಡಿ ಎಸ್‌ಪಿ ಆಗಿ ಭೋಲನಾಥ್ ಪಾಂಡೆ, ಎಸ್‌ಎಸ್‌ಬಿ ಡಿಐಜಿಯಾಗಿ ಪ್ರವೀಣ್ ತ್ರಿಪಾಠಿ, ಐಟಿಬಿಪಿ ಐಜಿಯಾಗಿ ರಾಜೀವ್ ಮಿಶ್ರಾ ಅವರಿಗೆ ವರ್ಗಾವಣೆ ಮಾಡಿ ಜವಾಬ್ದಾರಿ ವಹಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಈಗಾಗಲೇ ಘಟನೆ ಸಂಬಂಧ ಕೇಂದ್ರಕ್ಕೆ ವರದಿ ಸಲ್ಲಿಸಿರುವ ಬಂಗಾಳ ಸರ್ಕಾರ, ’ಜೆ.ಪಿ ನಡ್ಡಾ ಅವರಿಗೆ ಝಡ್‌ ಕ್ಯಾಟಗರಿ ಭದ್ರತೆ, ಬುಲೆಟ್‌ಫ್ರೂಫ್ ಕಾರ್, ಬೆಂಗಾವಲು ಮತ್ತು ಭದ್ರತಾ ಅಧಿಕಾರಿಗಳನ್ನೂ ನೇಮಕ ಮಾಡಲಾಗಿತ್ತು. ಅವರು ಚಲಿಸುವ ಮಾರ್ಗದಲ್ಲಿ 4 ಎಸ್ಪಿಗಳು, 8 ಡೆಪ್ಯೂಟಿ ಎಸ್ಪಿಗಳು, 14 ಇನ್ಸ್ಪೆಕ್ಟರ್‌ಗಳು, 70 ಸಬ್ಇನ್ಸ್ಪೆಕ್ಟರ್‌‌ಗಳು, 40 ಆರ್‌‌ಎಎಫ್ ಸಿಬ್ಬಂದಿ, 259 ಕಾನ್ಸ್ಟೆಬಲ್‌‌ಗಳು ಮತ್ತು 350 ಇತರೆ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿತ್ತು. ಭದ್ರತೆಯ ಮೇಲ್ವಿಚಾರಣೆಗೆ ಡಿಐಜಿಯನ್ನು ನಿಯೋಜಿಸಲಾಗಿತ್ತು. ಆದರೆ, ಕೇಂದ್ರ ಸರ್ಕಾರ ಜೆ.ಪಿ ನಡ್ಡಾ ವಾಹನಗಳ ಜೊತೆಗೆ ಇತರೆ ವಾಹನಗಳನ್ನೂ ನಿಯೋಜಿಸಿದ ಕಾರಣ ಪರಿಸ್ಥಿತಿ ಬಿಗಡಾಯಿಸಿತು’ ಎಂದು ತಿಳಿಸಿದೆ.


ಇದನ್ನೂ ಓದಿ: ಬಿಜೆಪಿ ಕಳ್ಳರ ಪಕ್ಷ, ಅವರಿಗಿಂತ ದೊಡ್ಡ ಕಳ್ಳರು ಎಲ್ಲೂ ಇಲ್ಲ- ಮಮತಾ ಬ್ಯಾನರ್ಜಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...