Homeಮುಖಪುಟನಂದಿಗ್ರಾಮ ಫಲಿತಾಂಶ: ಮಮತಾ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ನಡೆಸುತ್ತಿರುವ ಜಸ್ಟೀಸ್ ಕೌಶಿಕ್ ಚಂದ ಬಗ್ಗೆ ಟಿಎಂಸಿ...

ನಂದಿಗ್ರಾಮ ಫಲಿತಾಂಶ: ಮಮತಾ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ನಡೆಸುತ್ತಿರುವ ಜಸ್ಟೀಸ್ ಕೌಶಿಕ್ ಚಂದ ಬಗ್ಗೆ ಟಿಎಂಸಿ ಅಸಮಾಧಾನ

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮ ಫಲಿತಾಂಶವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೋಲ್ಕತ್ತಾ ಹೈಕೋರ್ಟ್ ಜೂನ್ 24ಕ್ಕೆ ಮುಂದೂಡಿದೆ. ಬಿಜೆಪಿ ಅಭ್ಯರ್ಥಿಯಾಗಿ ಸುವೇಂದು ಅಧಿಕಾರಿ ಗೆಲುವು ಪಡೆದಿದ್ದರು.

ಕೋಲ್ಕತ್ತಾ ಹೈಕೋರ್ಟ್‌‌ನಲ್ಲಿ ಸಲ್ಲಿಸಿಲಾಗಿದ್ದ ಅರ್ಜಿ ವಿಚಾರಣೆಯನ್ನು ಜಸ್ಟೀಸ್ ಕೌಶಿಕ್ ಚಂದ ನಡೆಸುತ್ತಿದ್ದು, ನ್ಯಾಯಮೂರ್ತಿ ಬಗ್ಗೆ ತೃಣಮೂಲ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಭಾರತೀಯ ಜನತಾ ಪಾರ್ಟಿಯ ಕಾನೂನು ಸಲಹೆಗಾರರಾಗಿದ್ದ ಕೌಶಿಕ್ ಚಂದ ಅವರು ಕೋಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿಗಳಾಗಿದ್ದಾರೆ. ಅವರ ಮುಂದೆ ಮಮತಾ ಬ್ಯಾನರ್ಜಿಯವರ ನಂದಿಗ್ರಾಮ ಚುನಾವಣೆ ಫಲಿತಾಂಶದ ಅರ್ಜಿ ಇದೆ ಎಂದು ಟಿಎಂಸಿ ನಾಯಕರು ಟ್ವೀಟ್ ಮಾಡುತ್ತಿದ್ದಾರೆ.

ಟಿಎಂಸಿ ಸಂಸದ ಡೆರೆಕ್ ಒಬ್ರಿಯನ್ ತಮ್ಮ ಟ್ವಿಟರ್‌ ಖಾತೆಯಲ್ಲಿ ಜಸ್ಟೀಸ್ ಕೌಶಿಕ್ ಚಂದ ಬಿಜೆಪಿ ಕಾನೂನು ಘಟಕದಲ್ಲಿದರು ಎಂದು ಛಾಯಾಚಿತ್ರಗಳನ್ನು ಪೋಸ್ಟ್‌ ಮಾಡಿದ್ದಾರೆ. ಪಶ್ಚಿಮ ಬಂಗಾಳ ಬಿಜೆಪಿ ಘಟಕದ ಅಧ್ಯಕ್ಷ ದಿಲೀಪ್ ಘೋಷ್‌ ಮಾತ್ತು ಕೌಶಿಕ್ ಚಂದ ಅವರ ಚಿತ್ರಗಳನ್ನು ಶೇರ್‌ ಮಾಡಿ, ಇವರೇನಾ ಈಗೀನ ಕೋಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿಗಳು..? ಇವರ ಮುಂದೆ ಮಮತಾ ಬ್ಯಾನರ್ಜಿ ಸಲ್ಲಿಸಿರುವ ನಂದಿಗ್ರಾಮ ಚುನಾವಣೆ ಪ್ರಕರಣದ ಅರ್ಜಿ ವಿಚಾರಣೆ..? ನ್ಯಾಯಾಂಗ ಇಷ್ಟು ಕೆಳಮಟ್ಟಕ್ಕೆ ಇಳಿಯುವುದೆ..? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ‘ಜೈಲನ್ನು ತೋರಿಸಿ ನಮ್ಮನ್ನು ಬೆದರಿಸಲಾಗದು’ – ಬಿಡುಗಡೆಗೊಂಡ ವಿದ್ಯಾರ್ಥಿ ಹೋರಾಟಗಾರರ ಘೋಷಣೆಗಳಿವು!

