Homeಮುಖಪುಟರಾಜ್ಯದ ಪಾಲಿನ ಅನುದಾನಕ್ಕೆ ದೀದಿ ಫೈಟ್‌: ಕೇಂದ್ರಕ್ಕೆ 7 ದಿನಗಳ ಗಡುವು ನೀಡಿದ ಮಮತಾ ಬ್ಯಾನರ್ಜಿ

ರಾಜ್ಯದ ಪಾಲಿನ ಅನುದಾನಕ್ಕೆ ದೀದಿ ಫೈಟ್‌: ಕೇಂದ್ರಕ್ಕೆ 7 ದಿನಗಳ ಗಡುವು ನೀಡಿದ ಮಮತಾ ಬ್ಯಾನರ್ಜಿ

- Advertisement -
- Advertisement -

ರಾಜ್ಯಕ್ಕೆ ಕೇಂದ್ರದಿಂದ ಸಿಗಬೇಕಿರುವ ಅನುದಾನದ ಬಾಕಿಯನ್ನು 7 ದಿನಗಳಲ್ಲಿ ಬಿಡುಗಡೆ ಮಾಡಬೇಕು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರಕಾರಕ್ಕೆ ಗಡುವು ನೀಡಿದ್ದು, ಲೋಕಸಭೆ ಚುನಾವಣೆ ಸಮೀಪಿಸಿದ್ದರಿಂದ ಮಮತಾ ಬ್ಯಾನರ್ಜಿ, ಬಿಜೆಪಿ ವಿರುದ್ದ ಇದನ್ನು ಪ್ರಬಲ ಅಸ್ತ್ರವಾಗಿ ತೆಗೆದುಕೊಂಡು ಪ್ರಚಾರ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಪಶ್ಚಿಮ ಬಂಗಾಳಕ್ಕೆ ಪ್ರಧಾನಮಂತ್ರಿ ಆವಾಸ್‌ ಯೊಜನೆಯಡಿ 9,330 ಕೋಟಿ, ನರೇಗಾದಡಿ 6,900 ಕೋಟಿ, ರಾಷ್ಟ್ರೀಯ ಆರೋಗ್ಯ ಮಿಷನ್‌ ಯೋಜನೆಯಡಿ 830 ಕೋಟಿ, ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿ  770ಕೋಟಿ ರೂ, ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ 350 ಕೋಟಿ, ಮಿಡ್‌ ಡೇ ಮೀಲ್‌ ಸ್ಕೀಂ ಅಡಿಯಲ್ಲಿ 175 ಕೋಟಿ, ಹಾಗೆಯೇ ಇತರ ಯೋಜನೆಗಳ ಅಡಿಯಲ್ಲಿ ಹಣ ಕೇಂದ್ರದಿಂದ ಬಿಡುಗಡೆಗೆ ಬಾಕಿಯಿದೆ.

ಮಮತಾ ಬ್ಯಾನರ್ಜಿ ಅವರು ಡಿಸೆಂಬರ್ 20ರಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಬಾಕಿ ಉಳಿದಿರುವ ಅನುದಾನ ಬಿಡುಗಡೆ ಬಗ್ಗೆ ಚರ್ಚಿಸಿದ್ದರು. ಈ ವೇಳೆ ರಾಜ್ಯ ಮತ್ತು ಕೇಂದ್ರದ ಅಧಿಕಾರಿಗಳು ಒಟ್ಟಿಗೆ ಕುಳಿತು ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದರು. ಈ ಕುರಿತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಲವು ಬಾರಿ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದರು. ತೃಣಮೂಲದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮತ್ತು ಇತರ ಪಕ್ಷದ ನಾಯಕರ ತಂಡ ದೆಹಲಿಗೆ ತೆರಳಿತ್ತು, ಆದರೆ ಕೇಂದ್ರ ಸಚಿವರನ್ನು ಭೇಟಿ ಮಾಡುವಲ್ಲಿ ವಿಫಲರಾಗಿದ್ದರು.

ಈ ಬಗ್ಗೆ ಪ್ರಧಾನಿಯನ್ನು ಭೇಟಿ ಮಾಡಲು ಕಳೆದ ತಿಂಗಳು ಸಿಎಂ ಬ್ಯಾನರ್ಜಿ ದೆಹಲಿಗೆ ಭೇಟಿ ನೀಡುವ ಮೊದಲು  ಕೋಲ್ಕತ್ತಾದಲ್ಲಿ ಟಿಎಂಸಿ ಪಕ್ಷದ ನಾಯಕರು ರಾಜಭವನದ ಹೊರಗೆ ಪ್ರತಿಭಟನೆ ನಡೆಸಿದ್ದರು.  ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ನೇತೃತ್ವದಲ್ಲಿ ಮಹಾತ್ಮ ಗಾಂಧಿ ಅವರ ಜನ್ಮದಿನದಂದು ಕೇಂದ್ರದಿಂದ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ ನವದೆಹಲಿಯ ರಾಜ್‌ಘಾಟ್‌ನಲ್ಲಿ ಪ್ರತಿಭಟನಾ ಧರಣಿ ನಡೆಸಲಾಗಿತ್ತು.

ಈ ಯೋಜನೆಗಳು ಗ್ರಾಮೀಣ ಮತದಾರರ ಮೇಲೆ ನೇರವಾಗಿ ಪರಿಣಾಮ ಬೀರುವುದರಿಂದ ಮತ್ತು ಮುಂದಿನ ದಿನಗಳಲ್ಲಿ ಲೋಕಸಭೆ ಚುನಾವಣೆಗಳು ನಡೆಯಲಿರುವುದರಿಂದ ಈ ವಿಷಯವು ಹೆಚ್ಚು ಮುನ್ನೆಲೆಗೆ ಬಂದಿದೆ. ಲೋಕಸಭೆ ಚುನಾವಣೆಯ ಹಿನ್ನೆಲೆ ಅನುದಾನ ತಡೆ ವಿಚಾರವನ್ನು ಜನರ ಮುಂದೆ ಇಡಲು ಮಮತಾ ಬ್ಯಾನರ್ಜಿ ಅವರು ಬಯಸಿದ್ದಾರೆ ಎಂದು ಹೇಳಲಾಗಿದೆ.

ಇದನ್ನು ಓದಿ: ಭಾರತ್ ಜೋಡೋ ನ್ಯಾಯ ಯಾತ್ರೆ: ಸಾರ್ವಜನಿಕ ಸಭೆಗಳಿಗೆ ಅನುಮತಿ ನೀಡದ ದೀದಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...