Homeಮುಖಪುಟನಂದಿಗ್ರಾಮ ಫಲಿತಾಂಶ: ಮಮತಾ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ನಡೆಸುತ್ತಿರುವ ಜಸ್ಟೀಸ್ ಕೌಶಿಕ್ ಚಂದ ಬಗ್ಗೆ ಟಿಎಂಸಿ...

ನಂದಿಗ್ರಾಮ ಫಲಿತಾಂಶ: ಮಮತಾ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ನಡೆಸುತ್ತಿರುವ ಜಸ್ಟೀಸ್ ಕೌಶಿಕ್ ಚಂದ ಬಗ್ಗೆ ಟಿಎಂಸಿ ಅಸಮಾಧಾನ

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮ ಫಲಿತಾಂಶವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೋಲ್ಕತ್ತಾ ಹೈಕೋರ್ಟ್ ಜೂನ್ 24ಕ್ಕೆ ಮುಂದೂಡಿದೆ. ಬಿಜೆಪಿ ಅಭ್ಯರ್ಥಿಯಾಗಿ ಸುವೇಂದು ಅಧಿಕಾರಿ ಗೆಲುವು ಪಡೆದಿದ್ದರು.

ಕೋಲ್ಕತ್ತಾ ಹೈಕೋರ್ಟ್‌‌ನಲ್ಲಿ ಸಲ್ಲಿಸಿಲಾಗಿದ್ದ ಅರ್ಜಿ ವಿಚಾರಣೆಯನ್ನು ಜಸ್ಟೀಸ್ ಕೌಶಿಕ್ ಚಂದ ನಡೆಸುತ್ತಿದ್ದು, ನ್ಯಾಯಮೂರ್ತಿ ಬಗ್ಗೆ ತೃಣಮೂಲ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಭಾರತೀಯ ಜನತಾ ಪಾರ್ಟಿಯ ಕಾನೂನು ಸಲಹೆಗಾರರಾಗಿದ್ದ ಕೌಶಿಕ್ ಚಂದ ಅವರು ಕೋಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿಗಳಾಗಿದ್ದಾರೆ. ಅವರ ಮುಂದೆ ಮಮತಾ ಬ್ಯಾನರ್ಜಿಯವರ ನಂದಿಗ್ರಾಮ ಚುನಾವಣೆ ಫಲಿತಾಂಶದ ಅರ್ಜಿ ಇದೆ ಎಂದು ಟಿಎಂಸಿ ನಾಯಕರು ಟ್ವೀಟ್ ಮಾಡುತ್ತಿದ್ದಾರೆ.

ಟಿಎಂಸಿ ಸಂಸದ ಡೆರೆಕ್ ಒಬ್ರಿಯನ್ ತಮ್ಮ ಟ್ವಿಟರ್‌ ಖಾತೆಯಲ್ಲಿ ಜಸ್ಟೀಸ್ ಕೌಶಿಕ್ ಚಂದ ಬಿಜೆಪಿ ಕಾನೂನು ಘಟಕದಲ್ಲಿದರು ಎಂದು ಛಾಯಾಚಿತ್ರಗಳನ್ನು ಪೋಸ್ಟ್‌ ಮಾಡಿದ್ದಾರೆ. ಪಶ್ಚಿಮ ಬಂಗಾಳ ಬಿಜೆಪಿ ಘಟಕದ ಅಧ್ಯಕ್ಷ ದಿಲೀಪ್ ಘೋಷ್‌ ಮಾತ್ತು ಕೌಶಿಕ್ ಚಂದ ಅವರ ಚಿತ್ರಗಳನ್ನು ಶೇರ್‌ ಮಾಡಿ, ಇವರೇನಾ ಈಗೀನ ಕೋಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿಗಳು..? ಇವರ ಮುಂದೆ ಮಮತಾ ಬ್ಯಾನರ್ಜಿ ಸಲ್ಲಿಸಿರುವ ನಂದಿಗ್ರಾಮ ಚುನಾವಣೆ ಪ್ರಕರಣದ ಅರ್ಜಿ ವಿಚಾರಣೆ..? ನ್ಯಾಯಾಂಗ ಇಷ್ಟು ಕೆಳಮಟ್ಟಕ್ಕೆ ಇಳಿಯುವುದೆ..? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ‘ಜೈಲನ್ನು ತೋರಿಸಿ ನಮ್ಮನ್ನು ಬೆದರಿಸಲಾಗದು’ – ಬಿಡುಗಡೆಗೊಂಡ ವಿದ್ಯಾರ್ಥಿ ಹೋರಾಟಗಾರರ ಘೋಷಣೆಗಳಿವು!

