Homeಮುಖಪುಟಬಂಗಾಳ ರಾಜ್ಯಪಾಲರನ್ನು ಕಿತ್ತು ಹಾಕಲು ಒಕ್ಕೂಟ ಸರ್ಕಾರಕ್ಕೆ ಪತ್ರ ಬರೆದ ಮಮತಾ ಬ್ಯಾನರ್ಜಿ

ಬಂಗಾಳ ರಾಜ್ಯಪಾಲರನ್ನು ಕಿತ್ತು ಹಾಕಲು ಒಕ್ಕೂಟ ಸರ್ಕಾರಕ್ಕೆ ಪತ್ರ ಬರೆದ ಮಮತಾ ಬ್ಯಾನರ್ಜಿ

- Advertisement -
- Advertisement -

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ರಾಜ್ಯಪಾಲ ಜಗದೀಪ್ ಧಂಕರ್ ಅವರ ಮೇಲೆ ವಾಗ್ದಾಳಿ ನಡೆಸಿದ್ದು, ಅವರನ್ನು “ಜೈನ ಹವಾಲಾ ಪ್ರಕರಣದ ಆರೋಪ ಪಟ್ಟಿಯಲ್ಲಿರುವ ಭ್ರಷ್ಟ ವ್ಯಕ್ತಿ” ಎಂದು ಕರೆದ್ದಾರೆ. ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್‌‌ ಧಂಕರ್‌ ಅವರನ್ನು ಅವರ ಸ್ಥಾನದಿಂದ ಕಿತ್ತುಹಾಕಲು ಮೂರು ಪತ್ರಗಳನ್ನು ಬರೆದಿದ್ದೇನೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

“ಪಶ್ಚಿಮ ಬಂಗಾಳ ರಾಜ್ಯಪಾಲರನ್ನು ಅವರ ಸ್ಥಾನದಿಂದ ಕಿತ್ತು ಹಾಕಲು ನಾನು ಮೂರು ಪತ್ರಗಳನ್ನು ಬರೆದಿದ್ದೇನೆ. ಅವರು ಭ್ರಷ್ಟ ವ್ಯಕ್ತಿಯಾಗಿದ್ದು, ಅವರ ಹೆಸರು 1996 ರಲ್ಲಿ ಹವಾಲಾ ಜೈನ್ ಪ್ರಕರಣದ ಚಾರ್ಜ್‌ಶೀಟ್‌ನಲ್ಲಿತ್ತು” ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

“ನಮ್ಮ ಸರ್ಕಾರವು ಭಾರಿ ಜನಾದೇಶವನ್ನು ಪಡೆದ ನಂತರವೂ ಅವರ ಆದೇಶ ಯಾಕೆ ಬೇಕು?” ಎಂದು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಖ್ಯಾತ ಪತ್ರಕರ್ತ ಪಿ. ಸಾಯಿನಾಥ್‌ ಅವರಿಗೆ ಪ್ರತಿಷ್ಠಿತ ‘ಫುಕುವೋಕಾ ಗ್ರ್ಯಾಂಡ್ ಪ್ರಶಸ್ತಿ-2021’ ಘೋಷಣೆ

ಜೈನ ಡೈರೀಸ್‌ ಪ್ರಕರಣ ಎಂದೂ ಕರೆಯಲ್ಪಡುವ ಹವಾಲಾ ಹಗರಣವು 1990 ರ ದಶಕದ ಹವಾಲಾ ಹಗರಣವಾಗಿದ್ದು, ರಾಜಕಾರಣಿಗಳು ನಾಲ್ಕು ಹವಾಲಾ ದಲ್ಲಾಳಿಗಳ ಮೂಲಕ, ಅಂದರೆ ಜೈನ ಸಹೋದರರ ಮೂಲಕ ಹವಾಲ ಹಣ ಕಳುಹಿಸಿದ ಆರೋಪಗಳನ್ನು ಒಳಗೊಂಡಿತ್ತು. ಇದು ದೇಶದ ಕೆಲವು ಪ್ರಮುಖ ರಾಜಕಾರಣಿಗಳನ್ನು ಒಳಗೊಂಡ 18 ಮಿಲಿಯನ್ ಡಾಲರ್‌‌ನ ಹಗರಣವಾಗಿದೆ.

ಟಿಎಂಸಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಮತ್ತು ರಾಜ್ಯಪಾಲ ಜಗದೀಪ್ ಧಂಕರ್ ನಡುವೆ ಸಂಘರ್ಷ ನಡೆಯುತ್ತಿದ್ದು, ರಾಜ್ಯಪಾಲರ ವಿರುದ್ಧ ರಾಜ್ಯ ವಿಧಾನಸಭೆಯಲ್ಲಿ ಟಿಎಂಸಿ ನಿರ್ಣಯ ಮಂಡಿಸಲು ಯೋಜಿಸುತ್ತಿದೆ ಎಂದು ಕಳೆದ ವಾರ ಮೂಲಗಳು ತಿಳಿಸಿತ್ತು. ಈ ಕುರಿತು ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಮುಖ್ಯಮಂತ್ರಿ ಬ್ಯಾನರ್ಜಿ ಅವರು ವಿಧಾನಸಭೆ ಸ್ಪೀಕರ್ ಬಿಮನ್ ಬ್ಯಾನರ್ಜಿ ಅವರೊಂದಿಗೆ ಚರ್ಚಿಸಿದ್ದಾರೆ. ಜುಲೈ 2 ರಿಂದ ರಾಜ್ಯದಲ್ಲಿ ವಿಧಾನಸಭೆ ಅಧಿವೇಶನ ಆರಂಭವಾಗಲಿದೆ.

ಪಶ್ಚಿಮ ಬಂಗಾಳ ವಿಧಾನಸಭೆ ಸ್ಪೀಕರ್ ಬಿಮಾನ್ ಬ್ಯಾನರ್ಜಿ ಅವರು ಕಳೆದ ವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಂಸದೀಯ ವಿಷಯಗಳಲ್ಲಿ ರಾಜ್ಯಪಾಲ ಧಂಕರ್ ಅವರ ಅತಿಯಾದ ಹಸ್ತಕ್ಷೇಪ ಮತ್ತು ಅವರ ವಿಧಾನಸಭೆಯ ಕಾರ್ಯವೈಖರಿಯ ಬಗ್ಗೆ ದೂರು ನೀಡಿದ್ದರು.

ಇದನ್ನೂ ಓದಿ: ಲಕ್ಷದ್ವೀಪದ 100 ಮನೆಗಳ ಧ್ವಂಸಕ್ಕೆ ನೋಟಿಸ್: ಸಾರ್ವಜನಿಕರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...