Homeಮುಖಪುಟಚಲಿಸುತ್ತಿದ್ದ ರೈಲಿನಲ್ಲಿ ಕಾರ್ಮಿಕನನ್ನು ಹೊಡೆದು ಕೊಂದ ಪೊಲೀಸರು

ಚಲಿಸುತ್ತಿದ್ದ ರೈಲಿನಲ್ಲಿ ಕಾರ್ಮಿಕನನ್ನು ಹೊಡೆದು ಕೊಂದ ಪೊಲೀಸರು

- Advertisement -
- Advertisement -

ಗೊಂಡ್ವಾನ ಎಕ್ಸ್‌ಪ್ರೆಸ್‌ ರೈಲಿನ ಜನರಲ್ ಕೋಚ್‌ನಲ್ಲಿ ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಕಾನ್‌ಸ್ಟೆಬಲ್‌ಗಳು ಥಳಿಸಿದ್ದರಿಂದ 50 ವರ್ಷದ ಕಾರ್ಮಿಕ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ.

ಮಧ್ಯಪ್ರದೇಶದ ಟಿಕಮ್‌ಗಢ ಜಿಲ್ಲೆಯ ಪಲೇರಾ ನಿವಾಸಿ ರಾಮದಯಾಳ್ ಅಹಿರ್ವಾರ್ ಸಾವಿಗೀಡಾದ ವ್ಯಕ್ತಿ. ಇವರು ತನ್ನ ಮಗನೊಂದಿಗೆ ಕೆಲಸದ ನಿಮಿತ್ತ ದೆಹಲಿಗೆ ಪ್ರಯಾಣಿಸುತ್ತಿದ್ದಾಗ ಆಗ್ರಾ ಮತ್ತು ಮಥುರಾ ನಡುವೆ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.

ಮೃತ ವ್ಯಕ್ತಿಯ ಮಗ ವಿಶಾಲ್ ಅಹಿರ್ವಾರ್ ಹೇಳಿದ ಪ್ರಕಾರ, ಅಪ್ಪ ಮಗ ಇಬ್ಬರು ಸೋಮವಾರ (ಏ.21) ಗೀತಾ ಜಯಂತಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಲಲಿತ್‌ಪುರ ತಲುಪಿ, ಅಲ್ಲಿಂದ ಗೊಂಡ್ವಾನ ಎಕ್ಸ್‌ಪ್ರೆಸ್‌ ರೈಲಿನ ಜನರಲ್ ಕೋಚ್ ಹತ್ತಿದರು. ಅವರು ತಲುಪಬೇಕಾದ ಸ್ಥಳ ದೆಹಲಿಯ ಹಝ್ರತ್ ನಿಝಾಮುದ್ದೀನ್ ರೈಲು ನಿಲ್ದಾಣವಾಗಿತ್ತು. ಅಲ್ಲಿಂದ ಅವರು ವಿಶಾಲ್ ಕೆಲಸ ಮಾಡುವ ಪಾಲಂ ಗ್ರಾಮಕ್ಕೆ ಹೋಗಬೇಕಿತ್ತು.

ಗೊಂಡ್ವಾನ ಎಕ್ಸ್‌ಪ್ರೆಸ್‌ ಆಗ್ರಾ ನಿಲ್ದಾಣ ದಾಟಿ ಸಂಚರಿಸುತ್ತಿದ್ದಾಗ ರಾಮದಯಾಳ್ ಅಹಿರ್ವಾರ್ ಬೀಡಿ ಹಚ್ಚಿದ್ದರು. ರೈಲಿನಲ್ಲಿದ್ದ ಜಿಆರ್‌ಪಿ ಕಾನ್‌ಸ್ಟೆಬಲ್‌ಗಳು ಇದನ್ನು ವಿರೋಧಿಸಿ ರಾಮದಯಾಳ್ ಅವರಿಗೆ ಹೊಡೆಯಲು ಪ್ರಾರಂಭಿಸಿದರು ಎಂದು ಮಗ ವಿಶಾಲ್ ವಿವರಿಸಿದ್ದಾರೆ.