ಟಿಎಂಸಿ ಸಂಸದೆ ಮಹುವಾ ಮೊಹಿತ್ರಾ ಕೂಡ ಕೋಲ್ಕತ್ತಾ ಹೈಕೋರ್ಟ್‌ನಲ್ಲಿ ನಂದಿಗ್ರಾಮ ಪ್ರಕರಣವನ್ನು ಕೌಶಿಕ್ ಚಂದ ಅವರ ವಿಚಾರಣೆಗೆ ವಹಿಸಿರುವುದನ್ನು ಖಂಡಿಸಿ, ನ್ಯಾಯಾಂಗವನ್ನು ಉಳಿಸಿ ಎಂದಿದ್ದಾರೆ.

ಬಿಜೆಪಿಯ ಕಾನೂನು ವಿಭಾ‌ಗದ ಸದಸ್ಯ ಮತ್ತು ವಕೀಲರಾಗಿದ್ದ ಜಸ್ಟೀಸ್ ಕೌಶಿಕ್ ಚಂದ, ಮಮತಾ ಬ್ಯಾನರ್ಜಿಯವರ ನಂದಿಗ್ರಾಮದ ಅರ್ಜಿ ವಿಚಾರಣೆಯನ್ನು ನಡೆಸಲಿದ್ದಾರೆ. ನಮ್ಮ ನ್ಯಾಯಾಂಗವನ್ನು ಉಳಿಸಿ ಎಂದು ಟ್ವೀಟ್ ಮಾಡಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆಯ ವಿಧಾನಸಭಾ ಕ್ಷೇತ್ರ ನಂದಿಗ್ರಾಮದ ಮತ ಏಣಿಕೆಯಲ್ಲಿ ಮೊದಲಿನಿಂದಲೂ ಮುನ್ನಡೆಯಲ್ಲಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೊನೆಯಲ್ಲಿ ಸೋಲು ಕಂಡಿದ್ದಾರೆ ಎಂದು ಘೋಷಿಸಲಾಯಿತು. ಬಿಜೆಪಿಯ ಸುವೇಂಧು ಅಧಿಕಾರಿಗೆ ಗೆಲುವು ಎನ್ನಲಾಯಿತು. ಹಲವು ಗೊಂದಲಗಳಿಗೆ ಕಾರಣವಾದ ಫಲಿತಾಂಶದ ಬಗ್ಗೆ ಹಲವರು ಅನುಮಾನ ವ್ಯಕ್ತಪಡಿಸಿದ್ದರು.

ನಂದಿಗ್ರಾಮದ ಫಲಿತಾಂಶವನ್ನು ಪ್ರಶ್ನಿಸಿ, ಮರು ಮತ ಏಣಿಕೆ ನಡೆಸುವಂತೆ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು. ಚುನಾವಣಾ ಆಯೋಗ ಅರ್ಜಿಯನ್ನು ತಿರಸ್ಕರಿಸಿತ್ತು. ಈ ಕುರಿತು ಕೋಲ್ಕತ್ತಾ ಹೈಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ಚಾರಣೆಯನ್ನು ಜಸ್ಟೀಸ್ ಕೌಶಿಕ್ ಚಂದ ಅವರು ನಡೆಸಲಿದ್ದು, ಇವರು ಬಿಜೆಪಿ ಬೆಂಬಲಿತರು ಎಂದು ಟಿಎಂಸಿ ಆರೋಪಿಸುತ್ತಿದೆ.

 


ಇದನ್ನೂ ಓದಿ: ಯಾಸ್ ಚಂಡಮಾರುತ: ಕೇಂದ್ರದಿಂದ ಯಾವುದೇ ನೆರವು ಬಂದಿಲ್ಲ ಎಂದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...