Homeಮುಖಪುಟಸಿಪಿಐ(ಎಂ) ಬೆನ್ನಲ್ಲೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ತಿರಸ್ಕರಿಸಿದ ಟಿಎಂಸಿ!

ಸಿಪಿಐ(ಎಂ) ಬೆನ್ನಲ್ಲೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ತಿರಸ್ಕರಿಸಿದ ಟಿಎಂಸಿ!

- Advertisement -
- Advertisement -

ಅಯೋಧ್ಯೆಯಲ್ಲಿನ ರಾಮಮಂದಿರದ ಉದ್ಘಾಟನೆ ಆಹ್ವಾನವನ್ನು ಸಿಪಿಐಎಂ ತಿರಸ್ಕರಿಸಿದ್ದ ಬೆನ್ನಲ್ಲೇ ಇದೀಗ ಟಿಎಂಸಿ ಕೂಡ ರಾಮಮಂದಿರದ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿಕೊಂಡಿದೆ.

ರಾಮಮಂದಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ.ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಥವಾ ಪಶ್ಚಿಮ ಬಂಗಾಳ ಸರ್ಕಾರ ಅಥವಾ ಪಕ್ಷದ ಯಾವುದೇ ಪ್ರತಿನಿಧಿಗಳು ಹಾಜರಾಗುವುದಿಲ್ಲ ಎಂದು ಟಿಎಂಸಿ ಮೂಲಗಳು ಹೇಳಿಕೊಂಡಿದೆ.

ಈ ಕುರಿತು ಟಿಎಂಸಿ ನಾಯಕರೋರ್ವರು ಹೇಳಿಕೆಯನ್ನು ನೀಡಿದ್ದು, ಮುಂದಿನ ತಿಂಗಳು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಉದ್ಘಾಟನೆಗೆ ಮಮತಾ ಬ್ಯಾನರ್ಜಿ ಅಥವಾ ಟಿಎಂಸಿಯ ಯಾವುದೇ ಪ್ರತಿನಿಧಿಗಳು ಭಾಗವಹಿಸುತ್ತಾರಾ ಎಂಬ ಪ್ರಶ್ನೆ ಇದೆ. ನಾವು ಯಾರೂ ಭಾಗವಹಿಸುವುದಿಲ್ಲ. ಧರ್ಮದೊಂದಿಗೆ ರಾಜಕೀಯ ಬೆರೆಸುವುದರಲ್ಲಿ ನಮಗೆ ನಂಬಿಕೆ ಇಲ್ಲ ಎಂದು ಹೇಳಿದ್ದಾರೆ.

ಜ.22ರಂದು ರಾಮಮಂದಿರ ಉದ್ಘಾಟನೆಯಾಗಲಿದ್ದು, ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡ, ದಲೈ ಲಾಮಾ, ನಟರಾದ ರಜನಿಕಾಂತ್, ಅಮಿತಾಬ್ ಬಚ್ಚನ್, ಮಾಧುರಿ ದೀಕ್ಷಿತ್ ಮತ್ತು ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ ಮತ್ತು ಅನಿಲ್ ಅಂಬಾನಿ ಸೇರಿದಂತೆ ಹಲವು ಪ್ರಮುಖ ನಾಯಕರು, ಉದ್ಯಮಿಗಳಿಗೆ ಆಹ್ವಾನವನ್ನು ನೀಡಲಾಗಿದೆ. 4,000 ಸಂತರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. 2,200ಕ್ಕೂ ಅಧಿಕ ಅತಿಥಿಗಳು ಭಾಗವಹಿಸಲಿದ್ದಾರೆ.

ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ನೀಡಿದ ಆಹ್ವಾನವನ್ನು ತಿರಸ್ಕರಿಸಿದ್ದರು. ಪಕ್ಷವು ತಮ್ಮ ಆಯ್ಕೆಯ ಯಾವುದೇ ಧರ್ಮವನ್ನು ನಂಬುವ ಮತ್ತು ಆಚರಿಸುವ ಪ್ರತಿಯೊಬ್ಬರ ಹಕ್ಕನ್ನು ಗೌರವಿಸುತ್ತದೆ ಎಂದು  ಹೇಳಿದ್ದರು.

