Homeಮುಖಪುಟಮದರ್‌ ತೆರೇಸಾರ ಮಿಷನರೀಸ್‌ ಬ್ಯಾಂಕ್‌ ಖಾತೆಗಳ ಸ್ಥಗಿತ: ಮಮತಾ ಬ್ಯಾನರ್ಜಿ ಆರೋಪ

ಮದರ್‌ ತೆರೇಸಾರ ಮಿಷನರೀಸ್‌ ಬ್ಯಾಂಕ್‌ ಖಾತೆಗಳ ಸ್ಥಗಿತ: ಮಮತಾ ಬ್ಯಾನರ್ಜಿ ಆರೋಪ

- Advertisement -
- Advertisement -

ಮದರ್ ತೆರೇಸಾ ಅವರ ಮಿಷನರೀಸ್ ಆಫ್ ಚಾರಿಟಿ ಸಂಸ್ಥೆಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಟ್ವೀಟ್ ಮಾಡಿದ್ದಾರೆ.

“ಕೇಂದ್ರ ಸಚಿವಾಲಯವು ಭಾರತದಲ್ಲಿನ ಮದರ್ ತೆರೇಸಾ ಅವರ ಮಿಷನರೀಸ್ ಆಫ್ ಚಾರಿಟಿಯ ಎಲ್ಲಾ ಬ್ಯಾಂಕ್ ಖಾತೆಗಳನ್ನು ಕ್ರಿಸ್‌ಮಸ್‌ನಲ್ಲಿ ಸ್ಥಗಿತಗೊಳಿಸಿದೆ ಎಂದು ಕೇಳಿ ಆಘಾತವಾಯಿತು!” ಎಂದು ಟ್ವೀಟ್‌ ಮಾಡಿರುವ ಅವರು, “ಕಾನೂನು ಅತ್ಯುನ್ನತವಾಗಿದ್ದರೂ, ಮಾನವೀಯ ಪ್ರಯತ್ನಗಳಲ್ಲಿ ರಾಜಿ ಮಾಡಿಕೊಳ್ಳಬಾರದು” ಎಂದು ತಿಳಿಸಿದ್ದಾರೆ.

ಕಲ್ಕತ್ತಾದ ಆರ್ಚ್‌ಡಯಾಸಿಸ್‌ನ ಫಾದರ್ ಡೊಮಿನಿಕ್ ಗೋಮ್ಸ್ ಅವರು ಹೇಳಿಕೆ ನೀಡಿದ್ದು, “ಬಡವರಿಗೆ ಕ್ರೂರ ಕ್ರಿಸ್ಮಸ್ ಉಡುಗೊರೆ ಇದು” ಎಂದು ಹೇಳಿದ್ದಾರೆ.

ಸಂಸ್ಥೆಯ ಚಟುವಟಿಕೆಗಳ ಫಲಾನುಭವಿಗಳು ಸೇರಿದಂತೆ 22,000 ಜನರ ಮೇಲೆ ಸರ್ಕಾರದ ನಿರ್ಧಾರ ಪರಿಣಾಮ ಬೀರುತ್ತದೆ ಎಂದು ಹೇಳಿಕೆ ನೀಡಿದ್ದಾರೆ.

ಮಿಷನರೀಸ್ ಆಫ್ ಚಾರಿಟಿ ಹೇಳಿಕೆ ನೀಡಿದ್ದು, “ಕ್ರಿಶ್ಚಿಯನ್ ಸಮುದಾಯ ಮತ್ತು ಅವರ ಸಾಮಾಜಿಕ ಪ್ರಭಾವದ ಮೇಲಿನ ಈ ಇತ್ತೀಚಿನ ದಾಳಿಯು ಭಾರತದ ಬಡ ಬಡವರ ಮೇಲಿನ ದಾಳಿಗಿಂತ ಹೆಚ್ಚು ಭೀಕರವಾಗಿದೆ” ಎಂದು ಹೇಳಿದೆ.

