Homeಮುಖಪುಟಪ. ಬಂಗಾಳ ಎಸ್‌ಐಆರ್ | ಮೈಕ್ರೋ ಅಬ್ಸರ್ವರ್ಸ್ ಬದಲಿಗೆ 8,505 ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುತ್ತೇವೆ...

ಪ. ಬಂಗಾಳ ಎಸ್‌ಐಆರ್ | ಮೈಕ್ರೋ ಅಬ್ಸರ್ವರ್ಸ್ ಬದಲಿಗೆ 8,505 ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುತ್ತೇವೆ : ಚು. ಆಯೋಗಕ್ಕೆ ತಿಳಿಸಿದ ಮಮತಾ ಸರ್ಕಾರ

- Advertisement -
- Advertisement -

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕಾಗಿ ಮೈಕ್ರೋ ಅಬ್ಸರ್ವರ್ಸ್ ಬದಲಿಗೆ ತನ್ನ ಅಧೀನದ ಸುಮಾರು 8,505 ಗ್ರೂಪ್ ಬಿ ಅಧಿಕಾರಿಗಳನ್ನು ನಿಯೋಜಿಸಲು ಸಿದ್ಧವಿರುವುದಾಗಿ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ ಚುನಾವಣಾ ಆಯೋಗಕ್ಕೆ ತಿಳಿಸಿದೆ.

ಫೆಬ್ರವರಿ 4ರಂದು ಸುಪ್ರೀಂ ಕೋರ್ಟ್‌ನಲ್ಲಿ ಎಸ್‌ಐಆರ್ ಪ್ರಶ್ನಿಸಿದ್ದ ಅರ್ಜಿಯ ವಿಚಾರಣೆ ವೇಳೆಯೂ ಮಮತಾ ಬ್ಯಾನರ್ಜಿ ಮೈಕ್ರೋ ಅಬ್ಸರ್ವರ್ಸ್ ಕುರಿತು ಪ್ರಮುಖವಾಗಿ ಉಲ್ಲೇಖಿಸಿದ್ದರು. ಕೇಂದ್ರ ಸರ್ಕಾರದ ಉದ್ಯೋಗಿಗಳನ್ನೇ ಮೈಕ್ರೋ ಅಬ್ಸರ್ವರ್ಸ್‌ಗಳಾಗಿ ಚುನಾವಣಾ ಆಯೋಗ ನೇಮಿಸಿಕೊಂಡಿದೆ. ಇವರು ಬೇಕಾಬಿಟ್ಟು ಮತದಾರರ ಪಟ್ಟಿಯಿಂದ ಜನರ ಹೆಸರುಗಳನ್ನು ತೆಗೆದು ಹಾಕುತ್ತಿದ್ದಾರೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದರು.

ಚುನಾವಣಾ ಆಯೋಗದ ಪರ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದ್ದ ಹಿರಿಯ ವಕೀಲ ರಾಕೇಶ್ ದ್ವಿವೇದಿ, ಎಸ್‌ಐಆರ್ ಪ್ರಕ್ರಿಯೆಯ ಮೇಲ್ವಿಚಾರಣೆಗಾಗಿ ಪಶ್ಚಿಮ ಬಂಗಾಳ ಸರ್ಕಾರ ಕೇವಲ 80 ಗ್ರೇಡ್ 2 ಅಧಿಕಾರಿಗಳನ್ನು (ಉದಾಹರಣೆಗೆ ಎಸ್‌ಡಿಎಂಗಳು) ಮಾತ್ರ ಒದಗಿಸಿದೆ ಎಂದಿದ್ದರು.

ಅಂಗನವಾಡಿ, ಆಶಾ ಸೇರಿದಂತೆ ಕೆಲ ಹಂತದ ಸಿಬ್ಬಂದಿಯನ್ನು ಮಮತಾ ಸರ್ಕಾರ ಒದಗಿಸಿದೆ ಎಂದು ದೂರಿದ್ದರು.

ಇದಕ್ಕೆ ತಿರುಗೇಟು ಕೊಟ್ಟಿದ್ದ ಮಮತಾ ಬ್ಯಾನರ್ಜಿ, “ಚುನಾವಣಾ ಆಯೋಗ ಏನು ಕೇಳಿದೆಯೋ, ಅದನ್ನು ನಾವು ಒದಗಿಸಿದ್ದೇವೆ” ಎಂದಿದ್ದರು.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ಎನ್. ವಿ ಅಂಜಾರಿಯಾ ಅವರನ್ನೊಳಗೊಂಡ ನ್ಯಾಯಪೀಠವು ಸೋಮವಾರ (ಫೆ.9) ಮಮತಾ ಬ್ಯಾನರ್ಜಿ ಮತ್ತು ಇತರರು ಎಸ್‌ಐಆರ್ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಮುಂದುವರಿಸಲಿದೆ.