“ನಾನು ರೈಲಿನಲ್ಲಿ ನಿದ್ರೆಗೆ ಜಾರಿದ್ದೆ. ಗದ್ದಲದಿಂದ ಎಚ್ಚರಗೊಂಡಾಗ ನನ್ನ ತಂದೆಗೆ ಥಳಿಸುತ್ತಿದ್ದಾರೆ ಎಂದು ಸಹ ಪ್ರಯಾಣಿಕರು ಹೇಳಿದರು. ಅಪ್ಪನಿಗೆ ಹೊಡೆಯಬೇಡಿ ಎಂದು ನಾನು ಪೊಲೀಸರಲ್ಲಿ ಎಷ್ಟೇ ಮನವಿ ಮಾಡಿದರೂ ಅವರು ಕೇಳಲಿಲ್ಲ. ಅವರು ಹೊಡೆಯುತ್ತಲೇ ಇದ್ದರು” ಎಂದು ವಿಶಾಲ್ ತಿಳಿಸಿದ್ದಾರೆ.

ಕಾನ್‌ಸ್ಟೆಬಲ್‌ಗಳು ರಾಮದಯಾಳ್ ಅವರನ್ನು ಜನರಲ್ ಕೋಚ್‌ನಿಂದ ಸ್ಲೀಪರ್ ಕೋಚ್‌ಗೆ ಎಳೆದುಕೊಂಡು ಹೋಗಿ, ಅಲ್ಲಿಯೂ ಹೊಡೆದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾಗಿ ಮಾಧ್ಯಮಗಳು ವರದಿ ಮಾಡಿವೆ. ತೀವ್ರ ಹಲ್ಲೆಗೊಳಗಾದ ರಾಮದಯಾಳ್ ಅವರ ಆರೋಗ್ಯ ಹದಗೆಟ್ಟಾಗ, ಮಥುರಾ ರೈಲ್ವೆ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಲಾಗಿತ್ತು.

ರೈಲು ಮಥುರಾ ಜಂಕ್ಷನ್ ತಲುಪಿದಾಗ, ಕಾನ್‌ಸ್ಟೆಬಲ್‌ಗಳು ರಾಮದಯಾಳ್ ಅವರ ಮೃತದೇಹದೊಂದಿಗೆ ರೈಲಿನಿಂದ ಇಳಿದು, ನಂತರ ತಮ್ಮ ಪ್ರಯಾಣವನ್ನು ಮುಂದುವರೆಸಿದರು. ಬಳಿಕ ಸ್ಥಳಕ್ಕೆ ವೈದ್ಯಕೀಯ ತಂಡ ಕರೆಸಲಾಯಿತು. ವೈದ್ಯರು ಪರೀಕ್ಷಿಸಿ ರಾಮದಯಾಳ್ ಸ್ಥಳದಲ್ಲೇ ಮೃತಪಟ್ಟಿದ್ದಾಗಿ ಎಂದು ಘೋಷಿಸಿದರು ಎಂದು ವರದಿಗಳು ಹೇಳಿವೆ.

ಮಥುರಾದ ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ಶವವನ್ನು ವಶಕ್ಕೆ ತೆಗೆದುಕೊಂಡು ಪಂಚನಾಮ ನಡೆಸಿದ ನಂತರ ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ಬಲಿಪಶುವಿನ ಮಗ ಗಂಭೀರ ಆರೋಪಗಳನ್ನು ಮಾಡಿದ ಬಳಿಕ ಅಧಿಕೃತ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ವರದಿಯಾಗಿದೆ.

‘ನನಗೀಗ ಕಾಶ್ಮೀರದಲ್ಲಿ ಇಬ್ಬರು ಸಹೋದರಿದ್ದಾರೆ; ಅಲ್ಲಾಹು ಅವರನ್ನು ಅನುಗ್ರಹಿಸಲಿ’: ದಾಳಿಯ ವೇಳೆ ಸಹಾಯ ಮಾಡಿದ ಸ್ಥಳೀಯ ಮುಸ್ಲಿಮರಿಗೆ ಪ್ರಾರ್ಥಿಸಿದ ಸಂತ್ರಸ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...