HomeಮುಖಪುಟINDIA ಒಕ್ಕೂಟ: ದೀದಿ ಹೇಳಿಕೆ ಬಳಿಕವೂ ಪ್ರತಿಪಕ್ಷಗಳಲ್ಲಿದೆ 'ಮೈತ್ರಿ' ಆಶಾಭಾವನೆ?

INDIA ಒಕ್ಕೂಟ: ದೀದಿ ಹೇಳಿಕೆ ಬಳಿಕವೂ ಪ್ರತಿಪಕ್ಷಗಳಲ್ಲಿದೆ ‘ಮೈತ್ರಿ’ ಆಶಾಭಾವನೆ?

- Advertisement -
- Advertisement -

ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ಇದರ ಬೆನ್ನಲ್ಲಿ ಪಂಜಾಬ್‌ನಲ್ಲಿ ಎಎಪಿ ಕೂಡ ಏಕಾಂಗಿಯಾಗಿ ಕಣಕ್ಕಿಳಿಯಲಿದೆ ಎಂದು ಭಗವಂತ್‌ ಮಾನ್‌ ಹೇಳಿದ್ದಾರೆ. ಟಿಎಂಸಿ ನಾಯಕಿಯ ಹೇಳಿಕೆ ಬಳಿಕ ಕಾಂಗ್ರೆಸ್‌ ನಾಯಕರು ಮೈತ್ರಿಯ ಬಗ್ಗೆ ಆಶಾಭಾವನೆಯನ್ನು ವ್ಯಕ್ತಪಡಿಸಿದ್ದು, ಅಂತಿಮವಾಗಿ ಎರಡೂ ಪಕ್ಷಗಳ ರಾಷ್ಟ್ರೀಯ ನಾಯಕರು ಮಾತುಕತೆ ನಡೆಸುವ ಸಾಧ್ಯತೆ ಇದೆ. ಆದರೆ ಪಂಜಾಬ್‌ನಲ್ಲಿ ಎಎಪಿಯ ಘೋಷಣೆ ನಿರೀಕ್ಷಿತವೇ ಆಗಿದ್ದು, ಕಾಂಗ್ರೆಸ್‌ ಮತ್ತು ಎಎಪಿಯ ರಾಜ್ಯ ನಾಯಕತ್ವವು ಮೊದಲಿನಿಂದಲೇ ಪಂಜಾಬ್‌ನಲ್ಲಿ ಮೈತ್ರಿಗೆ ವಿರೋಧಿಸಿತ್ತು.

ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆ ಪಶ್ಚಿಮ ಬಂಗಾಳಕ್ಕೆ ಪ್ರವೇಶಿಸುವ ಒಂದು ದಿನದ ಮೊದಲು ಮತ್ತು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಮಮತಾ ಬ್ಯಾನರ್ಜಿ ಜೊತೆ ಸಂಬಂಧ ಉತ್ತಮವಾಗಿದೆ ಎಂದು ಹೇಳಿಕೆ ಕೊಟ್ಟ ಒಂದು ದಿನದ ನಂತರ ಮಮತಾ ಏಕಾಂಗಿ ಸ್ಪರ್ಧೆ ಹೇಳಿಕೆ ಕೊಟ್ಟಿದ್ದರು. ಆದರೆ ಮಮತಾ-ಜಿ ಇಲ್ಲದೆ INDIA ನ್ನು ಊಹಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ ಮತ್ತು ವಿರೋಧ ಪಕ್ಷದ ಒಕ್ಕೂಟವು ಪಶ್ಚಿಮ ಬಂಗಾಳದಲ್ಲಿ ಲೋಕಸಭೆ ಚುನಾವಣೆಯಲ್ಲಿ ಒಂದಾಗಿ ಹೋರಾಡಲಿದೆ ಎಂದು ಹೇಳಿಕೊಂಡಿದೆ.

