Homeಮುಖಪುಟಚಲಿಸುತ್ತಿದ್ದ ರೈಲಿನಲ್ಲಿ ಕಾರ್ಮಿಕನನ್ನು ಹೊಡೆದು ಕೊಂದ ಪೊಲೀಸರು

ಚಲಿಸುತ್ತಿದ್ದ ರೈಲಿನಲ್ಲಿ ಕಾರ್ಮಿಕನನ್ನು ಹೊಡೆದು ಕೊಂದ ಪೊಲೀಸರು

- Advertisement -
- Advertisement -

ಗೊಂಡ್ವಾನ ಎಕ್ಸ್‌ಪ್ರೆಸ್‌ ರೈಲಿನ ಜನರಲ್ ಕೋಚ್‌ನಲ್ಲಿ ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಕಾನ್‌ಸ್ಟೆಬಲ್‌ಗಳು ಥಳಿಸಿದ್ದರಿಂದ 50 ವರ್ಷದ ಕಾರ್ಮಿಕ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ.

ಮಧ್ಯಪ್ರದೇಶದ ಟಿಕಮ್‌ಗಢ ಜಿಲ್ಲೆಯ ಪಲೇರಾ ನಿವಾಸಿ ರಾಮದಯಾಳ್ ಅಹಿರ್ವಾರ್ ಸಾವಿಗೀಡಾದ ವ್ಯಕ್ತಿ. ಇವರು ತನ್ನ ಮಗನೊಂದಿಗೆ ಕೆಲಸದ ನಿಮಿತ್ತ ದೆಹಲಿಗೆ ಪ್ರಯಾಣಿಸುತ್ತಿದ್ದಾಗ ಆಗ್ರಾ ಮತ್ತು ಮಥುರಾ ನಡುವೆ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.

ಮೃತ ವ್ಯಕ್ತಿಯ ಮಗ ವಿಶಾಲ್ ಅಹಿರ್ವಾರ್ ಹೇಳಿದ ಪ್ರಕಾರ, ಅಪ್ಪ ಮಗ ಇಬ್ಬರು ಸೋಮವಾರ (ಏ.21) ಗೀತಾ ಜಯಂತಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಲಲಿತ್‌ಪುರ ತಲುಪಿ, ಅಲ್ಲಿಂದ ಗೊಂಡ್ವಾನ ಎಕ್ಸ್‌ಪ್ರೆಸ್‌ ರೈಲಿನ ಜನರಲ್ ಕೋಚ್ ಹತ್ತಿದರು. ಅವರು ತಲುಪಬೇಕಾದ ಸ್ಥಳ ದೆಹಲಿಯ ಹಝ್ರತ್ ನಿಝಾಮುದ್ದೀನ್ ರೈಲು ನಿಲ್ದಾಣವಾಗಿತ್ತು. ಅಲ್ಲಿಂದ ಅವರು ವಿಶಾಲ್ ಕೆಲಸ ಮಾಡುವ ಪಾಲಂ ಗ್ರಾಮಕ್ಕೆ ಹೋಗಬೇಕಿತ್ತು.

ಗೊಂಡ್ವಾನ ಎಕ್ಸ್‌ಪ್ರೆಸ್‌ ಆಗ್ರಾ ನಿಲ್ದಾಣ ದಾಟಿ ಸಂಚರಿಸುತ್ತಿದ್ದಾಗ ರಾಮದಯಾಳ್ ಅಹಿರ್ವಾರ್ ಬೀಡಿ ಹಚ್ಚಿದ್ದರು. ರೈಲಿನಲ್ಲಿದ್ದ ಜಿಆರ್‌ಪಿ ಕಾನ್‌ಸ್ಟೆಬಲ್‌ಗಳು ಇದನ್ನು ವಿರೋಧಿಸಿ ರಾಮದಯಾಳ್ ಅವರಿಗೆ ಹೊಡೆಯಲು ಪ್ರಾರಂಭಿಸಿದರು ಎಂದು ಮಗ ವಿಶಾಲ್ ವಿವರಿಸಿದ್ದಾರೆ.

