Homeಮುಖಪುಟಪ. ಬಂಗಾಳ ಎಸ್‌ಐಆರ್ | ಮೈಕ್ರೋ ಅಬ್ಸರ್ವರ್ಸ್ ಬದಲಿಗೆ 8,505 ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುತ್ತೇವೆ...

ಪ. ಬಂಗಾಳ ಎಸ್‌ಐಆರ್ | ಮೈಕ್ರೋ ಅಬ್ಸರ್ವರ್ಸ್ ಬದಲಿಗೆ 8,505 ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುತ್ತೇವೆ : ಚು. ಆಯೋಗಕ್ಕೆ ತಿಳಿಸಿದ ಮಮತಾ ಸರ್ಕಾರ

- Advertisement -
- Advertisement -

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕಾಗಿ ಮೈಕ್ರೋ ಅಬ್ಸರ್ವರ್ಸ್ ಬದಲಿಗೆ ತನ್ನ ಅಧೀನದ ಸುಮಾರು 8,505 ಗ್ರೂಪ್ ಬಿ ಅಧಿಕಾರಿಗಳನ್ನು ನಿಯೋಜಿಸಲು ಸಿದ್ಧವಿರುವುದಾಗಿ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ ಚುನಾವಣಾ ಆಯೋಗಕ್ಕೆ ತಿಳಿಸಿದೆ.

ಫೆಬ್ರವರಿ 4ರಂದು ಸುಪ್ರೀಂ ಕೋರ್ಟ್‌ನಲ್ಲಿ ಎಸ್‌ಐಆರ್ ಪ್ರಶ್ನಿಸಿದ್ದ ಅರ್ಜಿಯ ವಿಚಾರಣೆ ವೇಳೆಯೂ ಮಮತಾ ಬ್ಯಾನರ್ಜಿ ಮೈಕ್ರೋ ಅಬ್ಸರ್ವರ್ಸ್ ಕುರಿತು ಪ್ರಮುಖವಾಗಿ ಉಲ್ಲೇಖಿಸಿದ್ದರು. ಕೇಂದ್ರ ಸರ್ಕಾರದ ಉದ್ಯೋಗಿಗಳನ್ನೇ ಮೈಕ್ರೋ ಅಬ್ಸರ್ವರ್ಸ್‌ಗಳಾಗಿ ಚುನಾವಣಾ ಆಯೋಗ ನೇಮಿಸಿಕೊಂಡಿದೆ. ಇವರು ಬೇಕಾಬಿಟ್ಟು ಮತದಾರರ ಪಟ್ಟಿಯಿಂದ ಜನರ ಹೆಸರುಗಳನ್ನು ತೆಗೆದು ಹಾಕುತ್ತಿದ್ದಾರೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದರು.

ಚುನಾವಣಾ ಆಯೋಗದ ಪರ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದ್ದ ಹಿರಿಯ ವಕೀಲ ರಾಕೇಶ್ ದ್ವಿವೇದಿ, ಎಸ್‌ಐಆರ್ ಪ್ರಕ್ರಿಯೆಯ ಮೇಲ್ವಿಚಾರಣೆಗಾಗಿ ಪಶ್ಚಿಮ ಬಂಗಾಳ ಸರ್ಕಾರ ಕೇವಲ 80 ಗ್ರೇಡ್ 2 ಅಧಿಕಾರಿಗಳನ್ನು (ಉದಾಹರಣೆಗೆ ಎಸ್‌ಡಿಎಂಗಳು) ಮಾತ್ರ ಒದಗಿಸಿದೆ ಎಂದಿದ್ದರು.

ಅಂಗನವಾಡಿ, ಆಶಾ ಸೇರಿದಂತೆ ಕೆಲ ಹಂತದ ಸಿಬ್ಬಂದಿಯನ್ನು ಮಮತಾ ಸರ್ಕಾರ ಒದಗಿಸಿದೆ ಎಂದು ದೂರಿದ್ದರು.

ಇದಕ್ಕೆ ತಿರುಗೇಟು ಕೊಟ್ಟಿದ್ದ ಮಮತಾ ಬ್ಯಾನರ್ಜಿ, “ಚುನಾವಣಾ ಆಯೋಗ ಏನು ಕೇಳಿದೆಯೋ, ಅದನ್ನು ನಾವು ಒದಗಿಸಿದ್ದೇವೆ” ಎಂದಿದ್ದರು.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ಎನ್. ವಿ ಅಂಜಾರಿಯಾ ಅವರನ್ನೊಳಗೊಂಡ ನ್ಯಾಯಪೀಠವು ಸೋಮವಾರ (ಫೆ.9) ಮಮತಾ ಬ್ಯಾನರ್ಜಿ ಮತ್ತು ಇತರರು ಎಸ್‌ಐಆರ್ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಮುಂದುವರಿಸಲಿದೆ.

