Homeಮುಖಪುಟಮೋದಿ, ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರನ್ನು ‘ದುರ್ಯೋಧನ, ದುಶ್ಯಾಶನ’ ಎಂದ ಮಮತಾ

ಮೋದಿ, ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರನ್ನು ‘ದುರ್ಯೋಧನ, ದುಶ್ಯಾಶನ’ ಎಂದ ಮಮತಾ

- Advertisement -
- Advertisement -

ಪಶ್ಚಿಮ ಬಂಗಾಳ ಚುನಾವಣಾ ಕಣ ರಂಗೇರಿದ್ದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಇತರ ಬಿಜೆಪಿ ನಾಯಕರು ಚುನಾವಣಾ ಪ್ರಚಾರಕ್ಕಾಗಿ ಬಂಗಾಳ ಪ್ರವಾಸ ಕೈಗೊಂಡಿದ್ದಾರೆ ಎಂದು ಪ್ರತಿಪಾದಿಸಿದ್ದು, ಅವರನ್ನು “ದುರ್ಯೋಧನ ಮತ್ತು ದುಶ್ಯಾಶನ” ಎಂದು ಉಲ್ಲೇಖಿಸಿದ್ದಾರೆ. ತನ್ನ ಮಾಜಿ ಆಪ್ತ, ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ಸುವೆಂದು ಅಧಿಕಾರಿಯನ್ನು “ಮಿರ್ ಜಾಫರ್” ಎಂದು ಕರೆದಿದ್ದಾರೆ.

“ಬಿಜೆಪಿಗೆ ವಿದಾಯ ಹೇಳಿ, ನಮಗೆ ಬಿಜೆಪಿ ಬೇಡ. ಮೋದಿಯವರ ಮುಖವನ್ನು ನೋಡಲು ನಾವು ಬಯಸುವುದಿಲ್ಲ. ಗಲಭೆಗಳು, ಲೂಟಿಕೋರರು, ದುರ್ಯೋಧನ, ದುಶ್ಯಾಶನ… ಮಿರ್ ಜಾಫರ್ ನಮಗೆ ಬೇಡ. ಮಾರ್ಚ್ 27 ರಂದು ‘ಖೇಲಾ ಹೊಬೆ’ (ಆಟ ಚಾಲೂ), ಬಿಜೆಪಿಯನ್ನು ಬೌಲ್ಡ್‌ ಮಾಡಬೇಕಾಗಿದೆ” ಎಂದು ಮಿಡ್ನಾಪೊರ್‌‌ನಲ್ಲಿ ಜರುಗಿದ ರ್‍ಯಾಲಿಯಲ್ಲಿ ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂ ಓದಿ: ‘ಕೋರ್ಟುಗಳು ಮಹಿಳೆಯರ ಕುರಿತ ರೂಢಿಗತ ಅಪವಾದ ಪರಿಗಣಿಸಬಾರದು’: ಸುಪ್ರೀಂ ಕೋರ್ಟ್

ತಾನು ಪೂರ್ಣವಾಗಿ ನಂಬಿದ್ದ ಸುವೆಂದು ತನಗೆ ದ್ರೋಹ ಎಸಗಿದರು ಎಂದು ಮಮತಾ ಬ್ಯಾನರ್ಜಿ ಡಿಸೆಂಬರ್‌ನಲ್ಲಿ ಬಿಜೆಪಿಗೆ ಸೇರ್ಪಡೆಯಾದ ತನ್ನ ಮಾಜಿ ಆಪ್ತ ಸುವೆದು ಅಧಿಕಾರಿಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಗುರುವಾರದಂದು ಪುರುಲಿಯಾದಲ್ಲಿ ಪ್ರಚಾರ ಮಾಡಿದ್ದ ಪ್ರಧಾನಿ ವಿರುದ್ದ ದಾಳಿ ಮಾಡಿದ ಮಮತಾ ಬ್ಯಾನರ್ಜಿ, ತನ್ನ ಘೋಷಣೆಯಾದ “ಖೇಲಾ ಹೊಬೆ” ಯನ್ನು ತನ್ನ ವಿರುದ್ದವೆ ಬಳಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿ, ಪ್ರಧಾನಿಯನ್ನು ಕಾಪಿ ಕ್ಯಾಟ್ ಎಂದು ಕರೆದ್ದಾರೆ.

“ಮೋದಿ ಟೆಲಿಪ್ರೊಂಪ್ಟರ್ ಬಳಸಿ ‘ಕೆಮನ್ ಆಚೊ ಬಾಂಗ್ಲಾ’ (ಹೇಗಿದ್ದಿ ಬಂಗಾಳ) ಎಂದು ಹೇಳುತ್ತಾರೆ, ನಾವು ‘ಬಾಂಗ್ಲಾ ಭಾಲೋ ಆಚೆ’ (ಬಂಗಾಳ ತುಂಬಾ ಚೆನ್ನಾಗಿದೆ) ಎಂದು ಹೇಳುತ್ತೇವೆ. ‘ಪೊರಿಬೋರ್ತನ್’ ನನ್ನ ಘೋಷಣೆಯಾಗಿದೆ. ಕಾಪಿಕ್ಯಾಟ್, ನನ್ನ ಘೋಷಣೆಯನ್ನು ನೀವು ಏಕೆ ಕದಿಯುತ್ತೀರಿ? ಎಂದು ಅವರು ಪ್ರಧಾನಿಯ ವಿರುದ್ದ ಹರಿಹಾಯ್ದಿದ್ದಾರೆ.

ಮಾರ್ಚ್ 27 ರಿಂದ ಪಶ್ಚಿಮ ಬಂಗಾಳದಲ್ಲಿ ಎಂಟು ಸುತ್ತಿನ ಮತದಾನ ಪ್ರಾರಂಭವಾಗಲಿದ್ದು, ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: ನಾಳೆ ಶಿವಮೊಗ್ಗದಲ್ಲಿ ‌ದಕ್ಷಿಣ ಭಾರತದ ಮೊದಲ ಐತಿಹಾಸಿಕ ರೈತ ಮಹಾಪಂಚಾಯತ್; ಸಿದ್ದತೆ ಹೇಗಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...