Homeಮುಖಪುಟನಂದಿಗ್ರಾಮ ಫಲಿತಾಂಶ: ಮಮತಾ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ನಡೆಸುತ್ತಿರುವ ಜಸ್ಟೀಸ್ ಕೌಶಿಕ್ ಚಂದ ಬಗ್ಗೆ ಟಿಎಂಸಿ...

ನಂದಿಗ್ರಾಮ ಫಲಿತಾಂಶ: ಮಮತಾ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ನಡೆಸುತ್ತಿರುವ ಜಸ್ಟೀಸ್ ಕೌಶಿಕ್ ಚಂದ ಬಗ್ಗೆ ಟಿಎಂಸಿ ಅಸಮಾಧಾನ

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮ ಫಲಿತಾಂಶವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೋಲ್ಕತ್ತಾ ಹೈಕೋರ್ಟ್ ಜೂನ್ 24ಕ್ಕೆ ಮುಂದೂಡಿದೆ. ಬಿಜೆಪಿ ಅಭ್ಯರ್ಥಿಯಾಗಿ ಸುವೇಂದು ಅಧಿಕಾರಿ ಗೆಲುವು ಪಡೆದಿದ್ದರು.

ಕೋಲ್ಕತ್ತಾ ಹೈಕೋರ್ಟ್‌‌ನಲ್ಲಿ ಸಲ್ಲಿಸಿಲಾಗಿದ್ದ ಅರ್ಜಿ ವಿಚಾರಣೆಯನ್ನು ಜಸ್ಟೀಸ್ ಕೌಶಿಕ್ ಚಂದ ನಡೆಸುತ್ತಿದ್ದು, ನ್ಯಾಯಮೂರ್ತಿ ಬಗ್ಗೆ ತೃಣಮೂಲ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಭಾರತೀಯ ಜನತಾ ಪಾರ್ಟಿಯ ಕಾನೂನು ಸಲಹೆಗಾರರಾಗಿದ್ದ ಕೌಶಿಕ್ ಚಂದ ಅವರು ಕೋಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿಗಳಾಗಿದ್ದಾರೆ. ಅವರ ಮುಂದೆ ಮಮತಾ ಬ್ಯಾನರ್ಜಿಯವರ ನಂದಿಗ್ರಾಮ ಚುನಾವಣೆ ಫಲಿತಾಂಶದ ಅರ್ಜಿ ಇದೆ ಎಂದು ಟಿಎಂಸಿ ನಾಯಕರು ಟ್ವೀಟ್ ಮಾಡುತ್ತಿದ್ದಾರೆ.

ಟಿಎಂಸಿ ಸಂಸದ ಡೆರೆಕ್ ಒಬ್ರಿಯನ್ ತಮ್ಮ ಟ್ವಿಟರ್‌ ಖಾತೆಯಲ್ಲಿ ಜಸ್ಟೀಸ್ ಕೌಶಿಕ್ ಚಂದ ಬಿಜೆಪಿ ಕಾನೂನು ಘಟಕದಲ್ಲಿದರು ಎಂದು ಛಾಯಾಚಿತ್ರಗಳನ್ನು ಪೋಸ್ಟ್‌ ಮಾಡಿದ್ದಾರೆ. ಪಶ್ಚಿಮ ಬಂಗಾಳ ಬಿಜೆಪಿ ಘಟಕದ ಅಧ್ಯಕ್ಷ ದಿಲೀಪ್ ಘೋಷ್‌ ಮಾತ್ತು ಕೌಶಿಕ್ ಚಂದ ಅವರ ಚಿತ್ರಗಳನ್ನು ಶೇರ್‌ ಮಾಡಿ, ಇವರೇನಾ ಈಗೀನ ಕೋಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿಗಳು..? ಇವರ ಮುಂದೆ ಮಮತಾ ಬ್ಯಾನರ್ಜಿ ಸಲ್ಲಿಸಿರುವ ನಂದಿಗ್ರಾಮ ಚುನಾವಣೆ ಪ್ರಕರಣದ ಅರ್ಜಿ ವಿಚಾರಣೆ..? ನ್ಯಾಯಾಂಗ ಇಷ್ಟು ಕೆಳಮಟ್ಟಕ್ಕೆ ಇಳಿಯುವುದೆ..? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ‘ಜೈಲನ್ನು ತೋರಿಸಿ ನಮ್ಮನ್ನು ಬೆದರಿಸಲಾಗದು’ – ಬಿಡುಗಡೆಗೊಂಡ ವಿದ್ಯಾರ್ಥಿ ಹೋರಾಟಗಾರರ ಘೋಷಣೆಗಳಿವು!