“ನಾನು ರೈಲಿನಲ್ಲಿ ನಿದ್ರೆಗೆ ಜಾರಿದ್ದೆ. ಗದ್ದಲದಿಂದ ಎಚ್ಚರಗೊಂಡಾಗ ನನ್ನ ತಂದೆಗೆ ಥಳಿಸುತ್ತಿದ್ದಾರೆ ಎಂದು ಸಹ ಪ್ರಯಾಣಿಕರು ಹೇಳಿದರು. ಅಪ್ಪನಿಗೆ ಹೊಡೆಯಬೇಡಿ ಎಂದು ನಾನು ಪೊಲೀಸರಲ್ಲಿ ಎಷ್ಟೇ ಮನವಿ ಮಾಡಿದರೂ ಅವರು ಕೇಳಲಿಲ್ಲ. ಅವರು ಹೊಡೆಯುತ್ತಲೇ ಇದ್ದರು” ಎಂದು ವಿಶಾಲ್ ತಿಳಿಸಿದ್ದಾರೆ.

ಕಾನ್‌ಸ್ಟೆಬಲ್‌ಗಳು ರಾಮದಯಾಳ್ ಅವರನ್ನು ಜನರಲ್ ಕೋಚ್‌ನಿಂದ ಸ್ಲೀಪರ್ ಕೋಚ್‌ಗೆ ಎಳೆದುಕೊಂಡು ಹೋಗಿ, ಅಲ್ಲಿಯೂ ಹೊಡೆದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾಗಿ ಮಾಧ್ಯಮಗಳು ವರದಿ ಮಾಡಿವೆ. ತೀವ್ರ ಹಲ್ಲೆಗೊಳಗಾದ ರಾಮದಯಾಳ್ ಅವರ ಆರೋಗ್ಯ ಹದಗೆಟ್ಟಾಗ, ಮಥುರಾ ರೈಲ್ವೆ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಲಾಗಿತ್ತು.

ರೈಲು ಮಥುರಾ ಜಂಕ್ಷನ್ ತಲುಪಿದಾಗ, ಕಾನ್‌ಸ್ಟೆಬಲ್‌ಗಳು ರಾಮದಯಾಳ್ ಅವರ ಮೃತದೇಹದೊಂದಿಗೆ ರೈಲಿನಿಂದ ಇಳಿದು, ನಂತರ ತಮ್ಮ ಪ್ರಯಾಣವನ್ನು ಮುಂದುವರೆಸಿದರು. ಬಳಿಕ ಸ್ಥಳಕ್ಕೆ ವೈದ್ಯಕೀಯ ತಂಡ ಕರೆಸಲಾಯಿತು. ವೈದ್ಯರು ಪರೀಕ್ಷಿಸಿ ರಾಮದಯಾಳ್ ಸ್ಥಳದಲ್ಲೇ ಮೃತಪಟ್ಟಿದ್ದಾಗಿ ಎಂದು ಘೋಷಿಸಿದರು ಎಂದು ವರದಿಗಳು ಹೇಳಿವೆ.

ಮಥುರಾದ ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ಶವವನ್ನು ವಶಕ್ಕೆ ತೆಗೆದುಕೊಂಡು ಪಂಚನಾಮ ನಡೆಸಿದ ನಂತರ ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ಬಲಿಪಶುವಿನ ಮಗ ಗಂಭೀರ ಆರೋಪಗಳನ್ನು ಮಾಡಿದ ಬಳಿಕ ಅಧಿಕೃತ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ವರದಿಯಾಗಿದೆ.

‘ನನಗೀಗ ಕಾಶ್ಮೀರದಲ್ಲಿ ಇಬ್ಬರು ಸಹೋದರಿದ್ದಾರೆ; ಅಲ್ಲಾಹು ಅವರನ್ನು ಅನುಗ್ರಹಿಸಲಿ’: ದಾಳಿಯ ವೇಳೆ ಸಹಾಯ ಮಾಡಿದ ಸ್ಥಳೀಯ ಮುಸ್ಲಿಮರಿಗೆ ಪ್ರಾರ್ಥಿಸಿದ ಸಂತ್ರಸ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...