ಫೆ.4ರಂದು ತನ್ನ ಅರ್ಜಿಯ ಪರ ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಖುದ್ದು ವಾದ ಮಂಡಿಸಿದ್ದರು. ಈ ಮೂಲಕ ಭಾರತ ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಹಾಲಿ ಮುಖ್ಯಮಂತ್ರಿಯೊಬ್ಬರು ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದ ಖ್ಯಾತಿಗೆ ಮಮತಾ ಬ್ಯಾನರ್ಜಿ ಪಾತ್ರರಾಗಿದ್ದಾರೆ. ಸೋಮವಾರ ಅವರು ಮತ್ತೆ ವಾದ ಮಂಡಿಸುವ ಸಾಧ್ಯತೆ ಇದೆ.

ಅದಕ್ಕು ಮುನ್ನ 8 ಸಾವಿರಕ್ಕೂ ಹೆಚ್ಚು ರಾಜ್ಯ ಸರ್ಕಾರದ ಸಿಬ್ಬಂದಿಯನ್ನು ಎಸ್‌ಐಆರ್ ಪ್ರಕ್ರಿಯೆಗೆ ಒದಗಿಸುವುದಾಗಿ ಮಮತಾ ಸರ್ಕಾರ ಚುನಾವಣಾ ಆಯೋಗಕ್ಕೆ ತಿಳಿಸಿದೆ. ಈ ಮೂಲಕ ಕೇಂದ್ರದ ಅನತಿಯಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂಬ ಆರೋಪ ಹೊತ್ತಿರುವ ಮೈಕ್ರೋ ಅಬ್ಸರ್ವರ್ಸ್‌ಗಳಿಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ.

ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವ ಉಳಿಸಲು ಮಧ್ಯ ಪ್ರವೇಶಿಸುವಂತೆ ಫೆ.4ರಂದು ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌ಗೆ ಕೋರಿಕೊಂಡಿದ್ದಾರೆ. ರಾಜ್ಯವನ್ನು ಗುರಿಯಾಗಿಸಲಾಗುತ್ತಿದೆ. ನಮ್ಮ ಜನರ ಮೇಲೆ ಚುನಾವಣಾ ಆಯೋಗ ‘ಬುಲ್ಡೋಝರ್’ ಪ್ರಹಾರ ನಡೆಸುತ್ತಿದೆ ಎಂದಿದ್ದಾರೆ. ಚುನಾವಣೆಯ ಹೊಸ್ತಿಲ್ಲಲ್ಲಿ ಇದ್ದರೂ ಬಿಜೆಪಿ ಆಡಳಿತ ಅಸ್ಸಾಂನಲ್ಲಿ ಏಕೆ ಎಸ್‌ಐಆರ್ ನಡೆಸುತ್ತಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.

ಒಂದು ಹಂತದಲ್ಲಿ ಮಮತಾ ಬ್ಯಾನರ್ಜಿಯ ವಾದವನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿದೆ. ನೈಜ ಮತದಾರರ ಹೆಸರು ಕೈಬಿಟ್ಟು ಹೋಗಬಾರದು ಎಂದಿದೆ.

ಕೇಂದ್ರ ಚುನಾವಣಾ ಆಯೋಗ ಮತ್ತು ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಆಧಿಕಾರಿಗೆ ನೋಟಿಸ್ ಜಾರಿ ಮಾಡಿರುವ ಸುಪ್ರೀಂ ಕೋರ್ಟ್, ಫೆ.9ರ ಒಳಗೆ ಉತ್ತರ ನೀಡುವಂತೆ ಸೂಚಿಸಿದೆ.

ಹೆಸರುಗಳ ಹೊಂದಾಣಿಕೆಯಾಗದ ಕಾಗುಣಿತ ಮುಂತಾದ ಸಣ್ಣಪುಟ್ಟ ವ್ಯತ್ಯಾಸಗಳ ಆಧಾರದ ಮೇಲೆ ನೋಟಿಸ್‌ಗಳನ್ನು ನೀಡುವಾಗ ಬೂತ್ ಮಟ್ಟದ ಅಧಿಕಾರಿಗಳು ಮತ್ತು ಮತದಾರರ ಪಟ್ಟಿ ಅಧಿಕಾರಿಗಳು ಹೆಚ್ಚು ಸೂಕ್ಷ್ಮವಾಗಿರಲು ಸೂಚಿಸುವಂತೆಯೂ ಪೀಠವು ಚುನಾವಣಾ ಆಯೋಗಕ್ಕೆ ನಿರ್ದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...