Homeಮುಖಪುಟನಂದಿಗ್ರಾಮ ಫಲಿತಾಂಶ: ಮಮತಾ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ನಡೆಸುತ್ತಿರುವ ಜಸ್ಟೀಸ್ ಕೌಶಿಕ್ ಚಂದ ಬಗ್ಗೆ ಟಿಎಂಸಿ...

ನಂದಿಗ್ರಾಮ ಫಲಿತಾಂಶ: ಮಮತಾ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ನಡೆಸುತ್ತಿರುವ ಜಸ್ಟೀಸ್ ಕೌಶಿಕ್ ಚಂದ ಬಗ್ಗೆ ಟಿಎಂಸಿ ಅಸಮಾಧಾನ

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮ ಫಲಿತಾಂಶವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೋಲ್ಕತ್ತಾ ಹೈಕೋರ್ಟ್ ಜೂನ್ 24ಕ್ಕೆ ಮುಂದೂಡಿದೆ. ಬಿಜೆಪಿ ಅಭ್ಯರ್ಥಿಯಾಗಿ ಸುವೇಂದು ಅಧಿಕಾರಿ ಗೆಲುವು ಪಡೆದಿದ್ದರು.

ಕೋಲ್ಕತ್ತಾ ಹೈಕೋರ್ಟ್‌‌ನಲ್ಲಿ ಸಲ್ಲಿಸಿಲಾಗಿದ್ದ ಅರ್ಜಿ ವಿಚಾರಣೆಯನ್ನು ಜಸ್ಟೀಸ್ ಕೌಶಿಕ್ ಚಂದ ನಡೆಸುತ್ತಿದ್ದು, ನ್ಯಾಯಮೂರ್ತಿ ಬಗ್ಗೆ ತೃಣಮೂಲ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಭಾರತೀಯ ಜನತಾ ಪಾರ್ಟಿಯ ಕಾನೂನು ಸಲಹೆಗಾರರಾಗಿದ್ದ ಕೌಶಿಕ್ ಚಂದ ಅವರು ಕೋಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿಗಳಾಗಿದ್ದಾರೆ. ಅವರ ಮುಂದೆ ಮಮತಾ ಬ್ಯಾನರ್ಜಿಯವರ ನಂದಿಗ್ರಾಮ ಚುನಾವಣೆ ಫಲಿತಾಂಶದ ಅರ್ಜಿ ಇದೆ ಎಂದು ಟಿಎಂಸಿ ನಾಯಕರು ಟ್ವೀಟ್ ಮಾಡುತ್ತಿದ್ದಾರೆ.

ಟಿಎಂಸಿ ಸಂಸದ ಡೆರೆಕ್ ಒಬ್ರಿಯನ್ ತಮ್ಮ ಟ್ವಿಟರ್‌ ಖಾತೆಯಲ್ಲಿ ಜಸ್ಟೀಸ್ ಕೌಶಿಕ್ ಚಂದ ಬಿಜೆಪಿ ಕಾನೂನು ಘಟಕದಲ್ಲಿದರು ಎಂದು ಛಾಯಾಚಿತ್ರಗಳನ್ನು ಪೋಸ್ಟ್‌ ಮಾಡಿದ್ದಾರೆ. ಪಶ್ಚಿಮ ಬಂಗಾಳ ಬಿಜೆಪಿ ಘಟಕದ ಅಧ್ಯಕ್ಷ ದಿಲೀಪ್ ಘೋಷ್‌ ಮಾತ್ತು ಕೌಶಿಕ್ ಚಂದ ಅವರ ಚಿತ್ರಗಳನ್ನು ಶೇರ್‌ ಮಾಡಿ, ಇವರೇನಾ ಈಗೀನ ಕೋಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿಗಳು..? ಇವರ ಮುಂದೆ ಮಮತಾ ಬ್ಯಾನರ್ಜಿ ಸಲ್ಲಿಸಿರುವ ನಂದಿಗ್ರಾಮ ಚುನಾವಣೆ ಪ್ರಕರಣದ ಅರ್ಜಿ ವಿಚಾರಣೆ..? ನ್ಯಾಯಾಂಗ ಇಷ್ಟು ಕೆಳಮಟ್ಟಕ್ಕೆ ಇಳಿಯುವುದೆ..? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ‘ಜೈಲನ್ನು ತೋರಿಸಿ ನಮ್ಮನ್ನು ಬೆದರಿಸಲಾಗದು’ – ಬಿಡುಗಡೆಗೊಂಡ ವಿದ್ಯಾರ್ಥಿ ಹೋರಾಟಗಾರರ ಘೋಷಣೆಗಳಿವು!

