Homeಮುಖಪುಟನಡ್ಡಾ ಕಾರಿಗೆ ಕಲ್ಲು ಪ್ರಕರಣ: 3 ಐಪಿಎಸ್ ಅಧಿಕಾರಿಗಳನ್ನು ಡೆಪ್ಯೂಟೇಷನ್ ಮಾಡಿದ ಕೇಂದ್ರ

ನಡ್ಡಾ ಕಾರಿಗೆ ಕಲ್ಲು ಪ್ರಕರಣ: 3 ಐಪಿಎಸ್ ಅಧಿಕಾರಿಗಳನ್ನು ಡೆಪ್ಯೂಟೇಷನ್ ಮಾಡಿದ ಕೇಂದ್ರ

ಪಶ್ಚಿಮ ಬಂಗಾಳವು ವಿಸ್ತರಣಾವಾದಿ ಮತ್ತು ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳ ಮುಂದೆ ಎಂದಿಗೂ ತಲೆ ಬಾಗುವುದಿಲ್ಲ ಎಂದು ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.

- Advertisement -
- Advertisement -

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಬೆಂಗಾವಲು ವಾಹನದ ಮೇಲೆ ನಡೆದ ದಾಳಿಯ ಹಿನ್ನಲೆಯಲ್ಲಿ, ಪಶ್ಚಿಮ ಬಂಗಾಳ ಮತ್ತು ಕೇಂದ್ರ ಸರ್ಕಾರದ ನಡುವಿನ ಮುಸುಕಿನ ಗುದ್ದಾಟ ಮತ್ತಷ್ಟು ತೀವ್ರವಾಗಿದೆ. ಪೊಲೀಸ್ ಮಹಾ ನಿರ್ದೇಶಕ ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವಾಲಯ ವಿಚಾರಣೆಗೆ ಹಾಜರಾಗಬೇಕು ಎಂದು 2 ಬಾರಿ ನೋಟಿಸ್ ನೀಡಿತ್ತು. ಈಗ ಮೂವರು ಐಪಿಎಸ್ ಅಧಿಕಾರಿಗಳಿಗೆ ವರ್ಗಾವಣೆ ಮಾಡಿ ಆದೇಶಿಸಿದೆ.

ಆದರೆ, ಪಶ್ಚಿಮ ಬಂಗಳ ಸರ್ಕಾರ ಯಾವುದೇ ಅಧಿಕಾರಿ ದೆಹಲಿಗೆ ತೆರಳಿ ಗೃಹ ಸಚಿವಾಲಯದ ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು. ಈಗ ಮತ್ತೆ ಗೃಹ ಸಚಿವಾಲಯ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಡಿಜಿಪಿಗೆ ಹೊಸ ಪತ್ರವನ್ನು ಕಳುಹಿಸಿದ್ದು,  ಅವರು ನಿಯಮಗಳನ್ನು ಪಾಲಿಸುವಲ್ಲಿ ವಿಫಲರಾಗಿದ್ದಾರೆ ಎಂದಿದೆ. ಜೊತೆಗೆ ಐಪಿಎಸ್ ಕೇಡರ್ ನಿಯಮಗಳ ಸೆಕ್ಷನ್ 6 (1) ಪ್ರಕಾರ – “ಯಾವುದೇ ಭಿನ್ನಾಭಿಪ್ರಾಯಗಳಿದ್ದಲ್ಲಿ , ಕೇಂದ್ರದ ನಿರ್ಧಾರವು ಮೇಲುಗೈ ಸಾಧಿಸುತ್ತದೆ” ಎಂಬ ಎಚ್ಚರಿಕೆ ನೀಡಿದೆ.

ಜೊತೆಗೆ ಐಪಿಎಸ್​ ಅಧಿಕಾರಿಗಳನ್ನ ಕೇಂದ್ರ ಸರ್ಕಾರ ದೆಹಲಿಗೆ ವರ್ಗಾವಣೆ ಮಾಡಿದೆ. ರಾಜೀವ್ ಮಿಶ್ರಾ ಮತ್ತು ಪ್ರವೀಣ್ ತ್ರಿಪಾಠಿ ಎಂಬುವರಿಗೆ 5 ವರ್ಷಗಳ ಕಾಲಾವಧಿಗೆ, ಭೋಲನಾಥ್ ಪಾಂಡೆಯವರಿಗೆ 4 ವರ್ಷಗಳ ಕಾಲಾವಧಿಗೆ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: ಜೆ.ಪಿ ನಡ್ಡಾ ಕಾರಿನ ಮೇಲೆ ದಾಳಿ: ವಿಚಾರಣೆಗೆ ಅಧಿಕಾರಿಗಳನ್ನು ದೆಹಲಿಗೆ ಕಳುಹಿಸುವುದಿಲ್ಲ ಎಂದ ಪಶ್ಚಿಮ ಬಂಗಾಳ