“ಕ್ರಿಶ್ಚಿಯನ್ ಸಂಘಟನೆಗಳು ಅನ್ಯಧರ್ಮಿಯರನ್ನು ಮತಾಂತರ ಮಾಡುತ್ತವೆ ಎಂದು ಆರೋಪಿಸಿ ಇಂತಹ ಘಟನೆಗಳನ್ನು ಸಮರ್ಥಿಸಿಕೊಳ್ಳಲಾಗುತ್ತದೆ. ಈ ಆರೋಪವು ಸುಳ್ಳಾಗಿದೆ. ಮತಾಂತರ ನಿಜವಾಗಿದ್ದರೆ, ಪ್ರಸ್ತುತ ಭಾರತದಲ್ಲಿ ಶೇ. 2.3ಕ್ಕಿಂತ ಹೆಚ್ಚು ಕ್ರಿಶ್ಚಿಯನ್ನರು ಇರುತ್ತಿದ್ದರು” ಎಂದು ತಿಳಿಸಿದ್ದಾರೆ.

ಗುಜರಾತ್‌ನ ವಡೋದರಾ ನಗರದಲ್ಲಿ ಬಾಲಕಿಯರ ಚಾರಿಟಿ ಹೋಮ್‌ನಲ್ಲಿ ಬಲವಂತದ ಮತಾಂತರ ಮಾಡಲಾಗುತ್ತಿದೆ ಎಂದು ಆರೋಪಿಸಿ ಈ ತಿಂಗಳ ಆರಂಭದಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಹುಡುಗಿಯರಿಗೆ ಬೈಬಲ್ ಓದಲು ಹೇಳಲಾಗುತ್ತಿದೆ. ಇತರ ಸಮುದಾಯಗಳಿಗೆ ಸೇರಿದವರ ಕೆಲವು ವಿವಾಹಗಳನ್ನು ಕ್ರಿಶ್ಚಿಯನ್ ಸಂಪ್ರದಾಯದಂತೆ ನಡೆಸಲಾಗುತ್ತಿದೆ ಎಂಬ ಆರೋಪಗಳನ್ನು ಪೊಲೀಸರು ಮಾಡಿದ್ದರು. ಆದರೆ, ಇನ್‌ಸ್ಟಿಟ್ಯೂಟ್‌ನಲ್ಲಿ ಕೆಲಸ ಮಾಡುತ್ತಿರುವ ಸನ್ಯಾಸಿನಿಯೊಬ್ಬರು ಆರೋಪಳನ್ನು ಅಲ್ಲಗಳೆದಿದ್ದರು.

ಸ್ಥಗಿತ ಮಾಡಿಲ್ಲ: ಗೃಹ ಸಚಿವಾಲಯ ಸ್ಪಷ್ಟನೆ

“ಮಿಷನರೀಸ್ ಆಫ್ ಚಾರಿಟಿಯ ಯಾವುದೇ ಖಾತೆಗಳನ್ನು ಸ್ಥಗಿತ ಮಾಡಿಲ್ಲ. ಮಿಷನರೀಸ್ ಆಫ್ ಚಾರಿಟಿ ಸ್ವತಃ ತನ್ನ ಖಾತೆಗಳನ್ನು ಸ್ಥಗಿತ ಮಾಡಲು ಎಸ್‌ಬಿಐಗೆ ವಿನಂತಿಯನ್ನು ಕಳುಹಿಸಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತಿಳಿಸಿದೆ” ಎಂದು ಹೇಳಿಕೆ ಗೃಹ ಸಚಿವಾಲಯ ಹೇಳಿದೆ.

“ಮಿಷನರೀಸ್ ಆಫ್ ಚಾರಿಟಿಯ ನವೀಕರಣ ಅರ್ಜಿಯನ್ನು ಅನುಮೋದಿಸಲಾಗಿಲ್ಲ. ಮಿಷನರೀಸ್ ಆಫ್ ಚಾರಿಟಿಯ ನೋಂದಣಿಯು ಡಿಸೆಂಬರ್ 31, 2021 ರವರೆಗೆ ಮಾನ್ಯವಾಗಿದೆ” ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ.


ಇದನ್ನೂ ಓದಿರಿ: ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಮತಾಂತರ ನಿಷೇಧ ಕಾಯ್ದೆ ರದ್ದು: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...