ಟಿಎಂಸಿ ಸಂಸದೆ ಮಹುವಾ ಮೊಹಿತ್ರಾ ಕೂಡ ಕೋಲ್ಕತ್ತಾ ಹೈಕೋರ್ಟ್‌ನಲ್ಲಿ ನಂದಿಗ್ರಾಮ ಪ್ರಕರಣವನ್ನು ಕೌಶಿಕ್ ಚಂದ ಅವರ ವಿಚಾರಣೆಗೆ ವಹಿಸಿರುವುದನ್ನು ಖಂಡಿಸಿ, ನ್ಯಾಯಾಂಗವನ್ನು ಉಳಿಸಿ ಎಂದಿದ್ದಾರೆ.

ಬಿಜೆಪಿಯ ಕಾನೂನು ವಿಭಾ‌ಗದ ಸದಸ್ಯ ಮತ್ತು ವಕೀಲರಾಗಿದ್ದ ಜಸ್ಟೀಸ್ ಕೌಶಿಕ್ ಚಂದ, ಮಮತಾ ಬ್ಯಾನರ್ಜಿಯವರ ನಂದಿಗ್ರಾಮದ ಅರ್ಜಿ ವಿಚಾರಣೆಯನ್ನು ನಡೆಸಲಿದ್ದಾರೆ. ನಮ್ಮ ನ್ಯಾಯಾಂಗವನ್ನು ಉಳಿಸಿ ಎಂದು ಟ್ವೀಟ್ ಮಾಡಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆಯ ವಿಧಾನಸಭಾ ಕ್ಷೇತ್ರ ನಂದಿಗ್ರಾಮದ ಮತ ಏಣಿಕೆಯಲ್ಲಿ ಮೊದಲಿನಿಂದಲೂ ಮುನ್ನಡೆಯಲ್ಲಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೊನೆಯಲ್ಲಿ ಸೋಲು ಕಂಡಿದ್ದಾರೆ ಎಂದು ಘೋಷಿಸಲಾಯಿತು. ಬಿಜೆಪಿಯ ಸುವೇಂಧು ಅಧಿಕಾರಿಗೆ ಗೆಲುವು ಎನ್ನಲಾಯಿತು. ಹಲವು ಗೊಂದಲಗಳಿಗೆ ಕಾರಣವಾದ ಫಲಿತಾಂಶದ ಬಗ್ಗೆ ಹಲವರು ಅನುಮಾನ ವ್ಯಕ್ತಪಡಿಸಿದ್ದರು.

ನಂದಿಗ್ರಾಮದ ಫಲಿತಾಂಶವನ್ನು ಪ್ರಶ್ನಿಸಿ, ಮರು ಮತ ಏಣಿಕೆ ನಡೆಸುವಂತೆ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು. ಚುನಾವಣಾ ಆಯೋಗ ಅರ್ಜಿಯನ್ನು ತಿರಸ್ಕರಿಸಿತ್ತು. ಈ ಕುರಿತು ಕೋಲ್ಕತ್ತಾ ಹೈಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ಚಾರಣೆಯನ್ನು ಜಸ್ಟೀಸ್ ಕೌಶಿಕ್ ಚಂದ ಅವರು ನಡೆಸಲಿದ್ದು, ಇವರು ಬಿಜೆಪಿ ಬೆಂಬಲಿತರು ಎಂದು ಟಿಎಂಸಿ ಆರೋಪಿಸುತ್ತಿದೆ.

 


ಇದನ್ನೂ ಓದಿ: ಯಾಸ್ ಚಂಡಮಾರುತ: ಕೇಂದ್ರದಿಂದ ಯಾವುದೇ ನೆರವು ಬಂದಿಲ್ಲ ಎಂದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...