Homeಮುಖಪುಟಮನೆಗೆ ತೆರಳಿ ಗಂಗೂಲಿ ಹುಟ್ಟುಹಬ್ಬಕ್ಕೆ ಹಾರೈಸಿದ ಮಮತಾ ಬ್ಯಾನರ್ಜಿ; ರಾಜಕೀಯ ಕಾರಣ?

ಮನೆಗೆ ತೆರಳಿ ಗಂಗೂಲಿ ಹುಟ್ಟುಹಬ್ಬಕ್ಕೆ ಹಾರೈಸಿದ ಮಮತಾ ಬ್ಯಾನರ್ಜಿ; ರಾಜಕೀಯ ಕಾರಣ?

- Advertisement -
- Advertisement -

ಭಾರತೀಯ ಕ್ರಿಕೆಟ್ ತಂಡದ ಮಾಜಿ ಕ್ಯಾಪ್ಟನ್ ಸೌರವ್ ಗಂಗೂಲಿ ಅವರ ಜನ್ಮದಿನದಂದು ಪ್ರತಿಭಾರಿ ಆನ್‌ಲೈನ್‌ ಮೂಲಕ ಶುಭ ಹಾರೈಸುತ್ತಿದ್ದ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ಬಾರಿ ಸಂಪ್ರದಾಯವನ್ನು ಮೀರಿದ್ದಾರೆ. ಗುರುವಾರ ಸಂಜೆ 5 ಗಂಟೆಗೆ ಸೌರವ್ ಗಂಗೂಲಿ ಅವರ ಮನೆಗೆ ತೆರಳಿದ ಮಮತಾ ಬ್ಯಾನರ್ಜಿ ಮುಖತಃ ಭೇಟಿಯಾಗಿ ಜನ್ಮ ದಿನದ ಶುಭಾಶಯ ಕೋರಿದ್ದಾರೆ.

ಹಳದಿ ಗುಲಾಬಿಯ ಗುಚ್ಛ ಮತ್ತು ಸಿಹಿತಿಂಡಿಯೊಂದಿಗೆ ತೆರಳಿದ ಮುಖ್ಯಮಂತ್ರಿಗೆ ಸೌರವ್‌ ಗಂಗೂಲಿ ಅವರು ಕೂಡಾ ಹಿಂತಿರುಗಿ ಉಡುಗೊರೆಯನ್ನು ನೀಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿ ವರದಿ ಮಾಡಿದೆ.

ಇದನ್ನೂ ಓದಿ: ಗಂಗೂಲಿ ಕ್ಯಾಚ್ ಮಾಡಲು ಹೋಗಿ ‘ಕೋಬ್ರಾ’ ಹಿಡಿದ ಬಿಜೆಪಿ

ವಿಧಾನಸಭಾ ಚುನಾವಣೆಯ ಸಮಯದಲ್ಲಿ ಸೌರವ್ ಗಂಗೂಲಿ ಅವರ ಸುತ್ತ ರಾಜಕೀಯ ಬೆಳವಣಿಗೆ ನಡೆದಿದ್ದವು. ಅಲ್ಲದೆ ಇತ್ತೀಚೆಗೆ ಅವರಿಗೆ ಎದೆನೋವು ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು.

ಜನವರಿ 2 ರಂದು, ಸೌರವ್ ಗಂಗೂಲಿ ತಮ್ಮ ಮನೆಯ ಜಿಮ್‌ನಲ್ಲಿ ಇರಬೇಕಾದರೆ ಎದೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿಂದ ಅವರು ಐದು ರಾತ್ರಿ ಮತ್ತು ಆರು ದಿನಗಳ ಕಾಲ ಆಸ್ಪತ್ರೆಯಲ್ಲಿದ್ದರು. ಅವರು ಆಸ್ಪತ್ರೆ ದಾಖಲಾದ ದಿನದಿಂದ ರಾಜಕೀಯ ನಾಯಕರು ಅವರ ಆರೋಗ್ಯ ವಿಚಾರಿಸಲು ಆಸ್ಪತ್ರೆಯಲ್ಲಿ ಸರತಿ ಸಾಲು ನಿಲ್ಲತೊಡಗಿದ್ದರು.

