Homeಮುಖಪುಟಮನೆಗೆ ತೆರಳಿ ಗಂಗೂಲಿ ಹುಟ್ಟುಹಬ್ಬಕ್ಕೆ ಹಾರೈಸಿದ ಮಮತಾ ಬ್ಯಾನರ್ಜಿ; ರಾಜಕೀಯ ಕಾರಣ?

ಮನೆಗೆ ತೆರಳಿ ಗಂಗೂಲಿ ಹುಟ್ಟುಹಬ್ಬಕ್ಕೆ ಹಾರೈಸಿದ ಮಮತಾ ಬ್ಯಾನರ್ಜಿ; ರಾಜಕೀಯ ಕಾರಣ?

- Advertisement -
- Advertisement -

ಭಾರತೀಯ ಕ್ರಿಕೆಟ್ ತಂಡದ ಮಾಜಿ ಕ್ಯಾಪ್ಟನ್ ಸೌರವ್ ಗಂಗೂಲಿ ಅವರ ಜನ್ಮದಿನದಂದು ಪ್ರತಿಭಾರಿ ಆನ್‌ಲೈನ್‌ ಮೂಲಕ ಶುಭ ಹಾರೈಸುತ್ತಿದ್ದ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ಬಾರಿ ಸಂಪ್ರದಾಯವನ್ನು ಮೀರಿದ್ದಾರೆ. ಗುರುವಾರ ಸಂಜೆ 5 ಗಂಟೆಗೆ ಸೌರವ್ ಗಂಗೂಲಿ ಅವರ ಮನೆಗೆ ತೆರಳಿದ ಮಮತಾ ಬ್ಯಾನರ್ಜಿ ಮುಖತಃ ಭೇಟಿಯಾಗಿ ಜನ್ಮ ದಿನದ ಶುಭಾಶಯ ಕೋರಿದ್ದಾರೆ.

ಹಳದಿ ಗುಲಾಬಿಯ ಗುಚ್ಛ ಮತ್ತು ಸಿಹಿತಿಂಡಿಯೊಂದಿಗೆ ತೆರಳಿದ ಮುಖ್ಯಮಂತ್ರಿಗೆ ಸೌರವ್‌ ಗಂಗೂಲಿ ಅವರು ಕೂಡಾ ಹಿಂತಿರುಗಿ ಉಡುಗೊರೆಯನ್ನು ನೀಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿ ವರದಿ ಮಾಡಿದೆ.

ಇದನ್ನೂ ಓದಿ: ಗಂಗೂಲಿ ಕ್ಯಾಚ್ ಮಾಡಲು ಹೋಗಿ ‘ಕೋಬ್ರಾ’ ಹಿಡಿದ ಬಿಜೆಪಿ

ವಿಧಾನಸಭಾ ಚುನಾವಣೆಯ ಸಮಯದಲ್ಲಿ ಸೌರವ್ ಗಂಗೂಲಿ ಅವರ ಸುತ್ತ ರಾಜಕೀಯ ಬೆಳವಣಿಗೆ ನಡೆದಿದ್ದವು. ಅಲ್ಲದೆ ಇತ್ತೀಚೆಗೆ ಅವರಿಗೆ ಎದೆನೋವು ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು.

ಜನವರಿ 2 ರಂದು, ಸೌರವ್ ಗಂಗೂಲಿ ತಮ್ಮ ಮನೆಯ ಜಿಮ್‌ನಲ್ಲಿ ಇರಬೇಕಾದರೆ ಎದೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿಂದ ಅವರು ಐದು ರಾತ್ರಿ ಮತ್ತು ಆರು ದಿನಗಳ ಕಾಲ ಆಸ್ಪತ್ರೆಯಲ್ಲಿದ್ದರು. ಅವರು ಆಸ್ಪತ್ರೆ ದಾಖಲಾದ ದಿನದಿಂದ ರಾಜಕೀಯ ನಾಯಕರು ಅವರ ಆರೋಗ್ಯ ವಿಚಾರಿಸಲು ಆಸ್ಪತ್ರೆಯಲ್ಲಿ ಸರತಿ ಸಾಲು ನಿಲ್ಲತೊಡಗಿದ್ದರು.

