Homeಮುಖಪುಟಇಂಡಿಯಾ ಮೈತ್ರಿಕೂಟವನ್ನು ಮಮತಾ ಬ್ಯಾನರ್ಜಿ ಮುನ್ನಡೆಸಲಿ : ಲಾಲು ಪ್ರಸಾದ್ ಯಾದವ್

ಇಂಡಿಯಾ ಮೈತ್ರಿಕೂಟವನ್ನು ಮಮತಾ ಬ್ಯಾನರ್ಜಿ ಮುನ್ನಡೆಸಲಿ : ಲಾಲು ಪ್ರಸಾದ್ ಯಾದವ್

- Advertisement -
- Advertisement -

ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟ ಮುನ್ನಡೆಸಲು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಅವರಿಗೆ ಅವಕಾಶ ನೀಡಬೇಕು ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮಂಗಳವಾರ (ಡಿ.10) ಹೇಳಿದ್ದಾರೆ.

ಬಿಜೆಪಿ-ವಿರೋಧಿ ಒಕ್ಕೂಟದ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಇಂಗಿತವನ್ನು ಮಮತಾ ಬ್ಯಾನರ್ಜಿ ವ್ಯಕ್ತಪಡಿಸಿದ ಬೆನ್ನಲ್ಲೇ ಲಾಲು ಪ್ರಸಾದ್ ಯಾದವ್ ಅವರ ಪರ ಬ್ಯಾಟ್ ಬೀಸಿದ್ದಾರೆ.

ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷವಾಗಿರುವ ಕಾಂಗ್ರೆಸ್ ಮಮತಾ ಬ್ಯಾರ್ಜಿಯವರನ್ನು ಒಕ್ಕೂಟದ ನಾಯಕಿ ಎಂದು ಒಪ್ಪಿಕೊಂಡರೆ ಯಾವುದೇ ಬದಲಾವಣೆಯಾಗುವುದಿಲ್ಲ ಎಂದು ಲಾಲು ಪ್ರಸಾದ್ ಹೇಳಿದ್ದಾರೆ.

“ಮಮತಾ ಬ್ಯಾನರ್ಜಿ ಸೇರಿದಂತೆ ಯಾವುದೇ ಹಿರಿಯ ನಾಯಕರು ಇಂಡಿಯಾ ಒಕ್ಕೂಟದ ನಾಯಕತ್ವ ವಹಿಸುವುದಾದರೆ ನಮ್ಮದೇನು ಅಭ್ಯಂತರ ಇಲ್ಲ. ಆದರೆ, ಒಮ್ಮತದ ಮೂಲಕ ನಿರ್ಧಾರಕ್ಕೆ ಬರಬೇಕು ಎಂದು ಈ ಹಿಂದೆ ಲಾಲು ಪ್ರಸಾದ್ ಯಾದವ್ ಅವರ ಮಗ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದ್ದರು.

ಡಿಸೆಂಬರ್ 6ರಂದು ಸಂದರ್ಶನವೊಂದರಲ್ಲಿ ಮಾತನಾಡಿದ್ದ ಮಮತಾ ಬ್ಯಾನರ್ಜಿ ಇಂಡಿಯಾ ಒಕ್ಕೂಟದ ಕಾರ್ಯಾಚರಣೆಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದರು. ಅವಕಾಶ ನೀಡಿದರೆ ಒಕ್ಕೂಟದ ಜವಾಬ್ದಾರಿ ವಹಿಸಿಕೊಳ್ಳುವ ಇಂಗಿತ ವ್ಯಕ್ತಪಡಿಸಿದ್ದರು.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಹುದ್ದೆಯ ಜೊತೆಗೆ ಪ್ರತಿಪಕ್ಷಗಳ ಒಕ್ಕೂಟವನ್ನು ಮುನ್ನಡೆಸುವ ಜವಬ್ದಾರಿಯನ್ನು ನಾನು ನಿಭಾಯಿಸಬಲ್ಲೆ ಎಂದಿದ್ದರು.

“ನಾನು ಇಂಡಿಯಾ ಒಕ್ಕೂಟ ರಚಿಸಿದ್ದೆ. ಅದನ್ನು ಮುನ್ನಡೆಸುವ ಜವಾಬ್ದಾರಿ ಈಗ ನಾಯಕತ್ವ ವಹಿಸಿರುವವರ ಮೇಲಿದೆ. ಅವರು ಸರಿಯಾಗಿ ಕಾರ್ಯನಿರ್ವಹಿಸಿಲ್ಲ ಅಂದರೆ ಏನು ಮಾಡುವುದು? ನಾನು ಒಂದನ್ನು ಹೇಳಲು ಇಚ್ಚಿಸುತ್ತೇನೆ, ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಬೇಕಿದೆ” ಎಂದು ಬೆಂಗಾಲಿ ಸುದ್ದಿವಾಹಿನಿ ನ್ಯೂಸ್ 18 ಬಾಂಗ್ಲಾ ಜೊತೆಗಿನ ಸಂದರ್ಶನದಲ್ಲಿ ಮಮತಾ ಬ್ಯಾನರ್ಜಿ ಹೇಳಿದ್ದರು.

ಡಿಸೆಂಬರ್ 15 ರಿಂದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ನಡೆಸಲು ಉದ್ದೇಶಿರುವ ರಾಜ್ಯವ್ಯಾಪಿ ಯಾತ್ರೆಯ ಕುರಿತು ಮಾತನಾಡಿರುವ ಲಾಲು ಪ್ರಸಾದ್ ಯಾದವ್ “ಅವರು ತಮ್ಮ ಕಣ್ಣುಗಳನ್ನು ರಿಫ್ರೆಶ್ ಮಾಡಲು ರಾಜ್ಯಾದ್ಯಂತ ಯಾತ್ರೆ ನಡೆಸುತ್ತಿದ್ದಾರೆ. ಆರ್‌ಜೆಡಿ ನೇತೃತ್ವದ ಸಮ್ಮಿಶ್ರ ಸರ್ಕಾರ 2025ರಲ್ಲಿ ರಾಜ್ಯದಲ್ಲಿ ಸರ್ಕಾರ ರಚಿಸಲಿದೆ” ಎಂದಿದ್ದಾರೆ.

ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಡಿಸೆಂಬರ್ 15 ರಿಂದ ರಾಜ್ಯಾದ್ಯಂತ ‘ಮಹಿಳಾ ಸಂವಾದ ಯಾತ್ರೆ’ ಎಂಬ ಹೆಸರಿನಲ್ಲಿ ಯಾತ್ರೆ ನಡೆಸಲಿದ್ದಾರೆ. ಈ ವೇಳೆ ಅವರು ರಾಜ್ಯ ಸರ್ಕಾರದ ಏಳು-ಪರಿಹಾರ ಕಾರ್ಯಕ್ರಮಗಳ ಪ್ರಗತಿಯನ್ನು ಪರಿಶೀಲಿಸಲಿದ್ದಾರೆ ಮತ್ತು ಮಹಿಳೆಯರೊಂದಿಗೆ ಸಂವಾದದ ಮೂಲಕ ಜನರ ನಾಡಿಮಿಡಿತ ಅರಿಯಲಿದ್ದಾರೆ.

ಇದನ್ನೂ ಓದಿ : ಅದಾನಿ ಭ್ರಷ್ಟಾಚಾರ | ಕಪ್ಪು ಬ್ಯಾಗ್ ಹಿಡಿದು ಪ್ರತಿಭಟನೆ ನಡೆಸಿದ ವಿಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...