ನಾವು ಬಿಜೆಪಿಯನ್ನು ಸೋಲಿಸಲು ಬಯಸುತ್ತೇವೆ ಮತ್ತು ಬಿಜೆಪಿಯನ್ನು ಸೋಲಿಸಲು ನಾವು ಏನು ಬೇಕಾದರೂ ಮಾಡುತ್ತೇವೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ರಾಹುಲ್ ಗಾಂಧಿ ಅವರು ಮಮತಾ ಜಿ ಮತ್ತು ಟಿಎಂಸಿ ಭಾರತದ ಮೈತ್ರಿಯ ಅತ್ಯಂತ ಬಲವಾದ ಆಧಾರ ಸ್ತಂಭವಾಗಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅಸ್ಸಾಂನ ಬೊಂಗೈಗಾಂವ್‌ನಲ್ಲಿ ಮಾತನಾಡಿ, ಮಮತಾ ಜೀ ಇಲ್ಲದ INDIA ಮೈತ್ರಿಯನ್ನು ನಾವು ಊಹಿಸಲು ಸಾಧ್ಯವಿಲ್ಲ. INDIA ಮೈತ್ರಿಯಂತೆಯೇ ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಿದ್ದಾರೆ.

ನಾನು ಕಾಂಗ್ರೆಸ್ ಪಕ್ಷದೊಂದಿಗೆ ಯಾವುದೇ ಚರ್ಚೆ ನಡೆಸಿಲ್ಲ, ಬಂಗಾಳದಲ್ಲಿ ನಾವು ಏಕಾಂಗಿಯಾಗಿ ಹೋರಾಡುತ್ತೇವೆ ಎಂದು ನಾನು ಯಾವಾಗಲೂ ಹೇಳುತ್ತೇನೆ. ನಮ್ಮದು ಜಾತ್ಯತೀತ ಪಕ್ಷ ಮತ್ತು ಬಂಗಾಳದಲ್ಲಿ ನಾವು ಏಕಾಂಗಿಯಾಗಿ ಬಿಜೆಪಿಯನ್ನು ಸೋಲಿಸುತ್ತೇವೆ. ನಾನು ಅನೇಕ ಪ್ರಸ್ತಾಪಗಳನ್ನು ನೀಡಿದ್ದೇನೆ ಆದರೆ ಅವರು ಅವುಗಳನ್ನು ಮೊದಲಿನಿಂದಲೂ ತಿರಸ್ಕರಿಸಿದರು. ರಾಹುಲ್ ಗಾಂಧಿಯವರ ನ್ಯಾಯ ಯಾತ್ರೆಯು ಬಂಗಾಳದ ಮೂಲಕ ಹಾದುಹೋಗುವ ಬಗ್ಗೆ ತನಗೆ ತಿಳಿಸಲಾಗಿಲ್ಲ. ನಾನು ಇಂಡಿಯಾ ಬ್ಲಾಕ್‌ನ ಭಾಗವಾಗಿದ್ದರೂ ಸೌಜನ್ಯಕ್ಕಾಗಿ ಪಶ್ಚಿಮ ಬಂಗಾಳಕ್ಕೆ ಬರುವುದಾಗಿ ಅವರು ನನಗೆ ತಿಳಿಸಿಲ್ಲ, ಹಾಗಾಗಿ ಬಂಗಾಳದ ಮಟ್ಟಿಗೆ ನನಗೆ ಯಾವುದೇ ಸಂಬಂಧವಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದರು. ಆದರೆ ಅಖಿಲ ಭಾರತ ಮಟ್ಟದಲ್ಲಿ ಏನು ಮಾಡಬೇಕೆಂದು ನಾವು ನಿರ್ಧರಿಸುತ್ತೇವೆ. ನಮ್ಮದು ಜಾತ್ಯತೀತ ಪಕ್ಷ ಎಂದು ಹೇಳಿದ್ದರು. ಇದರರ್ಥ ಮೈತ್ರಿಯಿಂದ ಸಂಪೂರ್ಣವಾಗಿ ಟಿಎಂಸಿ ಹೊರಗೆ ಬಂದಿಲ್ಲ ಎನ್ನುವುದು ಸ್ಪಷ್ಟವಾಗಿದೆ.

