Homeಮುಖಪುಟಮೋದಿ, ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರನ್ನು ‘ದುರ್ಯೋಧನ, ದುಶ್ಯಾಶನ’ ಎಂದ ಮಮತಾ

ಮೋದಿ, ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರನ್ನು ‘ದುರ್ಯೋಧನ, ದುಶ್ಯಾಶನ’ ಎಂದ ಮಮತಾ

- Advertisement -
- Advertisement -

ಪಶ್ಚಿಮ ಬಂಗಾಳ ಚುನಾವಣಾ ಕಣ ರಂಗೇರಿದ್ದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಇತರ ಬಿಜೆಪಿ ನಾಯಕರು ಚುನಾವಣಾ ಪ್ರಚಾರಕ್ಕಾಗಿ ಬಂಗಾಳ ಪ್ರವಾಸ ಕೈಗೊಂಡಿದ್ದಾರೆ ಎಂದು ಪ್ರತಿಪಾದಿಸಿದ್ದು, ಅವರನ್ನು “ದುರ್ಯೋಧನ ಮತ್ತು ದುಶ್ಯಾಶನ” ಎಂದು ಉಲ್ಲೇಖಿಸಿದ್ದಾರೆ. ತನ್ನ ಮಾಜಿ ಆಪ್ತ, ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ಸುವೆಂದು ಅಧಿಕಾರಿಯನ್ನು “ಮಿರ್ ಜಾಫರ್” ಎಂದು ಕರೆದಿದ್ದಾರೆ.

“ಬಿಜೆಪಿಗೆ ವಿದಾಯ ಹೇಳಿ, ನಮಗೆ ಬಿಜೆಪಿ ಬೇಡ. ಮೋದಿಯವರ ಮುಖವನ್ನು ನೋಡಲು ನಾವು ಬಯಸುವುದಿಲ್ಲ. ಗಲಭೆಗಳು, ಲೂಟಿಕೋರರು, ದುರ್ಯೋಧನ, ದುಶ್ಯಾಶನ… ಮಿರ್ ಜಾಫರ್ ನಮಗೆ ಬೇಡ. ಮಾರ್ಚ್ 27 ರಂದು ‘ಖೇಲಾ ಹೊಬೆ’ (ಆಟ ಚಾಲೂ), ಬಿಜೆಪಿಯನ್ನು ಬೌಲ್ಡ್‌ ಮಾಡಬೇಕಾಗಿದೆ” ಎಂದು ಮಿಡ್ನಾಪೊರ್‌‌ನಲ್ಲಿ ಜರುಗಿದ ರ್‍ಯಾಲಿಯಲ್ಲಿ ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂ ಓದಿ: ‘ಕೋರ್ಟುಗಳು ಮಹಿಳೆಯರ ಕುರಿತ ರೂಢಿಗತ ಅಪವಾದ ಪರಿಗಣಿಸಬಾರದು’: ಸುಪ್ರೀಂ ಕೋರ್ಟ್

ತಾನು ಪೂರ್ಣವಾಗಿ ನಂಬಿದ್ದ ಸುವೆಂದು ತನಗೆ ದ್ರೋಹ ಎಸಗಿದರು ಎಂದು ಮಮತಾ ಬ್ಯಾನರ್ಜಿ ಡಿಸೆಂಬರ್‌ನಲ್ಲಿ ಬಿಜೆಪಿಗೆ ಸೇರ್ಪಡೆಯಾದ ತನ್ನ ಮಾಜಿ ಆಪ್ತ ಸುವೆದು ಅಧಿಕಾರಿಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಗುರುವಾರದಂದು ಪುರುಲಿಯಾದಲ್ಲಿ ಪ್ರಚಾರ ಮಾಡಿದ್ದ ಪ್ರಧಾನಿ ವಿರುದ್ದ ದಾಳಿ ಮಾಡಿದ ಮಮತಾ ಬ್ಯಾನರ್ಜಿ, ತನ್ನ ಘೋಷಣೆಯಾದ “ಖೇಲಾ ಹೊಬೆ” ಯನ್ನು ತನ್ನ ವಿರುದ್ದವೆ ಬಳಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿ, ಪ್ರಧಾನಿಯನ್ನು ಕಾಪಿ ಕ್ಯಾಟ್ ಎಂದು ಕರೆದ್ದಾರೆ.

“ಮೋದಿ ಟೆಲಿಪ್ರೊಂಪ್ಟರ್ ಬಳಸಿ ‘ಕೆಮನ್ ಆಚೊ ಬಾಂಗ್ಲಾ’ (ಹೇಗಿದ್ದಿ ಬಂಗಾಳ) ಎಂದು ಹೇಳುತ್ತಾರೆ, ನಾವು ‘ಬಾಂಗ್ಲಾ ಭಾಲೋ ಆಚೆ’ (ಬಂಗಾಳ ತುಂಬಾ ಚೆನ್ನಾಗಿದೆ) ಎಂದು ಹೇಳುತ್ತೇವೆ. ‘ಪೊರಿಬೋರ್ತನ್’ ನನ್ನ ಘೋಷಣೆಯಾಗಿದೆ. ಕಾಪಿಕ್ಯಾಟ್, ನನ್ನ ಘೋಷಣೆಯನ್ನು ನೀವು ಏಕೆ ಕದಿಯುತ್ತೀರಿ? ಎಂದು ಅವರು ಪ್ರಧಾನಿಯ ವಿರುದ್ದ ಹರಿಹಾಯ್ದಿದ್ದಾರೆ.

ಮಾರ್ಚ್ 27 ರಿಂದ ಪಶ್ಚಿಮ ಬಂಗಾಳದಲ್ಲಿ ಎಂಟು ಸುತ್ತಿನ ಮತದಾನ ಪ್ರಾರಂಭವಾಗಲಿದ್ದು, ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: ನಾಳೆ ಶಿವಮೊಗ್ಗದಲ್ಲಿ ‌ದಕ್ಷಿಣ ಭಾರತದ ಮೊದಲ ಐತಿಹಾಸಿಕ ರೈತ ಮಹಾಪಂಚಾಯತ್; ಸಿದ್ದತೆ ಹೇಗಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...