ಸಿಪಿಐ(ಎಂ) ನೀತಿಯು, ಧಾರ್ಮಿಕ ಭಾವನೆಗಳನ್ನು ಗೌರವಿಸುವುದು ಮತ್ತು ಪ್ರತಿಯೊಬ್ಬ ವ್ಯಕ್ತಿಗೆ ಅವರ ನಂಬಿಕೆಯನ್ನು ಆಚರಿಸುವ ಹಕ್ಕನ್ನು ಕಾಪಾಡುವ ಗುರಿಯನ್ನು ಹೊಂದಿದೆ. ಧರ್ಮವು ವೈಯಕ್ತಿಕ ಆಯ್ಕೆಯಾಗಿದೆ ಮತ್ತು ಅದನ್ನು ರಾಜಕೀಯ ಲಾಭದ ಸಾಧನವಾಗಿ ಪರಿವರ್ತಿಸಬಾರದು ಎಂದು ಪಕ್ಷವು ನಂಬುತ್ತದೆ. ಆದ್ದರಿಂದ ನಾವು ಈ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ. ಬಿಜೆಪಿ ಮತ್ತು ಆರೆಸ್ಸೆಸ್ ಧಾರ್ಮಿಕ ಕಾರ್ಯಕ್ರಮವನ್ನು ಹೇಗೆ ಸರಕಾರ ಪ್ರಾಯೋಜಿತ ಕಾರ್ಯಕ್ರಮವಾಗಿ  ಪರಿವರ್ತಿಸಿದೆ ಎಂಬುದನ್ನು ಪ್ರಕಟಣೆಯಲ್ಲಿ ಹೇಳಲಾಗಿತ್ತು. ಬಿಜೆಪಿ ಮತ್ತು ಆರೆಸ್ಸೆಸ್‌ ಈ ಧಾರ್ಮಿಕ ಸಮಾರಂಭವನ್ನು ಪ್ರಧಾನಮಂತ್ರಿ, ಯುಪಿ ಮುಖ್ಯಮಂತ್ರಿ ಮತ್ತು ಇತರ ಸರ್ಕಾರಿ ಅಧಿಕಾರಿಗಳನ್ನು ನೇರವಾಗಿ ಒಳಗೊಂಡ ಸರಕಾರದ ಕಾರ್ಯಕ್ರಮವನ್ನಾಗಿ ಪರಿವರ್ತಿಸಿರುವುದು ಅತ್ಯಂತ ದುರದೃಷ್ಟಕರ. ಸರಕಾರಕ್ಕೆ ಯಾವುದೇ ಧಾರ್ಮಿಕ ಒಲವುಗಳು ಇರಬಾರದು. ಇದು ಸಂವಿಧಾನ ಬಾಹಿರವಾಗಿದೆ. ಕಾರ್ಯಕ್ರಮದ ಆಯೋಜನೆ ವೇಳೆ ಈ ನಿಯಮವನ್ನು ಉಲ್ಲಂಘಿಸಲಾಗಿದೆ ಎಂದು ಸಿಪಿಐಎಂ ಹೇಳಿತ್ತು.

ಇದಕ್ಕೂ ಮೊದಲು ಮಾತನಾಡಿದ್ದ ಬೃಂದಾ ಕಾರಟ್, ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಮ್ಯೂನಿಷ್ಟ್ ಪಾರ್ಟಿ ಆಫ್ ಇಂಡಿಯಾ ಸಿಪಿಐ(ಎಂ) ಭಾಗವಹಿಸುವುದಿಲ್ಲ ಎಂದು ಹೇಳಿದ್ದರು. ನಮ್ಮ ಪಕ್ಷವು ಧಾರ್ಮಿಕ ನಂಬಿಕೆಗಳನ್ನು ಗೌರವಿಸಲಿದೆ. ಧರ್ಮದೊಂದಿಗೆ ರಾಜಕೀಯ ಬೆರೆಸುವುದು ಸರಿಯಲ್ಲ. ಬಿಜೆಪಿ ರಾಮ ಮಂದಿರ ಉದ್ಘಾಟನೆಯನ್ನು ಸಂಪೂರ್ಣವಾಗಿ ರಾಜಕೀಯಗೊಳಿಸುತ್ತಿದೆ ಎಂದು ಹೇಳಿದ್ದರು.

ಇದನ್ನು ಓದಿ: ‘ಮುಸ್ಲಿಂ ಲೀಗ್ ಜಮ್ಮು-ಕಾಶ್ಮೀರ’ ಸಂಘಟನೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...