Homeಮುಖಪುಟಮದರ್‌ ತೆರೇಸಾರ ಮಿಷನರೀಸ್‌ ಬ್ಯಾಂಕ್‌ ಖಾತೆಗಳ ಸ್ಥಗಿತ: ಮಮತಾ ಬ್ಯಾನರ್ಜಿ ಆರೋಪ

ಮದರ್‌ ತೆರೇಸಾರ ಮಿಷನರೀಸ್‌ ಬ್ಯಾಂಕ್‌ ಖಾತೆಗಳ ಸ್ಥಗಿತ: ಮಮತಾ ಬ್ಯಾನರ್ಜಿ ಆರೋಪ

- Advertisement -
- Advertisement -

ಮದರ್ ತೆರೇಸಾ ಅವರ ಮಿಷನರೀಸ್ ಆಫ್ ಚಾರಿಟಿ ಸಂಸ್ಥೆಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಟ್ವೀಟ್ ಮಾಡಿದ್ದಾರೆ.

“ಕೇಂದ್ರ ಸಚಿವಾಲಯವು ಭಾರತದಲ್ಲಿನ ಮದರ್ ತೆರೇಸಾ ಅವರ ಮಿಷನರೀಸ್ ಆಫ್ ಚಾರಿಟಿಯ ಎಲ್ಲಾ ಬ್ಯಾಂಕ್ ಖಾತೆಗಳನ್ನು ಕ್ರಿಸ್‌ಮಸ್‌ನಲ್ಲಿ ಸ್ಥಗಿತಗೊಳಿಸಿದೆ ಎಂದು ಕೇಳಿ ಆಘಾತವಾಯಿತು!” ಎಂದು ಟ್ವೀಟ್‌ ಮಾಡಿರುವ ಅವರು, “ಕಾನೂನು ಅತ್ಯುನ್ನತವಾಗಿದ್ದರೂ, ಮಾನವೀಯ ಪ್ರಯತ್ನಗಳಲ್ಲಿ ರಾಜಿ ಮಾಡಿಕೊಳ್ಳಬಾರದು” ಎಂದು ತಿಳಿಸಿದ್ದಾರೆ.

ಕಲ್ಕತ್ತಾದ ಆರ್ಚ್‌ಡಯಾಸಿಸ್‌ನ ಫಾದರ್ ಡೊಮಿನಿಕ್ ಗೋಮ್ಸ್ ಅವರು ಹೇಳಿಕೆ ನೀಡಿದ್ದು, “ಬಡವರಿಗೆ ಕ್ರೂರ ಕ್ರಿಸ್ಮಸ್ ಉಡುಗೊರೆ ಇದು” ಎಂದು ಹೇಳಿದ್ದಾರೆ.

ಸಂಸ್ಥೆಯ ಚಟುವಟಿಕೆಗಳ ಫಲಾನುಭವಿಗಳು ಸೇರಿದಂತೆ 22,000 ಜನರ ಮೇಲೆ ಸರ್ಕಾರದ ನಿರ್ಧಾರ ಪರಿಣಾಮ ಬೀರುತ್ತದೆ ಎಂದು ಹೇಳಿಕೆ ನೀಡಿದ್ದಾರೆ.

ಮಿಷನರೀಸ್ ಆಫ್ ಚಾರಿಟಿ ಹೇಳಿಕೆ ನೀಡಿದ್ದು, “ಕ್ರಿಶ್ಚಿಯನ್ ಸಮುದಾಯ ಮತ್ತು ಅವರ ಸಾಮಾಜಿಕ ಪ್ರಭಾವದ ಮೇಲಿನ ಈ ಇತ್ತೀಚಿನ ದಾಳಿಯು ಭಾರತದ ಬಡ ಬಡವರ ಮೇಲಿನ ದಾಳಿಗಿಂತ ಹೆಚ್ಚು ಭೀಕರವಾಗಿದೆ” ಎಂದು ಹೇಳಿದೆ.