ಇದಕ್ಕೆ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಇದು ಐಪಿಎಸ್ ಕೇಡರ್ ರೂಲ್ 1954 ರ ತುರ್ತು ನಿಬಂಧನೆಯ ದುರ್ಬಳಕೆಯಾಗಿದೆ ಎಂದಿದ್ದಾರೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಮಮತಾ ಬ್ಯಾನರ್ಜಿ, “ರಾಜ್ಯದ ಆಕ್ಷೇಪಣೆಯ ಹೊರತಾಗಿಯೂ ಪಶ್ಚಿಮ ಬಂಗಾಳದಲ್ಲಿ 3 ಸೇವೆ ಸಲ್ಲಿಸುತ್ತಿರುವ ಐಪಿಎಸ್ ಅಧಿಕಾರಿಗಳಿಗೆ ಕೇಂದ್ರದ ಡೆಪ್ಯುಟೇಷನ್‌ನ ಆದೇಶವು ಅಧಿಕಾರ ಮತ್ತು ಐಪಿಎಸ್ ಕೇಡರ್ ರೂಲ್ 1954 ರ ತುರ್ತು ನಿಬಂಧನೆಯ ದುರುಪಯೋಗವಾಗಿದೆ.” ಎಂದು ಕಿಡಿಕಾರಿದ್ದಾರೆ.

’ಪ್ರಾಕ್ಸಿ ಮೂಲಕ ರಾಜ್ಯ ಆಡಳಿತಯಂತ್ರ ನಿಯಂತ್ರಿಸಲು ಕೇಂದ್ರದ ಈ ಲಜ್ಜೆಗೆಟ್ಟ ಪ್ರಯತ್ನವನ್ನು ನಾವು ಅನುಮತಿಸುವುದಿಲ್ಲ ಎಂದಿದ್ದಾರೆ. ಪಶ್ಚಿಮ ಬಂಗಾಳವು ವಿಸ್ತರಣಾವಾದಿ ಮತ್ತು ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳ ಮುಂದೆ ಎಂದಿಗೂ ತಲೆ ಬಾಗುವುದಿಲ್ಲ’ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ…

 

ಈಗಾಗಲೇ 3 ಐಪಿಎಸ್ ಅಧಿಕಾರಿಗಳಿಗೆ, ಬಿಪಿಆರ್‌ಡಿ ಎಸ್‌ಪಿ ಆಗಿ ಭೋಲನಾಥ್ ಪಾಂಡೆ, ಎಸ್‌ಎಸ್‌ಬಿ ಡಿಐಜಿಯಾಗಿ ಪ್ರವೀಣ್ ತ್ರಿಪಾಠಿ, ಐಟಿಬಿಪಿ ಐಜಿಯಾಗಿ ರಾಜೀವ್ ಮಿಶ್ರಾ ಅವರಿಗೆ ವರ್ಗಾವಣೆ ಮಾಡಿ ಜವಾಬ್ದಾರಿ ವಹಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಈಗಾಗಲೇ ಘಟನೆ ಸಂಬಂಧ ಕೇಂದ್ರಕ್ಕೆ ವರದಿ ಸಲ್ಲಿಸಿರುವ ಬಂಗಾಳ ಸರ್ಕಾರ, ’ಜೆ.ಪಿ ನಡ್ಡಾ ಅವರಿಗೆ ಝಡ್‌ ಕ್ಯಾಟಗರಿ ಭದ್ರತೆ, ಬುಲೆಟ್‌ಫ್ರೂಫ್ ಕಾರ್, ಬೆಂಗಾವಲು ಮತ್ತು ಭದ್ರತಾ ಅಧಿಕಾರಿಗಳನ್ನೂ ನೇಮಕ ಮಾಡಲಾಗಿತ್ತು. ಅವರು ಚಲಿಸುವ ಮಾರ್ಗದಲ್ಲಿ 4 ಎಸ್ಪಿಗಳು, 8 ಡೆಪ್ಯೂಟಿ ಎಸ್ಪಿಗಳು, 14 ಇನ್ಸ್ಪೆಕ್ಟರ್‌ಗಳು, 70 ಸಬ್ಇನ್ಸ್ಪೆಕ್ಟರ್‌‌ಗಳು, 40 ಆರ್‌‌ಎಎಫ್ ಸಿಬ್ಬಂದಿ, 259 ಕಾನ್ಸ್ಟೆಬಲ್‌‌ಗಳು ಮತ್ತು 350 ಇತರೆ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿತ್ತು. ಭದ್ರತೆಯ ಮೇಲ್ವಿಚಾರಣೆಗೆ ಡಿಐಜಿಯನ್ನು ನಿಯೋಜಿಸಲಾಗಿತ್ತು. ಆದರೆ, ಕೇಂದ್ರ ಸರ್ಕಾರ ಜೆ.ಪಿ ನಡ್ಡಾ ವಾಹನಗಳ ಜೊತೆಗೆ ಇತರೆ ವಾಹನಗಳನ್ನೂ ನಿಯೋಜಿಸಿದ ಕಾರಣ ಪರಿಸ್ಥಿತಿ ಬಿಗಡಾಯಿಸಿತು’ ಎಂದು ತಿಳಿಸಿದೆ.


ಇದನ್ನೂ ಓದಿ: ಬಿಜೆಪಿ ಕಳ್ಳರ ಪಕ್ಷ, ಅವರಿಗಿಂತ ದೊಡ್ಡ ಕಳ್ಳರು ಎಲ್ಲೂ ಇಲ್ಲ- ಮಮತಾ ಬ್ಯಾನರ್ಜಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...