ಫೆ.4ರಂದು ತನ್ನ ಅರ್ಜಿಯ ಪರ ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಖುದ್ದು ವಾದ ಮಂಡಿಸಿದ್ದರು. ಈ ಮೂಲಕ ಭಾರತ ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಹಾಲಿ ಮುಖ್ಯಮಂತ್ರಿಯೊಬ್ಬರು ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದ ಖ್ಯಾತಿಗೆ ಮಮತಾ ಬ್ಯಾನರ್ಜಿ ಪಾತ್ರರಾಗಿದ್ದಾರೆ. ಸೋಮವಾರ ಅವರು ಮತ್ತೆ ವಾದ ಮಂಡಿಸುವ ಸಾಧ್ಯತೆ ಇದೆ.

ಅದಕ್ಕು ಮುನ್ನ 8 ಸಾವಿರಕ್ಕೂ ಹೆಚ್ಚು ರಾಜ್ಯ ಸರ್ಕಾರದ ಸಿಬ್ಬಂದಿಯನ್ನು ಎಸ್‌ಐಆರ್ ಪ್ರಕ್ರಿಯೆಗೆ ಒದಗಿಸುವುದಾಗಿ ಮಮತಾ ಸರ್ಕಾರ ಚುನಾವಣಾ ಆಯೋಗಕ್ಕೆ ತಿಳಿಸಿದೆ. ಈ ಮೂಲಕ ಕೇಂದ್ರದ ಅನತಿಯಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂಬ ಆರೋಪ ಹೊತ್ತಿರುವ ಮೈಕ್ರೋ ಅಬ್ಸರ್ವರ್ಸ್‌ಗಳಿಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ.

ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವ ಉಳಿಸಲು ಮಧ್ಯ ಪ್ರವೇಶಿಸುವಂತೆ ಫೆ.4ರಂದು ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌ಗೆ ಕೋರಿಕೊಂಡಿದ್ದಾರೆ. ರಾಜ್ಯವನ್ನು ಗುರಿಯಾಗಿಸಲಾಗುತ್ತಿದೆ. ನಮ್ಮ ಜನರ ಮೇಲೆ ಚುನಾವಣಾ ಆಯೋಗ ‘ಬುಲ್ಡೋಝರ್’ ಪ್ರಹಾರ ನಡೆಸುತ್ತಿದೆ ಎಂದಿದ್ದಾರೆ. ಚುನಾವಣೆಯ ಹೊಸ್ತಿಲ್ಲಲ್ಲಿ ಇದ್ದರೂ ಬಿಜೆಪಿ ಆಡಳಿತ ಅಸ್ಸಾಂನಲ್ಲಿ ಏಕೆ ಎಸ್‌ಐಆರ್ ನಡೆಸುತ್ತಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.

ಒಂದು ಹಂತದಲ್ಲಿ ಮಮತಾ ಬ್ಯಾನರ್ಜಿಯ ವಾದವನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿದೆ. ನೈಜ ಮತದಾರರ ಹೆಸರು ಕೈಬಿಟ್ಟು ಹೋಗಬಾರದು ಎಂದಿದೆ.

ಕೇಂದ್ರ ಚುನಾವಣಾ ಆಯೋಗ ಮತ್ತು ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಆಧಿಕಾರಿಗೆ ನೋಟಿಸ್ ಜಾರಿ ಮಾಡಿರುವ ಸುಪ್ರೀಂ ಕೋರ್ಟ್, ಫೆ.9ರ ಒಳಗೆ ಉತ್ತರ ನೀಡುವಂತೆ ಸೂಚಿಸಿದೆ.

ಹೆಸರುಗಳ ಹೊಂದಾಣಿಕೆಯಾಗದ ಕಾಗುಣಿತ ಮುಂತಾದ ಸಣ್ಣಪುಟ್ಟ ವ್ಯತ್ಯಾಸಗಳ ಆಧಾರದ ಮೇಲೆ ನೋಟಿಸ್‌ಗಳನ್ನು ನೀಡುವಾಗ ಬೂತ್ ಮಟ್ಟದ ಅಧಿಕಾರಿಗಳು ಮತ್ತು ಮತದಾರರ ಪಟ್ಟಿ ಅಧಿಕಾರಿಗಳು ಹೆಚ್ಚು ಸೂಕ್ಷ್ಮವಾಗಿರಲು ಸೂಚಿಸುವಂತೆಯೂ ಪೀಠವು ಚುನಾವಣಾ ಆಯೋಗಕ್ಕೆ ನಿರ್ದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...