“ಕ್ರಿಶ್ಚಿಯನ್ ಸಂಘಟನೆಗಳು ಅನ್ಯಧರ್ಮಿಯರನ್ನು ಮತಾಂತರ ಮಾಡುತ್ತವೆ ಎಂದು ಆರೋಪಿಸಿ ಇಂತಹ ಘಟನೆಗಳನ್ನು ಸಮರ್ಥಿಸಿಕೊಳ್ಳಲಾಗುತ್ತದೆ. ಈ ಆರೋಪವು ಸುಳ್ಳಾಗಿದೆ. ಮತಾಂತರ ನಿಜವಾಗಿದ್ದರೆ, ಪ್ರಸ್ತುತ ಭಾರತದಲ್ಲಿ ಶೇ. 2.3ಕ್ಕಿಂತ ಹೆಚ್ಚು ಕ್ರಿಶ್ಚಿಯನ್ನರು ಇರುತ್ತಿದ್ದರು” ಎಂದು ತಿಳಿಸಿದ್ದಾರೆ.

ಗುಜರಾತ್‌ನ ವಡೋದರಾ ನಗರದಲ್ಲಿ ಬಾಲಕಿಯರ ಚಾರಿಟಿ ಹೋಮ್‌ನಲ್ಲಿ ಬಲವಂತದ ಮತಾಂತರ ಮಾಡಲಾಗುತ್ತಿದೆ ಎಂದು ಆರೋಪಿಸಿ ಈ ತಿಂಗಳ ಆರಂಭದಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಹುಡುಗಿಯರಿಗೆ ಬೈಬಲ್ ಓದಲು ಹೇಳಲಾಗುತ್ತಿದೆ. ಇತರ ಸಮುದಾಯಗಳಿಗೆ ಸೇರಿದವರ ಕೆಲವು ವಿವಾಹಗಳನ್ನು ಕ್ರಿಶ್ಚಿಯನ್ ಸಂಪ್ರದಾಯದಂತೆ ನಡೆಸಲಾಗುತ್ತಿದೆ ಎಂಬ ಆರೋಪಗಳನ್ನು ಪೊಲೀಸರು ಮಾಡಿದ್ದರು. ಆದರೆ, ಇನ್‌ಸ್ಟಿಟ್ಯೂಟ್‌ನಲ್ಲಿ ಕೆಲಸ ಮಾಡುತ್ತಿರುವ ಸನ್ಯಾಸಿನಿಯೊಬ್ಬರು ಆರೋಪಳನ್ನು ಅಲ್ಲಗಳೆದಿದ್ದರು.

ಸ್ಥಗಿತ ಮಾಡಿಲ್ಲ: ಗೃಹ ಸಚಿವಾಲಯ ಸ್ಪಷ್ಟನೆ

“ಮಿಷನರೀಸ್ ಆಫ್ ಚಾರಿಟಿಯ ಯಾವುದೇ ಖಾತೆಗಳನ್ನು ಸ್ಥಗಿತ ಮಾಡಿಲ್ಲ. ಮಿಷನರೀಸ್ ಆಫ್ ಚಾರಿಟಿ ಸ್ವತಃ ತನ್ನ ಖಾತೆಗಳನ್ನು ಸ್ಥಗಿತ ಮಾಡಲು ಎಸ್‌ಬಿಐಗೆ ವಿನಂತಿಯನ್ನು ಕಳುಹಿಸಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತಿಳಿಸಿದೆ” ಎಂದು ಹೇಳಿಕೆ ಗೃಹ ಸಚಿವಾಲಯ ಹೇಳಿದೆ.

“ಮಿಷನರೀಸ್ ಆಫ್ ಚಾರಿಟಿಯ ನವೀಕರಣ ಅರ್ಜಿಯನ್ನು ಅನುಮೋದಿಸಲಾಗಿಲ್ಲ. ಮಿಷನರೀಸ್ ಆಫ್ ಚಾರಿಟಿಯ ನೋಂದಣಿಯು ಡಿಸೆಂಬರ್ 31, 2021 ರವರೆಗೆ ಮಾನ್ಯವಾಗಿದೆ” ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ.


ಇದನ್ನೂ ಓದಿರಿ: ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಮತಾಂತರ ನಿಷೇಧ ಕಾಯ್ದೆ ರದ್ದು: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...