ಟಿಎಂಸಿ ಸಂಸದೆ ಮಹುವಾ ಮೊಹಿತ್ರಾ ಕೂಡ ಕೋಲ್ಕತ್ತಾ ಹೈಕೋರ್ಟ್‌ನಲ್ಲಿ ನಂದಿಗ್ರಾಮ ಪ್ರಕರಣವನ್ನು ಕೌಶಿಕ್ ಚಂದ ಅವರ ವಿಚಾರಣೆಗೆ ವಹಿಸಿರುವುದನ್ನು ಖಂಡಿಸಿ, ನ್ಯಾಯಾಂಗವನ್ನು ಉಳಿಸಿ ಎಂದಿದ್ದಾರೆ.

ಬಿಜೆಪಿಯ ಕಾನೂನು ವಿಭಾ‌ಗದ ಸದಸ್ಯ ಮತ್ತು ವಕೀಲರಾಗಿದ್ದ ಜಸ್ಟೀಸ್ ಕೌಶಿಕ್ ಚಂದ, ಮಮತಾ ಬ್ಯಾನರ್ಜಿಯವರ ನಂದಿಗ್ರಾಮದ ಅರ್ಜಿ ವಿಚಾರಣೆಯನ್ನು ನಡೆಸಲಿದ್ದಾರೆ. ನಮ್ಮ ನ್ಯಾಯಾಂಗವನ್ನು ಉಳಿಸಿ ಎಂದು ಟ್ವೀಟ್ ಮಾಡಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆಯ ವಿಧಾನಸಭಾ ಕ್ಷೇತ್ರ ನಂದಿಗ್ರಾಮದ ಮತ ಏಣಿಕೆಯಲ್ಲಿ ಮೊದಲಿನಿಂದಲೂ ಮುನ್ನಡೆಯಲ್ಲಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೊನೆಯಲ್ಲಿ ಸೋಲು ಕಂಡಿದ್ದಾರೆ ಎಂದು ಘೋಷಿಸಲಾಯಿತು. ಬಿಜೆಪಿಯ ಸುವೇಂಧು ಅಧಿಕಾರಿಗೆ ಗೆಲುವು ಎನ್ನಲಾಯಿತು. ಹಲವು ಗೊಂದಲಗಳಿಗೆ ಕಾರಣವಾದ ಫಲಿತಾಂಶದ ಬಗ್ಗೆ ಹಲವರು ಅನುಮಾನ ವ್ಯಕ್ತಪಡಿಸಿದ್ದರು.

ನಂದಿಗ್ರಾಮದ ಫಲಿತಾಂಶವನ್ನು ಪ್ರಶ್ನಿಸಿ, ಮರು ಮತ ಏಣಿಕೆ ನಡೆಸುವಂತೆ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು. ಚುನಾವಣಾ ಆಯೋಗ ಅರ್ಜಿಯನ್ನು ತಿರಸ್ಕರಿಸಿತ್ತು. ಈ ಕುರಿತು ಕೋಲ್ಕತ್ತಾ ಹೈಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ಚಾರಣೆಯನ್ನು ಜಸ್ಟೀಸ್ ಕೌಶಿಕ್ ಚಂದ ಅವರು ನಡೆಸಲಿದ್ದು, ಇವರು ಬಿಜೆಪಿ ಬೆಂಬಲಿತರು ಎಂದು ಟಿಎಂಸಿ ಆರೋಪಿಸುತ್ತಿದೆ.

 


ಇದನ್ನೂ ಓದಿ: ಯಾಸ್ ಚಂಡಮಾರುತ: ಕೇಂದ್ರದಿಂದ ಯಾವುದೇ ನೆರವು ಬಂದಿಲ್ಲ ಎಂದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...