ಈ ಸರತಿ ಸಾಲು ಎಷ್ಟರಮಟ್ಟಿಗೆ ಇತ್ತೆಂದರೆ, ಆಸ್ಪತ್ರೆಯು ಸೌರವ್ ಗಂಗೂಲಿ ಲೌಂಜ್ ಅನ್ನು ತೆರೆಯ ಬೇಕಾಯಿತು. ಅಲ್ಲಿ ವಿಐಪಿಗಳು ಅವರನ್ನು ಭೇಟಿ ಮಾಡಲು ತಮ್ಮ ಸರದಿಯನ್ನು ಕಾಯತೊಡಗಿದ್ದರು. ಸರಿಸುಮಾರು ಎಲ್ಲಾ ಪಕ್ಷಗಳ ರಾಜಕೀಯ ನಾಯಕರು ಅವರನ್ನು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ಗಂಗೂಲಿಯ ಆರೋಗ್ಯದ ಬಗ್ಗೆ ದೂರವಾಣಿ ಮೂಲಕ ವಿಚಾರಿಸಿದ್ದರು. ಗೃಹ ಸಚಿವ ಅಮಿತ್ ಶಾ ಅವರು ಗಂಗೂಲಿಯ ಆರೋಗ್ಯ ಬಗ್ಗೆಗಿನ ಮಾಹಿತಿಗಾಗಿ ಅವರ ಪತ್ನಿ ದೋನಾ ಗಂಗೂಲಿ ಅವರೊಂದಿಗೆ ಸಂಪರ್ಕದಲ್ಲಿದ್ದರು.

ಇದನ್ನೂ ಓದಿ: ಗಂಗೂಲಿಯ ಹೃದಯಾಘಾತಕ್ಕೆ ಮರುಗುವ ಮೋದಿಗೆ 60 ಹುತಾತ್ಮ ರೈತರು ಕಾಣುತ್ತಿಲ್ಲ: ಯೋಗೇಂದ್ರ ಯಾದವ್ ಕಿಡಿ

ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಮೊದಲ ದಿನದಂದೇ ಗಂಗೂಲಿಯನ್ನು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡಾ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಆ ಸಮಯದಲ್ಲಿ ರಾಜ್ಯ ಸಚಿವರಾಗಿದ್ದ ಅನುರಾಗ್ ಠಾಕೂರ್ ಮತ್ತು ರಾಜ್ಯಸಭಾ ಸಂಸದ ಸ್ವಪನ್ ದಾಸ್‌ಗುಪ್ತಾ ಕೂಡ ಅವರನ್ನು ಭೇಟಿ ಮಾಡಿದ್ದರು.

ಮಮತಾ ಬ್ಯಾನರ್ಜಿ ಅವರು ಗಂಗೂಲಿಯ 49 ನೇ ಹುಟ್ಟುಹಬ್ಬದಂದು ಅವರ ಮನೆಗೆ ತೆರಳಿ ವೈಯಕ್ತಿಕವಾಗಿ ಭೇಟಿಯಾಗಿ ಹಾರೈಸಿದ್ದು, ಅವರು ರಾಜಕೀಯದಿಂದ ಹೊರಗುಳಿದಿದ್ದಕ್ಕಾಗಿ ಧನ್ಯವಾದ ಹೇಳುವ ವಿಧಾನವಾಗಿದೆ ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ.

ಸೌರವ್‌ ಗಂಗೂಲಿಯನ್ನು ರಾಜಕೀಯಕ್ಕೆ ಸೇರಲು ಬಿಜೆಪಿ ಭಾರಿ ಒತ್ತಡ ನೀಡಿದ್ದೇ ಅವರು ಆಸ್ಪತ್ರೆ ಸೇರಲು ಕಾರಣ ಎಂದು ಸಿಪಿಎಂ ನಾಯಕ ಅಶೋಕ್ ಭಟ್ಟಾಚಾರ್ಯ ಆರೋಪಿಸಿದ್ದರು.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಬಿಜೆಪಿಯು ಸೌರವ್ ಗಂಗೂಲಿಯನ್ನು ಪಕ್ಷಕ್ಕೆ ಸೇರಲು ಮತ್ತು ಅದರ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರೇರೇಪಿಸುತ್ತಿದೆ ಎಂದು ವರದಿಯಾಗಿತ್ತು.

ಇದನ್ನೂ ಓದಿ: ಸಾಂಕ್ರಾಮಿಕ ನಿಯಂತ್ರಿಸಲು ವಿಫಲರಾದ ಈ ಐದು ನಾಯಕರು ಎಡವಿದ್ದೆಲ್ಲಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...