ಕಾಂಗ್ರೆಸ್ ನಾಯಕಿ ದೀಪಾ ದಾಸ್ಮುನ್ಸಿ ಹೈದರಾಬಾದ್‌ನಲ್ಲಿ ಮಮತಾ ಪರೋಕ್ಷವಾಗಿ ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಆದರೆ ಬಂಗಾಳ ಕಾಂಗ್ರೆಸ್ ಮುಖ್ಯಸ್ಥ ಮತ್ತು ಮಮತಾ-ವಿಮರ್ಶಕ ಅಧೀರ್ ರಂಜನ್ ಚೌಧರಿ ಅವರು ಕೇಂದ್ರ ನಾಯಕತ್ವದ ಅಂಗಳಕ್ಕೆ ಸೀಟು ಹಂಚಿಕೆ ಚೆಂಡನ್ನು ಎಸೆದಿದ್ದಾರೆ. ಕಾಂಗ್ರೆಸ್‌ನ ಉನ್ನತ ನಾಯಕರು ಶೀಘ್ರದಲ್ಲೇ ಮಮತಾ ಅವರನ್ನು ಸಂಪರ್ಕಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಪಂಜಾಬ್‌ ಸಿಎಂ ಭಗವಂತ್‌ ಮಾನ್‌, ಎಎಪಿ ಪಂಜಾಬ್‌ನಲ್ಲಿ ಯಾವುದೇ ಮೈತ್ರಿಯನ್ನು ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಆದರೆ ಎಎಪಿ ದೆಹಲಿಯಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯಿದೆ.

ಸೀಟು ಹಂಚಿಕೆಯ ಕಸರತ್ತಿನ ವಿಳಂಬ, ಅಸಮಂಜಸ ಬೇಡಿಕೆಗಳು ಮತ್ತು ಮುಖ್ಯಮಂತ್ರಿ ವಿರುದ್ಧ ಬಂಗಾಳ ಕಾಂಗ್ರೆಸ್ ಮುಖ್ಯಸ್ಥ ಅಧೀರ್ ರಂಜನ್ ಚೌಧರಿಯವರ ಹೇಳಿಕೆಗಳು ಮಮತಾ ಅವರು ಮೈತ್ರಿ ವಿರುದ್ಧ ಘೋಷಣೆಗೆ ಕಾರಣವಾಗಿದೆ ಎಂದು ಟಿಎಂಸಿ ಮೂಲಗಳು ತಿಳಿಸಿದೆ.

ಪಂಜಾಬ್‌ನಲ್ಲಿ ಎಎಪಿಯ ನಿಲುವು ಕಾಂಗ್ರೆಸ್‌ಗೆ ಆಶ್ಚರ್ಯ ತಂದಿಲ್ಲ. ಎರಡೂ ಪಕ್ಷಗಳ ರಾಜ್ಯ ಘಟಕಗಳು ರಾಜ್ಯದಲ್ಲಿ ಮೈತ್ರಿಯನ್ನು ವಿರೋಧಿಸಿದ್ದವು. ಖರ್ಗೆ ಮತ್ತು ರಾಹುಲ್ ಭೇಟಿ ವೇಳೆ ಸ್ವತಃ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಈ ಬಗ್ಗೆ ಸೂಚಿಸಿದ್ದರು. ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕತ್ವ ಎಎಪಿ ಜೊತೆಗೆ  ಪಂಜಾಬ್‌ನಲ್ಲಿ ಮೈತ್ರಿ ಬಗ್ಗೆ ಮಾತುಕತೆಗೆ ನಿರಾಕರಿಸಿತ್ತು. ಆದರೆ ದೆಹಲಿಯಲ್ಲಿ ಸೀಟು ಹಂಚಿಕೆಯನ್ನು ಚರ್ಚಿಸಲಾಗುವುದು ಎಂದು ಹೇಳಿತ್ತು.

ಇದನ್ನು ಓದಿ: ಬಾಬರಿ ಮಸೀದಿ ಧ್ವಂಸದ ದಿನ ‘ಸಂಭ್ರಮಾಚರಣೆ’ ಮಾಡಿದ್ದ IAS ಅಧಿಕಾರಿಗಳು: ವಿವಾದ ಸೃಷ್ಟಿಸಿದ ಹಿರಿಯ ಅಧಿಕಾರಿಯ ಪೋಸ್ಟ್‌…

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...