Homeಮುಖಪುಟದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ ಆರೋಪ: ಓರ್ವ ವ್ಯಕ್ತಿ ವಶಕ್ಕೆ

ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ ಆರೋಪ: ಓರ್ವ ವ್ಯಕ್ತಿ ವಶಕ್ಕೆ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತ ಅವರು ಬುಧವಾರ (ಆ.20) ಬೆಳಿಗ್ಗೆ ಸಿವಿಲ್ ಲೈನ್ಸ್‌ನಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಜನರ ಅಹವಾಲು ಆಲಿಸಲು ಆಯೋಜಿಸಿದ್ದ ‘ಜನ್ ಸುನ್ವೈ’ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾಗ, ಅವರ ಮೇಲೆ ಹಲ್ಲೆಯಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಅಂದಾಜು 30 ವರ್ಷ ವಯಸ್ಸಿನ ವ್ಯಕ್ತಿ ಮನವಿ ಸಲ್ಲಿಸುವ ನೆಪದಲ್ಲಿ ಮುಖ್ಯಮಂತ್ರಿ ಬಳಿಗೆ ಬಂದಿದ್ದರು. ಮನವಿ ಕೊಟ್ಟ ಬಳಿಕ, ಅವರು ಸಿಎಂಗೆ ಕಪಾಳಮೋಕ್ಷ ಮಾಡಿದ್ದಾರೆ. ತಕ್ಷಣ ಆ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ ಎಂದು ಬಿಜೆಪಿ ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. 

ಘಟನೆ ನಡೆದ ಬಳಿಕ ದೆಹಲಿ ನಗರ ಪೊಲೀಸ್ ಆಯುಕ್ತ, ಉತ್ತರ ವಿಭಾಗದ ಡಿಸಿಪಿ ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಸಿಎಂ ನಿವಾಸಕ್ಕೆ ಧಾವಿಸಿದ್ದಾರೆ.

ಹಲ್ಲೆ ನಡೆಸಿದ ವ್ಯಕ್ತಿಯನ್ನು ಗುಜರಾತ್‌ನ ರಾಜ್‌ಕೋಟ್ ನಿವಾಸಿ ರಾಜೇಶ್ ಭೈಜಿ ಎಂದು ಗುರುತಿಸಲಾಗಿದೆ ಎಂದು ದೆಹಲಿ ಪೊಲೀಸ್ ಮೂಲಗಳು ಹೇಳಿದ್ದಾಗಿ ವರದಿಯಾಗಿದೆ.

“ಇಂದು ‘ಜನ್ ಸುನ್ವೈ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದಾರೆ. ದೆಹಲಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ” ಎಂದು ಮುಖ್ಯಮಂತ್ರಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಹಲ್ಲೆ ನಡೆಸಿದ ವ್ಯಕ್ತಿಯ ಬಗ್ಗೆ ಹೆಚ್ಚಿನ ವಿವರಗಳನ್ನು ಪಡೆಯಲು ದೆಹಲಿ ಪೊಲೀಸರು ಗುಜರಾತ್ ಪೊಲೀಸರೊಂದಿಗೆ ಸಮನ್ವಯ ಸಾಧಿಸುತ್ತಿದ್ದಾರೆ. ಸಿಎಂ ಸುತ್ತ ಭದ್ರತಾ ಸಿಬ್ಬಂದಿ ಇದ್ದರೂ ಈ ಘಟನೆ ನಡೆದಿದೆ ವರದಿಯಾಗಿದೆ.

ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರು ಮುಖ್ಯಮಂತ್ರಿ ಮೇಲಿನ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಮುಖ್ಯಮಂತ್ರಿಯನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚ್‌ದೇವ, ಘಟನೆಯಿಂದ ಸಿಎಂ ಗುಪ್ತಾ ಬೆಚ್ಚಿ ಬಿದ್ದಿದ್ದಾರೆ. ಪ್ರಸ್ತುತ ಅವರು ಆರೋಗ್ಯವಾಗಿದ್ಧಾರೆ ಎಂದು ಹೇಳಿದ್ದಾರೆ.

ಘಟನೆಯ ಬಳಿಕ ಭದ್ರತೆಯನ್ನು ಹೆಚ್ಚಿಸಲಾಗಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯಕ್ಕೆ ಮಾಹಿತಿ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ಧಾರೆ.

ದೆಹಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕಿ ಅತಿಶಿ ಅವರು ಸಿಎಂ ಮೇಲಿನ ದಾಳಿಯನ್ನು ಖಂಡಿಸಿದ್ದಾರೆ. ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್‌ ಹಾಕಿರುವ ಅವರು, “ಪ್ರಜಾಪ್ರಭುತ್ವದಲ್ಲಿ, ಭಿನ್ನಾಭಿಪ್ರಾಯ ಮತ್ತು ಪ್ರತಿಭಟನೆಗೆ ಅವಕಾಶವಿದೆ. ಆದರೆ, ಹಿಂಸಾಚಾರಕ್ಕೆ ಅವಕಾಶವಿಲ್ಲ” ಎಂದಿದ್ದಾರೆ.

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಬಂಧನವಾದರೆ ಹುದ್ದೆಯಿಂದ ವಜಾಗೊಳಿಸಲು ಮಸೂದೆ: ಕಳವಳ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...