ಟಿಎಂಸಿ ಸಂಸದೆ ಮಹುವಾ ಮೊಹಿತ್ರಾ ಕೂಡ ಕೋಲ್ಕತ್ತಾ ಹೈಕೋರ್ಟ್‌ನಲ್ಲಿ ನಂದಿಗ್ರಾಮ ಪ್ರಕರಣವನ್ನು ಕೌಶಿಕ್ ಚಂದ ಅವರ ವಿಚಾರಣೆಗೆ ವಹಿಸಿರುವುದನ್ನು ಖಂಡಿಸಿ, ನ್ಯಾಯಾಂಗವನ್ನು ಉಳಿಸಿ ಎಂದಿದ್ದಾರೆ.

ಬಿಜೆಪಿಯ ಕಾನೂನು ವಿಭಾ‌ಗದ ಸದಸ್ಯ ಮತ್ತು ವಕೀಲರಾಗಿದ್ದ ಜಸ್ಟೀಸ್ ಕೌಶಿಕ್ ಚಂದ, ಮಮತಾ ಬ್ಯಾನರ್ಜಿಯವರ ನಂದಿಗ್ರಾಮದ ಅರ್ಜಿ ವಿಚಾರಣೆಯನ್ನು ನಡೆಸಲಿದ್ದಾರೆ. ನಮ್ಮ ನ್ಯಾಯಾಂಗವನ್ನು ಉಳಿಸಿ ಎಂದು ಟ್ವೀಟ್ ಮಾಡಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆಯ ವಿಧಾನಸಭಾ ಕ್ಷೇತ್ರ ನಂದಿಗ್ರಾಮದ ಮತ ಏಣಿಕೆಯಲ್ಲಿ ಮೊದಲಿನಿಂದಲೂ ಮುನ್ನಡೆಯಲ್ಲಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೊನೆಯಲ್ಲಿ ಸೋಲು ಕಂಡಿದ್ದಾರೆ ಎಂದು ಘೋಷಿಸಲಾಯಿತು. ಬಿಜೆಪಿಯ ಸುವೇಂಧು ಅಧಿಕಾರಿಗೆ ಗೆಲುವು ಎನ್ನಲಾಯಿತು. ಹಲವು ಗೊಂದಲಗಳಿಗೆ ಕಾರಣವಾದ ಫಲಿತಾಂಶದ ಬಗ್ಗೆ ಹಲವರು ಅನುಮಾನ ವ್ಯಕ್ತಪಡಿಸಿದ್ದರು.

ನಂದಿಗ್ರಾಮದ ಫಲಿತಾಂಶವನ್ನು ಪ್ರಶ್ನಿಸಿ, ಮರು ಮತ ಏಣಿಕೆ ನಡೆಸುವಂತೆ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು. ಚುನಾವಣಾ ಆಯೋಗ ಅರ್ಜಿಯನ್ನು ತಿರಸ್ಕರಿಸಿತ್ತು. ಈ ಕುರಿತು ಕೋಲ್ಕತ್ತಾ ಹೈಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ಚಾರಣೆಯನ್ನು ಜಸ್ಟೀಸ್ ಕೌಶಿಕ್ ಚಂದ ಅವರು ನಡೆಸಲಿದ್ದು, ಇವರು ಬಿಜೆಪಿ ಬೆಂಬಲಿತರು ಎಂದು ಟಿಎಂಸಿ ಆರೋಪಿಸುತ್ತಿದೆ.

 


ಇದನ್ನೂ ಓದಿ: ಯಾಸ್ ಚಂಡಮಾರುತ: ಕೇಂದ್ರದಿಂದ ಯಾವುದೇ ನೆರವು ಬಂದಿಲ್ಲ ಎಂದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...