ಈ ಸರತಿ ಸಾಲು ಎಷ್ಟರಮಟ್ಟಿಗೆ ಇತ್ತೆಂದರೆ, ಆಸ್ಪತ್ರೆಯು ಸೌರವ್ ಗಂಗೂಲಿ ಲೌಂಜ್ ಅನ್ನು ತೆರೆಯ ಬೇಕಾಯಿತು. ಅಲ್ಲಿ ವಿಐಪಿಗಳು ಅವರನ್ನು ಭೇಟಿ ಮಾಡಲು ತಮ್ಮ ಸರದಿಯನ್ನು ಕಾಯತೊಡಗಿದ್ದರು. ಸರಿಸುಮಾರು ಎಲ್ಲಾ ಪಕ್ಷಗಳ ರಾಜಕೀಯ ನಾಯಕರು ಅವರನ್ನು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ಗಂಗೂಲಿಯ ಆರೋಗ್ಯದ ಬಗ್ಗೆ ದೂರವಾಣಿ ಮೂಲಕ ವಿಚಾರಿಸಿದ್ದರು. ಗೃಹ ಸಚಿವ ಅಮಿತ್ ಶಾ ಅವರು ಗಂಗೂಲಿಯ ಆರೋಗ್ಯ ಬಗ್ಗೆಗಿನ ಮಾಹಿತಿಗಾಗಿ ಅವರ ಪತ್ನಿ ದೋನಾ ಗಂಗೂಲಿ ಅವರೊಂದಿಗೆ ಸಂಪರ್ಕದಲ್ಲಿದ್ದರು.

ಇದನ್ನೂ ಓದಿ: ಗಂಗೂಲಿಯ ಹೃದಯಾಘಾತಕ್ಕೆ ಮರುಗುವ ಮೋದಿಗೆ 60 ಹುತಾತ್ಮ ರೈತರು ಕಾಣುತ್ತಿಲ್ಲ: ಯೋಗೇಂದ್ರ ಯಾದವ್ ಕಿಡಿ

ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಮೊದಲ ದಿನದಂದೇ ಗಂಗೂಲಿಯನ್ನು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡಾ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಆ ಸಮಯದಲ್ಲಿ ರಾಜ್ಯ ಸಚಿವರಾಗಿದ್ದ ಅನುರಾಗ್ ಠಾಕೂರ್ ಮತ್ತು ರಾಜ್ಯಸಭಾ ಸಂಸದ ಸ್ವಪನ್ ದಾಸ್‌ಗುಪ್ತಾ ಕೂಡ ಅವರನ್ನು ಭೇಟಿ ಮಾಡಿದ್ದರು.

ಮಮತಾ ಬ್ಯಾನರ್ಜಿ ಅವರು ಗಂಗೂಲಿಯ 49 ನೇ ಹುಟ್ಟುಹಬ್ಬದಂದು ಅವರ ಮನೆಗೆ ತೆರಳಿ ವೈಯಕ್ತಿಕವಾಗಿ ಭೇಟಿಯಾಗಿ ಹಾರೈಸಿದ್ದು, ಅವರು ರಾಜಕೀಯದಿಂದ ಹೊರಗುಳಿದಿದ್ದಕ್ಕಾಗಿ ಧನ್ಯವಾದ ಹೇಳುವ ವಿಧಾನವಾಗಿದೆ ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ.

ಸೌರವ್‌ ಗಂಗೂಲಿಯನ್ನು ರಾಜಕೀಯಕ್ಕೆ ಸೇರಲು ಬಿಜೆಪಿ ಭಾರಿ ಒತ್ತಡ ನೀಡಿದ್ದೇ ಅವರು ಆಸ್ಪತ್ರೆ ಸೇರಲು ಕಾರಣ ಎಂದು ಸಿಪಿಎಂ ನಾಯಕ ಅಶೋಕ್ ಭಟ್ಟಾಚಾರ್ಯ ಆರೋಪಿಸಿದ್ದರು.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಬಿಜೆಪಿಯು ಸೌರವ್ ಗಂಗೂಲಿಯನ್ನು ಪಕ್ಷಕ್ಕೆ ಸೇರಲು ಮತ್ತು ಅದರ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರೇರೇಪಿಸುತ್ತಿದೆ ಎಂದು ವರದಿಯಾಗಿತ್ತು.

ಇದನ್ನೂ ಓದಿ: ಸಾಂಕ್ರಾಮಿಕ ನಿಯಂತ್ರಿಸಲು ವಿಫಲರಾದ ಈ ಐದು ನಾಯಕರು ಎಡವಿದ್ದೆಲ್ಲಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...