Homeಮುಖಪುಟಮೋದಿ, ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರನ್ನು ‘ದುರ್ಯೋಧನ, ದುಶ್ಯಾಶನ’ ಎಂದ ಮಮತಾ

ಮೋದಿ, ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರನ್ನು ‘ದುರ್ಯೋಧನ, ದುಶ್ಯಾಶನ’ ಎಂದ ಮಮತಾ

- Advertisement -
- Advertisement -

ಪಶ್ಚಿಮ ಬಂಗಾಳ ಚುನಾವಣಾ ಕಣ ರಂಗೇರಿದ್ದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಇತರ ಬಿಜೆಪಿ ನಾಯಕರು ಚುನಾವಣಾ ಪ್ರಚಾರಕ್ಕಾಗಿ ಬಂಗಾಳ ಪ್ರವಾಸ ಕೈಗೊಂಡಿದ್ದಾರೆ ಎಂದು ಪ್ರತಿಪಾದಿಸಿದ್ದು, ಅವರನ್ನು “ದುರ್ಯೋಧನ ಮತ್ತು ದುಶ್ಯಾಶನ” ಎಂದು ಉಲ್ಲೇಖಿಸಿದ್ದಾರೆ. ತನ್ನ ಮಾಜಿ ಆಪ್ತ, ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ಸುವೆಂದು ಅಧಿಕಾರಿಯನ್ನು “ಮಿರ್ ಜಾಫರ್” ಎಂದು ಕರೆದಿದ್ದಾರೆ.

“ಬಿಜೆಪಿಗೆ ವಿದಾಯ ಹೇಳಿ, ನಮಗೆ ಬಿಜೆಪಿ ಬೇಡ. ಮೋದಿಯವರ ಮುಖವನ್ನು ನೋಡಲು ನಾವು ಬಯಸುವುದಿಲ್ಲ. ಗಲಭೆಗಳು, ಲೂಟಿಕೋರರು, ದುರ್ಯೋಧನ, ದುಶ್ಯಾಶನ… ಮಿರ್ ಜಾಫರ್ ನಮಗೆ ಬೇಡ. ಮಾರ್ಚ್ 27 ರಂದು ‘ಖೇಲಾ ಹೊಬೆ’ (ಆಟ ಚಾಲೂ), ಬಿಜೆಪಿಯನ್ನು ಬೌಲ್ಡ್‌ ಮಾಡಬೇಕಾಗಿದೆ” ಎಂದು ಮಿಡ್ನಾಪೊರ್‌‌ನಲ್ಲಿ ಜರುಗಿದ ರ್‍ಯಾಲಿಯಲ್ಲಿ ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂ ಓದಿ: ‘ಕೋರ್ಟುಗಳು ಮಹಿಳೆಯರ ಕುರಿತ ರೂಢಿಗತ ಅಪವಾದ ಪರಿಗಣಿಸಬಾರದು’: ಸುಪ್ರೀಂ ಕೋರ್ಟ್

ತಾನು ಪೂರ್ಣವಾಗಿ ನಂಬಿದ್ದ ಸುವೆಂದು ತನಗೆ ದ್ರೋಹ ಎಸಗಿದರು ಎಂದು ಮಮತಾ ಬ್ಯಾನರ್ಜಿ ಡಿಸೆಂಬರ್‌ನಲ್ಲಿ ಬಿಜೆಪಿಗೆ ಸೇರ್ಪಡೆಯಾದ ತನ್ನ ಮಾಜಿ ಆಪ್ತ ಸುವೆದು ಅಧಿಕಾರಿಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಗುರುವಾರದಂದು ಪುರುಲಿಯಾದಲ್ಲಿ ಪ್ರಚಾರ ಮಾಡಿದ್ದ ಪ್ರಧಾನಿ ವಿರುದ್ದ ದಾಳಿ ಮಾಡಿದ ಮಮತಾ ಬ್ಯಾನರ್ಜಿ, ತನ್ನ ಘೋಷಣೆಯಾದ “ಖೇಲಾ ಹೊಬೆ” ಯನ್ನು ತನ್ನ ವಿರುದ್ದವೆ ಬಳಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿ, ಪ್ರಧಾನಿಯನ್ನು ಕಾಪಿ ಕ್ಯಾಟ್ ಎಂದು ಕರೆದ್ದಾರೆ.

“ಮೋದಿ ಟೆಲಿಪ್ರೊಂಪ್ಟರ್ ಬಳಸಿ ‘ಕೆಮನ್ ಆಚೊ ಬಾಂಗ್ಲಾ’ (ಹೇಗಿದ್ದಿ ಬಂಗಾಳ) ಎಂದು ಹೇಳುತ್ತಾರೆ, ನಾವು ‘ಬಾಂಗ್ಲಾ ಭಾಲೋ ಆಚೆ’ (ಬಂಗಾಳ ತುಂಬಾ ಚೆನ್ನಾಗಿದೆ) ಎಂದು ಹೇಳುತ್ತೇವೆ. ‘ಪೊರಿಬೋರ್ತನ್’ ನನ್ನ ಘೋಷಣೆಯಾಗಿದೆ. ಕಾಪಿಕ್ಯಾಟ್, ನನ್ನ ಘೋಷಣೆಯನ್ನು ನೀವು ಏಕೆ ಕದಿಯುತ್ತೀರಿ? ಎಂದು ಅವರು ಪ್ರಧಾನಿಯ ವಿರುದ್ದ ಹರಿಹಾಯ್ದಿದ್ದಾರೆ.

ಮಾರ್ಚ್ 27 ರಿಂದ ಪಶ್ಚಿಮ ಬಂಗಾಳದಲ್ಲಿ ಎಂಟು ಸುತ್ತಿನ ಮತದಾನ ಪ್ರಾರಂಭವಾಗಲಿದ್ದು, ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: ನಾಳೆ ಶಿವಮೊಗ್ಗದಲ್ಲಿ ‌ದಕ್ಷಿಣ ಭಾರತದ ಮೊದಲ ಐತಿಹಾಸಿಕ ರೈತ ಮಹಾಪಂಚಾಯತ್; ಸಿದ್ದತೆ ಹೇಗಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...